Homeಅಂತರಾಷ್ಟ್ರೀಯಭಾರತದಲ್ಲಿ ಮಾನವಹಕ್ಕು ಹೋರಾಟಗಾರರ ಬಂಧನವಾಗುತ್ತಿದೆ: ವಿಶ್ವಸಂಸ್ಥೆ ಕಳವಳ

ಭಾರತದಲ್ಲಿ ಮಾನವಹಕ್ಕು ಹೋರಾಟಗಾರರ ಬಂಧನವಾಗುತ್ತಿದೆ: ವಿಶ್ವಸಂಸ್ಥೆ ಕಳವಳ

ಕೇಂದ್ರ ಸರ್ಕಾರ ಬ್ಯಾಚಲೆಟ್ ಟೀಕೆಗಳನ್ನು ತಿರಸ್ಕರಿಸಿದ್ದು, ಕಾನೂನು ಉಲ್ಲಂಘನೆಯನ್ನು ಮಾನವ ಹಕ್ಕುಗಳ ನೆಪದಲ್ಲಿ ಕ್ಷಮಿಸಲಾಗುವುದಿಲ್ಲ ಎಂದಿದೆ

- Advertisement -
- Advertisement -

ಭಾರತದಲ್ಲಿ ಇತ್ತೀಚಿನ ತಿಂಗಳುಗಳಲ್ಲಿ ಮಾನವಹಕ್ಕು ಕಾರ್ಯಕರ್ತರು ಹಾಗೂ ಸಾಮಾಜಿಕ ಹೋರಾಟಗಾರರು, ಅದರಲ್ಲೂ ನಿರ್ದಿಷ್ಟವಾಗಿ, ವಿವಾದಾತ್ಮಕ ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಭಾಗಿಯಾದ ಹೋರಾಟಗಾರರನ್ನು ಭಯೋತ್ಪಾದನೆ ನಿಗ್ರಹದಂತಹ ಕಠಿಣ ಕಾನೂನುಗಳಡಿ ಬಂಧಿಸಲಾಗಿದೆ ಎಂದು ವಿಶ್ವಸಂಸ್ಥೆ ಆತಂಕ ವ್ಯಕ್ತಪಡಿಸಿದೆ.

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ಮಿಷೆಲ್ ಬ್ಯಾಚಲೆಟ್ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತವು ಮಾನವ ಹಕ್ಕುಗಳ ಕಾರ್ಯಕರ್ತರನ್ನು ರಕ್ಷಿಸಲು ಹೆಚ್ಚಿನ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಮೂರು “ಸಮಸ್ಯಾತ್ಮಕ” ಭಾರತೀಯ ಕಾನೂನುಗಳ ಬಗ್ಗೆ ಗಮನಸೆಳೆದಿರುವ ಅವರು, ಆ ಕಾನೂನುಗಳು ಸಾಮಾಜಿಕ ಕಾರ್ಯಕರ್ತರ ಬಂಧನಕ್ಕೆ ಕಾರಣವಾಗಿದೆ ಮತ್ತು ಸರ್ಕಾರೇತರ ಸಂಸ್ಥೆಗಳ ಕೆಲಸಕ್ಕೆ ನಿರ್ಬಂಧಗಳನ್ನುಂಟು ಮಾಡಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿಎಎ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಮಿಷನರ್

ಸಾರ್ವಜನಿಕ ಹಿತಾಸಕ್ತಿಗೆ ಹಾನಿಯುಂಟು ಮಾಡುವ ಯಾವುದೇ ಚಟುವಟಿಕೆಗಳಿಗೆ ವಿದೇಶಿ ನಿಧಿಯನ್ನು ಪಡೆಯುವುದನ್ನು ನಿಷೇಧಿಸುವ ’ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ’ (FCRA) ಸೇರಿದಂತೆ ನಾಗರಿಕ ಸಮಾಜದಲ್ಲಿ ಧ್ವನಿಗಳನ್ನು ಅಡಗಿಸಲು ಹೆಚ್ಚಾಗಿ ಬಳಸಲಾಗುತ್ತಿರುವ ವಿದೇಶಿ ಧನಸಹಾಯವನ್ನು ನಿರ್ಬಂಧಿಸುವ ಅಸ್ಪಷ್ಟ ಪದಗಳಿಂದ ಕೂಡಿರುವ ಕಾನೂನುಗಳ ಬಗ್ಗೆ ಅವರು ವಿಷಾದಿಸಿದರು.

