Homeಅಂತರಾಷ್ಟ್ರೀಯಭಾರತದಲ್ಲಿ ಮಾನವಹಕ್ಕು ಹೋರಾಟಗಾರರ ಬಂಧನವಾಗುತ್ತಿದೆ: ವಿಶ್ವಸಂಸ್ಥೆ ಕಳವಳ

ಭಾರತದಲ್ಲಿ ಮಾನವಹಕ್ಕು ಹೋರಾಟಗಾರರ ಬಂಧನವಾಗುತ್ತಿದೆ: ವಿಶ್ವಸಂಸ್ಥೆ ಕಳವಳ

ಕೇಂದ್ರ ಸರ್ಕಾರ ಬ್ಯಾಚಲೆಟ್ ಟೀಕೆಗಳನ್ನು ತಿರಸ್ಕರಿಸಿದ್ದು, ಕಾನೂನು ಉಲ್ಲಂಘನೆಯನ್ನು ಮಾನವ ಹಕ್ಕುಗಳ ನೆಪದಲ್ಲಿ ಕ್ಷಮಿಸಲಾಗುವುದಿಲ್ಲ ಎಂದಿದೆ

- Advertisement -
- Advertisement -

ಭಾರತದಲ್ಲಿ ಇತ್ತೀಚಿನ ತಿಂಗಳುಗಳಲ್ಲಿ ಮಾನವಹಕ್ಕು ಕಾರ್ಯಕರ್ತರು ಹಾಗೂ ಸಾಮಾಜಿಕ ಹೋರಾಟಗಾರರು, ಅದರಲ್ಲೂ ನಿರ್ದಿಷ್ಟವಾಗಿ, ವಿವಾದಾತ್ಮಕ ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಭಾಗಿಯಾದ ಹೋರಾಟಗಾರರನ್ನು ಭಯೋತ್ಪಾದನೆ ನಿಗ್ರಹದಂತಹ ಕಠಿಣ ಕಾನೂನುಗಳಡಿ ಬಂಧಿಸಲಾಗಿದೆ ಎಂದು ವಿಶ್ವಸಂಸ್ಥೆ ಆತಂಕ ವ್ಯಕ್ತಪಡಿಸಿದೆ.

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ಮಿಷೆಲ್ ಬ್ಯಾಚಲೆಟ್ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತವು ಮಾನವ ಹಕ್ಕುಗಳ ಕಾರ್ಯಕರ್ತರನ್ನು ರಕ್ಷಿಸಲು ಹೆಚ್ಚಿನ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಮೂರು “ಸಮಸ್ಯಾತ್ಮಕ” ಭಾರತೀಯ ಕಾನೂನುಗಳ ಬಗ್ಗೆ ಗಮನಸೆಳೆದಿರುವ ಅವರು, ಆ ಕಾನೂನುಗಳು ಸಾಮಾಜಿಕ ಕಾರ್ಯಕರ್ತರ ಬಂಧನಕ್ಕೆ ಕಾರಣವಾಗಿದೆ ಮತ್ತು ಸರ್ಕಾರೇತರ ಸಂಸ್ಥೆಗಳ ಕೆಲಸಕ್ಕೆ ನಿರ್ಬಂಧಗಳನ್ನುಂಟು ಮಾಡಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿಎಎ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಮಿಷನರ್

ಸಾರ್ವಜನಿಕ ಹಿತಾಸಕ್ತಿಗೆ ಹಾನಿಯುಂಟು ಮಾಡುವ ಯಾವುದೇ ಚಟುವಟಿಕೆಗಳಿಗೆ ವಿದೇಶಿ ನಿಧಿಯನ್ನು ಪಡೆಯುವುದನ್ನು ನಿಷೇಧಿಸುವ ’ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ’ (FCRA) ಸೇರಿದಂತೆ ನಾಗರಿಕ ಸಮಾಜದಲ್ಲಿ ಧ್ವನಿಗಳನ್ನು ಅಡಗಿಸಲು ಹೆಚ್ಚಾಗಿ ಬಳಸಲಾಗುತ್ತಿರುವ ವಿದೇಶಿ ಧನಸಹಾಯವನ್ನು ನಿರ್ಬಂಧಿಸುವ ಅಸ್ಪಷ್ಟ ಪದಗಳಿಂದ ಕೂಡಿರುವ ಕಾನೂನುಗಳ ಬಗ್ಗೆ ಅವರು ವಿಷಾದಿಸಿದರು.

