Homeಕರ್ನಾಟಕಮಹಿಳೆಯ ತೆಂಗು, ಅಡಿಕೆ ತೋಟ ನಾಶ : ಬಲಾಢ್ಯ ವ್ಯಕ್ತಿಗಳ ಕೈವಾಡದಿಂದ ಕಮರಿದ ಬದುಕು

ಮಹಿಳೆಯ ತೆಂಗು, ಅಡಿಕೆ ತೋಟ ನಾಶ : ಬಲಾಢ್ಯ ವ್ಯಕ್ತಿಗಳ ಕೈವಾಡದಿಂದ ಕಮರಿದ ಬದುಕು

- Advertisement -
- Advertisement -

ಗ್ರಾಮ ಲೆಕ್ಕಿಗ ಮತ್ತು ಕಂದಾಯಾಧಿಕಾರಿ ದ್ವೇಷ ಮತ್ತು ಬಲಾಢ್ಯರ ಕೈವಾಡಕ್ಕೆ ತಿಪ್ಪೂರಿನ ಸಿದ್ದಮ್ಮನ ತೆಂಗು, ಅಡಿಕೆ ಮರಗಳು ಬಲಿಯಾಗಿವೆ. ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಶಾಸಕರು ಮತ್ತು ತಹಶೀಲ್ದಾರ್ ಮೇಲೆ ಒತ್ತಡ ತಂದು ನೂರಕ್ಕೂ ಹೆಚ್ಚು ಫಲಭರಿತ ಅಡಿಕೆ ಮತ್ತು 25 ತೆಂಗಿನ ಮರಗಳನ್ನು ಕಡಿದು ಹಾಕಲಾಗಿದೆ.  ತಿಪ್ಪೂರುಪಾಳ್ಯದ ಬಲಾಢ್ಯ ವ್ಯಕ್ತಿಯೇ ಇಡೀ ಘಟನೆಗೆ ಕಾರಣ ಎಂದು ಎಲ್ಲರೂ ಬೊಟ್ಟುಮಾಡುತ್ತಿದ್ದಾರೆ. ಆ ವ್ಯಕ್ತಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದಿಲ್ಲ. ಆದರೆ ಆ ವ್ಯಕ್ತಿಯ ಕೈವಾಡವಿಲ್ಲದೆ ಯಾವುದೂ ನಡೆಯುವುದಿಲ್ಲ. ಹೀಗಾಗಿ ಆ ವ್ಯಕ್ತಿಯ ಹೆಸರನ್ನು ಹೇಳಲು ಎಲ್ಲರಿಂದಲೂ ಹಿಂಜರಿಕೆ ವ್ಯಕ್ತವಾಗಿದೆ.

ಘಟನೆಯ ಹಿನ್ನೆಲೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು ತಿಪ್ಪೂರು ಗ್ರಾಮದ ಸರ್ವೇ ನಂಬರ್ 113ರಲ್ಲಿ 5 ಎಕರೆ 11 ಗುಂಟೆ ಜಮೀನು ಇದೆ. ಈ ಕೋಡಿಕೆಂಪಮ್ಮ ದೇವಿಗೆ ನಾಯಕ ಸಮುದಾಯದವರು ಪೂಜಾರರು. ಹಾಗಾಗಿ ಈ ಇನಾಂತಿ ಭೂಮಿಯನ್ನು ಪೂಜಾರಿ ಕುಟುಂಬಗಳೇ ಉಳುಮೆ ಮಾಡಿಕೊಂಡು ಬರುತ್ತಿದ್ದರು. ಹೀಗಿರುವಾಗ ಪೂಜಾರಿ ಕುಟುಂಬದ ಅಣ್ಣತಮ್ಮಂದಿರ ನಡುವೆ ದಾಯಾದಿ ಕಲಹ ನಡೆಯುತ್ತದೆ. ಈ ಪ್ರಕರಣ ಪೊಲೀಸ್ ಮತ್ತು ಕೋರ್ಟ್ ಮೆಟ್ಟಿಲೇರುತ್ತದೆ. ಇದೇ ಕಾರಣಕ್ಕೆ ಕಳೆದ ಮೂರು ದಶಕಗಳಿಂದಲೂ ಕೋಡಿಕೆಂಪಮ್ಮ ದೇವಿಯ ಜಾತ್ರೆಯ ನಡೆದಿರಲಿಲ್ಲ.

