Homeಮುಖಪುಟಚಪ್ಪಾಳೆಯ ಶಕ್ತಿಯಿಂದ ಕೊರೊನಾ ನಾಶ ಟ್ವೀಟ್‌ : ಕಿಚ್ಚ ಸುದೀಪ್‌ ವಿರುದ್ಧ ತಿರುಗಿಬಿದ್ದ ಅಭಿಮಾನಿಗಳು..

ಚಪ್ಪಾಳೆಯ ಶಕ್ತಿಯಿಂದ ಕೊರೊನಾ ನಾಶ ಟ್ವೀಟ್‌ : ಕಿಚ್ಚ ಸುದೀಪ್‌ ವಿರುದ್ಧ ತಿರುಗಿಬಿದ್ದ ಅಭಿಮಾನಿಗಳು..

ಸುದೀಪ್‌ ಸರ್‌ ನಾನು ನಿಮ್ಮ ಅಭಿಮಾನಿ. ಆದರೆ ನೀವು ಮಾಡಿದ ಈ ಕೆಲಸ ಮಾತ್ರ ಜನರನ್ನು ತಪ್ಪು ದಾರಿಗೆ ಎಳೆಯುವಂತದ್ದು...

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಾರ್ಚ್‌ 22ರಂದು ದೇಶದಾದ್ಯಂತ ಜನತಾ ಕರ್ಫ್ಯೂಗೆ ಕರೆ ನೀಡಿದ್ದರು. ಸಾಧಕರಿಗೆ ಚಪ್ಪಾಳೆ ಹೊಡೆಯಲು ಕರೆ ನೀಡಿದ್ದರು. ಈ ಕರ್ಫೂವನ್ನು ಯಶಸ್ವಿ ಮಾಡುವ ಉದ್ದೇಶದಿಂದ ಮೋದಿ ಭಕ್ತರು ಹಲವಾರು ಭಕ್ತರು ಸುಳ್ಳು-ಪೊಳ್ಳು ಮಾಹಿತಿಗಳನ್ನು ನೀಡಿ ಜನರನ್ನು ದಾರಿ ತಪ್ಪಿಸುತ್ತಿದ್ದರು.

ಅದರಲ್ಲಿ ಒಂದು ಹುಡುಗಿ ನೀವು ದೇವಸ್ಥಾನದಲ್ಲಿ ಗಂಟೆ ಬಾರಿಸುವುದು ಏಕೆಂದು ತಿಳಿದಿದ್ದೀರಿ? ಇದರಿಂದ ಬಿಡುಗಡೆಯಾಗುವ ಶಕ್ತಿಯು ಸುತ್ತಲಿನ ಬ್ಯಾಕ್ಟೀರಿಯಾ ಮತ್ತು ವೈರಸ್‌ಗಳನ್ನು ಕೊಲ್ಲುತ್ತದೆ. ಅದೇ ರೀತಿ 132ಕೋಟಿ ಜನರು ಏಕಕಾಲಕ್ಕೆ ಚಪ್ಪಾಳೆ ತಟ್ಟುವುದುರಿಂದ ದೊಡ್ಡ ಮಟ್ಟದ ಎನರ್ಜಿ ಸೃಷ್ಟಿಯಾಗಿ ಕೊರೊನಾ ಮಾತ್ರವಲ್ಲ ಸುತ್ತಲಿನ ಎಲ್ಲಾ ಬ್ಯಾಕ್ಟೀರೀಯಾಗಳು ಸಾಯುತ್ತವೆ. ಮೋದಿಯ ವೈಜ್ಞಾನಿಕತೆಗೆ ಸೆಲ್ಯೂಟ್‌ ಎಂದು ವಿಡಿಯೋ ಮಾಡಿ ಹರಿಬಿಟ್ಟಿದ್ದಳು.

