Homeಮುಖಪುಟಕೊರೊನಾ ಕಾಲದಲ್ಲಿ ಪತ್ರಕರ್ತರ ವಜಾ ಕಾನೂನುಬಾಹಿರ : ಪಿಐಎಲ್‌ ವಿಚಾರಣೆ

ಕೊರೊನಾ ಕಾಲದಲ್ಲಿ ಪತ್ರಕರ್ತರ ವಜಾ ಕಾನೂನುಬಾಹಿರ : ಪಿಐಎಲ್‌ ವಿಚಾರಣೆ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ದೇಶಾದ ಪ್ರಮುಖ ಮಾಧ್ಯಮಗಳು ತಮ್ಮ ಪತ್ರಕರ್ತರ ನ್ನು ವಜಾಗೊಳಿಸಿರುವುದು ಅಥವಾ ಸಂಬಳ ಕಡಿತಗೊಳಿಸಿರುವುದರ ಕುರಿತು ಸಲ್ಲಿಸಲಾದ ಪಿಐಎಲ್‌ ಗೆ ಉತ್ತರಿಸುವಂತೆ ಬಾಂಬೆ ಹೈಕೋರ್ಟ್ ನಿನ್ನೆ ಕೇಂದ್ರ ಸರ್ಕಾರ, ಮಹಾರಾಷ್ಟ್ರ ರಾಜ್ಯ ಸರ್ಕಾರ ಸೇರಿದಂತೆ ಹತ್ತು ಮಾಧ್ಯಮಗಳಿಗೆ ನೋಟಿಸ್ ನೀಡಿದೆ.

ಮಹಾರಾಷ್ಟ್ರ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್‌  ಮತ್ತು ನಾಗ್ಪುರ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ ಪತ್ರಕರ್ತರ ಸಂಘಗಳು ಮಾಧ್ಯಮ ಸಂಸ್ಥೆಗಳು ಕೆಲಸದಿಂದ ತೆಗೆದಿರುವುದನ್ನು ವಿರೋಧಿಸಿ ಪಿಐಎಲ್ ಸಲ್ಲಿಸಿವೆ. ವೇತನ ಕಡಿತ ಮತ್ತು ಪತ್ರಕರ್ತರ ವಜಾಗಳನ್ನು “ಕಾನೂನುಬಾಹಿರ ಮತ್ತು ಅನಿಯಂತ್ರಿತ” ಪಿಐಎಲ್‌ನಲ್ಲಿ ವಾದಿಸಲಾಗಿದೆ.

ಬಾಂಬೆ ಹೈಕೋರ್ಟ್‌‌ನ ನ್ಯಾಯಮೂರ್ತಿಗಳಾದ ಎಸ್.ಬಿ. ಶುಕ್ರೆ ಮತ್ತು ಎ.ಎಸ್. ಕಿಲೋರ್ ನೇತೃತ್ವದ ನ್ಯಾಯಪೀಠವು ಈ ಅರ್ಜಿಯ ವಿಚಾರಣೆ ನಡೆಸುತ್ತಿದ್ದು ಈ ಕುರಿತು ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಇಂಡಿಯನ್ ನ್ಯೂಸ್ ಪೇಪರ್ ಸೊಸೈಟಿ, ವಿದರ್ಭ ಡೈಲಿ ಪತ್ರಿಕೆಗಳು, ಲೋಕಮತ್ ಮೀಡಿಯಾ, ಟೈಮ್ಸ್ ಆಫ್ ಇಂಡಿಯಾ / ಮಹಾರಾಷ್ಟ್ರ ಟೈಮ್ಸ್, ದೈನಿಕ್ ಭಾಸ್ಕರ್, ಸಕಲ್ ಮೀಡಿಯಾ, ಇಂಡಿಯನ್ ಎಕ್ಸ್ ಪ್ರೆಸ್ / ಲೋಕ ಸತ್ತಾ, ತರುಣ್ ಭಾರತ್, ನವ ಭಾರತ್ ಮೀಡಿಯಾ ಗ್ರೂಪ್, ದೇಶೋನ್ನತಿ ಗ್ರೂಪ್ ಮತ್ತು ಪುಣ್ಯ ನಗರಿ ಗ್ರೂಪ್ ಸೇರಿದಂತೆ ಕೇಂದ್ರ ಮತ್ತು ಮಹಾರಾಷ್ಟ್ರ ಸರ್ಕಾರಕ್ಕೆ ನೋಟಿಸ್‌ ನೀಡಿದೆ.


ಇದನ್ನೂ ಓದಿ: ನಷ್ಟದ ಜೊತೆಗೆ ಲಾಕ್‌ಡೌನ್‌ ಎಫೆಕ್ಟ್‌: TV5 ನಿಂದ 100ಕ್ಕೂ ಹೆಚ್ಚು ಪತ್ರಕರ್ತರು ಹೊರಕ್ಕೆ


