Homeಕರ್ನಾಟಕ‘ಸರ್ವಾಧಿಕಾರಿ ಧೋರಣೆ ಪ್ರಾರಂಭವಾಗಿದೆ’- ಕೇಂದ್ರದ ವಿರುದ್ದವೆ ಹರಿಹಾಯ್ದ ಸಚಿವ ಮಾಧುಸ್ವಾಮಿ

‘ಸರ್ವಾಧಿಕಾರಿ ಧೋರಣೆ ಪ್ರಾರಂಭವಾಗಿದೆ’- ಕೇಂದ್ರದ ವಿರುದ್ದವೆ ಹರಿಹಾಯ್ದ ಸಚಿವ ಮಾಧುಸ್ವಾಮಿ

ನೀವಿದನ್ನು ಸಂಸತ್ತಿನಲ್ಲಿ ಕೇಳಬೇಕು ಎಂದು ಪಕ್ಕದಲ್ಲೇ ಕೂತಿದ್ದ ಸಂಸದ ತೇಜಸ್ವಿ ಸೂರ್ಯ ಅವರಿಗೆ ಎಚ್ಚರಿಸಿದ್ದಾರೆ.

- Advertisement -
- Advertisement -

‘ರಾಷ್ಟ್ರೀಯ ಐಕ್ಯತೆ ಮತ್ತು ಪ್ರಾದೇಶಿಕ ಸ್ವಾತಂತ್ಯ್ರ’ ಎಂಬ ವಿಷಯದ ಬಗ್ಗೆ ನಡೆದ ವಿಚಾರದ ಸಂಕಿರಣದಲ್ಲಿ ಮಾತನಾಡುತ್ತಾ ಸಚಿವ ಜೆ.ಸಿ. ಮಾಧುಸ್ವಾಮಿ ಅವರು, ‘ಕೇಂದ್ರದಲ್ಲಿ ಸರ್ವಾಧಿಕಾರಿ ಧೋರಣೆ ಪ್ರಾರಂಭವಾಗಿದೆ’ ಎಂದು ಕೇಂದ್ರದ ಬಿಜೆಪಿ ಸರ್ಕಾರ ವಿರುದ್ದ ಹರಿಹಾಯ್ದಿರುವ ಘಟನೆ ಮೈಸೂರಿನಲ್ಲಿ ಶನಿವಾರ ನಡೆದಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಕೇಂದ್ರ ಸರ್ಕಾರದ ಕೆಲವು ನೀತಿಗಳಿಂದಾಗಿ ಪ್ರಾದೇಶಿಕತೆಗೆ ಧಕ್ಕೆ ಬರುತ್ತಿದೆ. ರಾಜ್ಯ ಪಟ್ಟಿಯಲ್ಲಿರುವ ಇಲಾಖೆಗಳು ಕೇಂದ್ರದ ಕೈಸೇರುತ್ತಿದೆ. ವಿಕೇಂದ್ರೀಕರಣ ಆಗುವ ಬದಲು ಕೇಂದ್ರೀಕರಣ ಆಗುತ್ತಿದೆ” ಎಂದು ಮಾಧುಸ್ವಾಮಿ ಕೇಂದ್ರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಖಾತೆ ಬದಲಾವಣೆ: ಯಡಿಯೂರಪ್ಪಗೆ ಸೆಡ್ಡು ಹೊಡೆದು ಶೆಟ್ಟರ್ ಪಾಳಯಕ್ಕೆ ಜಿಗಿದರೆ ಮಾಧುಸ್ವಾಮಿ?

“ಕೇಂದ್ರ ಸರ್ಕಾರದಲ್ಲಿ ಸರ್ವಾಧಿಕಾರಿ ಧೋರಣೆ ಪ್ರಾರಂಭವಾಗಿದ್ದು, ಒಕ್ಕೂಟಕ್ಕೆ ಬಹಳ ದೊಡ್ಡ ಆತಂಕ ಎದುರಾಗಿದೆ. ಬೆಳೆದಂತೆ ಉದಾರವಾದಿಗಳಾಗಬೇಕಾಗಿದ್ದ ನಾವು ಪ್ರಸ್ತುತ ಕೇಂದ್ರೀಕರಣ ಆಗುತ್ತಿದ್ದೇವೆ. ನೀಟ್ ಪರೀಕ್ಷಗೂ, ಕರ್ನಾಟಕಕ್ಕೂ ಏನ್‌ ಸಂಬಂಧವಿದೆ?” ಎಂದು ಹೇಳಿದ ಅವರು, ಪಕ್ಕದಲ್ಲೇ ಕೂತಿದ್ದ ಸಂಸದ ತೇಜಸ್ವಿ ಸೂರ್ಯ ಅವರಿಗೆ ನೀವಿದನ್ನು ಸಂಸತ್ತಿನಲ್ಲಿ ಕೇಳಬೇಕು ಎಂದು ಎಚ್ಚರಿಸಿದ್ದಾರೆ.

 

“ಕರ್ನಾಟಕದಲ್ಲಿ ಇರುವ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕನ್ನಡಿಗರಿಗೆ ಅವಕಾಶ ಇಲ್ಲ. ತುಮಕೂರಿನಲ್ಲಿ ಪ್ರಧಾನಿ ಉದ್ಘಾಟನೆ ಮಾಡಿದ ಫುಡ್ ಪಾರ್ಕ್, ಬೆಂಗಳೂರಿನಲ್ಲಿರುವ ಕಂಪನಿಗಳು.. ಹೀಗೆ ಎಲ್ಲಿಯೂ ಕನ್ನಡಿಗರಿಗೆ ಆದ್ಯತೆ ಇಲ್ಲ. ಜಾಗ, ಸೌಲಭ್ಯ ಎಲ್ಲವೂ ನಮ್ಮದಾದರೂ ಉದ್ಯೋಗ ಮಾತ್ರ ಬೇರೆಯವರಿಗೆ ಸೇರಿದೆ” ಎಂದು ಅವರು ಹೇಳಿದ್ದಾಗಿ ಆಂದೋಲನ ಪತ್ರಿಕೆ ವರದಿ ಮಾಡಿದೆ.

“ಈ ಅನ್ಯಾಯದ ವಿರುದ್ಧ ತಮಿಳುನಾಡಿನಂತಹ ರಾಜ್ಯಗಳು ಹೋರಾಟ ಮಾಡಿ ತಮ್ಮ ರಾಜ್ಯದವರಿಗೆ ಅನುಕೂಲವಾಗುವಂತೆ ಮಾಡಿವೆ. ಆದರೆ ಕರ್ನಾಟಕದ ಜನರು ಹೋರಾಟ ಮಾಡುವುದಿಲ್ಲ, ಯಾಕೆಂದರೆ ನಾವು ರಾಷ್ಟ್ರೀಯವಾದಿಗಳು” ಎಂದು ಮಾಧುಸ್ವಾಮಿ ವ್ಯಂಗ್ಯವಾಡಿದ್ದಾಗಿ ಪತ್ರಿಕೆ ವರದಿ ಮಾಡಿದೆ.

ಇದನ್ನೂ ಓದಿ: ಯಾವನಾದ್ರು *** ಮಗ ನನ್ನ ಕೇಳಿದ್ದೀರಾ: ರೈತರ ವಿರುದ್ಧ ನಾಲಿಗೆ ಹರಿಯಬಿಟ್ಟ ಮಾಧುಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...