Homeಅಂತರಾಷ್ಟ್ರೀಯಭಾರತದಲ್ಲಿ ಮಾನವಹಕ್ಕು ಹೋರಾಟಗಾರರ ಬಂಧನವಾಗುತ್ತಿದೆ: ವಿಶ್ವಸಂಸ್ಥೆ ಕಳವಳ

ಭಾರತದಲ್ಲಿ ಮಾನವಹಕ್ಕು ಹೋರಾಟಗಾರರ ಬಂಧನವಾಗುತ್ತಿದೆ: ವಿಶ್ವಸಂಸ್ಥೆ ಕಳವಳ

ಕೇಂದ್ರ ಸರ್ಕಾರ ಬ್ಯಾಚಲೆಟ್ ಟೀಕೆಗಳನ್ನು ತಿರಸ್ಕರಿಸಿದ್ದು, ಕಾನೂನು ಉಲ್ಲಂಘನೆಯನ್ನು ಮಾನವ ಹಕ್ಕುಗಳ ನೆಪದಲ್ಲಿ ಕ್ಷಮಿಸಲಾಗುವುದಿಲ್ಲ ಎಂದಿದೆ

- Advertisement -
- Advertisement -

ಭಾರತದಲ್ಲಿ ಇತ್ತೀಚಿನ ತಿಂಗಳುಗಳಲ್ಲಿ ಮಾನವಹಕ್ಕು ಕಾರ್ಯಕರ್ತರು ಹಾಗೂ ಸಾಮಾಜಿಕ ಹೋರಾಟಗಾರರು, ಅದರಲ್ಲೂ ನಿರ್ದಿಷ್ಟವಾಗಿ, ವಿವಾದಾತ್ಮಕ ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಭಾಗಿಯಾದ ಹೋರಾಟಗಾರರನ್ನು ಭಯೋತ್ಪಾದನೆ ನಿಗ್ರಹದಂತಹ ಕಠಿಣ ಕಾನೂನುಗಳಡಿ ಬಂಧಿಸಲಾಗಿದೆ ಎಂದು ವಿಶ್ವಸಂಸ್ಥೆ ಆತಂಕ ವ್ಯಕ್ತಪಡಿಸಿದೆ.

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ಮಿಷೆಲ್ ಬ್ಯಾಚಲೆಟ್ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತವು ಮಾನವ ಹಕ್ಕುಗಳ ಕಾರ್ಯಕರ್ತರನ್ನು ರಕ್ಷಿಸಲು ಹೆಚ್ಚಿನ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಮೂರು “ಸಮಸ್ಯಾತ್ಮಕ” ಭಾರತೀಯ ಕಾನೂನುಗಳ ಬಗ್ಗೆ ಗಮನಸೆಳೆದಿರುವ ಅವರು, ಆ ಕಾನೂನುಗಳು ಸಾಮಾಜಿಕ ಕಾರ್ಯಕರ್ತರ ಬಂಧನಕ್ಕೆ ಕಾರಣವಾಗಿದೆ ಮತ್ತು ಸರ್ಕಾರೇತರ ಸಂಸ್ಥೆಗಳ ಕೆಲಸಕ್ಕೆ ನಿರ್ಬಂಧಗಳನ್ನುಂಟು ಮಾಡಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿಎಎ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಮಿಷನರ್

ಸಾರ್ವಜನಿಕ ಹಿತಾಸಕ್ತಿಗೆ ಹಾನಿಯುಂಟು ಮಾಡುವ ಯಾವುದೇ ಚಟುವಟಿಕೆಗಳಿಗೆ ವಿದೇಶಿ ನಿಧಿಯನ್ನು ಪಡೆಯುವುದನ್ನು ನಿಷೇಧಿಸುವ ’ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ’ (FCRA) ಸೇರಿದಂತೆ ನಾಗರಿಕ ಸಮಾಜದಲ್ಲಿ ಧ್ವನಿಗಳನ್ನು ಅಡಗಿಸಲು ಹೆಚ್ಚಾಗಿ ಬಳಸಲಾಗುತ್ತಿರುವ ವಿದೇಶಿ ಧನಸಹಾಯವನ್ನು ನಿರ್ಬಂಧಿಸುವ ಅಸ್ಪಷ್ಟ ಪದಗಳಿಂದ ಕೂಡಿರುವ ಕಾನೂನುಗಳ ಬಗ್ಗೆ ಅವರು ವಿಷಾದಿಸಿದರು.

