Homeಮುಖಪುಟಭಾರತ-ಅಮೆರಿಕಾದಲ್ಲಿದ್ದ ಸಹಿಷ್ಣುತೆಯ ವಂಶವಾಹಿ ಕಣ್ಮರೆಯಾಗಿದೆ: ರಾಹುಲ್ ಗಾಂಧಿ

ಭಾರತ-ಅಮೆರಿಕಾದಲ್ಲಿದ್ದ ಸಹಿಷ್ಣುತೆಯ ವಂಶವಾಹಿ ಕಣ್ಮರೆಯಾಗಿದೆ: ರಾಹುಲ್ ಗಾಂಧಿ

- Advertisement -
- Advertisement -

ಭಾರತ ಮತ್ತು ಅಮೆರಿಕಾದಲ್ಲಿದ್ದ ಸಹಿಷ್ಣುತೆಯ ವಂಶವಾಹಿ ಕಣ್ಮರೆಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಮೆರಿಕದ ಮಾಜಿ ರಾಜತಾಂತ್ರಿಕ ನಿಕೋಲಸ್ ಬರ್ನ್ಸ್ ಅವರೊಂದಿಗಿನ ಸಂಭಾಷಣೆಯಲ್ಲಿ ಹೇಳಿದ್ದಾರೆ.

ಚಿಂತಕರ ಜೊತೆಗಿನ ವಿಡಿಯೋ ಮಾತುಕತೆ ಸರಣಿಯ ಭಾಗವಾಗಿ ರಾಹುಲ್‌ ಗಾಂಧಿ ಅವರು ಕೊರೊನಾ ವೈರಸ್ ಬಿಕ್ಕಟ್ಟು ವಿಶ್ವವನ್ನು ಹೇಗೆ ಮರುರೂಪಿಸುತ್ತಿದೆ ಎಂಬುದರ ಕುರಿತು ನಿಕೋಲಸ್ ಬರ್ನ್ಸ್ ಅವರೊಂದಿಗೆ ಮಾತನಾಡುತ್ತಿದ್ದರು.

ಬಹಳ ವಿಶಾಲವಾಗಿದ್ದ ಭಾರತ-ಅಮೆರಿಕಾದ ಸಂಬಂಧವು ಈಗ ಮುಖ್ಯವಾಗಿ ರಕ್ಷಣೆಯ ವಿಷಯದ ಮೇಲಷ್ಟೇ ಕೇಂದ್ರೀಕರಿಸಿದೆ ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

“ಭಾರತ ಮತ್ತು ಅಮೆರಿಕಾದ ಪಾಲುದಾರಿಕೆ ಏಕೆ ಕೆಲಸ ಮಾಡುತ್ತದೆ ಎಂದರೆ ನಾವು ಸಹಿಷ್ಣುತೆ ವ್ಯವಸ್ಥೆಗಳನ್ನು ಹೊಂದಿದ್ದೆವು. ನೀವು ಪ್ರಸ್ತಾಪಿಸಿದಂತೆ ಅಮೆರಿಕಾ ವಲಸಿಗರ ರಾಷ್ಟ್ರ. ನಾವು ತುಂಬಾ ಸಹಿಷ್ಣು ರಾಷ್ಟ್ರವಾಗಿದ್ದೇವೆ. ಆದರೆ ಎರಡೂ ರಾಷ್ಟ್ರಗಳಲ್ಲಿನ ಬಲಪಂಥೀಯವಾದದಿಂದಾಗಿ ಪರಿಸ್ಥಿತಿ ದಿನೇ ದಿನೇ ಬದಲಾಗುತ್ತಿದೆ” ಎಂದು ಇಬ್ಬರೂ ವಿಷಾಧ ವ್ಯಕ್ತಪಡಿಸಿದ್ದಾರೆ.

