Homeಕರ್ನಾಟಕಮಹಿಳೆಯ ತೆಂಗು, ಅಡಿಕೆ ತೋಟ ನಾಶ : ಬಲಾಢ್ಯ ವ್ಯಕ್ತಿಗಳ ಕೈವಾಡದಿಂದ ಕಮರಿದ ಬದುಕು

ಮಹಿಳೆಯ ತೆಂಗು, ಅಡಿಕೆ ತೋಟ ನಾಶ : ಬಲಾಢ್ಯ ವ್ಯಕ್ತಿಗಳ ಕೈವಾಡದಿಂದ ಕಮರಿದ ಬದುಕು

- Advertisement -
- Advertisement -

ಗ್ರಾಮ ಲೆಕ್ಕಿಗ ಮತ್ತು ಕಂದಾಯಾಧಿಕಾರಿ ದ್ವೇಷ ಮತ್ತು ಬಲಾಢ್ಯರ ಕೈವಾಡಕ್ಕೆ ತಿಪ್ಪೂರಿನ ಸಿದ್ದಮ್ಮನ ತೆಂಗು, ಅಡಿಕೆ ಮರಗಳು ಬಲಿಯಾಗಿವೆ. ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಶಾಸಕರು ಮತ್ತು ತಹಶೀಲ್ದಾರ್ ಮೇಲೆ ಒತ್ತಡ ತಂದು ನೂರಕ್ಕೂ ಹೆಚ್ಚು ಫಲಭರಿತ ಅಡಿಕೆ ಮತ್ತು 25 ತೆಂಗಿನ ಮರಗಳನ್ನು ಕಡಿದು ಹಾಕಲಾಗಿದೆ.  ತಿಪ್ಪೂರುಪಾಳ್ಯದ ಬಲಾಢ್ಯ ವ್ಯಕ್ತಿಯೇ ಇಡೀ ಘಟನೆಗೆ ಕಾರಣ ಎಂದು ಎಲ್ಲರೂ ಬೊಟ್ಟುಮಾಡುತ್ತಿದ್ದಾರೆ. ಆ ವ್ಯಕ್ತಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದಿಲ್ಲ. ಆದರೆ ಆ ವ್ಯಕ್ತಿಯ ಕೈವಾಡವಿಲ್ಲದೆ ಯಾವುದೂ ನಡೆಯುವುದಿಲ್ಲ. ಹೀಗಾಗಿ ಆ ವ್ಯಕ್ತಿಯ ಹೆಸರನ್ನು ಹೇಳಲು ಎಲ್ಲರಿಂದಲೂ ಹಿಂಜರಿಕೆ ವ್ಯಕ್ತವಾಗಿದೆ.

ಘಟನೆಯ ಹಿನ್ನೆಲೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು ತಿಪ್ಪೂರು ಗ್ರಾಮದ ಸರ್ವೇ ನಂಬರ್ 113ರಲ್ಲಿ 5 ಎಕರೆ 11 ಗುಂಟೆ ಜಮೀನು ಇದೆ. ಈ ಕೋಡಿಕೆಂಪಮ್ಮ ದೇವಿಗೆ ನಾಯಕ ಸಮುದಾಯದವರು ಪೂಜಾರರು. ಹಾಗಾಗಿ ಈ ಇನಾಂತಿ ಭೂಮಿಯನ್ನು ಪೂಜಾರಿ ಕುಟುಂಬಗಳೇ ಉಳುಮೆ ಮಾಡಿಕೊಂಡು ಬರುತ್ತಿದ್ದರು. ಹೀಗಿರುವಾಗ ಪೂಜಾರಿ ಕುಟುಂಬದ ಅಣ್ಣತಮ್ಮಂದಿರ ನಡುವೆ ದಾಯಾದಿ ಕಲಹ ನಡೆಯುತ್ತದೆ. ಈ ಪ್ರಕರಣ ಪೊಲೀಸ್ ಮತ್ತು ಕೋರ್ಟ್ ಮೆಟ್ಟಿಲೇರುತ್ತದೆ. ಇದೇ ಕಾರಣಕ್ಕೆ ಕಳೆದ ಮೂರು ದಶಕಗಳಿಂದಲೂ ಕೋಡಿಕೆಂಪಮ್ಮ ದೇವಿಯ ಜಾತ್ರೆಯ ನಡೆದಿರಲಿಲ್ಲ.

