Homeಕರ್ನಾಟಕಮಹಿಳೆಯ ತೆಂಗು, ಅಡಿಕೆ ತೋಟ ನಾಶ : ಬಲಾಢ್ಯ ವ್ಯಕ್ತಿಗಳ ಕೈವಾಡದಿಂದ ಕಮರಿದ ಬದುಕು

ಮಹಿಳೆಯ ತೆಂಗು, ಅಡಿಕೆ ತೋಟ ನಾಶ : ಬಲಾಢ್ಯ ವ್ಯಕ್ತಿಗಳ ಕೈವಾಡದಿಂದ ಕಮರಿದ ಬದುಕು

- Advertisement -
- Advertisement -

ಗ್ರಾಮ ಲೆಕ್ಕಿಗ ಮತ್ತು ಕಂದಾಯಾಧಿಕಾರಿ ದ್ವೇಷ ಮತ್ತು ಬಲಾಢ್ಯರ ಕೈವಾಡಕ್ಕೆ ತಿಪ್ಪೂರಿನ ಸಿದ್ದಮ್ಮನ ತೆಂಗು, ಅಡಿಕೆ ಮರಗಳು ಬಲಿಯಾಗಿವೆ. ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಶಾಸಕರು ಮತ್ತು ತಹಶೀಲ್ದಾರ್ ಮೇಲೆ ಒತ್ತಡ ತಂದು ನೂರಕ್ಕೂ ಹೆಚ್ಚು ಫಲಭರಿತ ಅಡಿಕೆ ಮತ್ತು 25 ತೆಂಗಿನ ಮರಗಳನ್ನು ಕಡಿದು ಹಾಕಲಾಗಿದೆ.  ತಿಪ್ಪೂರುಪಾಳ್ಯದ ಬಲಾಢ್ಯ ವ್ಯಕ್ತಿಯೇ ಇಡೀ ಘಟನೆಗೆ ಕಾರಣ ಎಂದು ಎಲ್ಲರೂ ಬೊಟ್ಟುಮಾಡುತ್ತಿದ್ದಾರೆ. ಆ ವ್ಯಕ್ತಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದಿಲ್ಲ. ಆದರೆ ಆ ವ್ಯಕ್ತಿಯ ಕೈವಾಡವಿಲ್ಲದೆ ಯಾವುದೂ ನಡೆಯುವುದಿಲ್ಲ. ಹೀಗಾಗಿ ಆ ವ್ಯಕ್ತಿಯ ಹೆಸರನ್ನು ಹೇಳಲು ಎಲ್ಲರಿಂದಲೂ ಹಿಂಜರಿಕೆ ವ್ಯಕ್ತವಾಗಿದೆ.

ಘಟನೆಯ ಹಿನ್ನೆಲೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು ತಿಪ್ಪೂರು ಗ್ರಾಮದ ಸರ್ವೇ ನಂಬರ್ 113ರಲ್ಲಿ 5 ಎಕರೆ 11 ಗುಂಟೆ ಜಮೀನು ಇದೆ. ಈ ಕೋಡಿಕೆಂಪಮ್ಮ ದೇವಿಗೆ ನಾಯಕ ಸಮುದಾಯದವರು ಪೂಜಾರರು. ಹಾಗಾಗಿ ಈ ಇನಾಂತಿ ಭೂಮಿಯನ್ನು ಪೂಜಾರಿ ಕುಟುಂಬಗಳೇ ಉಳುಮೆ ಮಾಡಿಕೊಂಡು ಬರುತ್ತಿದ್ದರು. ಹೀಗಿರುವಾಗ ಪೂಜಾರಿ ಕುಟುಂಬದ ಅಣ್ಣತಮ್ಮಂದಿರ ನಡುವೆ ದಾಯಾದಿ ಕಲಹ ನಡೆಯುತ್ತದೆ. ಈ ಪ್ರಕರಣ ಪೊಲೀಸ್ ಮತ್ತು ಕೋರ್ಟ್ ಮೆಟ್ಟಿಲೇರುತ್ತದೆ. ಇದೇ ಕಾರಣಕ್ಕೆ ಕಳೆದ ಮೂರು ದಶಕಗಳಿಂದಲೂ ಕೋಡಿಕೆಂಪಮ್ಮ ದೇವಿಯ ಜಾತ್ರೆಯ ನಡೆದಿರಲಿಲ್ಲ.

