Homeಮುಖಪುಟಚಪ್ಪಾಳೆಯ ಶಕ್ತಿಯಿಂದ ಕೊರೊನಾ ನಾಶ ಟ್ವೀಟ್‌ : ಕಿಚ್ಚ ಸುದೀಪ್‌ ವಿರುದ್ಧ ತಿರುಗಿಬಿದ್ದ ಅಭಿಮಾನಿಗಳು..

ಚಪ್ಪಾಳೆಯ ಶಕ್ತಿಯಿಂದ ಕೊರೊನಾ ನಾಶ ಟ್ವೀಟ್‌ : ಕಿಚ್ಚ ಸುದೀಪ್‌ ವಿರುದ್ಧ ತಿರುಗಿಬಿದ್ದ ಅಭಿಮಾನಿಗಳು..

ಸುದೀಪ್‌ ಸರ್‌ ನಾನು ನಿಮ್ಮ ಅಭಿಮಾನಿ. ಆದರೆ ನೀವು ಮಾಡಿದ ಈ ಕೆಲಸ ಮಾತ್ರ ಜನರನ್ನು ತಪ್ಪು ದಾರಿಗೆ ಎಳೆಯುವಂತದ್ದು...

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಾರ್ಚ್‌ 22ರಂದು ದೇಶದಾದ್ಯಂತ ಜನತಾ ಕರ್ಫ್ಯೂಗೆ ಕರೆ ನೀಡಿದ್ದರು. ಸಾಧಕರಿಗೆ ಚಪ್ಪಾಳೆ ಹೊಡೆಯಲು ಕರೆ ನೀಡಿದ್ದರು. ಈ ಕರ್ಫೂವನ್ನು ಯಶಸ್ವಿ ಮಾಡುವ ಉದ್ದೇಶದಿಂದ ಮೋದಿ ಭಕ್ತರು ಹಲವಾರು ಭಕ್ತರು ಸುಳ್ಳು-ಪೊಳ್ಳು ಮಾಹಿತಿಗಳನ್ನು ನೀಡಿ ಜನರನ್ನು ದಾರಿ ತಪ್ಪಿಸುತ್ತಿದ್ದರು.

ಅದರಲ್ಲಿ ಒಂದು ಹುಡುಗಿ ನೀವು ದೇವಸ್ಥಾನದಲ್ಲಿ ಗಂಟೆ ಬಾರಿಸುವುದು ಏಕೆಂದು ತಿಳಿದಿದ್ದೀರಿ? ಇದರಿಂದ ಬಿಡುಗಡೆಯಾಗುವ ಶಕ್ತಿಯು ಸುತ್ತಲಿನ ಬ್ಯಾಕ್ಟೀರಿಯಾ ಮತ್ತು ವೈರಸ್‌ಗಳನ್ನು ಕೊಲ್ಲುತ್ತದೆ. ಅದೇ ರೀತಿ 132ಕೋಟಿ ಜನರು ಏಕಕಾಲಕ್ಕೆ ಚಪ್ಪಾಳೆ ತಟ್ಟುವುದುರಿಂದ ದೊಡ್ಡ ಮಟ್ಟದ ಎನರ್ಜಿ ಸೃಷ್ಟಿಯಾಗಿ ಕೊರೊನಾ ಮಾತ್ರವಲ್ಲ ಸುತ್ತಲಿನ ಎಲ್ಲಾ ಬ್ಯಾಕ್ಟೀರೀಯಾಗಳು ಸಾಯುತ್ತವೆ. ಮೋದಿಯ ವೈಜ್ಞಾನಿಕತೆಗೆ ಸೆಲ್ಯೂಟ್‌ ಎಂದು ವಿಡಿಯೋ ಮಾಡಿ ಹರಿಬಿಟ್ಟಿದ್ದಳು.

