Homeಮುಖಪುಟಭಾರತ-ಅಮೆರಿಕಾದಲ್ಲಿದ್ದ ಸಹಿಷ್ಣುತೆಯ ವಂಶವಾಹಿ ಕಣ್ಮರೆಯಾಗಿದೆ: ರಾಹುಲ್ ಗಾಂಧಿ

ಭಾರತ-ಅಮೆರಿಕಾದಲ್ಲಿದ್ದ ಸಹಿಷ್ಣುತೆಯ ವಂಶವಾಹಿ ಕಣ್ಮರೆಯಾಗಿದೆ: ರಾಹುಲ್ ಗಾಂಧಿ

- Advertisement -
- Advertisement -

ಭಾರತ ಮತ್ತು ಅಮೆರಿಕಾದಲ್ಲಿದ್ದ ಸಹಿಷ್ಣುತೆಯ ವಂಶವಾಹಿ ಕಣ್ಮರೆಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಮೆರಿಕದ ಮಾಜಿ ರಾಜತಾಂತ್ರಿಕ ನಿಕೋಲಸ್ ಬರ್ನ್ಸ್ ಅವರೊಂದಿಗಿನ ಸಂಭಾಷಣೆಯಲ್ಲಿ ಹೇಳಿದ್ದಾರೆ.

ಚಿಂತಕರ ಜೊತೆಗಿನ ವಿಡಿಯೋ ಮಾತುಕತೆ ಸರಣಿಯ ಭಾಗವಾಗಿ ರಾಹುಲ್‌ ಗಾಂಧಿ ಅವರು ಕೊರೊನಾ ವೈರಸ್ ಬಿಕ್ಕಟ್ಟು ವಿಶ್ವವನ್ನು ಹೇಗೆ ಮರುರೂಪಿಸುತ್ತಿದೆ ಎಂಬುದರ ಕುರಿತು ನಿಕೋಲಸ್ ಬರ್ನ್ಸ್ ಅವರೊಂದಿಗೆ ಮಾತನಾಡುತ್ತಿದ್ದರು.

ಬಹಳ ವಿಶಾಲವಾಗಿದ್ದ ಭಾರತ-ಅಮೆರಿಕಾದ ಸಂಬಂಧವು ಈಗ ಮುಖ್ಯವಾಗಿ ರಕ್ಷಣೆಯ ವಿಷಯದ ಮೇಲಷ್ಟೇ ಕೇಂದ್ರೀಕರಿಸಿದೆ ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

“ಭಾರತ ಮತ್ತು ಅಮೆರಿಕಾದ ಪಾಲುದಾರಿಕೆ ಏಕೆ ಕೆಲಸ ಮಾಡುತ್ತದೆ ಎಂದರೆ ನಾವು ಸಹಿಷ್ಣುತೆ ವ್ಯವಸ್ಥೆಗಳನ್ನು ಹೊಂದಿದ್ದೆವು. ನೀವು ಪ್ರಸ್ತಾಪಿಸಿದಂತೆ ಅಮೆರಿಕಾ ವಲಸಿಗರ ರಾಷ್ಟ್ರ. ನಾವು ತುಂಬಾ ಸಹಿಷ್ಣು ರಾಷ್ಟ್ರವಾಗಿದ್ದೇವೆ. ಆದರೆ ಎರಡೂ ರಾಷ್ಟ್ರಗಳಲ್ಲಿನ ಬಲಪಂಥೀಯವಾದದಿಂದಾಗಿ ಪರಿಸ್ಥಿತಿ ದಿನೇ ದಿನೇ ಬದಲಾಗುತ್ತಿದೆ” ಎಂದು ಇಬ್ಬರೂ ವಿಷಾಧ ವ್ಯಕ್ತಪಡಿಸಿದ್ದಾರೆ.

ಧಾಮಿಕ ಸಹಿಷ್ಣುತೆ ಮತ್ತು ಜನಾಂಗೀಯ ಸಹೋದರತ್ವ ನಮ್ಮ ವಂಶವಾಹಿ ಆಗಿದ್ದವು. “ಆದರೆ ಆಶ್ಚರ್ಯಕರ ಸಂಗತಿಯೆಂದರೆ, ಈ ಸಹಿಷ್ಣುತೆಯ ವಂಶವಾಹಿಯೂ ಈಗ ಕಣ್ಮರೆಯಾಗಿದೆ. ಈಗ ನೋಡುವಾಗ ಭಾರತ ಹಾಗೂ ಅಮೆರಿಕಾದಲ್ಲಿ ಹಿಂದಿನ ಸಹಿಷ್ಣುತೆಯ ಮಟ್ಟ ನಾನು ಕಾಣುತ್ತಿಲ್ಲ” ಎಂದು ಅವರು ಅಮೆರಿಕದ ಮಾಜಿ ರಾಜತಾಂತ್ರಿಕರಿಗೆ ತಿಳಿಸಿದ್ದಾರೆ.

