Homeಮುಖಪುಟಚಪ್ಪಾಳೆಯ ಶಕ್ತಿಯಿಂದ ಕೊರೊನಾ ನಾಶ ಟ್ವೀಟ್‌ : ಕಿಚ್ಚ ಸುದೀಪ್‌ ವಿರುದ್ಧ ತಿರುಗಿಬಿದ್ದ ಅಭಿಮಾನಿಗಳು..

ಚಪ್ಪಾಳೆಯ ಶಕ್ತಿಯಿಂದ ಕೊರೊನಾ ನಾಶ ಟ್ವೀಟ್‌ : ಕಿಚ್ಚ ಸುದೀಪ್‌ ವಿರುದ್ಧ ತಿರುಗಿಬಿದ್ದ ಅಭಿಮಾನಿಗಳು..

ಸುದೀಪ್‌ ಸರ್‌ ನಾನು ನಿಮ್ಮ ಅಭಿಮಾನಿ. ಆದರೆ ನೀವು ಮಾಡಿದ ಈ ಕೆಲಸ ಮಾತ್ರ ಜನರನ್ನು ತಪ್ಪು ದಾರಿಗೆ ಎಳೆಯುವಂತದ್ದು...

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಾರ್ಚ್‌ 22ರಂದು ದೇಶದಾದ್ಯಂತ ಜನತಾ ಕರ್ಫ್ಯೂಗೆ ಕರೆ ನೀಡಿದ್ದರು. ಸಾಧಕರಿಗೆ ಚಪ್ಪಾಳೆ ಹೊಡೆಯಲು ಕರೆ ನೀಡಿದ್ದರು. ಈ ಕರ್ಫೂವನ್ನು ಯಶಸ್ವಿ ಮಾಡುವ ಉದ್ದೇಶದಿಂದ ಮೋದಿ ಭಕ್ತರು ಹಲವಾರು ಭಕ್ತರು ಸುಳ್ಳು-ಪೊಳ್ಳು ಮಾಹಿತಿಗಳನ್ನು ನೀಡಿ ಜನರನ್ನು ದಾರಿ ತಪ್ಪಿಸುತ್ತಿದ್ದರು.

ಅದರಲ್ಲಿ ಒಂದು ಹುಡುಗಿ ನೀವು ದೇವಸ್ಥಾನದಲ್ಲಿ ಗಂಟೆ ಬಾರಿಸುವುದು ಏಕೆಂದು ತಿಳಿದಿದ್ದೀರಿ? ಇದರಿಂದ ಬಿಡುಗಡೆಯಾಗುವ ಶಕ್ತಿಯು ಸುತ್ತಲಿನ ಬ್ಯಾಕ್ಟೀರಿಯಾ ಮತ್ತು ವೈರಸ್‌ಗಳನ್ನು ಕೊಲ್ಲುತ್ತದೆ. ಅದೇ ರೀತಿ 132ಕೋಟಿ ಜನರು ಏಕಕಾಲಕ್ಕೆ ಚಪ್ಪಾಳೆ ತಟ್ಟುವುದುರಿಂದ ದೊಡ್ಡ ಮಟ್ಟದ ಎನರ್ಜಿ ಸೃಷ್ಟಿಯಾಗಿ ಕೊರೊನಾ ಮಾತ್ರವಲ್ಲ ಸುತ್ತಲಿನ ಎಲ್ಲಾ ಬ್ಯಾಕ್ಟೀರೀಯಾಗಳು ಸಾಯುತ್ತವೆ. ಮೋದಿಯ ವೈಜ್ಞಾನಿಕತೆಗೆ ಸೆಲ್ಯೂಟ್‌ ಎಂದು ವಿಡಿಯೋ ಮಾಡಿ ಹರಿಬಿಟ್ಟಿದ್ದಳು.