ಅದನ್ನು ನೋಡಿದ್ದೆ ತಡ ಕನ್ನಡದ ಖ್ಯಾತ ನಟ ಸುದೀಪ್‌ ಹಿಂದು ಮುಂದು ನೋಡದೇ ತನ್ನ ಟ್ವಿಟ್ಟರ್‌ನಲ್ಲಿ ಷೇರ್‌ ಮಾಡಿಬಿಟ್ಟರು. ನಾವೂ ಮನೆಯಲ್ಲಿಯೇ ಇದ್ದು, ಕೊರೊನಾ ನಾಶಮಾಡೋಣ ಎಂದು ತಲೆಬರಹ ಕೊಟ್ಟಿದ್ದರು. ಇದು ಮೇಲ್ನೋಟಕ್ಕೆ ಸುಳ್ಳು ಸುದ್ದಿ ಎಂದು ಹಲವಾರು ಅಭಿಮಾನಿಗಳಿಗೆ ತಿಳಿದಿದ್ದರಿಂದ ಸರ್‌ ದಯವಿಟ್ಟು ಡಿಲೀಟ್‌ ಮಾಡಿ ಎಂದು ಕಮೆಂಟ್‌ ಹಾಕಿದರು.

 

ಅಲ್ಲ ಸುದೀಪ್‌ ಸರ್‌ “ವೈಜ್ಞಾನಿಕ ತಳಹದಿಯೇ ಇಲ್ಲದೇ ಬೇಕಾದಂತೆ ಹೇಳಿಕೆ ಕೊಟ್ಟಿರೋ ಈ ವ್ಯಕ್ತಿಯ ವಿಡಿಯೋವನ್ನು ಪ್ರಚಾರ ಮಾಡುತ್ತಿರಲ್ಲ ನಿಮಗೇನಾಗಿದೆ ಹೇಳಿ.. ನಮಗೆ ಬೇಕಿರೋದು True Science.. Psuedo Science ಅಲ್ಲ.. ಇಂತಹ ಬೂಟಾಟಿಕೆಯನ್ನು ಮೌಡ್ಯವನ್ನು ದೂರ ತಳ್ಳಿ.. ಅರಿಮೆಯ ಕಡೆ ಸಾಗಿ.. ಎಂದು ಮಲ್ಲಿಕಾರ್ಜುನ್‌ ಬಿ ಕಮೆಂಟ್‌ ಮಾಡಿದ್ದರು.

ಹೆಚ್ಚು ಹಿಂಬಾಲಕರಿರುವ ವ್ಯಕ್ತಿಗಳು ಹೆಚ್ಚು ಜವಾಬ್ದಾರಿಯುತವಾಗಿರಬೇಕು! ನೋಡಿ, ಮೋದಿಯವರು ಹೇಳಿದಂತೆ ಆರೋಗ್ಯ ಕಾರ್ಯಕರ್ತರಿಗೋಸ್ಕರ 5 ದಲ್ಲ 10 ನಿಮಿಷ ಚಪ್ಪಾಳೆ ತಟ್ಟುವ ಬೇಕಾದರೆ! ಆದರೆ ಅದರಿಂದ ವೈರಾಣು ಸಾಯುತ್ತದೆ ಎಂಬುದು ಬುರಡೆ. ದೇವಾಲಯದಲ್ಲಿ ಘಂಟೆ ಬಾರಿಸುವುದು, ಸೇರಿರುವ ಜನರ ಗಮನವನ್ನು ಮಂಗಳಾರತಿಯತ್ತ ಸೆಳೆಯಲು! ಎಂದು ಪ್ರಹ್ಲಾದ ಕೆ ಹನುಮಂತಯ್ಯ ಎಂಬುವವರು ಕಿಡಿಕಾರಿದ್ದಾರೆ.