ಸಿಎಎ-ಎನ್​ಆರ್​ಸಿ ವಿರೋಧಿ ಪ್ರತಿಭಟನೆ.

“ಇದರಿಂದಾಗಿ ಎನ್‌ಜಿಒ ಕಚೇರಿಗಳ ಮೇಲೆ ಅಧಿಕೃತ ದಾಳಿಗಳು ಮತ್ತು ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವುದು ಸೇರಿದಂತೆ, FCRA  ಕಾಯ್ದೆಯನ್ನು ಹೇರಿ ಸಮರ್ಥಿಸಲಾಗುತ್ತಿದೆ” ಎಂದು ಅವರು ಹೇಳಿದರು.

ಅಷ್ಟೇ ಅಲ್ಲದೆ, ಅಸ್ಪಷ್ಟವಾಗಿ ವ್ಯಾಖ್ಯಾನಿಸಲಾದ ‘ಸಾರ್ವಜನಿಕ ಹಿತಾಸಕ್ತಿ’ಯ ಆಧಾರದಲ್ಲಿ ಈ ಕಾನೂನನ್ನು ದುರ್ಬಳಕೆಗೆ ಮಾಡಿಕೊಳ್ಳಲಾಗುತ್ತಿದೆ. ಜೊತೆಗೆ ಎನ್‌ಜಿಒಗಳ ಟೀಕಾತ್ಮಕ ವರದಿ ಮತ್ತು ಪ್ರತಿಪಾದನೆಗಳ ಕುರಿತು ಬರದರಿಕೆ ಹಾಕಲು ಮತ್ತು ದಂಡಿಸಲು ಈ ಕಾನೂನುಗಳನ್ನು ಅಧಿಕಾರಿಗಳು ಬಳಸುತ್ತಾರೆ ಎಂದು ವಿಶ್ವಸಂಸ್ಥೆ ಹೇಳಿದೆ.

ಇದನ್ನೂ ಓದಿ: ಭಾರತ ದೇಶದಲ್ಲಿ ಮಾನವ ಹಕ್ಕುಗಳಿಗೆ ಬೆಲೆಯೇ ಇಲ್ಲ

ಇತ್ತೀಚಿನ ತಿಂಗಳುಗಳಲ್ಲಿ ಸಾಮಾಜಿಕ ಕಾರ್ಯಕರ್ತರು ಮತ್ತು ಮಾನವ ಹಕ್ಕುಗಳ ಹೋರಾಟಗಾರರು ಹೆಚ್ಚಿನ ಒತ್ತಡಕ್ಕೆ ಒಳಗಾಗಿದ್ದಾರೆ. ವಿಶೇಷವಾಗಿ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನೆಯಲ್ಲಿ ತೊಡಗಿರುವವರು ಸಾಕಷ್ಟು ಒತ್ತಡಕ್ಕೆ ಒಳಗಾಗುತ್ತಿದ್ದಾರೆ ಎಂದು ಬ್ಯಾಚಲೆಟ್ ಹೇಳಿದ್ದಾರೆ.

 

ಸಿಎಎ ವಿರುದ್ಧ ಪ್ರತಿಭಟಿಸಿದ್ದಕ್ಕಾಗಿ ಅನೇಕ ಸಾಮಾಜಿಕ ಕಾರ್ಯಕರ್ತರನ್ನು ಕಠಿಣ ಭಯೋತ್ಪಾದನಾ ವಿರೋಧಿ ಕಾನೂನು ಮತ್ತು ಅಂತಹುದೇ ಕಾನೂನುಗಳ ಅಡಿಯಲ್ಲಿ ಬಂಧಿಸಲಾಗಿದೆ ಎಂಬುವುದನ್ನು ಅವರು ಉಲ್ಲೇಖಿಸಿದ್ದಾರೆ.

“ರಚನಾತ್ಮಕ ಟೀಕೆ ಪ್ರಜಾಪ್ರಭುತ್ವದ ಜೀವನಾಡಿ. ಅಧಿಕಾರಿಗಳಿಗೆ ಈ ಟೀಕೆ ಹಿತವಾಗಿಲ್ಲ ಎಂದೆನಿಸಿದರೂ ಅದನ್ನು ಎಂದಿಗೂ ಅಪರಾಧೀಕರಿಸಬಾರದು ಅಥವಾ ಕಾನೂನು ಬಾಹಿರಗೊಳಿಸಬಾರದು”