ಸಿಎಎ-ಎನ್​ಆರ್​ಸಿ ವಿರೋಧಿ ಪ್ರತಿಭಟನೆ.

“ಇದರಿಂದಾಗಿ ಎನ್‌ಜಿಒ ಕಚೇರಿಗಳ ಮೇಲೆ ಅಧಿಕೃತ ದಾಳಿಗಳು ಮತ್ತು ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವುದು ಸೇರಿದಂತೆ, FCRA  ಕಾಯ್ದೆಯನ್ನು ಹೇರಿ ಸಮರ್ಥಿಸಲಾಗುತ್ತಿದೆ” ಎಂದು ಅವರು ಹೇಳಿದರು.

ಅಷ್ಟೇ ಅಲ್ಲದೆ, ಅಸ್ಪಷ್ಟವಾಗಿ ವ್ಯಾಖ್ಯಾನಿಸಲಾದ ‘ಸಾರ್ವಜನಿಕ ಹಿತಾಸಕ್ತಿ’ಯ ಆಧಾರದಲ್ಲಿ ಈ ಕಾನೂನನ್ನು ದುರ್ಬಳಕೆಗೆ ಮಾಡಿಕೊಳ್ಳಲಾಗುತ್ತಿದೆ. ಜೊತೆಗೆ ಎನ್‌ಜಿಒಗಳ ಟೀಕಾತ್ಮಕ ವರದಿ ಮತ್ತು ಪ್ರತಿಪಾದನೆಗಳ ಕುರಿತು ಬರದರಿಕೆ ಹಾಕಲು ಮತ್ತು ದಂಡಿಸಲು ಈ ಕಾನೂನುಗಳನ್ನು ಅಧಿಕಾರಿಗಳು ಬಳಸುತ್ತಾರೆ ಎಂದು ವಿಶ್ವಸಂಸ್ಥೆ ಹೇಳಿದೆ.

ಇದನ್ನೂ ಓದಿ: ಭಾರತ ದೇಶದಲ್ಲಿ ಮಾನವ ಹಕ್ಕುಗಳಿಗೆ ಬೆಲೆಯೇ ಇಲ್ಲ

ಇತ್ತೀಚಿನ ತಿಂಗಳುಗಳಲ್ಲಿ ಸಾಮಾಜಿಕ ಕಾರ್ಯಕರ್ತರು ಮತ್ತು ಮಾನವ ಹಕ್ಕುಗಳ ಹೋರಾಟಗಾರರು ಹೆಚ್ಚಿನ ಒತ್ತಡಕ್ಕೆ ಒಳಗಾಗಿದ್ದಾರೆ. ವಿಶೇಷವಾಗಿ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನೆಯಲ್ಲಿ ತೊಡಗಿರುವವರು ಸಾಕಷ್ಟು ಒತ್ತಡಕ್ಕೆ ಒಳಗಾಗುತ್ತಿದ್ದಾರೆ ಎಂದು ಬ್ಯಾಚಲೆಟ್ ಹೇಳಿದ್ದಾರೆ.

 

ಸಿಎಎ ವಿರುದ್ಧ ಪ್ರತಿಭಟಿಸಿದ್ದಕ್ಕಾಗಿ ಅನೇಕ ಸಾಮಾಜಿಕ ಕಾರ್ಯಕರ್ತರನ್ನು ಕಠಿಣ ಭಯೋತ್ಪಾದನಾ ವಿರೋಧಿ ಕಾನೂನು ಮತ್ತು ಅಂತಹುದೇ ಕಾನೂನುಗಳ ಅಡಿಯಲ್ಲಿ ಬಂಧಿಸಲಾಗಿದೆ ಎಂಬುವುದನ್ನು ಅವರು ಉಲ್ಲೇಖಿಸಿದ್ದಾರೆ.

“ರಚನಾತ್ಮಕ ಟೀಕೆ ಪ್ರಜಾಪ್ರಭುತ್ವದ ಜೀವನಾಡಿ. ಅಧಿಕಾರಿಗಳಿಗೆ ಈ ಟೀಕೆ ಹಿತವಾಗಿಲ್ಲ ಎಂದೆನಿಸಿದರೂ ಅದನ್ನು ಎಂದಿಗೂ ಅಪರಾಧೀಕರಿಸಬಾರದು ಅಥವಾ ಕಾನೂನು ಬಾಹಿರಗೊಳಿಸಬಾರದು”

