Homeಎಕಾನಮಿಅಸಂಘಟಿತ ವಲಯದ ಆರ್ಥಿಕತೆ ನಾಶ; ಜಿಡಿಪಿ ಶೇ.-23.9ಕ್ಕೆ ಕುಸಿತ: ಕೇಂದ್ರ ಸರ್ಕಾರದ ಮೇಲೆ ರಾಹುಲ್ ವಾಗ್ದಾಳಿ

ಅಸಂಘಟಿತ ವಲಯದ ಆರ್ಥಿಕತೆ ನಾಶ; ಜಿಡಿಪಿ ಶೇ.-23.9ಕ್ಕೆ ಕುಸಿತ: ಕೇಂದ್ರ ಸರ್ಕಾರದ ಮೇಲೆ ರಾಹುಲ್ ವಾಗ್ದಾಳಿ

'-23.9%'- ರಿಯಾ ಚಕ್ರವರ್ತಿಯವರ ವಾಟ್ಸಾಪ್ ಚಾಟ್‌ಗಳಲ್ಲಿಲ್ಲ.  '-23.9%'- ಮೋದಿಯ ನವಿಲು-ಭಂಗಿಗಳಲ್ಲಿಲ್ಲ '-23.9%'- ರಾಮ್ ಮಂದಿರಗಳಿಗೆ ಸಂಬಂಧಿಸಿಲ್ಲ. ಆದರೆ, '-23.9' = ಭಾರತೀಯ ಜಿಡಿಪಿಗೆ ಬಿಜೆಪಿಯ 'ವಿಕಾಸ್ ಮಾದರಿ'" ಎಂದು ಜಿಗ್ನೇಶ್ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಭಾರತದ ಜಿಡಿಪಿಯು ಏಪ್ರಿಲ್-ಜೂನ್ ಅವಧಿಯಲ್ಲಿ ಶೇ. -23.9 ರಷ್ಟು ಗಣನೀಯ ಇಳಿಕೆಯಾಗಿರುವುದನ್ನು ಉಲ್ಲೇಖಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪಿ ಚಿದಂಬರಂ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ಕೊರೊನಾ ವೈರಸ್ ಆರ್ಥಿಕತೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂಬ ತಜ್ಞರ ಎಚ್ಚರಿಕೆಯನ್ನು ಪದೇಪದೇ ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿದರು.

ಅಸಂಘಟಿತ ವಲಯದ ಮೇಲೆ ಆಕ್ರಮಣ ಮಾಡುವ ಮೂಲಕ ಸರ್ಕಾರವು ಆರ್ಥಿಕತೆಯನ್ನು ನಾಶಪಡಿಸಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿರುವ ವೀಡಿಯೋವೊಂದರಲ್ಲಿ ಹೇಳಿದ್ದಾರೆ. ತಜ್ಞರು ಮತ್ತು ಇತರರ ಸೂಚನೆಗಳನ್ನು ನಿರ್ಲಕ್ಷಿಸಿರುವುದು ದುರದೃಷ್ಟಕರ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಮುಖಂಡರಾದ ಪಿ.ಚಿದಂಬರಂ ವರ್ಚುವಲ್ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿ, “ತಜ್ಞರು ಇಂತಹ ಸನ್ನಿವೇಶಗಳ ಬಗ್ಗೆ ಎಚ್ಚರಿಸಿದ್ದರು. ಆದರೆ ಈಗ ಪರಿಸ್ಥಿತಿ ಕೈಮೀರಿದೆ. ಇದನ್ನು ಸರಿಪಡಿಸಲು ಹಲವು ತಿಂಗಳುಗಳೇ ಬೇಕಾಗಬಹುದು” ಎಂದು ಹೇಳುತ್ತಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ‘ಆರ್ಥಿಕ ಕುಸಿತಕ್ಕೆ ದೇವರ ಕಾರ್ಯವೇ ಕಾರಣ’ ಎಂಬ ಹೇಳಿಕೆಯನ್ನು ಟೀಕಿಸಿದರು.

