Homeಮುಖಪುಟಭಾರತ-ಅಮೆರಿಕಾದಲ್ಲಿದ್ದ ಸಹಿಷ್ಣುತೆಯ ವಂಶವಾಹಿ ಕಣ್ಮರೆಯಾಗಿದೆ: ರಾಹುಲ್ ಗಾಂಧಿ

ಭಾರತ-ಅಮೆರಿಕಾದಲ್ಲಿದ್ದ ಸಹಿಷ್ಣುತೆಯ ವಂಶವಾಹಿ ಕಣ್ಮರೆಯಾಗಿದೆ: ರಾಹುಲ್ ಗಾಂಧಿ

- Advertisement -
- Advertisement -

ಭಾರತ ಮತ್ತು ಅಮೆರಿಕಾದಲ್ಲಿದ್ದ ಸಹಿಷ್ಣುತೆಯ ವಂಶವಾಹಿ ಕಣ್ಮರೆಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಮೆರಿಕದ ಮಾಜಿ ರಾಜತಾಂತ್ರಿಕ ನಿಕೋಲಸ್ ಬರ್ನ್ಸ್ ಅವರೊಂದಿಗಿನ ಸಂಭಾಷಣೆಯಲ್ಲಿ ಹೇಳಿದ್ದಾರೆ.

ಚಿಂತಕರ ಜೊತೆಗಿನ ವಿಡಿಯೋ ಮಾತುಕತೆ ಸರಣಿಯ ಭಾಗವಾಗಿ ರಾಹುಲ್‌ ಗಾಂಧಿ ಅವರು ಕೊರೊನಾ ವೈರಸ್ ಬಿಕ್ಕಟ್ಟು ವಿಶ್ವವನ್ನು ಹೇಗೆ ಮರುರೂಪಿಸುತ್ತಿದೆ ಎಂಬುದರ ಕುರಿತು ನಿಕೋಲಸ್ ಬರ್ನ್ಸ್ ಅವರೊಂದಿಗೆ ಮಾತನಾಡುತ್ತಿದ್ದರು.

ಬಹಳ ವಿಶಾಲವಾಗಿದ್ದ ಭಾರತ-ಅಮೆರಿಕಾದ ಸಂಬಂಧವು ಈಗ ಮುಖ್ಯವಾಗಿ ರಕ್ಷಣೆಯ ವಿಷಯದ ಮೇಲಷ್ಟೇ ಕೇಂದ್ರೀಕರಿಸಿದೆ ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

“ಭಾರತ ಮತ್ತು ಅಮೆರಿಕಾದ ಪಾಲುದಾರಿಕೆ ಏಕೆ ಕೆಲಸ ಮಾಡುತ್ತದೆ ಎಂದರೆ ನಾವು ಸಹಿಷ್ಣುತೆ ವ್ಯವಸ್ಥೆಗಳನ್ನು ಹೊಂದಿದ್ದೆವು. ನೀವು ಪ್ರಸ್ತಾಪಿಸಿದಂತೆ ಅಮೆರಿಕಾ ವಲಸಿಗರ ರಾಷ್ಟ್ರ. ನಾವು ತುಂಬಾ ಸಹಿಷ್ಣು ರಾಷ್ಟ್ರವಾಗಿದ್ದೇವೆ. ಆದರೆ ಎರಡೂ ರಾಷ್ಟ್ರಗಳಲ್ಲಿನ ಬಲಪಂಥೀಯವಾದದಿಂದಾಗಿ ಪರಿಸ್ಥಿತಿ ದಿನೇ ದಿನೇ ಬದಲಾಗುತ್ತಿದೆ” ಎಂದು ಇಬ್ಬರೂ ವಿಷಾಧ ವ್ಯಕ್ತಪಡಿಸಿದ್ದಾರೆ.

ಧಾಮಿಕ ಸಹಿಷ್ಣುತೆ ಮತ್ತು ಜನಾಂಗೀಯ ಸಹೋದರತ್ವ ನಮ್ಮ ವಂಶವಾಹಿ ಆಗಿದ್ದವು. “ಆದರೆ ಆಶ್ಚರ್ಯಕರ ಸಂಗತಿಯೆಂದರೆ, ಈ ಸಹಿಷ್ಣುತೆಯ ವಂಶವಾಹಿಯೂ ಈಗ ಕಣ್ಮರೆಯಾಗಿದೆ. ಈಗ ನೋಡುವಾಗ ಭಾರತ ಹಾಗೂ ಅಮೆರಿಕಾದಲ್ಲಿ ಹಿಂದಿನ ಸಹಿಷ್ಣುತೆಯ ಮಟ್ಟ ನಾನು ಕಾಣುತ್ತಿಲ್ಲ” ಎಂದು ಅವರು ಅಮೆರಿಕದ ಮಾಜಿ ರಾಜತಾಂತ್ರಿಕರಿಗೆ ತಿಳಿಸಿದ್ದಾರೆ.

