Homeಕರ್ನಾಟಕಮಹಿಳೆಯ ತೆಂಗು, ಅಡಿಕೆ ತೋಟ ನಾಶ : ಬಲಾಢ್ಯ ವ್ಯಕ್ತಿಗಳ ಕೈವಾಡದಿಂದ ಕಮರಿದ ಬದುಕು

ಮಹಿಳೆಯ ತೆಂಗು, ಅಡಿಕೆ ತೋಟ ನಾಶ : ಬಲಾಢ್ಯ ವ್ಯಕ್ತಿಗಳ ಕೈವಾಡದಿಂದ ಕಮರಿದ ಬದುಕು

- Advertisement -
- Advertisement -

ಗ್ರಾಮ ಲೆಕ್ಕಿಗ ಮತ್ತು ಕಂದಾಯಾಧಿಕಾರಿ ದ್ವೇಷ ಮತ್ತು ಬಲಾಢ್ಯರ ಕೈವಾಡಕ್ಕೆ ತಿಪ್ಪೂರಿನ ಸಿದ್ದಮ್ಮನ ತೆಂಗು, ಅಡಿಕೆ ಮರಗಳು ಬಲಿಯಾಗಿವೆ. ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಶಾಸಕರು ಮತ್ತು ತಹಶೀಲ್ದಾರ್ ಮೇಲೆ ಒತ್ತಡ ತಂದು ನೂರಕ್ಕೂ ಹೆಚ್ಚು ಫಲಭರಿತ ಅಡಿಕೆ ಮತ್ತು 25 ತೆಂಗಿನ ಮರಗಳನ್ನು ಕಡಿದು ಹಾಕಲಾಗಿದೆ.  ತಿಪ್ಪೂರುಪಾಳ್ಯದ ಬಲಾಢ್ಯ ವ್ಯಕ್ತಿಯೇ ಇಡೀ ಘಟನೆಗೆ ಕಾರಣ ಎಂದು ಎಲ್ಲರೂ ಬೊಟ್ಟುಮಾಡುತ್ತಿದ್ದಾರೆ. ಆ ವ್ಯಕ್ತಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದಿಲ್ಲ. ಆದರೆ ಆ ವ್ಯಕ್ತಿಯ ಕೈವಾಡವಿಲ್ಲದೆ ಯಾವುದೂ ನಡೆಯುವುದಿಲ್ಲ. ಹೀಗಾಗಿ ಆ ವ್ಯಕ್ತಿಯ ಹೆಸರನ್ನು ಹೇಳಲು ಎಲ್ಲರಿಂದಲೂ ಹಿಂಜರಿಕೆ ವ್ಯಕ್ತವಾಗಿದೆ.

ಘಟನೆಯ ಹಿನ್ನೆಲೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು ತಿಪ್ಪೂರು ಗ್ರಾಮದ ಸರ್ವೇ ನಂಬರ್ 113ರಲ್ಲಿ 5 ಎಕರೆ 11 ಗುಂಟೆ ಜಮೀನು ಇದೆ. ಈ ಕೋಡಿಕೆಂಪಮ್ಮ ದೇವಿಗೆ ನಾಯಕ ಸಮುದಾಯದವರು ಪೂಜಾರರು. ಹಾಗಾಗಿ ಈ ಇನಾಂತಿ ಭೂಮಿಯನ್ನು ಪೂಜಾರಿ ಕುಟುಂಬಗಳೇ ಉಳುಮೆ ಮಾಡಿಕೊಂಡು ಬರುತ್ತಿದ್ದರು. ಹೀಗಿರುವಾಗ ಪೂಜಾರಿ ಕುಟುಂಬದ ಅಣ್ಣತಮ್ಮಂದಿರ ನಡುವೆ ದಾಯಾದಿ ಕಲಹ ನಡೆಯುತ್ತದೆ. ಈ ಪ್ರಕರಣ ಪೊಲೀಸ್ ಮತ್ತು ಕೋರ್ಟ್ ಮೆಟ್ಟಿಲೇರುತ್ತದೆ. ಇದೇ ಕಾರಣಕ್ಕೆ ಕಳೆದ ಮೂರು ದಶಕಗಳಿಂದಲೂ ಕೋಡಿಕೆಂಪಮ್ಮ ದೇವಿಯ ಜಾತ್ರೆಯ ನಡೆದಿರಲಿಲ್ಲ.