~ಮಿಷೆಲ್ ಬ್ಯಾಚಲೆಟ್, ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್

“ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಶಾಂತಿಯುತ ಸಭೆ ನಡೆಸಿ ತಮ್ಮ ಹಕ್ಕು ಚಲಾಯಿಸಿದ್ದಕ್ಕೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಖಚಿತಪಡಿಸಿಕೊಳ್ಳಲು ಮತ್ತು ನಾಗರಿಕ ಸಮಾಜವನ್ನು ರಕ್ಷಿಸಲು ಭಾರತವು ಕಾನೂನು ಮತ್ತು ನೀತಿಯಲ್ಲಿ ಇನ್ನೂ ಹೆಚ್ಚಿನದನ್ನು ಮಾಡಲು ನಾನು ಸರ್ಕಾರವನ್ನು ಕೋರುತ್ತೇನೆ” ಎಂದು ಬ್ಯಾಚಲೆಟ್ ಹೇಳಿದರು.

ಇದನ್ನೂ ಓದಿ: ಅಜೀವಪಯಂತ ಮಾನವಹಕ್ಕುಗಳ ಹೋರಾಟಗಾರ ರೋಣ ವಿಲ್ಸನ್

ಭಯೋತ್ಪಾದನೆಯ ಆರೋಪ ಹೊರಿಸಲ್ಪಟ್ಟಿರುವ ಹಿರಿಯ ಭಾರತೀಯರಾಗಿರುವ ಕೆಥೋಲಿಕ್ ಧರ್ಮಗುರು ಸ್ಟಾನ್ ಸ್ವಾಮಿ ಸೇರಿದಂತೆ 1,500ಕ್ಕೂ ಅಧಿಕ ಜನರನ್ನು ಬಂಧಿಸಿರುವುದು ವರದಿಯಾಗಿದೆ ಎಂದು ಬ್ಯಾಚಲೆಟ್ ಉಲ್ಲೇಖಿಸಿದ್ದಾರೆ.

ಸ್ಟ್ಯಾನ್
Father Stan Swamy

ಕಳೆದ ತಿಂಗಳು ಮಾನವ ಹಕ್ಕುಗಳ ಅಂತಾರಾಷ್ಟ್ರೀಯ ಸಂಸ್ಥೆಯಾದ ’ಅಮ್ನೆಸ್ಟಿ ಇಂಟರ್ ನ್ಯಾಷನಲ್’  ಭಾರತದಲ್ಲಿ ತನ್ನ ಕಾರ್ಯಾಚರಣೆಯನ್ನು ನಿಲ್ಲಿಸಿತ್ತು. ಸರ್ಕಾರವು ಪ್ರತೀಕಾರ ತೀರಿಸಿಕೊಳ್ಳುತ್ತಿದ್ದು ಮತ್ತು ತನ್ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ ಎಂದು ಅದು ಉಲ್ಲೇಖಿಸಿತ್ತು, ಈ ಹಿನ್ನಲೆಯಲ್ಲಿ ಬ್ಯಾಚಲೆಟ್ ಅವರ ಹೇಳಿಕೆ ಮಹತ್ವದ್ದಾಗಿದೆ.

ಟೀಕೆ ನಿರಾಕರಿಸಿದ ಭಾರತ

ಕೇಂದ್ರ ಸರ್ಕಾರ ಬ್ಯಾಚಲೆಟ್ ಟೀಕೆಗಳನ್ನು ತಿರಸ್ಕರಿಸಿದ್ದು, “ಕಾನೂನು ಉಲ್ಲಂಘನೆಯನ್ನು ಮಾನವ ಹಕ್ಕುಗಳ ನೆಪದಲ್ಲಿ ಕ್ಷಮಿಸಲಾಗುವುದಿಲ್ಲ” ಎಂದು ಹೇಳಿದೆ.

ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ, ವಿಶ್ವಸಂಸ್ಥೆಯೊಂದರಿಂದ ಈ ವಿಷಯದ ಬಗ್ಗೆ ಹೆಚ್ಚು ತಿಳುವಳಿಕೆಯುಳ್ಳ ಅಭಿಪ್ರಾಯವನ್ನು ನಿರೀಕ್ಷಿಸಲಾಗಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೀಲಾರ ಟೆಂಟ್ ಹೌಸ್-4: ಮನುಷ್ಯನ ಆಳದ ಮಾನವೀಯ ತಂತುಗಳನ್ನು ಶೋಧಿಸುವ ಕೀಸ್ಲೋಸ್ಕಿ ಸಿನಿಮಾಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...