ಈ ಅಸಹಿಷ್ಣುತೆಯನ್ನು ಆಳುವ ಸರ್ಕಾರಗಳೇ ಪ್ರೋತ್ಸಾಹಿಸುತ್ತಿರುವುದು ದುರಂತವಾಗಿದೆ. ಸದ್ಯದ ಕೋವಿಡ್‌ ಬಿಕ್ಕಟ್ಟನ್ನು ಎರಡೂ ರಾಷ್ಟ್ರಗಳುಸೇರಿ ಒಟ್ಟಿಗೆ ಎದುರಿಸಲಿಲ್ಲ, ಬದಲಿಗೆ ಎರಡೂ ರಾಷ್ಟ್ರಗಳು ಅದನ್ನು ಎದುರಿಸುವಲ್ಲಿ ಸಂಪೂರ್ಣ ವಿಫಲವಾಗಿವೆ ಎಂಬು ಅಂಶಗಳು ಚರ್ಚೆಯಲ್ಲಿ ಕೇಳಿಬಂದಿವೆ.

ಕೊರೊನಾ ವೈರಸ್ ಬಿಕ್ಕಟ್ಟಿನ ನಂತರ ವಿಶ್ವವನ್ನು ಮರುರೂಪಿಸುವುದು, ಇಂಡೋ-ಅಮೆರಿಕಾ ಸಂಬಂಧಗಳ ಭವಿಷ್ಯ ಮತ್ತು ಅದನ್ನು ನಿರ್ಮಿಸುವಲ್ಲಿ ಅಮೆರಿಕಾದಲ್ಲಿ ಭಾರತೀಯ ವಲಸಿಗರು ವಹಿಸಿದ ಪ್ರಮುಖ ಪಾತ್ರದ ಮೇಲೆ ರಾಹುಲ್ ಗಾಂಧಿಯ ಸಂವಾದವಾಗಿದೆ ಎಂದು ಕಾಂಗ್ರೆಸ್ ಹೇಳಿದೆ.

ನಿಕೋಲಸ್ ಬರ್ನ್ಸ್ ಪ್ರಸ್ತುತ ಹಾರ್ವರ್ಡ್‌ನ ಜಾನ್ ಎಫ್ ಕೆನಡಿ ಸ್ಕೂಲ್ ಆಫ್ ಗವರ್ನಮೆಂಟ್‌ನಲ್ಲಿ ಪ್ರಾಕ್ಟೀಸ್ ಆಫ್ ಡಿಪ್ಲೊಮಸಿ ಮತ್ತು ಇಂಟರ್ನ್ಯಾಷನಲ್ ಪಾಲಿಟಿಕ್ಸ್ ಪ್ರಾಧ್ಯಾಪಕರಾಗಿದ್ದಾರೆ.

ಬರ್ನ್ಸ್ ಅಮೆರಿಕಾದ ರಾಜಕೀಯ ವ್ಯವಹಾರಗಳ ರಾಜ್ಯ ಕಾರ್ಯದರ್ಶಿ ಆಗಿದ್ದರು ಹಾಗೂ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಭಾರತ-ಅಮೆರಿಕಾ ಪರಮಾಣು ಒಪ್ಪಂದದ ಮುಖ್ಯ ಸಮಾಲೋಚಕರಾಗಿದ್ದರು.

ವೈರಸ್ ಬಿಕ್ಕಟ್ಟು ಪ್ರಾರಂಭವಾದಾಗಿನಿಂದ ರಾಹುಲ್ ಗಾಂಧಿ ಪ್ರಮುಖ ತಜ್ಞರೊಂದಿಗಿನ ಸರಣಿ ಸಂಭಾಷಣೆಯಲ್ಲಿ, ರಘುರಾಮ್ ರಾಜನ್, ಅಭಿಜಿತ್ ಬ್ಯಾನರ್ಜಿ, ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಜೋಹಾನ್ ಗೀಸೆಕೆ ಮತ್ತು ಕೈಗಾರಿಕೋದ್ಯಮಿ ರಾಜೀವ್ ಬಜಾಜ್ ಮುಂತಾದವರೊಂದಿಗೆ ಮಾತನಾಡಿದ್ದಾರೆ.


ಓದಿ: ಕೊರೊನಾ ವಿಷಯದಲ್ಲಿ ರಾಹುಲ್‌ ಮಾತು ಕೇಳಿದ್ದರೆ ಭಾರತ ಇಟಲಿಯಾಗುತ್ತಿತ್ತು: ಯೋಗಿ ಆದಿತ್ಯನಾಥ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...