ಆ ನಂತರ 2005ರ ಸುಮಾರಿನಲ್ಲಿ ಗ್ರಾಮಸ್ಥರು ಮಧ್ಯಸ್ಥಿಕೆ ವಹಿಸಿ ಕೋಡಿಕೆಂಪಮ್ಮ ದೇವಿ ಜಾತ್ರೆ ನಡೆಸಲು ಪೂಜಾರಿ ಕುಟುಂಬಗಳ ನಡುವೆ ಸಂಧಾನ ಮಾಡಿದರು. ಸಂಧಾನ ಯಶಸ್ವಿಯಾಗಿ ಆಗಿನಿಂದ ವರ್ಷವರ್ಷ ಜಾತ್ರೆ ನಡೆಸಿಕೊಂಡು ಬರಲಾಗುತ್ತಿದೆ. ಕೆಂಪಮ್ಮದೇವಿಗೆ ಸೇರಿದ ಭೂಮಿಯನ್ನು ಸಾಗುವಳಿ ಮಾಡುತ್ತ ಬರುತ್ತಿದ್ದು ಕಾಲ ಕಳೆದಂತೆ 5 ಎಕರೆ 11 ಗುಂಟೆಯಲ್ಲೂ 16 ಕುಟುಂಬಗಳು ಅಡಿಕೆ ಮತ್ತು ತೆಂಗಿನ ತೋಟ ಬೆಳೆಸಿದರು. ಫಲವತ್ತಾದ ಭೂಮಿಯಾದ್ದರಿಂದ ತೆಂಗು ಮತ್ತು ಅಡಿಕೆ ಫಸಲು ಹುಲುಸಾಗಿ ಬೆಳೆಯಿತು.

ಈ ಮಧ್ಯೆ ಜಮೀನು ಯಾರಿಗೆ ಸೇರಬೇಕು ಎನ್ನುವ ವಿವಾದದ ಕುರಿತು ಗುಬ್ಬಿಯ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಯಿತು. ಪ್ರಕರಣದ ವಿಚಾರಣೆ ನಡೆಯುತ್ತಿದ್ದು ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ತಾಲೂಕು ಆಡಳಿತಕ್ಕೆ ಸೂಚಿಸಿತು. ತಹಶೀಲ್ದಾರ್ ಕೋರ್ಟ್ ಆದೇಶವನ್ನು ಉಲ್ಲಂಘಿಸಿ ಗ್ರಾಮ ಲೆಕ್ಕಿಗ ಮತ್ತು ಕಂದಾಯ ಅಧಿಕಾರಿಗಳಿಗೆ ಕೋಡಿಕೆಂಪಮ್ಮ ದೇವಾಲಯದ ಬಳಿ ಇರುವ ತೆಂಗು ಮತ್ತು ಅಡಿಕೆ ಗಿಡಗಳನ್ನು ಕಡಿಸುವಂತೆ ಸೂಚನೆ ನೀಡಿರುವುದು ಈ ಎಲ್ಲಾ ಅವಾಂತರಗಳಿಗೆ ಕಾರಣ ಎಂದು ತಿಳಿದುಬಂದಿದೆ.

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ

ಗ್ರಾಮ ಲೆಕ್ಕಿಗ, ಕಂದಾಯಾಧಿಕಾರಿ ಮಾಡಿದ ತಪ್ಪಿಗೆ ಅಮಾಯಕ ಮಹಿಳೆಯ ತೋಟ ನಾಶ ಮಾಡಿದ ತಹಶಿಲ್ದಾರ್‌: ಗುಬ್ಬಿಯಲ್ಲೊಂದು ಮನಕಲಕುವ ಕರಾಳ ಘಟನೆ.. ವಿಡಿಯೋ ನೋಡಿ.

