Homeಮುಖಪುಟಕೊರೊನಾ ಕಾಲದಲ್ಲಿ ಪತ್ರಕರ್ತರ ವಜಾ ಕಾನೂನುಬಾಹಿರ : ಪಿಐಎಲ್‌ ವಿಚಾರಣೆ

ಕೊರೊನಾ ಕಾಲದಲ್ಲಿ ಪತ್ರಕರ್ತರ ವಜಾ ಕಾನೂನುಬಾಹಿರ : ಪಿಐಎಲ್‌ ವಿಚಾರಣೆ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ದೇಶಾದ ಪ್ರಮುಖ ಮಾಧ್ಯಮಗಳು ತಮ್ಮ ಪತ್ರಕರ್ತರ ನ್ನು ವಜಾಗೊಳಿಸಿರುವುದು ಅಥವಾ ಸಂಬಳ ಕಡಿತಗೊಳಿಸಿರುವುದರ ಕುರಿತು ಸಲ್ಲಿಸಲಾದ ಪಿಐಎಲ್‌ ಗೆ ಉತ್ತರಿಸುವಂತೆ ಬಾಂಬೆ ಹೈಕೋರ್ಟ್ ನಿನ್ನೆ ಕೇಂದ್ರ ಸರ್ಕಾರ, ಮಹಾರಾಷ್ಟ್ರ ರಾಜ್ಯ ಸರ್ಕಾರ ಸೇರಿದಂತೆ ಹತ್ತು ಮಾಧ್ಯಮಗಳಿಗೆ ನೋಟಿಸ್ ನೀಡಿದೆ.

ಮಹಾರಾಷ್ಟ್ರ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್‌  ಮತ್ತು ನಾಗ್ಪುರ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ ಪತ್ರಕರ್ತರ ಸಂಘಗಳು ಮಾಧ್ಯಮ ಸಂಸ್ಥೆಗಳು ಕೆಲಸದಿಂದ ತೆಗೆದಿರುವುದನ್ನು ವಿರೋಧಿಸಿ ಪಿಐಎಲ್ ಸಲ್ಲಿಸಿವೆ. ವೇತನ ಕಡಿತ ಮತ್ತು ಪತ್ರಕರ್ತರ ವಜಾಗಳನ್ನು “ಕಾನೂನುಬಾಹಿರ ಮತ್ತು ಅನಿಯಂತ್ರಿತ” ಪಿಐಎಲ್‌ನಲ್ಲಿ ವಾದಿಸಲಾಗಿದೆ.

ಬಾಂಬೆ ಹೈಕೋರ್ಟ್‌‌ನ ನ್ಯಾಯಮೂರ್ತಿಗಳಾದ ಎಸ್.ಬಿ. ಶುಕ್ರೆ ಮತ್ತು ಎ.ಎಸ್. ಕಿಲೋರ್ ನೇತೃತ್ವದ ನ್ಯಾಯಪೀಠವು ಈ ಅರ್ಜಿಯ ವಿಚಾರಣೆ ನಡೆಸುತ್ತಿದ್ದು ಈ ಕುರಿತು ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಇಂಡಿಯನ್ ನ್ಯೂಸ್ ಪೇಪರ್ ಸೊಸೈಟಿ, ವಿದರ್ಭ ಡೈಲಿ ಪತ್ರಿಕೆಗಳು, ಲೋಕಮತ್ ಮೀಡಿಯಾ, ಟೈಮ್ಸ್ ಆಫ್ ಇಂಡಿಯಾ / ಮಹಾರಾಷ್ಟ್ರ ಟೈಮ್ಸ್, ದೈನಿಕ್ ಭಾಸ್ಕರ್, ಸಕಲ್ ಮೀಡಿಯಾ, ಇಂಡಿಯನ್ ಎಕ್ಸ್ ಪ್ರೆಸ್ / ಲೋಕ ಸತ್ತಾ, ತರುಣ್ ಭಾರತ್, ನವ ಭಾರತ್ ಮೀಡಿಯಾ ಗ್ರೂಪ್, ದೇಶೋನ್ನತಿ ಗ್ರೂಪ್ ಮತ್ತು ಪುಣ್ಯ ನಗರಿ ಗ್ರೂಪ್ ಸೇರಿದಂತೆ ಕೇಂದ್ರ ಮತ್ತು ಮಹಾರಾಷ್ಟ್ರ ಸರ್ಕಾರಕ್ಕೆ ನೋಟಿಸ್‌ ನೀಡಿದೆ.


ಇದನ್ನೂ ಓದಿ: ನಷ್ಟದ ಜೊತೆಗೆ ಲಾಕ್‌ಡೌನ್‌ ಎಫೆಕ್ಟ್‌: TV5 ನಿಂದ 100ಕ್ಕೂ ಹೆಚ್ಚು ಪತ್ರಕರ್ತರು ಹೊರಕ್ಕೆ