ಆ ನಂತರ 2005ರ ಸುಮಾರಿನಲ್ಲಿ ಗ್ರಾಮಸ್ಥರು ಮಧ್ಯಸ್ಥಿಕೆ ವಹಿಸಿ ಕೋಡಿಕೆಂಪಮ್ಮ ದೇವಿ ಜಾತ್ರೆ ನಡೆಸಲು ಪೂಜಾರಿ ಕುಟುಂಬಗಳ ನಡುವೆ ಸಂಧಾನ ಮಾಡಿದರು. ಸಂಧಾನ ಯಶಸ್ವಿಯಾಗಿ ಆಗಿನಿಂದ ವರ್ಷವರ್ಷ ಜಾತ್ರೆ ನಡೆಸಿಕೊಂಡು ಬರಲಾಗುತ್ತಿದೆ. ಕೆಂಪಮ್ಮದೇವಿಗೆ ಸೇರಿದ ಭೂಮಿಯನ್ನು ಸಾಗುವಳಿ ಮಾಡುತ್ತ ಬರುತ್ತಿದ್ದು ಕಾಲ ಕಳೆದಂತೆ 5 ಎಕರೆ 11 ಗುಂಟೆಯಲ್ಲೂ 16 ಕುಟುಂಬಗಳು ಅಡಿಕೆ ಮತ್ತು ತೆಂಗಿನ ತೋಟ ಬೆಳೆಸಿದರು. ಫಲವತ್ತಾದ ಭೂಮಿಯಾದ್ದರಿಂದ ತೆಂಗು ಮತ್ತು ಅಡಿಕೆ ಫಸಲು ಹುಲುಸಾಗಿ ಬೆಳೆಯಿತು.

ಈ ಮಧ್ಯೆ ಜಮೀನು ಯಾರಿಗೆ ಸೇರಬೇಕು ಎನ್ನುವ ವಿವಾದದ ಕುರಿತು ಗುಬ್ಬಿಯ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಯಿತು. ಪ್ರಕರಣದ ವಿಚಾರಣೆ ನಡೆಯುತ್ತಿದ್ದು ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ತಾಲೂಕು ಆಡಳಿತಕ್ಕೆ ಸೂಚಿಸಿತು. ತಹಶೀಲ್ದಾರ್ ಕೋರ್ಟ್ ಆದೇಶವನ್ನು ಉಲ್ಲಂಘಿಸಿ ಗ್ರಾಮ ಲೆಕ್ಕಿಗ ಮತ್ತು ಕಂದಾಯ ಅಧಿಕಾರಿಗಳಿಗೆ ಕೋಡಿಕೆಂಪಮ್ಮ ದೇವಾಲಯದ ಬಳಿ ಇರುವ ತೆಂಗು ಮತ್ತು ಅಡಿಕೆ ಗಿಡಗಳನ್ನು ಕಡಿಸುವಂತೆ ಸೂಚನೆ ನೀಡಿರುವುದು ಈ ಎಲ್ಲಾ ಅವಾಂತರಗಳಿಗೆ ಕಾರಣ ಎಂದು ತಿಳಿದುಬಂದಿದೆ.

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ

ಗ್ರಾಮ ಲೆಕ್ಕಿಗ, ಕಂದಾಯಾಧಿಕಾರಿ ಮಾಡಿದ ತಪ್ಪಿಗೆ ಅಮಾಯಕ ಮಹಿಳೆಯ ತೋಟ ನಾಶ ಮಾಡಿದ ತಹಶಿಲ್ದಾರ್‌: ಗುಬ್ಬಿಯಲ್ಲೊಂದು ಮನಕಲಕುವ ಕರಾಳ ಘಟನೆ.. ವಿಡಿಯೋ ನೋಡಿ.

