Homeಮುಖಪುಟಕೊರೊನಾ ಕಾಲದಲ್ಲಿ ಪತ್ರಕರ್ತರ ವಜಾ ಕಾನೂನುಬಾಹಿರ : ಪಿಐಎಲ್‌ ವಿಚಾರಣೆ

ಕೊರೊನಾ ಕಾಲದಲ್ಲಿ ಪತ್ರಕರ್ತರ ವಜಾ ಕಾನೂನುಬಾಹಿರ : ಪಿಐಎಲ್‌ ವಿಚಾರಣೆ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ದೇಶಾದ ಪ್ರಮುಖ ಮಾಧ್ಯಮಗಳು ತಮ್ಮ ಪತ್ರಕರ್ತರ ನ್ನು ವಜಾಗೊಳಿಸಿರುವುದು ಅಥವಾ ಸಂಬಳ ಕಡಿತಗೊಳಿಸಿರುವುದರ ಕುರಿತು ಸಲ್ಲಿಸಲಾದ ಪಿಐಎಲ್‌ ಗೆ ಉತ್ತರಿಸುವಂತೆ ಬಾಂಬೆ ಹೈಕೋರ್ಟ್ ನಿನ್ನೆ ಕೇಂದ್ರ ಸರ್ಕಾರ, ಮಹಾರಾಷ್ಟ್ರ ರಾಜ್ಯ ಸರ್ಕಾರ ಸೇರಿದಂತೆ ಹತ್ತು ಮಾಧ್ಯಮಗಳಿಗೆ ನೋಟಿಸ್ ನೀಡಿದೆ.

ಮಹಾರಾಷ್ಟ್ರ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್‌  ಮತ್ತು ನಾಗ್ಪುರ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ ಪತ್ರಕರ್ತರ ಸಂಘಗಳು ಮಾಧ್ಯಮ ಸಂಸ್ಥೆಗಳು ಕೆಲಸದಿಂದ ತೆಗೆದಿರುವುದನ್ನು ವಿರೋಧಿಸಿ ಪಿಐಎಲ್ ಸಲ್ಲಿಸಿವೆ. ವೇತನ ಕಡಿತ ಮತ್ತು ಪತ್ರಕರ್ತರ ವಜಾಗಳನ್ನು “ಕಾನೂನುಬಾಹಿರ ಮತ್ತು ಅನಿಯಂತ್ರಿತ” ಪಿಐಎಲ್‌ನಲ್ಲಿ ವಾದಿಸಲಾಗಿದೆ.

ಬಾಂಬೆ ಹೈಕೋರ್ಟ್‌‌ನ ನ್ಯಾಯಮೂರ್ತಿಗಳಾದ ಎಸ್.ಬಿ. ಶುಕ್ರೆ ಮತ್ತು ಎ.ಎಸ್. ಕಿಲೋರ್ ನೇತೃತ್ವದ ನ್ಯಾಯಪೀಠವು ಈ ಅರ್ಜಿಯ ವಿಚಾರಣೆ ನಡೆಸುತ್ತಿದ್ದು ಈ ಕುರಿತು ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಇಂಡಿಯನ್ ನ್ಯೂಸ್ ಪೇಪರ್ ಸೊಸೈಟಿ, ವಿದರ್ಭ ಡೈಲಿ ಪತ್ರಿಕೆಗಳು, ಲೋಕಮತ್ ಮೀಡಿಯಾ, ಟೈಮ್ಸ್ ಆಫ್ ಇಂಡಿಯಾ / ಮಹಾರಾಷ್ಟ್ರ ಟೈಮ್ಸ್, ದೈನಿಕ್ ಭಾಸ್ಕರ್, ಸಕಲ್ ಮೀಡಿಯಾ, ಇಂಡಿಯನ್ ಎಕ್ಸ್ ಪ್ರೆಸ್ / ಲೋಕ ಸತ್ತಾ, ತರುಣ್ ಭಾರತ್, ನವ ಭಾರತ್ ಮೀಡಿಯಾ ಗ್ರೂಪ್, ದೇಶೋನ್ನತಿ ಗ್ರೂಪ್ ಮತ್ತು ಪುಣ್ಯ ನಗರಿ ಗ್ರೂಪ್ ಸೇರಿದಂತೆ ಕೇಂದ್ರ ಮತ್ತು ಮಹಾರಾಷ್ಟ್ರ ಸರ್ಕಾರಕ್ಕೆ ನೋಟಿಸ್‌ ನೀಡಿದೆ.


ಇದನ್ನೂ ಓದಿ: ನಷ್ಟದ ಜೊತೆಗೆ ಲಾಕ್‌ಡೌನ್‌ ಎಫೆಕ್ಟ್‌: TV5 ನಿಂದ 100ಕ್ಕೂ ಹೆಚ್ಚು ಪತ್ರಕರ್ತರು ಹೊರಕ್ಕೆ