Posted by Naanu Gauri on Sunday, March 8, 2020

ತಿಪ್ಪೂರುಪಾಳ್ಯದ  ಆ ಬಲಾಢ್ಯ ವ್ಯಕ್ತಿ ತೆರೆಮರೆಯಲ್ಲಿ ಇದೆಲ್ಲವನ್ನೂ ನಿಯಂತ್ರಿಸುತ್ತಿದ್ದು ಜೆಡಿಎಸ್ ಮತ್ತು ಬಿಜೆಪಿಯ ಸಹಾಯದಿಂದ ತಹಶೀಲ್ದಾರ್ ಮೇಲೆ ಒತ್ತಡ ಹಾಕಿಸಿದ್ದಾರೆ. ಶಾಸಕ ಎಸ್.ಆರ್.ಶ್ರೀನಿವಾಸ್ ಮತ್ತು ಬಿಜೆಪಿ ಮುಖಂಡರು ಈ ಪ್ರಕರಣದ ಹಿಂದೆ ಬಲವಾಗಿ ನಿಂತುಕೊಂಡಿದ್ದಾರೆ ಎಂಬ ಆರೋಪವಿದೆ. ಬಲಾಢ್ಯ ಜಾತಿಗಳು ನಡೆಸಿರುವ ಕೂಟಕ್ಕೆ ಸಿದ್ದಮ್ಮ ಅವರ ಬದುಕು ಕಳಾಹೀನವಾಗಿದೆ. ಹೋದ ಮರಗಳನ್ನು ತಂದು ಕೊಡಲು ಯಾರಿಂದಲೂ ಸಾಧ್ಯವಿಲ್ಲ. ನಾಯಕ ಸಮುದಾಯಕ್ಕೆ ಸೇರಿರುವ ಸಿದ್ದಮ್ಮ ಬಲಾಢ್ಯರು ಹೆಣೆದ ಜಾಲಕ್ಕೆ ಬಿದ್ದಿದ್ಧಾರೆ.

ಕೋಡಿ ಕೆಂಪಮ್ಮ ದೇವಿಗೆ ಬಹುತೇಕ ಲಿಂಗಾಯತರು ನಡೆದುಕೊಳ್ಳುತ್ತಾರೆ. ಒಕ್ಕಲಿಗರು, ತಿಗಳರು ಮತ್ತು ದಲಿತ ಸಮುದಾಯವೂ ನಡೆದುಕೊಳ್ಳುತ್ತದೆ. ಈ ಚಿತಾವಣೆಯನ್ನು ನೋಡಿದರೆ ಬಲಾಢ್ಯ ಜಾತಿಗಳು ಇಡೀ ದೇವಾಲಯದ ಉಸ್ತುವಾರಿಯನ್ನು ತಮ್ಮ ತೆಕ್ಕೆಗೆ ತೆದುಕೊಂಡು ಫಲವತ್ತಾದ ಭೂಮಿಯನ್ನು ತಮ್ಮ ವಶಕ್ಕೆ ಪಡೆಯುವ ಹುನ್ನಾರ ನಡೆಸಿವೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಿಪ್ಪೂರುಪಾಳ್ಯದ ಆ ಬಲಾಢ್ಯ ವ್ಯಕ್ತಿ ದೇವಾಲಯದ ಆಡಳಿತವನ್ನು ಹಿಡಿಯವ ಭಾಗದ ಸಂಚು ಇದಾಗಿದೆ.

ನಾಯಕ ಸಮುದಾಯಕ್ಕ ಸೇರಿದ 16 ಕುಟುಂಬಗಳು ಈ 5 ಎಕರೆ 11 ಗುಂಟೆ ಜಮೀನನ್ನು ಮೊದಲಿಂದಲೂ ಮಾಡಿಕೊಂಡು ಬರುತ್ತಿವೆ. ಆರಂಭದಲ್ಲಿ ಸದರಿ ಭೂಮಿಯಲ್ಲಿ ಮರಾವಳಿ ಬೆಳೆಸಬಾರದು ಎಂದು ನಿರ್ಧಾರ ಆಗಿದ್ದರೂ, ಕಾಲಕಳೆದಂತೆ ತೆಂಗು ಮತ್ತು ಅಡಿಕೆ ಸಸಿಗಳನ್ನು ಇಟ್ಟು ಬೆಳೆಸಿದರು. ಹಲವು ಬಾರಿ ಫಸಲನ್ನು ಕೊಯ್ದುಕೊಂಡರು. ದೇವಾಲಯದ  ಸಮೀಪವೇ ಇರುವ ಜಮೀನಿನಲ್ಲಿ ತೋಟವಿದ್ದರೂ ಜನರೂ ಕೂಡ ಕಳೆದ 15 ವರ್ಷಗಳಿಂದ ಜಾತ್ರೆಯನ್ನು ಮಾಡಿಕೊಂಡು ಬಂದಿದ್ದಾರೆ.

