Homeಎಕಾನಮಿಅಸಂಘಟಿತ ವಲಯದ ಆರ್ಥಿಕತೆ ನಾಶ; ಜಿಡಿಪಿ ಶೇ.-23.9ಕ್ಕೆ ಕುಸಿತ: ಕೇಂದ್ರ ಸರ್ಕಾರದ ಮೇಲೆ ರಾಹುಲ್ ವಾಗ್ದಾಳಿ

ಅಸಂಘಟಿತ ವಲಯದ ಆರ್ಥಿಕತೆ ನಾಶ; ಜಿಡಿಪಿ ಶೇ.-23.9ಕ್ಕೆ ಕುಸಿತ: ಕೇಂದ್ರ ಸರ್ಕಾರದ ಮೇಲೆ ರಾಹುಲ್ ವಾಗ್ದಾಳಿ

'-23.9%'- ರಿಯಾ ಚಕ್ರವರ್ತಿಯವರ ವಾಟ್ಸಾಪ್ ಚಾಟ್‌ಗಳಲ್ಲಿಲ್ಲ.  '-23.9%'- ಮೋದಿಯ ನವಿಲು-ಭಂಗಿಗಳಲ್ಲಿಲ್ಲ '-23.9%'- ರಾಮ್ ಮಂದಿರಗಳಿಗೆ ಸಂಬಂಧಿಸಿಲ್ಲ. ಆದರೆ, '-23.9' = ಭಾರತೀಯ ಜಿಡಿಪಿಗೆ ಬಿಜೆಪಿಯ 'ವಿಕಾಸ್ ಮಾದರಿ'" ಎಂದು ಜಿಗ್ನೇಶ್ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಭಾರತದ ಜಿಡಿಪಿಯು ಏಪ್ರಿಲ್-ಜೂನ್ ಅವಧಿಯಲ್ಲಿ ಶೇ. -23.9 ರಷ್ಟು ಗಣನೀಯ ಇಳಿಕೆಯಾಗಿರುವುದನ್ನು ಉಲ್ಲೇಖಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪಿ ಚಿದಂಬರಂ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ಕೊರೊನಾ ವೈರಸ್ ಆರ್ಥಿಕತೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂಬ ತಜ್ಞರ ಎಚ್ಚರಿಕೆಯನ್ನು ಪದೇಪದೇ ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿದರು.

ಅಸಂಘಟಿತ ವಲಯದ ಮೇಲೆ ಆಕ್ರಮಣ ಮಾಡುವ ಮೂಲಕ ಸರ್ಕಾರವು ಆರ್ಥಿಕತೆಯನ್ನು ನಾಶಪಡಿಸಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿರುವ ವೀಡಿಯೋವೊಂದರಲ್ಲಿ ಹೇಳಿದ್ದಾರೆ. ತಜ್ಞರು ಮತ್ತು ಇತರರ ಸೂಚನೆಗಳನ್ನು ನಿರ್ಲಕ್ಷಿಸಿರುವುದು ದುರದೃಷ್ಟಕರ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಮುಖಂಡರಾದ ಪಿ.ಚಿದಂಬರಂ ವರ್ಚುವಲ್ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿ, “ತಜ್ಞರು ಇಂತಹ ಸನ್ನಿವೇಶಗಳ ಬಗ್ಗೆ ಎಚ್ಚರಿಸಿದ್ದರು. ಆದರೆ ಈಗ ಪರಿಸ್ಥಿತಿ ಕೈಮೀರಿದೆ. ಇದನ್ನು ಸರಿಪಡಿಸಲು ಹಲವು ತಿಂಗಳುಗಳೇ ಬೇಕಾಗಬಹುದು” ಎಂದು ಹೇಳುತ್ತಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ‘ಆರ್ಥಿಕ ಕುಸಿತಕ್ಕೆ ದೇವರ ಕಾರ್ಯವೇ ಕಾರಣ’ ಎಂಬ ಹೇಳಿಕೆಯನ್ನು ಟೀಕಿಸಿದರು.