ಅದನ್ನು ನೋಡಿದ್ದೆ ತಡ ಕನ್ನಡದ ಖ್ಯಾತ ನಟ ಸುದೀಪ್‌ ಹಿಂದು ಮುಂದು ನೋಡದೇ ತನ್ನ ಟ್ವಿಟ್ಟರ್‌ನಲ್ಲಿ ಷೇರ್‌ ಮಾಡಿಬಿಟ್ಟರು. ನಾವೂ ಮನೆಯಲ್ಲಿಯೇ ಇದ್ದು, ಕೊರೊನಾ ನಾಶಮಾಡೋಣ ಎಂದು ತಲೆಬರಹ ಕೊಟ್ಟಿದ್ದರು. ಇದು ಮೇಲ್ನೋಟಕ್ಕೆ ಸುಳ್ಳು ಸುದ್ದಿ ಎಂದು ಹಲವಾರು ಅಭಿಮಾನಿಗಳಿಗೆ ತಿಳಿದಿದ್ದರಿಂದ ಸರ್‌ ದಯವಿಟ್ಟು ಡಿಲೀಟ್‌ ಮಾಡಿ ಎಂದು ಕಮೆಂಟ್‌ ಹಾಕಿದರು.

 

ಅಲ್ಲ ಸುದೀಪ್‌ ಸರ್‌ “ವೈಜ್ಞಾನಿಕ ತಳಹದಿಯೇ ಇಲ್ಲದೇ ಬೇಕಾದಂತೆ ಹೇಳಿಕೆ ಕೊಟ್ಟಿರೋ ಈ ವ್ಯಕ್ತಿಯ ವಿಡಿಯೋವನ್ನು ಪ್ರಚಾರ ಮಾಡುತ್ತಿರಲ್ಲ ನಿಮಗೇನಾಗಿದೆ ಹೇಳಿ.. ನಮಗೆ ಬೇಕಿರೋದು True Science.. Psuedo Science ಅಲ್ಲ.. ಇಂತಹ ಬೂಟಾಟಿಕೆಯನ್ನು ಮೌಡ್ಯವನ್ನು ದೂರ ತಳ್ಳಿ.. ಅರಿಮೆಯ ಕಡೆ ಸಾಗಿ.. ಎಂದು ಮಲ್ಲಿಕಾರ್ಜುನ್‌ ಬಿ ಕಮೆಂಟ್‌ ಮಾಡಿದ್ದರು.

ಹೆಚ್ಚು ಹಿಂಬಾಲಕರಿರುವ ವ್ಯಕ್ತಿಗಳು ಹೆಚ್ಚು ಜವಾಬ್ದಾರಿಯುತವಾಗಿರಬೇಕು! ನೋಡಿ, ಮೋದಿಯವರು ಹೇಳಿದಂತೆ ಆರೋಗ್ಯ ಕಾರ್ಯಕರ್ತರಿಗೋಸ್ಕರ 5 ದಲ್ಲ 10 ನಿಮಿಷ ಚಪ್ಪಾಳೆ ತಟ್ಟುವ ಬೇಕಾದರೆ! ಆದರೆ ಅದರಿಂದ ವೈರಾಣು ಸಾಯುತ್ತದೆ ಎಂಬುದು ಬುರಡೆ. ದೇವಾಲಯದಲ್ಲಿ ಘಂಟೆ ಬಾರಿಸುವುದು, ಸೇರಿರುವ ಜನರ ಗಮನವನ್ನು ಮಂಗಳಾರತಿಯತ್ತ ಸೆಳೆಯಲು! ಎಂದು ಪ್ರಹ್ಲಾದ ಕೆ ಹನುಮಂತಯ್ಯ ಎಂಬುವವರು ಕಿಡಿಕಾರಿದ್ದಾರೆ.