ಹುಚ್ಚನ ಮದುವೆಯಲ್ಲಿ ಉಂಡವನೇ ಜಾಣ ಎನ್ನುವ ಗಾದೆ ನೆನಪಿಗೆ ಬರುತ್ತಿದೆ ಈ ನಿಮ್ಮ ಮಾತು ಕೇಳಿ… ಹಾಗಾದರೆ ಆಸ್ಪತ್ರೆಯಲ್ಲಿ ಡಾಕ್ಟರ್ ಗಳ ಕೈಯಲ್ಲಿ ಗಂಟೆ ಕೊಟ್ಟುಬಿಡೋಣ, ನರ್ಸ್ ಗಳ ಕೈಯಲ್ಲಿ ಶಂಖಗಳನ್ನು ಕೊಟ್ಟು ಬರೋಣ ಎಂದು ಮತ್ತೊಬ್ಬರು ಕಾಲೆಳೆದಿದ್ದಾರೆ.

ಮಾನ್ಯ ಸುದೀಪ ಅವರೇ, ನೀವು ನಿಮ್ಮದೇ ಒಂದು ವಿಡಿಯೋ ತುಣುಕು ಮಾಡಿ ಪ್ರಧಾನಿಗಳ ಬೆಂಬಲಕ್ಕೆ ನಿಲ್ಲಬಹುದಿತ್ತು. ಬದಲಿಗೆ ಅವೈಜ್ಞಾನಿಕವಾಗಿ ಎಲ್ಲರ ದಾರಿ ತಪ್ಪಿಸುತ್ತಿರುವ ಇಂತಹವರ ತುಣುಕು ಹಾಕಿ ಅವರನ್ನು ಮುಖ್ಯವಾಹಿನಿಗೆ ತರುವುದಲ್ಲದೇ, ಗಂಟೆಗಳು ಕಳೆದರೂ ಇದನ್ನು ತೆಗೆಯದಿರುವುದು ವಿಪರ್ಯಾಸ. ದಯವಿಟ್ಟು ಇನ್ನೊಮ್ಮೆ ಯೋಚಿಸಿ ವೈಶಾಖ್‌ ಭಾಗೀ ಹೇಳಿದ್ದಾರೆ.

ಇನ್ನು ಮತ್ತೊರ್ವ ಸಾಮಾಜಿಕ ಕಾಳಜಿಯ ನಟ ಚೇತನ್‌, “ಸುದೀಪ್ ಸರ್, ಚಿತ್ರರಂಗದಲ್ಲಿ ನೀವು ಮಾಡಿರುವ ಕೆಲಸಗಳನ್ನು ಮತ್ತು ಸಾಧನೆಗಳನ್ನು ನಾನು ಗೌರವಿಸುತ್ತೇನೆ.. ಅಪ್ಪ, ಅಮ್ಮ ಇಬ್ಬರು ವೈದ್ಯರ ಮಗನಾಗಿ, ವೈದ್ಯರಿಗೆ ಪ್ರತಿಯೊಬ್ಬರು ಗೌರವವನ್ನು ನೀಡಬೇಕಾಗುತ್ತದೆ ಅದನ್ನ ನಾನು ಒಪ್ಪುತ್ತೇನೆ. ಆದರೆ ಈ ರೀತಿಯ ಅವೈಜ್ಞಾನಿಕವಾದಂತಹ ವಿಚಾರಗಳು (‘energy medicine’) ನಮ್ಮನ್ನು ತಪ್ಪುದಾರಿಗೆ ಕರೆದೊಯ್ಯುವುದಲ್ಲದೆ, ಮೌಢ್ಯವನ್ನು ಬಿತ್ತುತ್ತವೆ.. ಕೊರೋನ ವೈರಸ್ ನ ವಿರುದ್ಧ ಹೋರಾಡೋಣ, ವೈಜ್ಞಾನಿಕವಾಗಿ”.. ಎಂದು ಪ್ರತಿಕ್ರಿಯೆ ನೀಡಿದ್ದರು.