ಸಿಎಎ-ಎನ್​ಆರ್​ಸಿ ವಿರೋಧಿ ಪ್ರತಿಭಟನೆ.

“ಇದರಿಂದಾಗಿ ಎನ್‌ಜಿಒ ಕಚೇರಿಗಳ ಮೇಲೆ ಅಧಿಕೃತ ದಾಳಿಗಳು ಮತ್ತು ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವುದು ಸೇರಿದಂತೆ, FCRA  ಕಾಯ್ದೆಯನ್ನು ಹೇರಿ ಸಮರ್ಥಿಸಲಾಗುತ್ತಿದೆ” ಎಂದು ಅವರು ಹೇಳಿದರು.

ಅಷ್ಟೇ ಅಲ್ಲದೆ, ಅಸ್ಪಷ್ಟವಾಗಿ ವ್ಯಾಖ್ಯಾನಿಸಲಾದ ‘ಸಾರ್ವಜನಿಕ ಹಿತಾಸಕ್ತಿ’ಯ ಆಧಾರದಲ್ಲಿ ಈ ಕಾನೂನನ್ನು ದುರ್ಬಳಕೆಗೆ ಮಾಡಿಕೊಳ್ಳಲಾಗುತ್ತಿದೆ. ಜೊತೆಗೆ ಎನ್‌ಜಿಒಗಳ ಟೀಕಾತ್ಮಕ ವರದಿ ಮತ್ತು ಪ್ರತಿಪಾದನೆಗಳ ಕುರಿತು ಬರದರಿಕೆ ಹಾಕಲು ಮತ್ತು ದಂಡಿಸಲು ಈ ಕಾನೂನುಗಳನ್ನು ಅಧಿಕಾರಿಗಳು ಬಳಸುತ್ತಾರೆ ಎಂದು ವಿಶ್ವಸಂಸ್ಥೆ ಹೇಳಿದೆ.

ಇದನ್ನೂ ಓದಿ: ಭಾರತ ದೇಶದಲ್ಲಿ ಮಾನವ ಹಕ್ಕುಗಳಿಗೆ ಬೆಲೆಯೇ ಇಲ್ಲ

ಇತ್ತೀಚಿನ ತಿಂಗಳುಗಳಲ್ಲಿ ಸಾಮಾಜಿಕ ಕಾರ್ಯಕರ್ತರು ಮತ್ತು ಮಾನವ ಹಕ್ಕುಗಳ ಹೋರಾಟಗಾರರು ಹೆಚ್ಚಿನ ಒತ್ತಡಕ್ಕೆ ಒಳಗಾಗಿದ್ದಾರೆ. ವಿಶೇಷವಾಗಿ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನೆಯಲ್ಲಿ ತೊಡಗಿರುವವರು ಸಾಕಷ್ಟು ಒತ್ತಡಕ್ಕೆ ಒಳಗಾಗುತ್ತಿದ್ದಾರೆ ಎಂದು ಬ್ಯಾಚಲೆಟ್ ಹೇಳಿದ್ದಾರೆ.

 

ಸಿಎಎ ವಿರುದ್ಧ ಪ್ರತಿಭಟಿಸಿದ್ದಕ್ಕಾಗಿ ಅನೇಕ ಸಾಮಾಜಿಕ ಕಾರ್ಯಕರ್ತರನ್ನು ಕಠಿಣ ಭಯೋತ್ಪಾದನಾ ವಿರೋಧಿ ಕಾನೂನು ಮತ್ತು ಅಂತಹುದೇ ಕಾನೂನುಗಳ ಅಡಿಯಲ್ಲಿ ಬಂಧಿಸಲಾಗಿದೆ ಎಂಬುವುದನ್ನು ಅವರು ಉಲ್ಲೇಖಿಸಿದ್ದಾರೆ.

“ರಚನಾತ್ಮಕ ಟೀಕೆ ಪ್ರಜಾಪ್ರಭುತ್ವದ ಜೀವನಾಡಿ. ಅಧಿಕಾರಿಗಳಿಗೆ ಈ ಟೀಕೆ ಹಿತವಾಗಿಲ್ಲ ಎಂದೆನಿಸಿದರೂ ಅದನ್ನು ಎಂದಿಗೂ ಅಪರಾಧೀಕರಿಸಬಾರದು ಅಥವಾ ಕಾನೂನು ಬಾಹಿರಗೊಳಿಸಬಾರದು”