Posted by Naanu Gauri on Sunday, March 8, 2020

ತಿಪ್ಪೂರುಪಾಳ್ಯದ  ಆ ಬಲಾಢ್ಯ ವ್ಯಕ್ತಿ ತೆರೆಮರೆಯಲ್ಲಿ ಇದೆಲ್ಲವನ್ನೂ ನಿಯಂತ್ರಿಸುತ್ತಿದ್ದು ಜೆಡಿಎಸ್ ಮತ್ತು ಬಿಜೆಪಿಯ ಸಹಾಯದಿಂದ ತಹಶೀಲ್ದಾರ್ ಮೇಲೆ ಒತ್ತಡ ಹಾಕಿಸಿದ್ದಾರೆ. ಶಾಸಕ ಎಸ್.ಆರ್.ಶ್ರೀನಿವಾಸ್ ಮತ್ತು ಬಿಜೆಪಿ ಮುಖಂಡರು ಈ ಪ್ರಕರಣದ ಹಿಂದೆ ಬಲವಾಗಿ ನಿಂತುಕೊಂಡಿದ್ದಾರೆ ಎಂಬ ಆರೋಪವಿದೆ. ಬಲಾಢ್ಯ ಜಾತಿಗಳು ನಡೆಸಿರುವ ಕೂಟಕ್ಕೆ ಸಿದ್ದಮ್ಮ ಅವರ ಬದುಕು ಕಳಾಹೀನವಾಗಿದೆ. ಹೋದ ಮರಗಳನ್ನು ತಂದು ಕೊಡಲು ಯಾರಿಂದಲೂ ಸಾಧ್ಯವಿಲ್ಲ. ನಾಯಕ ಸಮುದಾಯಕ್ಕೆ ಸೇರಿರುವ ಸಿದ್ದಮ್ಮ ಬಲಾಢ್ಯರು ಹೆಣೆದ ಜಾಲಕ್ಕೆ ಬಿದ್ದಿದ್ಧಾರೆ.

ಕೋಡಿ ಕೆಂಪಮ್ಮ ದೇವಿಗೆ ಬಹುತೇಕ ಲಿಂಗಾಯತರು ನಡೆದುಕೊಳ್ಳುತ್ತಾರೆ. ಒಕ್ಕಲಿಗರು, ತಿಗಳರು ಮತ್ತು ದಲಿತ ಸಮುದಾಯವೂ ನಡೆದುಕೊಳ್ಳುತ್ತದೆ. ಈ ಚಿತಾವಣೆಯನ್ನು ನೋಡಿದರೆ ಬಲಾಢ್ಯ ಜಾತಿಗಳು ಇಡೀ ದೇವಾಲಯದ ಉಸ್ತುವಾರಿಯನ್ನು ತಮ್ಮ ತೆಕ್ಕೆಗೆ ತೆದುಕೊಂಡು ಫಲವತ್ತಾದ ಭೂಮಿಯನ್ನು ತಮ್ಮ ವಶಕ್ಕೆ ಪಡೆಯುವ ಹುನ್ನಾರ ನಡೆಸಿವೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಿಪ್ಪೂರುಪಾಳ್ಯದ ಆ ಬಲಾಢ್ಯ ವ್ಯಕ್ತಿ ದೇವಾಲಯದ ಆಡಳಿತವನ್ನು ಹಿಡಿಯವ ಭಾಗದ ಸಂಚು ಇದಾಗಿದೆ.

ನಾಯಕ ಸಮುದಾಯಕ್ಕ ಸೇರಿದ 16 ಕುಟುಂಬಗಳು ಈ 5 ಎಕರೆ 11 ಗುಂಟೆ ಜಮೀನನ್ನು ಮೊದಲಿಂದಲೂ ಮಾಡಿಕೊಂಡು ಬರುತ್ತಿವೆ. ಆರಂಭದಲ್ಲಿ ಸದರಿ ಭೂಮಿಯಲ್ಲಿ ಮರಾವಳಿ ಬೆಳೆಸಬಾರದು ಎಂದು ನಿರ್ಧಾರ ಆಗಿದ್ದರೂ, ಕಾಲಕಳೆದಂತೆ ತೆಂಗು ಮತ್ತು ಅಡಿಕೆ ಸಸಿಗಳನ್ನು ಇಟ್ಟು ಬೆಳೆಸಿದರು. ಹಲವು ಬಾರಿ ಫಸಲನ್ನು ಕೊಯ್ದುಕೊಂಡರು. ದೇವಾಲಯದ  ಸಮೀಪವೇ ಇರುವ ಜಮೀನಿನಲ್ಲಿ ತೋಟವಿದ್ದರೂ ಜನರೂ ಕೂಡ ಕಳೆದ 15 ವರ್ಷಗಳಿಂದ ಜಾತ್ರೆಯನ್ನು ಮಾಡಿಕೊಂಡು ಬಂದಿದ್ದಾರೆ.

