Homeಮುಖಪುಟಚಪ್ಪಾಳೆಯ ಶಕ್ತಿಯಿಂದ ಕೊರೊನಾ ನಾಶ ಟ್ವೀಟ್‌ : ಕಿಚ್ಚ ಸುದೀಪ್‌ ವಿರುದ್ಧ ತಿರುಗಿಬಿದ್ದ ಅಭಿಮಾನಿಗಳು..

ಚಪ್ಪಾಳೆಯ ಶಕ್ತಿಯಿಂದ ಕೊರೊನಾ ನಾಶ ಟ್ವೀಟ್‌ : ಕಿಚ್ಚ ಸುದೀಪ್‌ ವಿರುದ್ಧ ತಿರುಗಿಬಿದ್ದ ಅಭಿಮಾನಿಗಳು..

ಸುದೀಪ್‌ ಸರ್‌ ನಾನು ನಿಮ್ಮ ಅಭಿಮಾನಿ. ಆದರೆ ನೀವು ಮಾಡಿದ ಈ ಕೆಲಸ ಮಾತ್ರ ಜನರನ್ನು ತಪ್ಪು ದಾರಿಗೆ ಎಳೆಯುವಂತದ್ದು...

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಾರ್ಚ್‌ 22ರಂದು ದೇಶದಾದ್ಯಂತ ಜನತಾ ಕರ್ಫ್ಯೂಗೆ ಕರೆ ನೀಡಿದ್ದರು. ಸಾಧಕರಿಗೆ ಚಪ್ಪಾಳೆ ಹೊಡೆಯಲು ಕರೆ ನೀಡಿದ್ದರು. ಈ ಕರ್ಫೂವನ್ನು ಯಶಸ್ವಿ ಮಾಡುವ ಉದ್ದೇಶದಿಂದ ಮೋದಿ ಭಕ್ತರು ಹಲವಾರು ಭಕ್ತರು ಸುಳ್ಳು-ಪೊಳ್ಳು ಮಾಹಿತಿಗಳನ್ನು ನೀಡಿ ಜನರನ್ನು ದಾರಿ ತಪ್ಪಿಸುತ್ತಿದ್ದರು.

ಅದರಲ್ಲಿ ಒಂದು ಹುಡುಗಿ ನೀವು ದೇವಸ್ಥಾನದಲ್ಲಿ ಗಂಟೆ ಬಾರಿಸುವುದು ಏಕೆಂದು ತಿಳಿದಿದ್ದೀರಿ? ಇದರಿಂದ ಬಿಡುಗಡೆಯಾಗುವ ಶಕ್ತಿಯು ಸುತ್ತಲಿನ ಬ್ಯಾಕ್ಟೀರಿಯಾ ಮತ್ತು ವೈರಸ್‌ಗಳನ್ನು ಕೊಲ್ಲುತ್ತದೆ. ಅದೇ ರೀತಿ 132ಕೋಟಿ ಜನರು ಏಕಕಾಲಕ್ಕೆ ಚಪ್ಪಾಳೆ ತಟ್ಟುವುದುರಿಂದ ದೊಡ್ಡ ಮಟ್ಟದ ಎನರ್ಜಿ ಸೃಷ್ಟಿಯಾಗಿ ಕೊರೊನಾ ಮಾತ್ರವಲ್ಲ ಸುತ್ತಲಿನ ಎಲ್ಲಾ ಬ್ಯಾಕ್ಟೀರೀಯಾಗಳು ಸಾಯುತ್ತವೆ. ಮೋದಿಯ ವೈಜ್ಞಾನಿಕತೆಗೆ ಸೆಲ್ಯೂಟ್‌ ಎಂದು ವಿಡಿಯೋ ಮಾಡಿ ಹರಿಬಿಟ್ಟಿದ್ದಳು.