ಈ ಅಸಹಿಷ್ಣುತೆಯನ್ನು ಆಳುವ ಸರ್ಕಾರಗಳೇ ಪ್ರೋತ್ಸಾಹಿಸುತ್ತಿರುವುದು ದುರಂತವಾಗಿದೆ. ಸದ್ಯದ ಕೋವಿಡ್‌ ಬಿಕ್ಕಟ್ಟನ್ನು ಎರಡೂ ರಾಷ್ಟ್ರಗಳುಸೇರಿ ಒಟ್ಟಿಗೆ ಎದುರಿಸಲಿಲ್ಲ, ಬದಲಿಗೆ ಎರಡೂ ರಾಷ್ಟ್ರಗಳು ಅದನ್ನು ಎದುರಿಸುವಲ್ಲಿ ಸಂಪೂರ್ಣ ವಿಫಲವಾಗಿವೆ ಎಂಬು ಅಂಶಗಳು ಚರ್ಚೆಯಲ್ಲಿ ಕೇಳಿಬಂದಿವೆ.

ಕೊರೊನಾ ವೈರಸ್ ಬಿಕ್ಕಟ್ಟಿನ ನಂತರ ವಿಶ್ವವನ್ನು ಮರುರೂಪಿಸುವುದು, ಇಂಡೋ-ಅಮೆರಿಕಾ ಸಂಬಂಧಗಳ ಭವಿಷ್ಯ ಮತ್ತು ಅದನ್ನು ನಿರ್ಮಿಸುವಲ್ಲಿ ಅಮೆರಿಕಾದಲ್ಲಿ ಭಾರತೀಯ ವಲಸಿಗರು ವಹಿಸಿದ ಪ್ರಮುಖ ಪಾತ್ರದ ಮೇಲೆ ರಾಹುಲ್ ಗಾಂಧಿಯ ಸಂವಾದವಾಗಿದೆ ಎಂದು ಕಾಂಗ್ರೆಸ್ ಹೇಳಿದೆ.

ನಿಕೋಲಸ್ ಬರ್ನ್ಸ್ ಪ್ರಸ್ತುತ ಹಾರ್ವರ್ಡ್‌ನ ಜಾನ್ ಎಫ್ ಕೆನಡಿ ಸ್ಕೂಲ್ ಆಫ್ ಗವರ್ನಮೆಂಟ್‌ನಲ್ಲಿ ಪ್ರಾಕ್ಟೀಸ್ ಆಫ್ ಡಿಪ್ಲೊಮಸಿ ಮತ್ತು ಇಂಟರ್ನ್ಯಾಷನಲ್ ಪಾಲಿಟಿಕ್ಸ್ ಪ್ರಾಧ್ಯಾಪಕರಾಗಿದ್ದಾರೆ.

ಬರ್ನ್ಸ್ ಅಮೆರಿಕಾದ ರಾಜಕೀಯ ವ್ಯವಹಾರಗಳ ರಾಜ್ಯ ಕಾರ್ಯದರ್ಶಿ ಆಗಿದ್ದರು ಹಾಗೂ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಭಾರತ-ಅಮೆರಿಕಾ ಪರಮಾಣು ಒಪ್ಪಂದದ ಮುಖ್ಯ ಸಮಾಲೋಚಕರಾಗಿದ್ದರು.

ವೈರಸ್ ಬಿಕ್ಕಟ್ಟು ಪ್ರಾರಂಭವಾದಾಗಿನಿಂದ ರಾಹುಲ್ ಗಾಂಧಿ ಪ್ರಮುಖ ತಜ್ಞರೊಂದಿಗಿನ ಸರಣಿ ಸಂಭಾಷಣೆಯಲ್ಲಿ, ರಘುರಾಮ್ ರಾಜನ್, ಅಭಿಜಿತ್ ಬ್ಯಾನರ್ಜಿ, ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಜೋಹಾನ್ ಗೀಸೆಕೆ ಮತ್ತು ಕೈಗಾರಿಕೋದ್ಯಮಿ ರಾಜೀವ್ ಬಜಾಜ್ ಮುಂತಾದವರೊಂದಿಗೆ ಮಾತನಾಡಿದ್ದಾರೆ.


ಓದಿ: ಕೊರೊನಾ ವಿಷಯದಲ್ಲಿ ರಾಹುಲ್‌ ಮಾತು ಕೇಳಿದ್ದರೆ ಭಾರತ ಇಟಲಿಯಾಗುತ್ತಿತ್ತು: ಯೋಗಿ ಆದಿತ್ಯನಾಥ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...