ಆದರೆ ಈಗ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಮತ್ತು ಬಿಜೆಪಿ ಮುಖಂಡರ ಒತ್ತಡಕ್ಕೆ ಒಳಗಾಗಿರುವ ತಹಶೀಲ್ದಾರ್ ಮಮತ ಏಕಾಏಕಿ ಆದೇಶ ಹೊರಡಿಸಿ ತೆಂಗು, ಅಡಿಕೆ ಮರಗಳಿಗೆ ಕೊಡಲಿಪಟ್ಟು ಬಿದ್ದಿದೆ. ಹೆಚ್ಚು ಜನರು ಜಾತ್ರೆಗೆ ಸೇರುವ (ಲಿಂಗಾಯತ, ಒಕ್ಕಲಿಗರು) ಹಿನ್ನೆಲೆಯಲ್ಲಿ ಅಲ್ಲಿಗೆ ಹೆಚ್ಚು ವಾಹನಗಳು ಬರುತ್ತವೆ. ಹಾಗಾಗಿ ವಿಶಾಲ ಜಾಗ ಬೇಕು ಎಂಬ ನೆಪ ಒಡ್ಡಿ ತೋಟ ಕಡಿದಿದ್ದಾರೆ. ತೋಟವನ್ನು ಕಡಿಯುವುದಾದರೆ 5 ಎಕರೆ 11 ಗುಂಟೆಯಲ್ಲಿರುವ ಎಲ್ಲವನ್ನೂ ಕತ್ತರಿಸಿ ಹಾಕಲಿ. ಮಳೆಗಾಲದಲ್ಲಿ ಬೇಕಾದರೆ ಆ ಕುಟುಂಬಗಳು ಆ ಭೂಮಿಯಲ್ಲಿ ಮಾಡಿಕೊಂಡು ತಿನ್ನಲಿ ಎನ್ನುತ್ತಾರೆ ಕೆಲವರು.

ಇಡೀ ಪ್ರಕರಣವನ್ನು ಗಮನಿಸಿದರೆ ಬಲಾಢ್ಯ ಜಾತಿಗಳು ಕೋಡಿಕೆಂಪಮ್ಮ ದೇವಾಲಯ ಮತ್ತು ಇನಾಂತಿ ಜಮೀನಿನ ಮೇಲೆ ಕಣ್ಣಿಟ್ಟಿವೆ. ದೇವಾಲಯವನ್ನು ಅಭಿವೃದ್ಧಿಪಡಿಸಿ ರಿಯಲ್ ಎಸ್ಟೇಟ್ ದಂಧೆ ಮಾಡುವ ಹುನ್ನಾರಗಳು ನಡೆಯುತ್ತಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ನಾಯಕ ಸಮುದಾಯ ತೋಟಗಾರಿಕೆ ಬೆಳೆಯಲ್ಲಿ ಲಾಭ ಮಾಡಿಕೊಂಡು ಆರ್ಥಿಕವಾಗಿ ಸಬಲರಾದರೆ ತಮ್ಮ ಹಿಡಿತ ತಪ್ಪಿಹೋಗುತ್ತದೆ ಎಂಬ ಕಾರಣಕ್ಕೆ ಪಿತೂರಿ ನಡೆಸಲಾಗುತ್ತಿದೆ ಎಂದು ಹೆಸರು ಹೇಳಲು ಇಚ್ಚಿಸದೆ ಕೆಲವರು ತಿಳಿಸಿದ್ದಾರೆ.

ಈಗ ಸಿದ್ದಮ್ಮ ತನಗೆ ನ್ಯಾಯಬೇಕು ಎಂದು ಧರಣಿ ಕೂತಿದ್ದಾಳೆ: ಹತ್ತಾರು ಜನ ಆಕೆಯ ಬೆಂಬಲಕ್ಕೆ ನಿಂತಿದ್ದಾರೆ. ಹೋರಾಟವನ್ನು ತುಮಕೂರಿನವರೆಗೂ ಒಯ್ಯುವುದಾಗಿ ಆಕೆ ಶಪಥ ಮಾಡಿದ್ದಾಳೆ. ಇದು ಎಲ್ಲಿಗೆ ಹೋಗಿ ನಿಲ್ಲುತ್ತದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...