ಆ ನಂತರ 2005ರ ಸುಮಾರಿನಲ್ಲಿ ಗ್ರಾಮಸ್ಥರು ಮಧ್ಯಸ್ಥಿಕೆ ವಹಿಸಿ ಕೋಡಿಕೆಂಪಮ್ಮ ದೇವಿ ಜಾತ್ರೆ ನಡೆಸಲು ಪೂಜಾರಿ ಕುಟುಂಬಗಳ ನಡುವೆ ಸಂಧಾನ ಮಾಡಿದರು. ಸಂಧಾನ ಯಶಸ್ವಿಯಾಗಿ ಆಗಿನಿಂದ ವರ್ಷವರ್ಷ ಜಾತ್ರೆ ನಡೆಸಿಕೊಂಡು ಬರಲಾಗುತ್ತಿದೆ. ಕೆಂಪಮ್ಮದೇವಿಗೆ ಸೇರಿದ ಭೂಮಿಯನ್ನು ಸಾಗುವಳಿ ಮಾಡುತ್ತ ಬರುತ್ತಿದ್ದು ಕಾಲ ಕಳೆದಂತೆ 5 ಎಕರೆ 11 ಗುಂಟೆಯಲ್ಲೂ 16 ಕುಟುಂಬಗಳು ಅಡಿಕೆ ಮತ್ತು ತೆಂಗಿನ ತೋಟ ಬೆಳೆಸಿದರು. ಫಲವತ್ತಾದ ಭೂಮಿಯಾದ್ದರಿಂದ ತೆಂಗು ಮತ್ತು ಅಡಿಕೆ ಫಸಲು ಹುಲುಸಾಗಿ ಬೆಳೆಯಿತು.

ಈ ಮಧ್ಯೆ ಜಮೀನು ಯಾರಿಗೆ ಸೇರಬೇಕು ಎನ್ನುವ ವಿವಾದದ ಕುರಿತು ಗುಬ್ಬಿಯ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಯಿತು. ಪ್ರಕರಣದ ವಿಚಾರಣೆ ನಡೆಯುತ್ತಿದ್ದು ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ತಾಲೂಕು ಆಡಳಿತಕ್ಕೆ ಸೂಚಿಸಿತು. ತಹಶೀಲ್ದಾರ್ ಕೋರ್ಟ್ ಆದೇಶವನ್ನು ಉಲ್ಲಂಘಿಸಿ ಗ್ರಾಮ ಲೆಕ್ಕಿಗ ಮತ್ತು ಕಂದಾಯ ಅಧಿಕಾರಿಗಳಿಗೆ ಕೋಡಿಕೆಂಪಮ್ಮ ದೇವಾಲಯದ ಬಳಿ ಇರುವ ತೆಂಗು ಮತ್ತು ಅಡಿಕೆ ಗಿಡಗಳನ್ನು ಕಡಿಸುವಂತೆ ಸೂಚನೆ ನೀಡಿರುವುದು ಈ ಎಲ್ಲಾ ಅವಾಂತರಗಳಿಗೆ ಕಾರಣ ಎಂದು ತಿಳಿದುಬಂದಿದೆ.

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ

ಗ್ರಾಮ ಲೆಕ್ಕಿಗ, ಕಂದಾಯಾಧಿಕಾರಿ ಮಾಡಿದ ತಪ್ಪಿಗೆ ಅಮಾಯಕ ಮಹಿಳೆಯ ತೋಟ ನಾಶ ಮಾಡಿದ ತಹಶಿಲ್ದಾರ್‌: ಗುಬ್ಬಿಯಲ್ಲೊಂದು ಮನಕಲಕುವ ಕರಾಳ ಘಟನೆ.. ವಿಡಿಯೋ ನೋಡಿ.