ಅದನ್ನು ನೋಡಿದ್ದೆ ತಡ ಕನ್ನಡದ ಖ್ಯಾತ ನಟ ಸುದೀಪ್‌ ಹಿಂದು ಮುಂದು ನೋಡದೇ ತನ್ನ ಟ್ವಿಟ್ಟರ್‌ನಲ್ಲಿ ಷೇರ್‌ ಮಾಡಿಬಿಟ್ಟರು. ನಾವೂ ಮನೆಯಲ್ಲಿಯೇ ಇದ್ದು, ಕೊರೊನಾ ನಾಶಮಾಡೋಣ ಎಂದು ತಲೆಬರಹ ಕೊಟ್ಟಿದ್ದರು. ಇದು ಮೇಲ್ನೋಟಕ್ಕೆ ಸುಳ್ಳು ಸುದ್ದಿ ಎಂದು ಹಲವಾರು ಅಭಿಮಾನಿಗಳಿಗೆ ತಿಳಿದಿದ್ದರಿಂದ ಸರ್‌ ದಯವಿಟ್ಟು ಡಿಲೀಟ್‌ ಮಾಡಿ ಎಂದು ಕಮೆಂಟ್‌ ಹಾಕಿದರು.

 

ಅಲ್ಲ ಸುದೀಪ್‌ ಸರ್‌ “ವೈಜ್ಞಾನಿಕ ತಳಹದಿಯೇ ಇಲ್ಲದೇ ಬೇಕಾದಂತೆ ಹೇಳಿಕೆ ಕೊಟ್ಟಿರೋ ಈ ವ್ಯಕ್ತಿಯ ವಿಡಿಯೋವನ್ನು ಪ್ರಚಾರ ಮಾಡುತ್ತಿರಲ್ಲ ನಿಮಗೇನಾಗಿದೆ ಹೇಳಿ.. ನಮಗೆ ಬೇಕಿರೋದು True Science.. Psuedo Science ಅಲ್ಲ.. ಇಂತಹ ಬೂಟಾಟಿಕೆಯನ್ನು ಮೌಡ್ಯವನ್ನು ದೂರ ತಳ್ಳಿ.. ಅರಿಮೆಯ ಕಡೆ ಸಾಗಿ.. ಎಂದು ಮಲ್ಲಿಕಾರ್ಜುನ್‌ ಬಿ ಕಮೆಂಟ್‌ ಮಾಡಿದ್ದರು.

ಹೆಚ್ಚು ಹಿಂಬಾಲಕರಿರುವ ವ್ಯಕ್ತಿಗಳು ಹೆಚ್ಚು ಜವಾಬ್ದಾರಿಯುತವಾಗಿರಬೇಕು! ನೋಡಿ, ಮೋದಿಯವರು ಹೇಳಿದಂತೆ ಆರೋಗ್ಯ ಕಾರ್ಯಕರ್ತರಿಗೋಸ್ಕರ 5 ದಲ್ಲ 10 ನಿಮಿಷ ಚಪ್ಪಾಳೆ ತಟ್ಟುವ ಬೇಕಾದರೆ! ಆದರೆ ಅದರಿಂದ ವೈರಾಣು ಸಾಯುತ್ತದೆ ಎಂಬುದು ಬುರಡೆ. ದೇವಾಲಯದಲ್ಲಿ ಘಂಟೆ ಬಾರಿಸುವುದು, ಸೇರಿರುವ ಜನರ ಗಮನವನ್ನು ಮಂಗಳಾರತಿಯತ್ತ ಸೆಳೆಯಲು! ಎಂದು ಪ್ರಹ್ಲಾದ ಕೆ ಹನುಮಂತಯ್ಯ ಎಂಬುವವರು ಕಿಡಿಕಾರಿದ್ದಾರೆ.