COVID-19 ಕಾರಣದಿಂದಾಗಿ ವಿಧಿಸಲಾದ ಲಾಕ್‌ಡೌನ್ ಸಮಯದಲ್ಲಿಯೂ ಸಹ ಮಾಧ್ಯಮ ಸಂಸ್ಥೆಗಳ ನೌಕರರು ಕೆಲಸ ಮಾಡುತ್ತಿದ್ದಾರೆ. ಆದರೆ ಅವರ ಸೇವೆಗಳನ್ನು ಕೊನೆಗೊಳಿಸುವ ಮೂಲಕ ಅಥವಾ ತಮ್ಮ ಒಪ್ಪಂದಗಳನ್ನು ನವೀಕರಿಸಲು ನಿರಾಕರಿಸುವ ಮೂಲಕ, ಮಾಧ್ಯಮ ಸಂಸ್ಥೆಗಳು ಅಮಾನವೀಯ ಮತ್ತು ಕಾನೂನುಬಾಹಿರ ಅಭ್ಯಾಸಗಳಲ್ಲಿ ತೊಡಗುತ್ತಿವೆ ಎಂದು ಪಿಐಎಲ್‌ನಲ್ಲಿ ಉಲ್ಲೇಖಿಸಲಾಗಿದೆ. ಹಲವಾರು ಪತ್ರಿಕೆ ಸಂಸ್ಥೆಗಳು ತಮ್ಮ ಉದ್ಯೋಗಿಗಳ ಸೇವೆಗಳನ್ನು ಕೊನೆಗೊಳಿಸುತ್ತಿವೆ ಅಥವಾ “ಅನಿಯಂತ್ರಿತ ರೀತಿಯಲ್ಲಿ” ರಾಜೀನಾಮೆ ನೀಡುವಂತೆ ಒತ್ತಾಯಿಸುತ್ತಿವೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ತಮ್ಮ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಬೇಡಿ ಅಥವಾ ವೇತನ ಕಡಿತಗೊಳಿಸಬಾರದು ಎಂದು ದೇಶದ ಎಲ್ಲಾ ಕಂಪೆನಿಗಳಿಗೆ ಪ್ರಧಾನಿ ಮೋದಿಯವರು ಮನವಿ ಮಾಡಿದ್ದಾರೆ. ಆದರೆ ಅದನ್ನು ಮಾಧ್ಯಮ ಸಂಸ್ಥೆಗಳು ಗಣನೆಗೆ ತೆಗೆದುಕೊಂಡಿಲ್ಲ. ಮಾರ್ಚ್ 20 ರಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಇದೇ ರೀತಿಯ ಸಲಹೆಯನ್ನು ನೀಡಿತು. ಪತ್ರಿಕೆಗಳು ಮತ್ತು ಇತರ ಮಾಧ್ಯಮ ಸಂಸ್ಥೆಗಳ ಮಾಲೀಕರ ಇಂತಹ ಕ್ರಮಗಳು “ಅಮಾನವೀಯ ಮತ್ತು ಕಾನೂನುಬಾಹಿರ”ವಾಗಿವೆ. ಭಾರತದ ಸಂವಿಧಾನದ 14, 19 ಮತ್ತು 21 ನೇ ವಿಧಿ ನಾಗರಿಕರಿಗೆ ಖಾತರಿಪಡಿಸಿದ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಪಿಐಎಲ್ ಉಲ್ಲೇಖಿಸಿದೆ.

“ಕೊರೊನಾವೈರಸ್ ಸಾಂಕ್ರಾಮಿಕ ಬಿಕ್ಕಟ್ಟನ್ನು” ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳಲು ಪ್ರಯತ್ನಿಸುತ್ತಾ ಹಲವು ಮಾಧ್ಯಮ ಸಂಸ್ಥೆಗಳು ತಮ್ಮ ಒಪ್ಪಂದವನ್ನು ಮೀರಿ ವರ್ತಿಸುತ್ತಿವೆ. ಬಲವಂತವಾಗಿ ಕೆಲಸದಿಂದ ತೆಗೆಯಲಾಗುತ್ತಿದೆ. ಅನಿಯಂತ್ರಿತ ವೇತನ ಕಡಿತ ಮಾಡಲಾಗುತ್ತಿದೆ. ಇದನ್ನು ತಡೆಯಬೇಕೆಂದು ಪಿಐಎಲ್‌ ಕೋರಿದೆ.

ಪತ್ರಕರ್ತರಿಗೆ ಸಂಭಾವನೆ ನೀಡುವ ಬಗ್ಗೆ ಮಜಿತಿಯಾ ವೇತನ ಮಂಡಳಿಯ ಶಿಫಾರಸುಗಳನ್ನು ಕೇಂದ್ರವು 2011 ರಲ್ಲಿ ಅಂಗೀಕರಿಸಿದೆ ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ. ಆದರೆ ಪ್ರಸ್ತುತ ಮಾಧ್ಯಮ ಸಂಸ್ಥೆಗಳು ವರ್ಕಿಂಗ್ ಜರ್ನಲಿಸ್ಟ್ಸ್ ಆಕ್ಟ್ 1955 ಒದಗಿಸಿದ ಚೌಕಟ್ಟಿನ ಶಿಫಾರಸುಗಳನ್ನು ಉಲ್ಲಂಘಿಸಿವೆ ಎಂದು ಪಿಐಎಲ್‌ನಲ್ಲಿ ವಾದಿಸಲಾಗಿದೆ.


ಇದನ್ನೂ ಓದಿ: “ವಿಶ್ವಾಸಾರ್ಹ” ಪತ್ರಿಕೆಯೊಳಗೆ ನಡೆಯುತ್ತಿರೋದು ಕಾಸ್ಟ್ ಕಟಿಂಗೊ? ಕ್ಯಾಸ್ಟ್ ಕಟಿಂಗೊ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...