~ಮಿಷೆಲ್ ಬ್ಯಾಚಲೆಟ್, ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್

“ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಶಾಂತಿಯುತ ಸಭೆ ನಡೆಸಿ ತಮ್ಮ ಹಕ್ಕು ಚಲಾಯಿಸಿದ್ದಕ್ಕೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಖಚಿತಪಡಿಸಿಕೊಳ್ಳಲು ಮತ್ತು ನಾಗರಿಕ ಸಮಾಜವನ್ನು ರಕ್ಷಿಸಲು ಭಾರತವು ಕಾನೂನು ಮತ್ತು ನೀತಿಯಲ್ಲಿ ಇನ್ನೂ ಹೆಚ್ಚಿನದನ್ನು ಮಾಡಲು ನಾನು ಸರ್ಕಾರವನ್ನು ಕೋರುತ್ತೇನೆ” ಎಂದು ಬ್ಯಾಚಲೆಟ್ ಹೇಳಿದರು.

ಇದನ್ನೂ ಓದಿ: ಅಜೀವಪಯಂತ ಮಾನವಹಕ್ಕುಗಳ ಹೋರಾಟಗಾರ ರೋಣ ವಿಲ್ಸನ್

ಭಯೋತ್ಪಾದನೆಯ ಆರೋಪ ಹೊರಿಸಲ್ಪಟ್ಟಿರುವ ಹಿರಿಯ ಭಾರತೀಯರಾಗಿರುವ ಕೆಥೋಲಿಕ್ ಧರ್ಮಗುರು ಸ್ಟಾನ್ ಸ್ವಾಮಿ ಸೇರಿದಂತೆ 1,500ಕ್ಕೂ ಅಧಿಕ ಜನರನ್ನು ಬಂಧಿಸಿರುವುದು ವರದಿಯಾಗಿದೆ ಎಂದು ಬ್ಯಾಚಲೆಟ್ ಉಲ್ಲೇಖಿಸಿದ್ದಾರೆ.

ಸ್ಟ್ಯಾನ್
Father Stan Swamy

ಕಳೆದ ತಿಂಗಳು ಮಾನವ ಹಕ್ಕುಗಳ ಅಂತಾರಾಷ್ಟ್ರೀಯ ಸಂಸ್ಥೆಯಾದ ’ಅಮ್ನೆಸ್ಟಿ ಇಂಟರ್ ನ್ಯಾಷನಲ್’  ಭಾರತದಲ್ಲಿ ತನ್ನ ಕಾರ್ಯಾಚರಣೆಯನ್ನು ನಿಲ್ಲಿಸಿತ್ತು. ಸರ್ಕಾರವು ಪ್ರತೀಕಾರ ತೀರಿಸಿಕೊಳ್ಳುತ್ತಿದ್ದು ಮತ್ತು ತನ್ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ ಎಂದು ಅದು ಉಲ್ಲೇಖಿಸಿತ್ತು, ಈ ಹಿನ್ನಲೆಯಲ್ಲಿ ಬ್ಯಾಚಲೆಟ್ ಅವರ ಹೇಳಿಕೆ ಮಹತ್ವದ್ದಾಗಿದೆ.

ಟೀಕೆ ನಿರಾಕರಿಸಿದ ಭಾರತ

ಕೇಂದ್ರ ಸರ್ಕಾರ ಬ್ಯಾಚಲೆಟ್ ಟೀಕೆಗಳನ್ನು ತಿರಸ್ಕರಿಸಿದ್ದು, “ಕಾನೂನು ಉಲ್ಲಂಘನೆಯನ್ನು ಮಾನವ ಹಕ್ಕುಗಳ ನೆಪದಲ್ಲಿ ಕ್ಷಮಿಸಲಾಗುವುದಿಲ್ಲ” ಎಂದು ಹೇಳಿದೆ.

ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ, ವಿಶ್ವಸಂಸ್ಥೆಯೊಂದರಿಂದ ಈ ವಿಷಯದ ಬಗ್ಗೆ ಹೆಚ್ಚು ತಿಳುವಳಿಕೆಯುಳ್ಳ ಅಭಿಪ್ರಾಯವನ್ನು ನಿರೀಕ್ಷಿಸಲಾಗಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೀಲಾರ ಟೆಂಟ್ ಹೌಸ್-4: ಮನುಷ್ಯನ ಆಳದ ಮಾನವೀಯ ತಂತುಗಳನ್ನು ಶೋಧಿಸುವ ಕೀಸ್ಲೋಸ್ಕಿ ಸಿನಿಮಾಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...