ಅದನ್ನು ನೋಡಿದ್ದೆ ತಡ ಕನ್ನಡದ ಖ್ಯಾತ ನಟ ಸುದೀಪ್‌ ಹಿಂದು ಮುಂದು ನೋಡದೇ ತನ್ನ ಟ್ವಿಟ್ಟರ್‌ನಲ್ಲಿ ಷೇರ್‌ ಮಾಡಿಬಿಟ್ಟರು. ನಾವೂ ಮನೆಯಲ್ಲಿಯೇ ಇದ್ದು, ಕೊರೊನಾ ನಾಶಮಾಡೋಣ ಎಂದು ತಲೆಬರಹ ಕೊಟ್ಟಿದ್ದರು. ಇದು ಮೇಲ್ನೋಟಕ್ಕೆ ಸುಳ್ಳು ಸುದ್ದಿ ಎಂದು ಹಲವಾರು ಅಭಿಮಾನಿಗಳಿಗೆ ತಿಳಿದಿದ್ದರಿಂದ ಸರ್‌ ದಯವಿಟ್ಟು ಡಿಲೀಟ್‌ ಮಾಡಿ ಎಂದು ಕಮೆಂಟ್‌ ಹಾಕಿದರು.

 

ಅಲ್ಲ ಸುದೀಪ್‌ ಸರ್‌ “ವೈಜ್ಞಾನಿಕ ತಳಹದಿಯೇ ಇಲ್ಲದೇ ಬೇಕಾದಂತೆ ಹೇಳಿಕೆ ಕೊಟ್ಟಿರೋ ಈ ವ್ಯಕ್ತಿಯ ವಿಡಿಯೋವನ್ನು ಪ್ರಚಾರ ಮಾಡುತ್ತಿರಲ್ಲ ನಿಮಗೇನಾಗಿದೆ ಹೇಳಿ.. ನಮಗೆ ಬೇಕಿರೋದು True Science.. Psuedo Science ಅಲ್ಲ.. ಇಂತಹ ಬೂಟಾಟಿಕೆಯನ್ನು ಮೌಡ್ಯವನ್ನು ದೂರ ತಳ್ಳಿ.. ಅರಿಮೆಯ ಕಡೆ ಸಾಗಿ.. ಎಂದು ಮಲ್ಲಿಕಾರ್ಜುನ್‌ ಬಿ ಕಮೆಂಟ್‌ ಮಾಡಿದ್ದರು.

ಹೆಚ್ಚು ಹಿಂಬಾಲಕರಿರುವ ವ್ಯಕ್ತಿಗಳು ಹೆಚ್ಚು ಜವಾಬ್ದಾರಿಯುತವಾಗಿರಬೇಕು! ನೋಡಿ, ಮೋದಿಯವರು ಹೇಳಿದಂತೆ ಆರೋಗ್ಯ ಕಾರ್ಯಕರ್ತರಿಗೋಸ್ಕರ 5 ದಲ್ಲ 10 ನಿಮಿಷ ಚಪ್ಪಾಳೆ ತಟ್ಟುವ ಬೇಕಾದರೆ! ಆದರೆ ಅದರಿಂದ ವೈರಾಣು ಸಾಯುತ್ತದೆ ಎಂಬುದು ಬುರಡೆ. ದೇವಾಲಯದಲ್ಲಿ ಘಂಟೆ ಬಾರಿಸುವುದು, ಸೇರಿರುವ ಜನರ ಗಮನವನ್ನು ಮಂಗಳಾರತಿಯತ್ತ ಸೆಳೆಯಲು! ಎಂದು ಪ್ರಹ್ಲಾದ ಕೆ ಹನುಮಂತಯ್ಯ ಎಂಬುವವರು ಕಿಡಿಕಾರಿದ್ದಾರೆ.