Posted by Naanu Gauri on Sunday, March 8, 2020

ತಿಪ್ಪೂರುಪಾಳ್ಯದ  ಆ ಬಲಾಢ್ಯ ವ್ಯಕ್ತಿ ತೆರೆಮರೆಯಲ್ಲಿ ಇದೆಲ್ಲವನ್ನೂ ನಿಯಂತ್ರಿಸುತ್ತಿದ್ದು ಜೆಡಿಎಸ್ ಮತ್ತು ಬಿಜೆಪಿಯ ಸಹಾಯದಿಂದ ತಹಶೀಲ್ದಾರ್ ಮೇಲೆ ಒತ್ತಡ ಹಾಕಿಸಿದ್ದಾರೆ. ಶಾಸಕ ಎಸ್.ಆರ್.ಶ್ರೀನಿವಾಸ್ ಮತ್ತು ಬಿಜೆಪಿ ಮುಖಂಡರು ಈ ಪ್ರಕರಣದ ಹಿಂದೆ ಬಲವಾಗಿ ನಿಂತುಕೊಂಡಿದ್ದಾರೆ ಎಂಬ ಆರೋಪವಿದೆ. ಬಲಾಢ್ಯ ಜಾತಿಗಳು ನಡೆಸಿರುವ ಕೂಟಕ್ಕೆ ಸಿದ್ದಮ್ಮ ಅವರ ಬದುಕು ಕಳಾಹೀನವಾಗಿದೆ. ಹೋದ ಮರಗಳನ್ನು ತಂದು ಕೊಡಲು ಯಾರಿಂದಲೂ ಸಾಧ್ಯವಿಲ್ಲ. ನಾಯಕ ಸಮುದಾಯಕ್ಕೆ ಸೇರಿರುವ ಸಿದ್ದಮ್ಮ ಬಲಾಢ್ಯರು ಹೆಣೆದ ಜಾಲಕ್ಕೆ ಬಿದ್ದಿದ್ಧಾರೆ.

ಕೋಡಿ ಕೆಂಪಮ್ಮ ದೇವಿಗೆ ಬಹುತೇಕ ಲಿಂಗಾಯತರು ನಡೆದುಕೊಳ್ಳುತ್ತಾರೆ. ಒಕ್ಕಲಿಗರು, ತಿಗಳರು ಮತ್ತು ದಲಿತ ಸಮುದಾಯವೂ ನಡೆದುಕೊಳ್ಳುತ್ತದೆ. ಈ ಚಿತಾವಣೆಯನ್ನು ನೋಡಿದರೆ ಬಲಾಢ್ಯ ಜಾತಿಗಳು ಇಡೀ ದೇವಾಲಯದ ಉಸ್ತುವಾರಿಯನ್ನು ತಮ್ಮ ತೆಕ್ಕೆಗೆ ತೆದುಕೊಂಡು ಫಲವತ್ತಾದ ಭೂಮಿಯನ್ನು ತಮ್ಮ ವಶಕ್ಕೆ ಪಡೆಯುವ ಹುನ್ನಾರ ನಡೆಸಿವೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಿಪ್ಪೂರುಪಾಳ್ಯದ ಆ ಬಲಾಢ್ಯ ವ್ಯಕ್ತಿ ದೇವಾಲಯದ ಆಡಳಿತವನ್ನು ಹಿಡಿಯವ ಭಾಗದ ಸಂಚು ಇದಾಗಿದೆ.

ನಾಯಕ ಸಮುದಾಯಕ್ಕ ಸೇರಿದ 16 ಕುಟುಂಬಗಳು ಈ 5 ಎಕರೆ 11 ಗುಂಟೆ ಜಮೀನನ್ನು ಮೊದಲಿಂದಲೂ ಮಾಡಿಕೊಂಡು ಬರುತ್ತಿವೆ. ಆರಂಭದಲ್ಲಿ ಸದರಿ ಭೂಮಿಯಲ್ಲಿ ಮರಾವಳಿ ಬೆಳೆಸಬಾರದು ಎಂದು ನಿರ್ಧಾರ ಆಗಿದ್ದರೂ, ಕಾಲಕಳೆದಂತೆ ತೆಂಗು ಮತ್ತು ಅಡಿಕೆ ಸಸಿಗಳನ್ನು ಇಟ್ಟು ಬೆಳೆಸಿದರು. ಹಲವು ಬಾರಿ ಫಸಲನ್ನು ಕೊಯ್ದುಕೊಂಡರು. ದೇವಾಲಯದ  ಸಮೀಪವೇ ಇರುವ ಜಮೀನಿನಲ್ಲಿ ತೋಟವಿದ್ದರೂ ಜನರೂ ಕೂಡ ಕಳೆದ 15 ವರ್ಷಗಳಿಂದ ಜಾತ್ರೆಯನ್ನು ಮಾಡಿಕೊಂಡು ಬಂದಿದ್ದಾರೆ.