ಹುಚ್ಚನ ಮದುವೆಯಲ್ಲಿ ಉಂಡವನೇ ಜಾಣ ಎನ್ನುವ ಗಾದೆ ನೆನಪಿಗೆ ಬರುತ್ತಿದೆ ಈ ನಿಮ್ಮ ಮಾತು ಕೇಳಿ… ಹಾಗಾದರೆ ಆಸ್ಪತ್ರೆಯಲ್ಲಿ ಡಾಕ್ಟರ್ ಗಳ ಕೈಯಲ್ಲಿ ಗಂಟೆ ಕೊಟ್ಟುಬಿಡೋಣ, ನರ್ಸ್ ಗಳ ಕೈಯಲ್ಲಿ ಶಂಖಗಳನ್ನು ಕೊಟ್ಟು ಬರೋಣ ಎಂದು ಮತ್ತೊಬ್ಬರು ಕಾಲೆಳೆದಿದ್ದಾರೆ.

ಮಾನ್ಯ ಸುದೀಪ ಅವರೇ, ನೀವು ನಿಮ್ಮದೇ ಒಂದು ವಿಡಿಯೋ ತುಣುಕು ಮಾಡಿ ಪ್ರಧಾನಿಗಳ ಬೆಂಬಲಕ್ಕೆ ನಿಲ್ಲಬಹುದಿತ್ತು. ಬದಲಿಗೆ ಅವೈಜ್ಞಾನಿಕವಾಗಿ ಎಲ್ಲರ ದಾರಿ ತಪ್ಪಿಸುತ್ತಿರುವ ಇಂತಹವರ ತುಣುಕು ಹಾಕಿ ಅವರನ್ನು ಮುಖ್ಯವಾಹಿನಿಗೆ ತರುವುದಲ್ಲದೇ, ಗಂಟೆಗಳು ಕಳೆದರೂ ಇದನ್ನು ತೆಗೆಯದಿರುವುದು ವಿಪರ್ಯಾಸ. ದಯವಿಟ್ಟು ಇನ್ನೊಮ್ಮೆ ಯೋಚಿಸಿ ವೈಶಾಖ್‌ ಭಾಗೀ ಹೇಳಿದ್ದಾರೆ.

ಇನ್ನು ಮತ್ತೊರ್ವ ಸಾಮಾಜಿಕ ಕಾಳಜಿಯ ನಟ ಚೇತನ್‌, “ಸುದೀಪ್ ಸರ್, ಚಿತ್ರರಂಗದಲ್ಲಿ ನೀವು ಮಾಡಿರುವ ಕೆಲಸಗಳನ್ನು ಮತ್ತು ಸಾಧನೆಗಳನ್ನು ನಾನು ಗೌರವಿಸುತ್ತೇನೆ.. ಅಪ್ಪ, ಅಮ್ಮ ಇಬ್ಬರು ವೈದ್ಯರ ಮಗನಾಗಿ, ವೈದ್ಯರಿಗೆ ಪ್ರತಿಯೊಬ್ಬರು ಗೌರವವನ್ನು ನೀಡಬೇಕಾಗುತ್ತದೆ ಅದನ್ನ ನಾನು ಒಪ್ಪುತ್ತೇನೆ. ಆದರೆ ಈ ರೀತಿಯ ಅವೈಜ್ಞಾನಿಕವಾದಂತಹ ವಿಚಾರಗಳು (‘energy medicine’) ನಮ್ಮನ್ನು ತಪ್ಪುದಾರಿಗೆ ಕರೆದೊಯ್ಯುವುದಲ್ಲದೆ, ಮೌಢ್ಯವನ್ನು ಬಿತ್ತುತ್ತವೆ.. ಕೊರೋನ ವೈರಸ್ ನ ವಿರುದ್ಧ ಹೋರಾಡೋಣ, ವೈಜ್ಞಾನಿಕವಾಗಿ”.. ಎಂದು ಪ್ರತಿಕ್ರಿಯೆ ನೀಡಿದ್ದರು.