ನಂತರ ಚೇತನ್‌ ಮೇಲೂ ಕೆಲವು ಸುದೀಪ್‌ ಅಭಿಮಾನಿಗಳು ಹರಿಹಾಯ್ದು ನಿಂದಿಸಿದ್ದರು. ಇಷ್ಟೆಲ್ಲಾ ಬೆಳವಣಿಗಳನ್ನು ಕಂಡ ಮತ್ತು ವೈಜ್ಞಾನಿಕ ಅರಿವಿರುವ ಸುದೀಪ್‌ ಅಭಿಮಾನಿಗಳು ತಮ್ಮ ಸ್ಟಾರ್‌ ನಟ ಅಂತಹ ವಿಡಿಯೋಗಳನ್ನು ಹಂಚಿಕೊಂಡಿರುವುದು ತಪ್ಪು, ಇದು ನಿಜಕ್ಕೂ ಜನರನ್ನು ಮಿಸ್‌ ಗೈಡ್‌ ಮಾಡುತ್ತದೆ. ಹಲವಾರು ಜನರು ಸಿನಿಮಾ ಸ್ಟಾರ್‌ಗಳ ಮೇಲೆ ಅಭಿಮಾನ ಇಟ್ಟಿರುತ್ತಾರೆ. ಫಾಲೋ ಮಾಡುತ್ತಿರುತ್ತಾರೆ. ಅಂತಹ ಜನರನ್ನು ದಾರಿ ತಪ್ಪಿಸುವಂತಹ ಪೋಸ್ಟ್‌ಗಳನ್ನು ಸ್ಟಾರ್‌ಗಳು ಹಾಕುವುದು ತಪ್ಪು ಎಂದು ಸುದೀಪ್‌ರನ್ನು ತರಾಟೆಗೆ ತೆಗೆದುಕೊಂಡು, ಸುದೀಪ್‌ ಖಾತೆಯಲ್ಲೇ ರಿಪ್ಲೇ ಟ್ವೀಟ್‌ ಮಾಡಿದ್ದಾರೆ. ಸಧ್ಯಕ್ಕೆ ಸುದೀಪ್‌ ಅಭಿಮಾನಿಗಳಲ್ಲೇ ಪರ-ವಿರೋಧ ಹಗ್ಗಜಗ್ಗಾಟ ಶುರುವಾಗಿದೆ.

ಇನ್ನು ಸುದೀಪ್‌ ತಮ್ಮ ಟ್ವೀಟ್‌ ಅನ್ನು ಅಳಿಸಿಲ್ಲ. ಆದರೆ ಆ ಟ್ವೀಟ್‌ನಲ್ಲಿ ಆ ಹುಡುಗಿ ಮಾತನಾಡಿರುವ ಕೊನೆಯ 44 ಸೆಕೆಂಡ್‌ ವಿಡಿಯೋ ಮಾತ್ರ ಕಾಣುತ್ತಿದೆ. ಆ ಹುಡುಗಿ ಮಾತನಾಡಿರುವುದು 2.12 ನಿಮಿಷವಾಗಿದೆ. ಒಟ್ಟಿನಲ್ಲಿ ಈ ಫೇಕ್‌ ಸುದ್ದಿಗಳ ಮಾಯಾಜಾಲಕ್ಕೆ ಸ್ಟಾರ್‌ ನಟರು ಬಲಿಯಾಗುವುದು ದುರಂತವಾಗಿದೆ.

ಆಕೆಯ ಪೂರ್ತಿ ಸುಳ್ಳು ಭಾಷಣ ಇಲ್ಲಿದೆ ನೋಡಿ.

ಇದನ್ನು ಕೇಳಿದ ತಕ್ಷಣವೇ ಕೊರೊನಾ‌ ಓಡಿ ಹೋಗಿದೆ. ಅಜ್ಞಾನವೇ ಆಳುತ್ತಿರುವಾಗ ವಿಜ್ಞಾನದ ಚರ್ಚೆ‌ ಅಪರಾಧ..

Posted by Vasu Hv on Friday, March 20, 2020

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...