ಆ ನಂತರ 2005ರ ಸುಮಾರಿನಲ್ಲಿ ಗ್ರಾಮಸ್ಥರು ಮಧ್ಯಸ್ಥಿಕೆ ವಹಿಸಿ ಕೋಡಿಕೆಂಪಮ್ಮ ದೇವಿ ಜಾತ್ರೆ ನಡೆಸಲು ಪೂಜಾರಿ ಕುಟುಂಬಗಳ ನಡುವೆ ಸಂಧಾನ ಮಾಡಿದರು. ಸಂಧಾನ ಯಶಸ್ವಿಯಾಗಿ ಆಗಿನಿಂದ ವರ್ಷವರ್ಷ ಜಾತ್ರೆ ನಡೆಸಿಕೊಂಡು ಬರಲಾಗುತ್ತಿದೆ. ಕೆಂಪಮ್ಮದೇವಿಗೆ ಸೇರಿದ ಭೂಮಿಯನ್ನು ಸಾಗುವಳಿ ಮಾಡುತ್ತ ಬರುತ್ತಿದ್ದು ಕಾಲ ಕಳೆದಂತೆ 5 ಎಕರೆ 11 ಗುಂಟೆಯಲ್ಲೂ 16 ಕುಟುಂಬಗಳು ಅಡಿಕೆ ಮತ್ತು ತೆಂಗಿನ ತೋಟ ಬೆಳೆಸಿದರು. ಫಲವತ್ತಾದ ಭೂಮಿಯಾದ್ದರಿಂದ ತೆಂಗು ಮತ್ತು ಅಡಿಕೆ ಫಸಲು ಹುಲುಸಾಗಿ ಬೆಳೆಯಿತು.

ಈ ಮಧ್ಯೆ ಜಮೀನು ಯಾರಿಗೆ ಸೇರಬೇಕು ಎನ್ನುವ ವಿವಾದದ ಕುರಿತು ಗುಬ್ಬಿಯ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಯಿತು. ಪ್ರಕರಣದ ವಿಚಾರಣೆ ನಡೆಯುತ್ತಿದ್ದು ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ತಾಲೂಕು ಆಡಳಿತಕ್ಕೆ ಸೂಚಿಸಿತು. ತಹಶೀಲ್ದಾರ್ ಕೋರ್ಟ್ ಆದೇಶವನ್ನು ಉಲ್ಲಂಘಿಸಿ ಗ್ರಾಮ ಲೆಕ್ಕಿಗ ಮತ್ತು ಕಂದಾಯ ಅಧಿಕಾರಿಗಳಿಗೆ ಕೋಡಿಕೆಂಪಮ್ಮ ದೇವಾಲಯದ ಬಳಿ ಇರುವ ತೆಂಗು ಮತ್ತು ಅಡಿಕೆ ಗಿಡಗಳನ್ನು ಕಡಿಸುವಂತೆ ಸೂಚನೆ ನೀಡಿರುವುದು ಈ ಎಲ್ಲಾ ಅವಾಂತರಗಳಿಗೆ ಕಾರಣ ಎಂದು ತಿಳಿದುಬಂದಿದೆ.

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ

ಗ್ರಾಮ ಲೆಕ್ಕಿಗ, ಕಂದಾಯಾಧಿಕಾರಿ ಮಾಡಿದ ತಪ್ಪಿಗೆ ಅಮಾಯಕ ಮಹಿಳೆಯ ತೋಟ ನಾಶ ಮಾಡಿದ ತಹಶಿಲ್ದಾರ್‌: ಗುಬ್ಬಿಯಲ್ಲೊಂದು ಮನಕಲಕುವ ಕರಾಳ ಘಟನೆ.. ವಿಡಿಯೋ ನೋಡಿ.