“2019-20ರ ಅಂತ್ಯದ ವೇಳೆಗೆ ಒಟ್ಟು ದೇಶೀಯ ಉತ್ಪಾದನೆಯು ಶೇ.20 ರಷ್ಟು ಕುಸಿದಿತ್ತು. ಆದರೆ ಕೃಷಿ, ಅರಣ್ಯ ಮತ್ತು ಮೀನುಗಾರಿಕೆು ಕ್ಷೇತ್ರ ಮಾತ್ರ ಶೇ.3.4 ರಷ್ಟು ಏರಿಕೆ ಕಂಡಿತ್ತು. ಆರ್ಥಿಕ ಕುಸಿತಕ್ಕೆ ದೇವರನ್ನು ದೂಷಿಸುವ ನಿರ್ಮಲಾ ಸೀತಾರಾಮನ್, ಕೃಷಿಕರು ಮತ್ತು ಅವರಿಗೆ ಕೃಪೆ ತೋರಿದ ದೇವರನ್ನು ಶ್ಲಾಘಿಸಬೇಕು” ಎಂದು ಚಿದಂಬರಂ ಹೇಳಿದರು.

“ಆರ್ಥಿಕತೆಯ ಇತರೆ ಎಲ್ಲಾ ಕ್ಷೇತ್ರಗಳೂ ಕುಸಿತವಾಗಿವೆ. ಇದು ಅವರಿಗೆ ಆಶ್ಚರ್ಯವಾಗದಿರಬಹುದು. ಆದರೆ ಈ ಕುಸಿತವನ್ನು ತಗ್ಗಿಸಲು ಪರಿಣಾಮಕಾರಿ ಮತ್ತು ಸೂಕ್ತವಾದ ಕಲ್ಯಾಣಕ್ರಮಗಳನ್ನು ತೆಗೆದುಕೊಳ್ಳದ, ಅಕ್ಷರಶಃ ಏನೂ ಮಾಡಲಾಗದ ಸರ್ಕಾರಕ್ಕೆ ನಿಜಕ್ಕೂ ಇದು ಅವಮಾನಕರವಾಗಿದೆ” ಎಂದು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಹೇಳಿದರು.

ಇದನ್ನೂ ಓದಿ: ನಿಜವಾದ ಜಿಡಿಪಿ 1.5% ಮಾತ್ರವೇ ಇದೆ: ಪಿ ಚಿದಂಬರಂ

ಆರ್‌ಬಿಐ ಸೇರಿದಂತೆ ಇತರೆ ತಜ್ಞರು ಈ ಕುಸಿತವನ್ನು ಊಹಿಸಿ, ಎಚ್ಚರಿಸಿದ್ದರು. ಈ ಸರ್ಕಾರವು ತನ್ನ ತಪ್ಪುಗಳನ್ನು ಒಪ್ಪಿಕೊಳ್ಳುವುದಿಲ್ಲ. ಜೊತೆಗೆ ಆಶಾಾಭವನೆಯ ಭರವಸೆಯನ್ನೂ ಸಹ ಮೂಡಿಸುವುದಿಲ್ಲ ಎಂದು ಚಿದಂಬರಂ ಹೇಳಿದರು.

ಗುಜರಾತ್ ನ ಸ್ವತಂತ್ರ ಶಾಸಕ ಜಿಗ್ನೇಶ್ ಮೇವಾನಿ ಕೂಡ ಟ್ವೀಟ್ ಮಾಡಿದ್ದು, “-23.9%: ಈ ಸಂಖ್ಯೆಯನ್ನು ಕಂಡುಹಿಡಿಯಲು ಮತ್ತು ನೆನಪಿಟ್ಟುಕೊಳ್ಳಲು ಪ್ರಯತ್ನಿಸಿ. ಏಕೆಂದರೆ ನಿಮ್ಮ ಮಾಧ್ಯಮ ಮತ್ತು ವಾಟ್ಸಾಪ್ ವಿಶ್ವವಿದ್ಯಾಲಯದ ಪಿಎಚ್‌ಡಿ ಇದನ್ನು ನಿಮಗೆ ಹೇಳುವುದಿಲ್ಲ! ‘-23.9%’- ರಿಯಾ ಚಕ್ರವರ್ತಿಯವರ ವಾಟ್ಸಾಪ್ ಚಾಟ್‌ಗಳಲ್ಲಿಲ್ಲ.  ‘-23.9%’- ಮೋದಿಯ ನವಿಲು-ಭಂಗಿಗಳಲ್ಲಿಲ್ಲ ‘-23.9%’- ರಾಮ್ ಮಂದಿರಗಳಿಗೆ ಸಂಬಂಧಿಸಿಲ್ಲ. ಆದರೆ, ‘-23.9’ = ಭಾರತೀಯ ಜಿಡಿಪಿಗೆ ಬಿಜೆಪಿಯ ‘ವಿಕಾಸ್ ಮಾದರಿ'” ಎಂದು ಅವರು ಹೇಳಿದ್ದಾರೆ.

