Homeಮುಖಪುಟಭಾರತ-ಅಮೆರಿಕಾದಲ್ಲಿದ್ದ ಸಹಿಷ್ಣುತೆಯ ವಂಶವಾಹಿ ಕಣ್ಮರೆಯಾಗಿದೆ: ರಾಹುಲ್ ಗಾಂಧಿ

ಭಾರತ-ಅಮೆರಿಕಾದಲ್ಲಿದ್ದ ಸಹಿಷ್ಣುತೆಯ ವಂಶವಾಹಿ ಕಣ್ಮರೆಯಾಗಿದೆ: ರಾಹುಲ್ ಗಾಂಧಿ

- Advertisement -
- Advertisement -

ಭಾರತ ಮತ್ತು ಅಮೆರಿಕಾದಲ್ಲಿದ್ದ ಸಹಿಷ್ಣುತೆಯ ವಂಶವಾಹಿ ಕಣ್ಮರೆಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಮೆರಿಕದ ಮಾಜಿ ರಾಜತಾಂತ್ರಿಕ ನಿಕೋಲಸ್ ಬರ್ನ್ಸ್ ಅವರೊಂದಿಗಿನ ಸಂಭಾಷಣೆಯಲ್ಲಿ ಹೇಳಿದ್ದಾರೆ.

ಚಿಂತಕರ ಜೊತೆಗಿನ ವಿಡಿಯೋ ಮಾತುಕತೆ ಸರಣಿಯ ಭಾಗವಾಗಿ ರಾಹುಲ್‌ ಗಾಂಧಿ ಅವರು ಕೊರೊನಾ ವೈರಸ್ ಬಿಕ್ಕಟ್ಟು ವಿಶ್ವವನ್ನು ಹೇಗೆ ಮರುರೂಪಿಸುತ್ತಿದೆ ಎಂಬುದರ ಕುರಿತು ನಿಕೋಲಸ್ ಬರ್ನ್ಸ್ ಅವರೊಂದಿಗೆ ಮಾತನಾಡುತ್ತಿದ್ದರು.

ಬಹಳ ವಿಶಾಲವಾಗಿದ್ದ ಭಾರತ-ಅಮೆರಿಕಾದ ಸಂಬಂಧವು ಈಗ ಮುಖ್ಯವಾಗಿ ರಕ್ಷಣೆಯ ವಿಷಯದ ಮೇಲಷ್ಟೇ ಕೇಂದ್ರೀಕರಿಸಿದೆ ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

“ಭಾರತ ಮತ್ತು ಅಮೆರಿಕಾದ ಪಾಲುದಾರಿಕೆ ಏಕೆ ಕೆಲಸ ಮಾಡುತ್ತದೆ ಎಂದರೆ ನಾವು ಸಹಿಷ್ಣುತೆ ವ್ಯವಸ್ಥೆಗಳನ್ನು ಹೊಂದಿದ್ದೆವು. ನೀವು ಪ್ರಸ್ತಾಪಿಸಿದಂತೆ ಅಮೆರಿಕಾ ವಲಸಿಗರ ರಾಷ್ಟ್ರ. ನಾವು ತುಂಬಾ ಸಹಿಷ್ಣು ರಾಷ್ಟ್ರವಾಗಿದ್ದೇವೆ. ಆದರೆ ಎರಡೂ ರಾಷ್ಟ್ರಗಳಲ್ಲಿನ ಬಲಪಂಥೀಯವಾದದಿಂದಾಗಿ ಪರಿಸ್ಥಿತಿ ದಿನೇ ದಿನೇ ಬದಲಾಗುತ್ತಿದೆ” ಎಂದು ಇಬ್ಬರೂ ವಿಷಾಧ ವ್ಯಕ್ತಪಡಿಸಿದ್ದಾರೆ.

ಧಾಮಿಕ ಸಹಿಷ್ಣುತೆ ಮತ್ತು ಜನಾಂಗೀಯ ಸಹೋದರತ್ವ ನಮ್ಮ ವಂಶವಾಹಿ ಆಗಿದ್ದವು. “ಆದರೆ ಆಶ್ಚರ್ಯಕರ ಸಂಗತಿಯೆಂದರೆ, ಈ ಸಹಿಷ್ಣುತೆಯ ವಂಶವಾಹಿಯೂ ಈಗ ಕಣ್ಮರೆಯಾಗಿದೆ. ಈಗ ನೋಡುವಾಗ ಭಾರತ ಹಾಗೂ ಅಮೆರಿಕಾದಲ್ಲಿ ಹಿಂದಿನ ಸಹಿಷ್ಣುತೆಯ ಮಟ್ಟ ನಾನು ಕಾಣುತ್ತಿಲ್ಲ” ಎಂದು ಅವರು ಅಮೆರಿಕದ ಮಾಜಿ ರಾಜತಾಂತ್ರಿಕರಿಗೆ ತಿಳಿಸಿದ್ದಾರೆ.