“2019-20ರ ಅಂತ್ಯದ ವೇಳೆಗೆ ಒಟ್ಟು ದೇಶೀಯ ಉತ್ಪಾದನೆಯು ಶೇ.20 ರಷ್ಟು ಕುಸಿದಿತ್ತು. ಆದರೆ ಕೃಷಿ, ಅರಣ್ಯ ಮತ್ತು ಮೀನುಗಾರಿಕೆು ಕ್ಷೇತ್ರ ಮಾತ್ರ ಶೇ.3.4 ರಷ್ಟು ಏರಿಕೆ ಕಂಡಿತ್ತು. ಆರ್ಥಿಕ ಕುಸಿತಕ್ಕೆ ದೇವರನ್ನು ದೂಷಿಸುವ ನಿರ್ಮಲಾ ಸೀತಾರಾಮನ್, ಕೃಷಿಕರು ಮತ್ತು ಅವರಿಗೆ ಕೃಪೆ ತೋರಿದ ದೇವರನ್ನು ಶ್ಲಾಘಿಸಬೇಕು” ಎಂದು ಚಿದಂಬರಂ ಹೇಳಿದರು.

“ಆರ್ಥಿಕತೆಯ ಇತರೆ ಎಲ್ಲಾ ಕ್ಷೇತ್ರಗಳೂ ಕುಸಿತವಾಗಿವೆ. ಇದು ಅವರಿಗೆ ಆಶ್ಚರ್ಯವಾಗದಿರಬಹುದು. ಆದರೆ ಈ ಕುಸಿತವನ್ನು ತಗ್ಗಿಸಲು ಪರಿಣಾಮಕಾರಿ ಮತ್ತು ಸೂಕ್ತವಾದ ಕಲ್ಯಾಣಕ್ರಮಗಳನ್ನು ತೆಗೆದುಕೊಳ್ಳದ, ಅಕ್ಷರಶಃ ಏನೂ ಮಾಡಲಾಗದ ಸರ್ಕಾರಕ್ಕೆ ನಿಜಕ್ಕೂ ಇದು ಅವಮಾನಕರವಾಗಿದೆ” ಎಂದು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಹೇಳಿದರು.

ಇದನ್ನೂ ಓದಿ: ನಿಜವಾದ ಜಿಡಿಪಿ 1.5% ಮಾತ್ರವೇ ಇದೆ: ಪಿ ಚಿದಂಬರಂ

ಆರ್‌ಬಿಐ ಸೇರಿದಂತೆ ಇತರೆ ತಜ್ಞರು ಈ ಕುಸಿತವನ್ನು ಊಹಿಸಿ, ಎಚ್ಚರಿಸಿದ್ದರು. ಈ ಸರ್ಕಾರವು ತನ್ನ ತಪ್ಪುಗಳನ್ನು ಒಪ್ಪಿಕೊಳ್ಳುವುದಿಲ್ಲ. ಜೊತೆಗೆ ಆಶಾಾಭವನೆಯ ಭರವಸೆಯನ್ನೂ ಸಹ ಮೂಡಿಸುವುದಿಲ್ಲ ಎಂದು ಚಿದಂಬರಂ ಹೇಳಿದರು.

ಗುಜರಾತ್ ನ ಸ್ವತಂತ್ರ ಶಾಸಕ ಜಿಗ್ನೇಶ್ ಮೇವಾನಿ ಕೂಡ ಟ್ವೀಟ್ ಮಾಡಿದ್ದು, “-23.9%: ಈ ಸಂಖ್ಯೆಯನ್ನು ಕಂಡುಹಿಡಿಯಲು ಮತ್ತು ನೆನಪಿಟ್ಟುಕೊಳ್ಳಲು ಪ್ರಯತ್ನಿಸಿ. ಏಕೆಂದರೆ ನಿಮ್ಮ ಮಾಧ್ಯಮ ಮತ್ತು ವಾಟ್ಸಾಪ್ ವಿಶ್ವವಿದ್ಯಾಲಯದ ಪಿಎಚ್‌ಡಿ ಇದನ್ನು ನಿಮಗೆ ಹೇಳುವುದಿಲ್ಲ! ‘-23.9%’- ರಿಯಾ ಚಕ್ರವರ್ತಿಯವರ ವಾಟ್ಸಾಪ್ ಚಾಟ್‌ಗಳಲ್ಲಿಲ್ಲ.  ‘-23.9%’- ಮೋದಿಯ ನವಿಲು-ಭಂಗಿಗಳಲ್ಲಿಲ್ಲ ‘-23.9%’- ರಾಮ್ ಮಂದಿರಗಳಿಗೆ ಸಂಬಂಧಿಸಿಲ್ಲ. ಆದರೆ, ‘-23.9’ = ಭಾರತೀಯ ಜಿಡಿಪಿಗೆ ಬಿಜೆಪಿಯ ‘ವಿಕಾಸ್ ಮಾದರಿ'” ಎಂದು ಅವರು ಹೇಳಿದ್ದಾರೆ.