ಭಾರತವು ತ್ರೈಮಾಸಿಕ ಅಂಕಿ ಅಂಶಗಳನ್ನು ಪ್ರಕಟಿಸಲು ಪ್ರಾರಂಭಿಸಿದ 1996 ರಿಂದೀಚೆಗೆ ಇದೇ ಮೊದಲ ಭಾರಿಗೆ ಆರ್ಥಿಕತೆ ಈ ಪ್ರಮಾಣದ ಇಳಿಕೆ ದಾಖಲಾಗಿದೆ. ಅಷ್ಟೇ ಅಲ್ಲದೆ ಏಷ್ಯಾದ ಪ್ರಮುಖ ಆರ್ಥಿಕತೆಯಲ್ಲಿ ಇದು ಅತ್ಯಂತ ಕೆಟ್ಟದಾದ ಆರ್ಥಿಕ ಕುಸಿತವಾಗಿದೆ.

2019–20 ರ ಇದೇ ಅವಧಿಯಲ್ಲಿ ದೇಶದ ಜಿಡಿಪಿ ಶೇ 5.2 ರಷ್ಟು ಬೆಳವಣಿಗೆ ಕಂಡಿತ್ತು ಎಂದು ಎನ್‌ಎಸ್‌ಒ ಅಂಕಿ ಅಂಶ ಹೇಳಿದೆ.

2019–2020 ನೇ ಆರ್ಥಿಕ ವರ್ಷದ 1 ನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಬೆಳವಣಿಗೆ 5.2% ದಾಖಲಾಗಿತ್ತು. 2ನೇ ತ್ರೈಮಾಸಿಕದಲ್ಲಿ 4.4 % ದಾಖಲಾದರೆ, 3ನೇ ತ್ರೈಮಾಸಿಕದಲ್ಲಿ 4.1% ದಾಖಲಾಗಿ, 4ನೇ ತ್ರೈಮಾಸಿಕದ ಹೊತ್ತಿಗೆ 3.1% ಬೆಳವಣಿಗೆ ದಾಖಲಾಗಿತ್ತು.

ಆದರೆ 2020–21 ನೇ ಆರ್ಥಿಕ ವರ್ಷದ 1 ನೇ ತ್ರೈಮಾಸಿಕದಲ್ಲೇ -23.9% ದಷ್ಟು ಇಳಿಯಾಗಿದೆ. ಈ ಇಳಿಕೆ ಎರಡನೆ ತ್ರೈಮಾಸಿಕದಲ್ಲೂ ಮುಂದುವೆರೆಯಲಿದೆ ಎನ್ನಲಾಗಿದೆ.

ಮೇ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜಿಡಿಪಿಯ ಶೇಕಡಾ 10 ಕ್ಕೆ ಸಮನಾದ ಪ್ರಚೋದಕ ಪ್ಯಾಕೇಜ್ ಅನ್ನು ಘೋಷಿಸಿದ ಹೊರತಾಗಿಯು ಬೇಡಿಕೆ ಮತ್ತು ಉತ್ಪಾದನೆ ಇನ್ನೂ ಚೇತರಿಸಿಕೊಂಡಿಲ್ಲ.

ದೇಶದಲ್ಲಿ ಕೊರೊನಾ ಪ್ರಾರಂಭವಾಗುವುದಕ್ಕೆ ಮುಂಚೆ, ಆರ್ಥಿಕತೆಯು ನಿಧಾನಗತಿಯ ಬೆಳವಣಿಗೆ ಮತ್ತು ಕಡಿಮೆ ಬೇಡಿಕೆಯ ಹೊರತಾಗಿಯೂ, ಆರ್ಥಿಕತೆಯನ್ನು ಅಂದಾಜು 2.8 ಟ್ರಿಲಿಯನ್ ಡಾಲರ್‌‌ನಿಂದ, 2024 ರವೇಳೆಗೆ 5 ಟ್ರಿಲಿಯನ್‌ ಡಾಲರ್‌ ಪರಿವರ್ತಿಸುವ ಗುರಿಯನ್ನು ಹೊಂದಿದೆ ಎಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹೇಳಿತ್ತು.


ಇದನ್ನೂ ಓದಿ: ಮೋದಿ ಬಂದಮೇಲೆ ಭಾರತದ ಸಾಲದ ಪ್ರಮಾಣ ಇಳಿಕೆಯಾಗಿದೆಯೇ? ಈ ವರ್ಷ ಜಿಡಿಪಿ 10% ಗೆ ಏರಲಿದೆಯೇ? ಸುಳ್ಳು ಹೇಳಿದ ಪೋಸ್ಟ್‌ ಕಾರ್ಡ್‌..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...