ಹುಚ್ಚನ ಮದುವೆಯಲ್ಲಿ ಉಂಡವನೇ ಜಾಣ ಎನ್ನುವ ಗಾದೆ ನೆನಪಿಗೆ ಬರುತ್ತಿದೆ ಈ ನಿಮ್ಮ ಮಾತು ಕೇಳಿ… ಹಾಗಾದರೆ ಆಸ್ಪತ್ರೆಯಲ್ಲಿ ಡಾಕ್ಟರ್ ಗಳ ಕೈಯಲ್ಲಿ ಗಂಟೆ ಕೊಟ್ಟುಬಿಡೋಣ, ನರ್ಸ್ ಗಳ ಕೈಯಲ್ಲಿ ಶಂಖಗಳನ್ನು ಕೊಟ್ಟು ಬರೋಣ ಎಂದು ಮತ್ತೊಬ್ಬರು ಕಾಲೆಳೆದಿದ್ದಾರೆ.

ಮಾನ್ಯ ಸುದೀಪ ಅವರೇ, ನೀವು ನಿಮ್ಮದೇ ಒಂದು ವಿಡಿಯೋ ತುಣುಕು ಮಾಡಿ ಪ್ರಧಾನಿಗಳ ಬೆಂಬಲಕ್ಕೆ ನಿಲ್ಲಬಹುದಿತ್ತು. ಬದಲಿಗೆ ಅವೈಜ್ಞಾನಿಕವಾಗಿ ಎಲ್ಲರ ದಾರಿ ತಪ್ಪಿಸುತ್ತಿರುವ ಇಂತಹವರ ತುಣುಕು ಹಾಕಿ ಅವರನ್ನು ಮುಖ್ಯವಾಹಿನಿಗೆ ತರುವುದಲ್ಲದೇ, ಗಂಟೆಗಳು ಕಳೆದರೂ ಇದನ್ನು ತೆಗೆಯದಿರುವುದು ವಿಪರ್ಯಾಸ. ದಯವಿಟ್ಟು ಇನ್ನೊಮ್ಮೆ ಯೋಚಿಸಿ ವೈಶಾಖ್‌ ಭಾಗೀ ಹೇಳಿದ್ದಾರೆ.

ಇನ್ನು ಮತ್ತೊರ್ವ ಸಾಮಾಜಿಕ ಕಾಳಜಿಯ ನಟ ಚೇತನ್‌, “ಸುದೀಪ್ ಸರ್, ಚಿತ್ರರಂಗದಲ್ಲಿ ನೀವು ಮಾಡಿರುವ ಕೆಲಸಗಳನ್ನು ಮತ್ತು ಸಾಧನೆಗಳನ್ನು ನಾನು ಗೌರವಿಸುತ್ತೇನೆ.. ಅಪ್ಪ, ಅಮ್ಮ ಇಬ್ಬರು ವೈದ್ಯರ ಮಗನಾಗಿ, ವೈದ್ಯರಿಗೆ ಪ್ರತಿಯೊಬ್ಬರು ಗೌರವವನ್ನು ನೀಡಬೇಕಾಗುತ್ತದೆ ಅದನ್ನ ನಾನು ಒಪ್ಪುತ್ತೇನೆ. ಆದರೆ ಈ ರೀತಿಯ ಅವೈಜ್ಞಾನಿಕವಾದಂತಹ ವಿಚಾರಗಳು (‘energy medicine’) ನಮ್ಮನ್ನು ತಪ್ಪುದಾರಿಗೆ ಕರೆದೊಯ್ಯುವುದಲ್ಲದೆ, ಮೌಢ್ಯವನ್ನು ಬಿತ್ತುತ್ತವೆ.. ಕೊರೋನ ವೈರಸ್ ನ ವಿರುದ್ಧ ಹೋರಾಡೋಣ, ವೈಜ್ಞಾನಿಕವಾಗಿ”.. ಎಂದು ಪ್ರತಿಕ್ರಿಯೆ ನೀಡಿದ್ದರು.