ಆದರೆ ಈಗ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಮತ್ತು ಬಿಜೆಪಿ ಮುಖಂಡರ ಒತ್ತಡಕ್ಕೆ ಒಳಗಾಗಿರುವ ತಹಶೀಲ್ದಾರ್ ಮಮತ ಏಕಾಏಕಿ ಆದೇಶ ಹೊರಡಿಸಿ ತೆಂಗು, ಅಡಿಕೆ ಮರಗಳಿಗೆ ಕೊಡಲಿಪಟ್ಟು ಬಿದ್ದಿದೆ. ಹೆಚ್ಚು ಜನರು ಜಾತ್ರೆಗೆ ಸೇರುವ (ಲಿಂಗಾಯತ, ಒಕ್ಕಲಿಗರು) ಹಿನ್ನೆಲೆಯಲ್ಲಿ ಅಲ್ಲಿಗೆ ಹೆಚ್ಚು ವಾಹನಗಳು ಬರುತ್ತವೆ. ಹಾಗಾಗಿ ವಿಶಾಲ ಜಾಗ ಬೇಕು ಎಂಬ ನೆಪ ಒಡ್ಡಿ ತೋಟ ಕಡಿದಿದ್ದಾರೆ. ತೋಟವನ್ನು ಕಡಿಯುವುದಾದರೆ 5 ಎಕರೆ 11 ಗುಂಟೆಯಲ್ಲಿರುವ ಎಲ್ಲವನ್ನೂ ಕತ್ತರಿಸಿ ಹಾಕಲಿ. ಮಳೆಗಾಲದಲ್ಲಿ ಬೇಕಾದರೆ ಆ ಕುಟುಂಬಗಳು ಆ ಭೂಮಿಯಲ್ಲಿ ಮಾಡಿಕೊಂಡು ತಿನ್ನಲಿ ಎನ್ನುತ್ತಾರೆ ಕೆಲವರು.

ಇಡೀ ಪ್ರಕರಣವನ್ನು ಗಮನಿಸಿದರೆ ಬಲಾಢ್ಯ ಜಾತಿಗಳು ಕೋಡಿಕೆಂಪಮ್ಮ ದೇವಾಲಯ ಮತ್ತು ಇನಾಂತಿ ಜಮೀನಿನ ಮೇಲೆ ಕಣ್ಣಿಟ್ಟಿವೆ. ದೇವಾಲಯವನ್ನು ಅಭಿವೃದ್ಧಿಪಡಿಸಿ ರಿಯಲ್ ಎಸ್ಟೇಟ್ ದಂಧೆ ಮಾಡುವ ಹುನ್ನಾರಗಳು ನಡೆಯುತ್ತಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ನಾಯಕ ಸಮುದಾಯ ತೋಟಗಾರಿಕೆ ಬೆಳೆಯಲ್ಲಿ ಲಾಭ ಮಾಡಿಕೊಂಡು ಆರ್ಥಿಕವಾಗಿ ಸಬಲರಾದರೆ ತಮ್ಮ ಹಿಡಿತ ತಪ್ಪಿಹೋಗುತ್ತದೆ ಎಂಬ ಕಾರಣಕ್ಕೆ ಪಿತೂರಿ ನಡೆಸಲಾಗುತ್ತಿದೆ ಎಂದು ಹೆಸರು ಹೇಳಲು ಇಚ್ಚಿಸದೆ ಕೆಲವರು ತಿಳಿಸಿದ್ದಾರೆ.

ಈಗ ಸಿದ್ದಮ್ಮ ತನಗೆ ನ್ಯಾಯಬೇಕು ಎಂದು ಧರಣಿ ಕೂತಿದ್ದಾಳೆ: ಹತ್ತಾರು ಜನ ಆಕೆಯ ಬೆಂಬಲಕ್ಕೆ ನಿಂತಿದ್ದಾರೆ. ಹೋರಾಟವನ್ನು ತುಮಕೂರಿನವರೆಗೂ ಒಯ್ಯುವುದಾಗಿ ಆಕೆ ಶಪಥ ಮಾಡಿದ್ದಾಳೆ. ಇದು ಎಲ್ಲಿಗೆ ಹೋಗಿ ನಿಲ್ಲುತ್ತದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...