Posted by Naanu Gauri on Sunday, March 8, 2020

ತಿಪ್ಪೂರುಪಾಳ್ಯದ  ಆ ಬಲಾಢ್ಯ ವ್ಯಕ್ತಿ ತೆರೆಮರೆಯಲ್ಲಿ ಇದೆಲ್ಲವನ್ನೂ ನಿಯಂತ್ರಿಸುತ್ತಿದ್ದು ಜೆಡಿಎಸ್ ಮತ್ತು ಬಿಜೆಪಿಯ ಸಹಾಯದಿಂದ ತಹಶೀಲ್ದಾರ್ ಮೇಲೆ ಒತ್ತಡ ಹಾಕಿಸಿದ್ದಾರೆ. ಶಾಸಕ ಎಸ್.ಆರ್.ಶ್ರೀನಿವಾಸ್ ಮತ್ತು ಬಿಜೆಪಿ ಮುಖಂಡರು ಈ ಪ್ರಕರಣದ ಹಿಂದೆ ಬಲವಾಗಿ ನಿಂತುಕೊಂಡಿದ್ದಾರೆ ಎಂಬ ಆರೋಪವಿದೆ. ಬಲಾಢ್ಯ ಜಾತಿಗಳು ನಡೆಸಿರುವ ಕೂಟಕ್ಕೆ ಸಿದ್ದಮ್ಮ ಅವರ ಬದುಕು ಕಳಾಹೀನವಾಗಿದೆ. ಹೋದ ಮರಗಳನ್ನು ತಂದು ಕೊಡಲು ಯಾರಿಂದಲೂ ಸಾಧ್ಯವಿಲ್ಲ. ನಾಯಕ ಸಮುದಾಯಕ್ಕೆ ಸೇರಿರುವ ಸಿದ್ದಮ್ಮ ಬಲಾಢ್ಯರು ಹೆಣೆದ ಜಾಲಕ್ಕೆ ಬಿದ್ದಿದ್ಧಾರೆ.

ಕೋಡಿ ಕೆಂಪಮ್ಮ ದೇವಿಗೆ ಬಹುತೇಕ ಲಿಂಗಾಯತರು ನಡೆದುಕೊಳ್ಳುತ್ತಾರೆ. ಒಕ್ಕಲಿಗರು, ತಿಗಳರು ಮತ್ತು ದಲಿತ ಸಮುದಾಯವೂ ನಡೆದುಕೊಳ್ಳುತ್ತದೆ. ಈ ಚಿತಾವಣೆಯನ್ನು ನೋಡಿದರೆ ಬಲಾಢ್ಯ ಜಾತಿಗಳು ಇಡೀ ದೇವಾಲಯದ ಉಸ್ತುವಾರಿಯನ್ನು ತಮ್ಮ ತೆಕ್ಕೆಗೆ ತೆದುಕೊಂಡು ಫಲವತ್ತಾದ ಭೂಮಿಯನ್ನು ತಮ್ಮ ವಶಕ್ಕೆ ಪಡೆಯುವ ಹುನ್ನಾರ ನಡೆಸಿವೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಿಪ್ಪೂರುಪಾಳ್ಯದ ಆ ಬಲಾಢ್ಯ ವ್ಯಕ್ತಿ ದೇವಾಲಯದ ಆಡಳಿತವನ್ನು ಹಿಡಿಯವ ಭಾಗದ ಸಂಚು ಇದಾಗಿದೆ.

ನಾಯಕ ಸಮುದಾಯಕ್ಕ ಸೇರಿದ 16 ಕುಟುಂಬಗಳು ಈ 5 ಎಕರೆ 11 ಗುಂಟೆ ಜಮೀನನ್ನು ಮೊದಲಿಂದಲೂ ಮಾಡಿಕೊಂಡು ಬರುತ್ತಿವೆ. ಆರಂಭದಲ್ಲಿ ಸದರಿ ಭೂಮಿಯಲ್ಲಿ ಮರಾವಳಿ ಬೆಳೆಸಬಾರದು ಎಂದು ನಿರ್ಧಾರ ಆಗಿದ್ದರೂ, ಕಾಲಕಳೆದಂತೆ ತೆಂಗು ಮತ್ತು ಅಡಿಕೆ ಸಸಿಗಳನ್ನು ಇಟ್ಟು ಬೆಳೆಸಿದರು. ಹಲವು ಬಾರಿ ಫಸಲನ್ನು ಕೊಯ್ದುಕೊಂಡರು. ದೇವಾಲಯದ  ಸಮೀಪವೇ ಇರುವ ಜಮೀನಿನಲ್ಲಿ ತೋಟವಿದ್ದರೂ ಜನರೂ ಕೂಡ ಕಳೆದ 15 ವರ್ಷಗಳಿಂದ ಜಾತ್ರೆಯನ್ನು ಮಾಡಿಕೊಂಡು ಬಂದಿದ್ದಾರೆ.