~ಮಿಷೆಲ್ ಬ್ಯಾಚಲೆಟ್, ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್

“ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಶಾಂತಿಯುತ ಸಭೆ ನಡೆಸಿ ತಮ್ಮ ಹಕ್ಕು ಚಲಾಯಿಸಿದ್ದಕ್ಕೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಖಚಿತಪಡಿಸಿಕೊಳ್ಳಲು ಮತ್ತು ನಾಗರಿಕ ಸಮಾಜವನ್ನು ರಕ್ಷಿಸಲು ಭಾರತವು ಕಾನೂನು ಮತ್ತು ನೀತಿಯಲ್ಲಿ ಇನ್ನೂ ಹೆಚ್ಚಿನದನ್ನು ಮಾಡಲು ನಾನು ಸರ್ಕಾರವನ್ನು ಕೋರುತ್ತೇನೆ” ಎಂದು ಬ್ಯಾಚಲೆಟ್ ಹೇಳಿದರು.

ಇದನ್ನೂ ಓದಿ: ಅಜೀವಪಯಂತ ಮಾನವಹಕ್ಕುಗಳ ಹೋರಾಟಗಾರ ರೋಣ ವಿಲ್ಸನ್

ಭಯೋತ್ಪಾದನೆಯ ಆರೋಪ ಹೊರಿಸಲ್ಪಟ್ಟಿರುವ ಹಿರಿಯ ಭಾರತೀಯರಾಗಿರುವ ಕೆಥೋಲಿಕ್ ಧರ್ಮಗುರು ಸ್ಟಾನ್ ಸ್ವಾಮಿ ಸೇರಿದಂತೆ 1,500ಕ್ಕೂ ಅಧಿಕ ಜನರನ್ನು ಬಂಧಿಸಿರುವುದು ವರದಿಯಾಗಿದೆ ಎಂದು ಬ್ಯಾಚಲೆಟ್ ಉಲ್ಲೇಖಿಸಿದ್ದಾರೆ.

ಸ್ಟ್ಯಾನ್
Father Stan Swamy

ಕಳೆದ ತಿಂಗಳು ಮಾನವ ಹಕ್ಕುಗಳ ಅಂತಾರಾಷ್ಟ್ರೀಯ ಸಂಸ್ಥೆಯಾದ ’ಅಮ್ನೆಸ್ಟಿ ಇಂಟರ್ ನ್ಯಾಷನಲ್’  ಭಾರತದಲ್ಲಿ ತನ್ನ ಕಾರ್ಯಾಚರಣೆಯನ್ನು ನಿಲ್ಲಿಸಿತ್ತು. ಸರ್ಕಾರವು ಪ್ರತೀಕಾರ ತೀರಿಸಿಕೊಳ್ಳುತ್ತಿದ್ದು ಮತ್ತು ತನ್ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ ಎಂದು ಅದು ಉಲ್ಲೇಖಿಸಿತ್ತು, ಈ ಹಿನ್ನಲೆಯಲ್ಲಿ ಬ್ಯಾಚಲೆಟ್ ಅವರ ಹೇಳಿಕೆ ಮಹತ್ವದ್ದಾಗಿದೆ.

ಟೀಕೆ ನಿರಾಕರಿಸಿದ ಭಾರತ

ಕೇಂದ್ರ ಸರ್ಕಾರ ಬ್ಯಾಚಲೆಟ್ ಟೀಕೆಗಳನ್ನು ತಿರಸ್ಕರಿಸಿದ್ದು, “ಕಾನೂನು ಉಲ್ಲಂಘನೆಯನ್ನು ಮಾನವ ಹಕ್ಕುಗಳ ನೆಪದಲ್ಲಿ ಕ್ಷಮಿಸಲಾಗುವುದಿಲ್ಲ” ಎಂದು ಹೇಳಿದೆ.

ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ, ವಿಶ್ವಸಂಸ್ಥೆಯೊಂದರಿಂದ ಈ ವಿಷಯದ ಬಗ್ಗೆ ಹೆಚ್ಚು ತಿಳುವಳಿಕೆಯುಳ್ಳ ಅಭಿಪ್ರಾಯವನ್ನು ನಿರೀಕ್ಷಿಸಲಾಗಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೀಲಾರ ಟೆಂಟ್ ಹೌಸ್-4: ಮನುಷ್ಯನ ಆಳದ ಮಾನವೀಯ ತಂತುಗಳನ್ನು ಶೋಧಿಸುವ ಕೀಸ್ಲೋಸ್ಕಿ ಸಿನಿಮಾಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...