COVID-19 ಕಾರಣದಿಂದಾಗಿ ವಿಧಿಸಲಾದ ಲಾಕ್‌ಡೌನ್ ಸಮಯದಲ್ಲಿಯೂ ಸಹ ಮಾಧ್ಯಮ ಸಂಸ್ಥೆಗಳ ನೌಕರರು ಕೆಲಸ ಮಾಡುತ್ತಿದ್ದಾರೆ. ಆದರೆ ಅವರ ಸೇವೆಗಳನ್ನು ಕೊನೆಗೊಳಿಸುವ ಮೂಲಕ ಅಥವಾ ತಮ್ಮ ಒಪ್ಪಂದಗಳನ್ನು ನವೀಕರಿಸಲು ನಿರಾಕರಿಸುವ ಮೂಲಕ, ಮಾಧ್ಯಮ ಸಂಸ್ಥೆಗಳು ಅಮಾನವೀಯ ಮತ್ತು ಕಾನೂನುಬಾಹಿರ ಅಭ್ಯಾಸಗಳಲ್ಲಿ ತೊಡಗುತ್ತಿವೆ ಎಂದು ಪಿಐಎಲ್‌ನಲ್ಲಿ ಉಲ್ಲೇಖಿಸಲಾಗಿದೆ. ಹಲವಾರು ಪತ್ರಿಕೆ ಸಂಸ್ಥೆಗಳು ತಮ್ಮ ಉದ್ಯೋಗಿಗಳ ಸೇವೆಗಳನ್ನು ಕೊನೆಗೊಳಿಸುತ್ತಿವೆ ಅಥವಾ “ಅನಿಯಂತ್ರಿತ ರೀತಿಯಲ್ಲಿ” ರಾಜೀನಾಮೆ ನೀಡುವಂತೆ ಒತ್ತಾಯಿಸುತ್ತಿವೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ತಮ್ಮ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಬೇಡಿ ಅಥವಾ ವೇತನ ಕಡಿತಗೊಳಿಸಬಾರದು ಎಂದು ದೇಶದ ಎಲ್ಲಾ ಕಂಪೆನಿಗಳಿಗೆ ಪ್ರಧಾನಿ ಮೋದಿಯವರು ಮನವಿ ಮಾಡಿದ್ದಾರೆ. ಆದರೆ ಅದನ್ನು ಮಾಧ್ಯಮ ಸಂಸ್ಥೆಗಳು ಗಣನೆಗೆ ತೆಗೆದುಕೊಂಡಿಲ್ಲ. ಮಾರ್ಚ್ 20 ರಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಇದೇ ರೀತಿಯ ಸಲಹೆಯನ್ನು ನೀಡಿತು. ಪತ್ರಿಕೆಗಳು ಮತ್ತು ಇತರ ಮಾಧ್ಯಮ ಸಂಸ್ಥೆಗಳ ಮಾಲೀಕರ ಇಂತಹ ಕ್ರಮಗಳು “ಅಮಾನವೀಯ ಮತ್ತು ಕಾನೂನುಬಾಹಿರ”ವಾಗಿವೆ. ಭಾರತದ ಸಂವಿಧಾನದ 14, 19 ಮತ್ತು 21 ನೇ ವಿಧಿ ನಾಗರಿಕರಿಗೆ ಖಾತರಿಪಡಿಸಿದ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಪಿಐಎಲ್ ಉಲ್ಲೇಖಿಸಿದೆ.

“ಕೊರೊನಾವೈರಸ್ ಸಾಂಕ್ರಾಮಿಕ ಬಿಕ್ಕಟ್ಟನ್ನು” ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳಲು ಪ್ರಯತ್ನಿಸುತ್ತಾ ಹಲವು ಮಾಧ್ಯಮ ಸಂಸ್ಥೆಗಳು ತಮ್ಮ ಒಪ್ಪಂದವನ್ನು ಮೀರಿ ವರ್ತಿಸುತ್ತಿವೆ. ಬಲವಂತವಾಗಿ ಕೆಲಸದಿಂದ ತೆಗೆಯಲಾಗುತ್ತಿದೆ. ಅನಿಯಂತ್ರಿತ ವೇತನ ಕಡಿತ ಮಾಡಲಾಗುತ್ತಿದೆ. ಇದನ್ನು ತಡೆಯಬೇಕೆಂದು ಪಿಐಎಲ್‌ ಕೋರಿದೆ.

ಪತ್ರಕರ್ತರಿಗೆ ಸಂಭಾವನೆ ನೀಡುವ ಬಗ್ಗೆ ಮಜಿತಿಯಾ ವೇತನ ಮಂಡಳಿಯ ಶಿಫಾರಸುಗಳನ್ನು ಕೇಂದ್ರವು 2011 ರಲ್ಲಿ ಅಂಗೀಕರಿಸಿದೆ ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ. ಆದರೆ ಪ್ರಸ್ತುತ ಮಾಧ್ಯಮ ಸಂಸ್ಥೆಗಳು ವರ್ಕಿಂಗ್ ಜರ್ನಲಿಸ್ಟ್ಸ್ ಆಕ್ಟ್ 1955 ಒದಗಿಸಿದ ಚೌಕಟ್ಟಿನ ಶಿಫಾರಸುಗಳನ್ನು ಉಲ್ಲಂಘಿಸಿವೆ ಎಂದು ಪಿಐಎಲ್‌ನಲ್ಲಿ ವಾದಿಸಲಾಗಿದೆ.


ಇದನ್ನೂ ಓದಿ: “ವಿಶ್ವಾಸಾರ್ಹ” ಪತ್ರಿಕೆಯೊಳಗೆ ನಡೆಯುತ್ತಿರೋದು ಕಾಸ್ಟ್ ಕಟಿಂಗೊ? ಕ್ಯಾಸ್ಟ್ ಕಟಿಂಗೊ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...