ಆದರೆ ಈಗ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಮತ್ತು ಬಿಜೆಪಿ ಮುಖಂಡರ ಒತ್ತಡಕ್ಕೆ ಒಳಗಾಗಿರುವ ತಹಶೀಲ್ದಾರ್ ಮಮತ ಏಕಾಏಕಿ ಆದೇಶ ಹೊರಡಿಸಿ ತೆಂಗು, ಅಡಿಕೆ ಮರಗಳಿಗೆ ಕೊಡಲಿಪಟ್ಟು ಬಿದ್ದಿದೆ. ಹೆಚ್ಚು ಜನರು ಜಾತ್ರೆಗೆ ಸೇರುವ (ಲಿಂಗಾಯತ, ಒಕ್ಕಲಿಗರು) ಹಿನ್ನೆಲೆಯಲ್ಲಿ ಅಲ್ಲಿಗೆ ಹೆಚ್ಚು ವಾಹನಗಳು ಬರುತ್ತವೆ. ಹಾಗಾಗಿ ವಿಶಾಲ ಜಾಗ ಬೇಕು ಎಂಬ ನೆಪ ಒಡ್ಡಿ ತೋಟ ಕಡಿದಿದ್ದಾರೆ. ತೋಟವನ್ನು ಕಡಿಯುವುದಾದರೆ 5 ಎಕರೆ 11 ಗುಂಟೆಯಲ್ಲಿರುವ ಎಲ್ಲವನ್ನೂ ಕತ್ತರಿಸಿ ಹಾಕಲಿ. ಮಳೆಗಾಲದಲ್ಲಿ ಬೇಕಾದರೆ ಆ ಕುಟುಂಬಗಳು ಆ ಭೂಮಿಯಲ್ಲಿ ಮಾಡಿಕೊಂಡು ತಿನ್ನಲಿ ಎನ್ನುತ್ತಾರೆ ಕೆಲವರು.

ಇಡೀ ಪ್ರಕರಣವನ್ನು ಗಮನಿಸಿದರೆ ಬಲಾಢ್ಯ ಜಾತಿಗಳು ಕೋಡಿಕೆಂಪಮ್ಮ ದೇವಾಲಯ ಮತ್ತು ಇನಾಂತಿ ಜಮೀನಿನ ಮೇಲೆ ಕಣ್ಣಿಟ್ಟಿವೆ. ದೇವಾಲಯವನ್ನು ಅಭಿವೃದ್ಧಿಪಡಿಸಿ ರಿಯಲ್ ಎಸ್ಟೇಟ್ ದಂಧೆ ಮಾಡುವ ಹುನ್ನಾರಗಳು ನಡೆಯುತ್ತಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ನಾಯಕ ಸಮುದಾಯ ತೋಟಗಾರಿಕೆ ಬೆಳೆಯಲ್ಲಿ ಲಾಭ ಮಾಡಿಕೊಂಡು ಆರ್ಥಿಕವಾಗಿ ಸಬಲರಾದರೆ ತಮ್ಮ ಹಿಡಿತ ತಪ್ಪಿಹೋಗುತ್ತದೆ ಎಂಬ ಕಾರಣಕ್ಕೆ ಪಿತೂರಿ ನಡೆಸಲಾಗುತ್ತಿದೆ ಎಂದು ಹೆಸರು ಹೇಳಲು ಇಚ್ಚಿಸದೆ ಕೆಲವರು ತಿಳಿಸಿದ್ದಾರೆ.

ಈಗ ಸಿದ್ದಮ್ಮ ತನಗೆ ನ್ಯಾಯಬೇಕು ಎಂದು ಧರಣಿ ಕೂತಿದ್ದಾಳೆ: ಹತ್ತಾರು ಜನ ಆಕೆಯ ಬೆಂಬಲಕ್ಕೆ ನಿಂತಿದ್ದಾರೆ. ಹೋರಾಟವನ್ನು ತುಮಕೂರಿನವರೆಗೂ ಒಯ್ಯುವುದಾಗಿ ಆಕೆ ಶಪಥ ಮಾಡಿದ್ದಾಳೆ. ಇದು ಎಲ್ಲಿಗೆ ಹೋಗಿ ನಿಲ್ಲುತ್ತದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...