COVID-19 ಕಾರಣದಿಂದಾಗಿ ವಿಧಿಸಲಾದ ಲಾಕ್‌ಡೌನ್ ಸಮಯದಲ್ಲಿಯೂ ಸಹ ಮಾಧ್ಯಮ ಸಂಸ್ಥೆಗಳ ನೌಕರರು ಕೆಲಸ ಮಾಡುತ್ತಿದ್ದಾರೆ. ಆದರೆ ಅವರ ಸೇವೆಗಳನ್ನು ಕೊನೆಗೊಳಿಸುವ ಮೂಲಕ ಅಥವಾ ತಮ್ಮ ಒಪ್ಪಂದಗಳನ್ನು ನವೀಕರಿಸಲು ನಿರಾಕರಿಸುವ ಮೂಲಕ, ಮಾಧ್ಯಮ ಸಂಸ್ಥೆಗಳು ಅಮಾನವೀಯ ಮತ್ತು ಕಾನೂನುಬಾಹಿರ ಅಭ್ಯಾಸಗಳಲ್ಲಿ ತೊಡಗುತ್ತಿವೆ ಎಂದು ಪಿಐಎಲ್‌ನಲ್ಲಿ ಉಲ್ಲೇಖಿಸಲಾಗಿದೆ. ಹಲವಾರು ಪತ್ರಿಕೆ ಸಂಸ್ಥೆಗಳು ತಮ್ಮ ಉದ್ಯೋಗಿಗಳ ಸೇವೆಗಳನ್ನು ಕೊನೆಗೊಳಿಸುತ್ತಿವೆ ಅಥವಾ “ಅನಿಯಂತ್ರಿತ ರೀತಿಯಲ್ಲಿ” ರಾಜೀನಾಮೆ ನೀಡುವಂತೆ ಒತ್ತಾಯಿಸುತ್ತಿವೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ತಮ್ಮ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಬೇಡಿ ಅಥವಾ ವೇತನ ಕಡಿತಗೊಳಿಸಬಾರದು ಎಂದು ದೇಶದ ಎಲ್ಲಾ ಕಂಪೆನಿಗಳಿಗೆ ಪ್ರಧಾನಿ ಮೋದಿಯವರು ಮನವಿ ಮಾಡಿದ್ದಾರೆ. ಆದರೆ ಅದನ್ನು ಮಾಧ್ಯಮ ಸಂಸ್ಥೆಗಳು ಗಣನೆಗೆ ತೆಗೆದುಕೊಂಡಿಲ್ಲ. ಮಾರ್ಚ್ 20 ರಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಇದೇ ರೀತಿಯ ಸಲಹೆಯನ್ನು ನೀಡಿತು. ಪತ್ರಿಕೆಗಳು ಮತ್ತು ಇತರ ಮಾಧ್ಯಮ ಸಂಸ್ಥೆಗಳ ಮಾಲೀಕರ ಇಂತಹ ಕ್ರಮಗಳು “ಅಮಾನವೀಯ ಮತ್ತು ಕಾನೂನುಬಾಹಿರ”ವಾಗಿವೆ. ಭಾರತದ ಸಂವಿಧಾನದ 14, 19 ಮತ್ತು 21 ನೇ ವಿಧಿ ನಾಗರಿಕರಿಗೆ ಖಾತರಿಪಡಿಸಿದ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಪಿಐಎಲ್ ಉಲ್ಲೇಖಿಸಿದೆ.

“ಕೊರೊನಾವೈರಸ್ ಸಾಂಕ್ರಾಮಿಕ ಬಿಕ್ಕಟ್ಟನ್ನು” ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳಲು ಪ್ರಯತ್ನಿಸುತ್ತಾ ಹಲವು ಮಾಧ್ಯಮ ಸಂಸ್ಥೆಗಳು ತಮ್ಮ ಒಪ್ಪಂದವನ್ನು ಮೀರಿ ವರ್ತಿಸುತ್ತಿವೆ. ಬಲವಂತವಾಗಿ ಕೆಲಸದಿಂದ ತೆಗೆಯಲಾಗುತ್ತಿದೆ. ಅನಿಯಂತ್ರಿತ ವೇತನ ಕಡಿತ ಮಾಡಲಾಗುತ್ತಿದೆ. ಇದನ್ನು ತಡೆಯಬೇಕೆಂದು ಪಿಐಎಲ್‌ ಕೋರಿದೆ.

ಪತ್ರಕರ್ತರಿಗೆ ಸಂಭಾವನೆ ನೀಡುವ ಬಗ್ಗೆ ಮಜಿತಿಯಾ ವೇತನ ಮಂಡಳಿಯ ಶಿಫಾರಸುಗಳನ್ನು ಕೇಂದ್ರವು 2011 ರಲ್ಲಿ ಅಂಗೀಕರಿಸಿದೆ ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ. ಆದರೆ ಪ್ರಸ್ತುತ ಮಾಧ್ಯಮ ಸಂಸ್ಥೆಗಳು ವರ್ಕಿಂಗ್ ಜರ್ನಲಿಸ್ಟ್ಸ್ ಆಕ್ಟ್ 1955 ಒದಗಿಸಿದ ಚೌಕಟ್ಟಿನ ಶಿಫಾರಸುಗಳನ್ನು ಉಲ್ಲಂಘಿಸಿವೆ ಎಂದು ಪಿಐಎಲ್‌ನಲ್ಲಿ ವಾದಿಸಲಾಗಿದೆ.


ಇದನ್ನೂ ಓದಿ: “ವಿಶ್ವಾಸಾರ್ಹ” ಪತ್ರಿಕೆಯೊಳಗೆ ನಡೆಯುತ್ತಿರೋದು ಕಾಸ್ಟ್ ಕಟಿಂಗೊ? ಕ್ಯಾಸ್ಟ್ ಕಟಿಂಗೊ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...