ಹುಚ್ಚನ ಮದುವೆಯಲ್ಲಿ ಉಂಡವನೇ ಜಾಣ ಎನ್ನುವ ಗಾದೆ ನೆನಪಿಗೆ ಬರುತ್ತಿದೆ ಈ ನಿಮ್ಮ ಮಾತು ಕೇಳಿ… ಹಾಗಾದರೆ ಆಸ್ಪತ್ರೆಯಲ್ಲಿ ಡಾಕ್ಟರ್ ಗಳ ಕೈಯಲ್ಲಿ ಗಂಟೆ ಕೊಟ್ಟುಬಿಡೋಣ, ನರ್ಸ್ ಗಳ ಕೈಯಲ್ಲಿ ಶಂಖಗಳನ್ನು ಕೊಟ್ಟು ಬರೋಣ ಎಂದು ಮತ್ತೊಬ್ಬರು ಕಾಲೆಳೆದಿದ್ದಾರೆ.

ಮಾನ್ಯ ಸುದೀಪ ಅವರೇ, ನೀವು ನಿಮ್ಮದೇ ಒಂದು ವಿಡಿಯೋ ತುಣುಕು ಮಾಡಿ ಪ್ರಧಾನಿಗಳ ಬೆಂಬಲಕ್ಕೆ ನಿಲ್ಲಬಹುದಿತ್ತು. ಬದಲಿಗೆ ಅವೈಜ್ಞಾನಿಕವಾಗಿ ಎಲ್ಲರ ದಾರಿ ತಪ್ಪಿಸುತ್ತಿರುವ ಇಂತಹವರ ತುಣುಕು ಹಾಕಿ ಅವರನ್ನು ಮುಖ್ಯವಾಹಿನಿಗೆ ತರುವುದಲ್ಲದೇ, ಗಂಟೆಗಳು ಕಳೆದರೂ ಇದನ್ನು ತೆಗೆಯದಿರುವುದು ವಿಪರ್ಯಾಸ. ದಯವಿಟ್ಟು ಇನ್ನೊಮ್ಮೆ ಯೋಚಿಸಿ ವೈಶಾಖ್‌ ಭಾಗೀ ಹೇಳಿದ್ದಾರೆ.

ಇನ್ನು ಮತ್ತೊರ್ವ ಸಾಮಾಜಿಕ ಕಾಳಜಿಯ ನಟ ಚೇತನ್‌, “ಸುದೀಪ್ ಸರ್, ಚಿತ್ರರಂಗದಲ್ಲಿ ನೀವು ಮಾಡಿರುವ ಕೆಲಸಗಳನ್ನು ಮತ್ತು ಸಾಧನೆಗಳನ್ನು ನಾನು ಗೌರವಿಸುತ್ತೇನೆ.. ಅಪ್ಪ, ಅಮ್ಮ ಇಬ್ಬರು ವೈದ್ಯರ ಮಗನಾಗಿ, ವೈದ್ಯರಿಗೆ ಪ್ರತಿಯೊಬ್ಬರು ಗೌರವವನ್ನು ನೀಡಬೇಕಾಗುತ್ತದೆ ಅದನ್ನ ನಾನು ಒಪ್ಪುತ್ತೇನೆ. ಆದರೆ ಈ ರೀತಿಯ ಅವೈಜ್ಞಾನಿಕವಾದಂತಹ ವಿಚಾರಗಳು (‘energy medicine’) ನಮ್ಮನ್ನು ತಪ್ಪುದಾರಿಗೆ ಕರೆದೊಯ್ಯುವುದಲ್ಲದೆ, ಮೌಢ್ಯವನ್ನು ಬಿತ್ತುತ್ತವೆ.. ಕೊರೋನ ವೈರಸ್ ನ ವಿರುದ್ಧ ಹೋರಾಡೋಣ, ವೈಜ್ಞಾನಿಕವಾಗಿ”.. ಎಂದು ಪ್ರತಿಕ್ರಿಯೆ ನೀಡಿದ್ದರು.