ಭಾರತವು ತ್ರೈಮಾಸಿಕ ಅಂಕಿ ಅಂಶಗಳನ್ನು ಪ್ರಕಟಿಸಲು ಪ್ರಾರಂಭಿಸಿದ 1996 ರಿಂದೀಚೆಗೆ ಇದೇ ಮೊದಲ ಭಾರಿಗೆ ಆರ್ಥಿಕತೆ ಈ ಪ್ರಮಾಣದ ಇಳಿಕೆ ದಾಖಲಾಗಿದೆ. ಅಷ್ಟೇ ಅಲ್ಲದೆ ಏಷ್ಯಾದ ಪ್ರಮುಖ ಆರ್ಥಿಕತೆಯಲ್ಲಿ ಇದು ಅತ್ಯಂತ ಕೆಟ್ಟದಾದ ಆರ್ಥಿಕ ಕುಸಿತವಾಗಿದೆ.

2019–20 ರ ಇದೇ ಅವಧಿಯಲ್ಲಿ ದೇಶದ ಜಿಡಿಪಿ ಶೇ 5.2 ರಷ್ಟು ಬೆಳವಣಿಗೆ ಕಂಡಿತ್ತು ಎಂದು ಎನ್‌ಎಸ್‌ಒ ಅಂಕಿ ಅಂಶ ಹೇಳಿದೆ.

2019–2020 ನೇ ಆರ್ಥಿಕ ವರ್ಷದ 1 ನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಬೆಳವಣಿಗೆ 5.2% ದಾಖಲಾಗಿತ್ತು. 2ನೇ ತ್ರೈಮಾಸಿಕದಲ್ಲಿ 4.4 % ದಾಖಲಾದರೆ, 3ನೇ ತ್ರೈಮಾಸಿಕದಲ್ಲಿ 4.1% ದಾಖಲಾಗಿ, 4ನೇ ತ್ರೈಮಾಸಿಕದ ಹೊತ್ತಿಗೆ 3.1% ಬೆಳವಣಿಗೆ ದಾಖಲಾಗಿತ್ತು.

ಆದರೆ 2020–21 ನೇ ಆರ್ಥಿಕ ವರ್ಷದ 1 ನೇ ತ್ರೈಮಾಸಿಕದಲ್ಲೇ -23.9% ದಷ್ಟು ಇಳಿಯಾಗಿದೆ. ಈ ಇಳಿಕೆ ಎರಡನೆ ತ್ರೈಮಾಸಿಕದಲ್ಲೂ ಮುಂದುವೆರೆಯಲಿದೆ ಎನ್ನಲಾಗಿದೆ.

ಮೇ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜಿಡಿಪಿಯ ಶೇಕಡಾ 10 ಕ್ಕೆ ಸಮನಾದ ಪ್ರಚೋದಕ ಪ್ಯಾಕೇಜ್ ಅನ್ನು ಘೋಷಿಸಿದ ಹೊರತಾಗಿಯು ಬೇಡಿಕೆ ಮತ್ತು ಉತ್ಪಾದನೆ ಇನ್ನೂ ಚೇತರಿಸಿಕೊಂಡಿಲ್ಲ.

ದೇಶದಲ್ಲಿ ಕೊರೊನಾ ಪ್ರಾರಂಭವಾಗುವುದಕ್ಕೆ ಮುಂಚೆ, ಆರ್ಥಿಕತೆಯು ನಿಧಾನಗತಿಯ ಬೆಳವಣಿಗೆ ಮತ್ತು ಕಡಿಮೆ ಬೇಡಿಕೆಯ ಹೊರತಾಗಿಯೂ, ಆರ್ಥಿಕತೆಯನ್ನು ಅಂದಾಜು 2.8 ಟ್ರಿಲಿಯನ್ ಡಾಲರ್‌‌ನಿಂದ, 2024 ರವೇಳೆಗೆ 5 ಟ್ರಿಲಿಯನ್‌ ಡಾಲರ್‌ ಪರಿವರ್ತಿಸುವ ಗುರಿಯನ್ನು ಹೊಂದಿದೆ ಎಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹೇಳಿತ್ತು.


ಇದನ್ನೂ ಓದಿ: ಮೋದಿ ಬಂದಮೇಲೆ ಭಾರತದ ಸಾಲದ ಪ್ರಮಾಣ ಇಳಿಕೆಯಾಗಿದೆಯೇ? ಈ ವರ್ಷ ಜಿಡಿಪಿ 10% ಗೆ ಏರಲಿದೆಯೇ? ಸುಳ್ಳು ಹೇಳಿದ ಪೋಸ್ಟ್‌ ಕಾರ್ಡ್‌..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...