ಆದರೆ ಈಗ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಮತ್ತು ಬಿಜೆಪಿ ಮುಖಂಡರ ಒತ್ತಡಕ್ಕೆ ಒಳಗಾಗಿರುವ ತಹಶೀಲ್ದಾರ್ ಮಮತ ಏಕಾಏಕಿ ಆದೇಶ ಹೊರಡಿಸಿ ತೆಂಗು, ಅಡಿಕೆ ಮರಗಳಿಗೆ ಕೊಡಲಿಪಟ್ಟು ಬಿದ್ದಿದೆ. ಹೆಚ್ಚು ಜನರು ಜಾತ್ರೆಗೆ ಸೇರುವ (ಲಿಂಗಾಯತ, ಒಕ್ಕಲಿಗರು) ಹಿನ್ನೆಲೆಯಲ್ಲಿ ಅಲ್ಲಿಗೆ ಹೆಚ್ಚು ವಾಹನಗಳು ಬರುತ್ತವೆ. ಹಾಗಾಗಿ ವಿಶಾಲ ಜಾಗ ಬೇಕು ಎಂಬ ನೆಪ ಒಡ್ಡಿ ತೋಟ ಕಡಿದಿದ್ದಾರೆ. ತೋಟವನ್ನು ಕಡಿಯುವುದಾದರೆ 5 ಎಕರೆ 11 ಗುಂಟೆಯಲ್ಲಿರುವ ಎಲ್ಲವನ್ನೂ ಕತ್ತರಿಸಿ ಹಾಕಲಿ. ಮಳೆಗಾಲದಲ್ಲಿ ಬೇಕಾದರೆ ಆ ಕುಟುಂಬಗಳು ಆ ಭೂಮಿಯಲ್ಲಿ ಮಾಡಿಕೊಂಡು ತಿನ್ನಲಿ ಎನ್ನುತ್ತಾರೆ ಕೆಲವರು.

ಇಡೀ ಪ್ರಕರಣವನ್ನು ಗಮನಿಸಿದರೆ ಬಲಾಢ್ಯ ಜಾತಿಗಳು ಕೋಡಿಕೆಂಪಮ್ಮ ದೇವಾಲಯ ಮತ್ತು ಇನಾಂತಿ ಜಮೀನಿನ ಮೇಲೆ ಕಣ್ಣಿಟ್ಟಿವೆ. ದೇವಾಲಯವನ್ನು ಅಭಿವೃದ್ಧಿಪಡಿಸಿ ರಿಯಲ್ ಎಸ್ಟೇಟ್ ದಂಧೆ ಮಾಡುವ ಹುನ್ನಾರಗಳು ನಡೆಯುತ್ತಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ನಾಯಕ ಸಮುದಾಯ ತೋಟಗಾರಿಕೆ ಬೆಳೆಯಲ್ಲಿ ಲಾಭ ಮಾಡಿಕೊಂಡು ಆರ್ಥಿಕವಾಗಿ ಸಬಲರಾದರೆ ತಮ್ಮ ಹಿಡಿತ ತಪ್ಪಿಹೋಗುತ್ತದೆ ಎಂಬ ಕಾರಣಕ್ಕೆ ಪಿತೂರಿ ನಡೆಸಲಾಗುತ್ತಿದೆ ಎಂದು ಹೆಸರು ಹೇಳಲು ಇಚ್ಚಿಸದೆ ಕೆಲವರು ತಿಳಿಸಿದ್ದಾರೆ.

ಈಗ ಸಿದ್ದಮ್ಮ ತನಗೆ ನ್ಯಾಯಬೇಕು ಎಂದು ಧರಣಿ ಕೂತಿದ್ದಾಳೆ: ಹತ್ತಾರು ಜನ ಆಕೆಯ ಬೆಂಬಲಕ್ಕೆ ನಿಂತಿದ್ದಾರೆ. ಹೋರಾಟವನ್ನು ತುಮಕೂರಿನವರೆಗೂ ಒಯ್ಯುವುದಾಗಿ ಆಕೆ ಶಪಥ ಮಾಡಿದ್ದಾಳೆ. ಇದು ಎಲ್ಲಿಗೆ ಹೋಗಿ ನಿಲ್ಲುತ್ತದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....