ನಂತರ ಚೇತನ್‌ ಮೇಲೂ ಕೆಲವು ಸುದೀಪ್‌ ಅಭಿಮಾನಿಗಳು ಹರಿಹಾಯ್ದು ನಿಂದಿಸಿದ್ದರು. ಇಷ್ಟೆಲ್ಲಾ ಬೆಳವಣಿಗಳನ್ನು ಕಂಡ ಮತ್ತು ವೈಜ್ಞಾನಿಕ ಅರಿವಿರುವ ಸುದೀಪ್‌ ಅಭಿಮಾನಿಗಳು ತಮ್ಮ ಸ್ಟಾರ್‌ ನಟ ಅಂತಹ ವಿಡಿಯೋಗಳನ್ನು ಹಂಚಿಕೊಂಡಿರುವುದು ತಪ್ಪು, ಇದು ನಿಜಕ್ಕೂ ಜನರನ್ನು ಮಿಸ್‌ ಗೈಡ್‌ ಮಾಡುತ್ತದೆ. ಹಲವಾರು ಜನರು ಸಿನಿಮಾ ಸ್ಟಾರ್‌ಗಳ ಮೇಲೆ ಅಭಿಮಾನ ಇಟ್ಟಿರುತ್ತಾರೆ. ಫಾಲೋ ಮಾಡುತ್ತಿರುತ್ತಾರೆ. ಅಂತಹ ಜನರನ್ನು ದಾರಿ ತಪ್ಪಿಸುವಂತಹ ಪೋಸ್ಟ್‌ಗಳನ್ನು ಸ್ಟಾರ್‌ಗಳು ಹಾಕುವುದು ತಪ್ಪು ಎಂದು ಸುದೀಪ್‌ರನ್ನು ತರಾಟೆಗೆ ತೆಗೆದುಕೊಂಡು, ಸುದೀಪ್‌ ಖಾತೆಯಲ್ಲೇ ರಿಪ್ಲೇ ಟ್ವೀಟ್‌ ಮಾಡಿದ್ದಾರೆ. ಸಧ್ಯಕ್ಕೆ ಸುದೀಪ್‌ ಅಭಿಮಾನಿಗಳಲ್ಲೇ ಪರ-ವಿರೋಧ ಹಗ್ಗಜಗ್ಗಾಟ ಶುರುವಾಗಿದೆ.

ಇನ್ನು ಸುದೀಪ್‌ ತಮ್ಮ ಟ್ವೀಟ್‌ ಅನ್ನು ಅಳಿಸಿಲ್ಲ. ಆದರೆ ಆ ಟ್ವೀಟ್‌ನಲ್ಲಿ ಆ ಹುಡುಗಿ ಮಾತನಾಡಿರುವ ಕೊನೆಯ 44 ಸೆಕೆಂಡ್‌ ವಿಡಿಯೋ ಮಾತ್ರ ಕಾಣುತ್ತಿದೆ. ಆ ಹುಡುಗಿ ಮಾತನಾಡಿರುವುದು 2.12 ನಿಮಿಷವಾಗಿದೆ. ಒಟ್ಟಿನಲ್ಲಿ ಈ ಫೇಕ್‌ ಸುದ್ದಿಗಳ ಮಾಯಾಜಾಲಕ್ಕೆ ಸ್ಟಾರ್‌ ನಟರು ಬಲಿಯಾಗುವುದು ದುರಂತವಾಗಿದೆ.

ಆಕೆಯ ಪೂರ್ತಿ ಸುಳ್ಳು ಭಾಷಣ ಇಲ್ಲಿದೆ ನೋಡಿ.

ಇದನ್ನು ಕೇಳಿದ ತಕ್ಷಣವೇ ಕೊರೊನಾ‌ ಓಡಿ ಹೋಗಿದೆ. ಅಜ್ಞಾನವೇ ಆಳುತ್ತಿರುವಾಗ ವಿಜ್ಞಾನದ ಚರ್ಚೆ‌ ಅಪರಾಧ..

Posted by Vasu Hv on Friday, March 20, 2020

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...