ಈ ಅಸಹಿಷ್ಣುತೆಯನ್ನು ಆಳುವ ಸರ್ಕಾರಗಳೇ ಪ್ರೋತ್ಸಾಹಿಸುತ್ತಿರುವುದು ದುರಂತವಾಗಿದೆ. ಸದ್ಯದ ಕೋವಿಡ್‌ ಬಿಕ್ಕಟ್ಟನ್ನು ಎರಡೂ ರಾಷ್ಟ್ರಗಳುಸೇರಿ ಒಟ್ಟಿಗೆ ಎದುರಿಸಲಿಲ್ಲ, ಬದಲಿಗೆ ಎರಡೂ ರಾಷ್ಟ್ರಗಳು ಅದನ್ನು ಎದುರಿಸುವಲ್ಲಿ ಸಂಪೂರ್ಣ ವಿಫಲವಾಗಿವೆ ಎಂಬು ಅಂಶಗಳು ಚರ್ಚೆಯಲ್ಲಿ ಕೇಳಿಬಂದಿವೆ.

ಕೊರೊನಾ ವೈರಸ್ ಬಿಕ್ಕಟ್ಟಿನ ನಂತರ ವಿಶ್ವವನ್ನು ಮರುರೂಪಿಸುವುದು, ಇಂಡೋ-ಅಮೆರಿಕಾ ಸಂಬಂಧಗಳ ಭವಿಷ್ಯ ಮತ್ತು ಅದನ್ನು ನಿರ್ಮಿಸುವಲ್ಲಿ ಅಮೆರಿಕಾದಲ್ಲಿ ಭಾರತೀಯ ವಲಸಿಗರು ವಹಿಸಿದ ಪ್ರಮುಖ ಪಾತ್ರದ ಮೇಲೆ ರಾಹುಲ್ ಗಾಂಧಿಯ ಸಂವಾದವಾಗಿದೆ ಎಂದು ಕಾಂಗ್ರೆಸ್ ಹೇಳಿದೆ.

ನಿಕೋಲಸ್ ಬರ್ನ್ಸ್ ಪ್ರಸ್ತುತ ಹಾರ್ವರ್ಡ್‌ನ ಜಾನ್ ಎಫ್ ಕೆನಡಿ ಸ್ಕೂಲ್ ಆಫ್ ಗವರ್ನಮೆಂಟ್‌ನಲ್ಲಿ ಪ್ರಾಕ್ಟೀಸ್ ಆಫ್ ಡಿಪ್ಲೊಮಸಿ ಮತ್ತು ಇಂಟರ್ನ್ಯಾಷನಲ್ ಪಾಲಿಟಿಕ್ಸ್ ಪ್ರಾಧ್ಯಾಪಕರಾಗಿದ್ದಾರೆ.

ಬರ್ನ್ಸ್ ಅಮೆರಿಕಾದ ರಾಜಕೀಯ ವ್ಯವಹಾರಗಳ ರಾಜ್ಯ ಕಾರ್ಯದರ್ಶಿ ಆಗಿದ್ದರು ಹಾಗೂ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಭಾರತ-ಅಮೆರಿಕಾ ಪರಮಾಣು ಒಪ್ಪಂದದ ಮುಖ್ಯ ಸಮಾಲೋಚಕರಾಗಿದ್ದರು.

ವೈರಸ್ ಬಿಕ್ಕಟ್ಟು ಪ್ರಾರಂಭವಾದಾಗಿನಿಂದ ರಾಹುಲ್ ಗಾಂಧಿ ಪ್ರಮುಖ ತಜ್ಞರೊಂದಿಗಿನ ಸರಣಿ ಸಂಭಾಷಣೆಯಲ್ಲಿ, ರಘುರಾಮ್ ರಾಜನ್, ಅಭಿಜಿತ್ ಬ್ಯಾನರ್ಜಿ, ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಜೋಹಾನ್ ಗೀಸೆಕೆ ಮತ್ತು ಕೈಗಾರಿಕೋದ್ಯಮಿ ರಾಜೀವ್ ಬಜಾಜ್ ಮುಂತಾದವರೊಂದಿಗೆ ಮಾತನಾಡಿದ್ದಾರೆ.


ಓದಿ: ಕೊರೊನಾ ವಿಷಯದಲ್ಲಿ ರಾಹುಲ್‌ ಮಾತು ಕೇಳಿದ್ದರೆ ಭಾರತ ಇಟಲಿಯಾಗುತ್ತಿತ್ತು: ಯೋಗಿ ಆದಿತ್ಯನಾಥ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...