ನಂತರ ಚೇತನ್‌ ಮೇಲೂ ಕೆಲವು ಸುದೀಪ್‌ ಅಭಿಮಾನಿಗಳು ಹರಿಹಾಯ್ದು ನಿಂದಿಸಿದ್ದರು. ಇಷ್ಟೆಲ್ಲಾ ಬೆಳವಣಿಗಳನ್ನು ಕಂಡ ಮತ್ತು ವೈಜ್ಞಾನಿಕ ಅರಿವಿರುವ ಸುದೀಪ್‌ ಅಭಿಮಾನಿಗಳು ತಮ್ಮ ಸ್ಟಾರ್‌ ನಟ ಅಂತಹ ವಿಡಿಯೋಗಳನ್ನು ಹಂಚಿಕೊಂಡಿರುವುದು ತಪ್ಪು, ಇದು ನಿಜಕ್ಕೂ ಜನರನ್ನು ಮಿಸ್‌ ಗೈಡ್‌ ಮಾಡುತ್ತದೆ. ಹಲವಾರು ಜನರು ಸಿನಿಮಾ ಸ್ಟಾರ್‌ಗಳ ಮೇಲೆ ಅಭಿಮಾನ ಇಟ್ಟಿರುತ್ತಾರೆ. ಫಾಲೋ ಮಾಡುತ್ತಿರುತ್ತಾರೆ. ಅಂತಹ ಜನರನ್ನು ದಾರಿ ತಪ್ಪಿಸುವಂತಹ ಪೋಸ್ಟ್‌ಗಳನ್ನು ಸ್ಟಾರ್‌ಗಳು ಹಾಕುವುದು ತಪ್ಪು ಎಂದು ಸುದೀಪ್‌ರನ್ನು ತರಾಟೆಗೆ ತೆಗೆದುಕೊಂಡು, ಸುದೀಪ್‌ ಖಾತೆಯಲ್ಲೇ ರಿಪ್ಲೇ ಟ್ವೀಟ್‌ ಮಾಡಿದ್ದಾರೆ. ಸಧ್ಯಕ್ಕೆ ಸುದೀಪ್‌ ಅಭಿಮಾನಿಗಳಲ್ಲೇ ಪರ-ವಿರೋಧ ಹಗ್ಗಜಗ್ಗಾಟ ಶುರುವಾಗಿದೆ.

ಇನ್ನು ಸುದೀಪ್‌ ತಮ್ಮ ಟ್ವೀಟ್‌ ಅನ್ನು ಅಳಿಸಿಲ್ಲ. ಆದರೆ ಆ ಟ್ವೀಟ್‌ನಲ್ಲಿ ಆ ಹುಡುಗಿ ಮಾತನಾಡಿರುವ ಕೊನೆಯ 44 ಸೆಕೆಂಡ್‌ ವಿಡಿಯೋ ಮಾತ್ರ ಕಾಣುತ್ತಿದೆ. ಆ ಹುಡುಗಿ ಮಾತನಾಡಿರುವುದು 2.12 ನಿಮಿಷವಾಗಿದೆ. ಒಟ್ಟಿನಲ್ಲಿ ಈ ಫೇಕ್‌ ಸುದ್ದಿಗಳ ಮಾಯಾಜಾಲಕ್ಕೆ ಸ್ಟಾರ್‌ ನಟರು ಬಲಿಯಾಗುವುದು ದುರಂತವಾಗಿದೆ.

ಆಕೆಯ ಪೂರ್ತಿ ಸುಳ್ಳು ಭಾಷಣ ಇಲ್ಲಿದೆ ನೋಡಿ.

ಇದನ್ನು ಕೇಳಿದ ತಕ್ಷಣವೇ ಕೊರೊನಾ‌ ಓಡಿ ಹೋಗಿದೆ. ಅಜ್ಞಾನವೇ ಆಳುತ್ತಿರುವಾಗ ವಿಜ್ಞಾನದ ಚರ್ಚೆ‌ ಅಪರಾಧ..

Posted by Vasu Hv on Friday, March 20, 2020

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...