ನಂತರ ಚೇತನ್‌ ಮೇಲೂ ಕೆಲವು ಸುದೀಪ್‌ ಅಭಿಮಾನಿಗಳು ಹರಿಹಾಯ್ದು ನಿಂದಿಸಿದ್ದರು. ಇಷ್ಟೆಲ್ಲಾ ಬೆಳವಣಿಗಳನ್ನು ಕಂಡ ಮತ್ತು ವೈಜ್ಞಾನಿಕ ಅರಿವಿರುವ ಸುದೀಪ್‌ ಅಭಿಮಾನಿಗಳು ತಮ್ಮ ಸ್ಟಾರ್‌ ನಟ ಅಂತಹ ವಿಡಿಯೋಗಳನ್ನು ಹಂಚಿಕೊಂಡಿರುವುದು ತಪ್ಪು, ಇದು ನಿಜಕ್ಕೂ ಜನರನ್ನು ಮಿಸ್‌ ಗೈಡ್‌ ಮಾಡುತ್ತದೆ. ಹಲವಾರು ಜನರು ಸಿನಿಮಾ ಸ್ಟಾರ್‌ಗಳ ಮೇಲೆ ಅಭಿಮಾನ ಇಟ್ಟಿರುತ್ತಾರೆ. ಫಾಲೋ ಮಾಡುತ್ತಿರುತ್ತಾರೆ. ಅಂತಹ ಜನರನ್ನು ದಾರಿ ತಪ್ಪಿಸುವಂತಹ ಪೋಸ್ಟ್‌ಗಳನ್ನು ಸ್ಟಾರ್‌ಗಳು ಹಾಕುವುದು ತಪ್ಪು ಎಂದು ಸುದೀಪ್‌ರನ್ನು ತರಾಟೆಗೆ ತೆಗೆದುಕೊಂಡು, ಸುದೀಪ್‌ ಖಾತೆಯಲ್ಲೇ ರಿಪ್ಲೇ ಟ್ವೀಟ್‌ ಮಾಡಿದ್ದಾರೆ. ಸಧ್ಯಕ್ಕೆ ಸುದೀಪ್‌ ಅಭಿಮಾನಿಗಳಲ್ಲೇ ಪರ-ವಿರೋಧ ಹಗ್ಗಜಗ್ಗಾಟ ಶುರುವಾಗಿದೆ.

ಇನ್ನು ಸುದೀಪ್‌ ತಮ್ಮ ಟ್ವೀಟ್‌ ಅನ್ನು ಅಳಿಸಿಲ್ಲ. ಆದರೆ ಆ ಟ್ವೀಟ್‌ನಲ್ಲಿ ಆ ಹುಡುಗಿ ಮಾತನಾಡಿರುವ ಕೊನೆಯ 44 ಸೆಕೆಂಡ್‌ ವಿಡಿಯೋ ಮಾತ್ರ ಕಾಣುತ್ತಿದೆ. ಆ ಹುಡುಗಿ ಮಾತನಾಡಿರುವುದು 2.12 ನಿಮಿಷವಾಗಿದೆ. ಒಟ್ಟಿನಲ್ಲಿ ಈ ಫೇಕ್‌ ಸುದ್ದಿಗಳ ಮಾಯಾಜಾಲಕ್ಕೆ ಸ್ಟಾರ್‌ ನಟರು ಬಲಿಯಾಗುವುದು ದುರಂತವಾಗಿದೆ.

ಆಕೆಯ ಪೂರ್ತಿ ಸುಳ್ಳು ಭಾಷಣ ಇಲ್ಲಿದೆ ನೋಡಿ.

ಇದನ್ನು ಕೇಳಿದ ತಕ್ಷಣವೇ ಕೊರೊನಾ‌ ಓಡಿ ಹೋಗಿದೆ. ಅಜ್ಞಾನವೇ ಆಳುತ್ತಿರುವಾಗ ವಿಜ್ಞಾನದ ಚರ್ಚೆ‌ ಅಪರಾಧ..

Posted by Vasu Hv on Friday, March 20, 2020

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...