ಧಾಮಿಕ ಸಹಿಷ್ಣುತೆ ಮತ್ತು ಜನಾಂಗೀಯ ಸಹೋದರತ್ವ ನಮ್ಮ ವಂಶವಾಹಿ ಆಗಿದ್ದವು. “ಆದರೆ ಆಶ್ಚರ್ಯಕರ ಸಂಗತಿಯೆಂದರೆ, ಈ ಸಹಿಷ್ಣುತೆಯ ವಂಶವಾಹಿಯೂ ಈಗ ಕಣ್ಮರೆಯಾಗಿದೆ. ಈಗ ನೋಡುವಾಗ ಭಾರತ ಹಾಗೂ ಅಮೆರಿಕಾದಲ್ಲಿ ಹಿಂದಿನ ಸಹಿಷ್ಣುತೆಯ ಮಟ್ಟ ನಾನು ಕಾಣುತ್ತಿಲ್ಲ” ಎಂದು ಅವರು ಅಮೆರಿಕದ ಮಾಜಿ ರಾಜತಾಂತ್ರಿಕರಿಗೆ ತಿಳಿಸಿದ್ದಾರೆ.

ಈ ಅಸಹಿಷ್ಣುತೆಯನ್ನು ಆಳುವ ಸರ್ಕಾರಗಳೇ ಪ್ರೋತ್ಸಾಹಿಸುತ್ತಿರುವುದು ದುರಂತವಾಗಿದೆ. ಸದ್ಯದ ಕೋವಿಡ್‌ ಬಿಕ್ಕಟ್ಟನ್ನು ಎರಡೂ ರಾಷ್ಟ್ರಗಳುಸೇರಿ ಒಟ್ಟಿಗೆ ಎದುರಿಸಲಿಲ್ಲ, ಬದಲಿಗೆ ಎರಡೂ ರಾಷ್ಟ್ರಗಳು ಅದನ್ನು ಎದುರಿಸುವಲ್ಲಿ ಸಂಪೂರ್ಣ ವಿಫಲವಾಗಿವೆ ಎಂಬು ಅಂಶಗಳು ಚರ್ಚೆಯಲ್ಲಿ ಕೇಳಿಬಂದಿವೆ.

ಕೊರೊನಾ ವೈರಸ್ ಬಿಕ್ಕಟ್ಟಿನ ನಂತರ ವಿಶ್ವವನ್ನು ಮರುರೂಪಿಸುವುದು, ಇಂಡೋ-ಅಮೆರಿಕಾ ಸಂಬಂಧಗಳ ಭವಿಷ್ಯ ಮತ್ತು ಅದನ್ನು ನಿರ್ಮಿಸುವಲ್ಲಿ ಅಮೆರಿಕಾದಲ್ಲಿ ಭಾರತೀಯ ವಲಸಿಗರು ವಹಿಸಿದ ಪ್ರಮುಖ ಪಾತ್ರದ ಮೇಲೆ ರಾಹುಲ್ ಗಾಂಧಿಯ ಸಂವಾದವಾಗಿದೆ ಎಂದು ಕಾಂಗ್ರೆಸ್ ಹೇಳಿದೆ.

ನಿಕೋಲಸ್ ಬರ್ನ್ಸ್ ಪ್ರಸ್ತುತ ಹಾರ್ವರ್ಡ್‌ನ ಜಾನ್ ಎಫ್ ಕೆನಡಿ ಸ್ಕೂಲ್ ಆಫ್ ಗವರ್ನಮೆಂಟ್‌ನಲ್ಲಿ ಪ್ರಾಕ್ಟೀಸ್ ಆಫ್ ಡಿಪ್ಲೊಮಸಿ ಮತ್ತು ಇಂಟರ್ನ್ಯಾಷನಲ್ ಪಾಲಿಟಿಕ್ಸ್ ಪ್ರಾಧ್ಯಾಪಕರಾಗಿದ್ದಾರೆ.

ಬರ್ನ್ಸ್ ಅಮೆರಿಕಾದ ರಾಜಕೀಯ ವ್ಯವಹಾರಗಳ ರಾಜ್ಯ ಕಾರ್ಯದರ್ಶಿ ಆಗಿದ್ದರು ಹಾಗೂ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಭಾರತ-ಅಮೆರಿಕಾ ಪರಮಾಣು ಒಪ್ಪಂದದ ಮುಖ್ಯ ಸಮಾಲೋಚಕರಾಗಿದ್ದರು.

ವೈರಸ್ ಬಿಕ್ಕಟ್ಟು ಪ್ರಾರಂಭವಾದಾಗಿನಿಂದ ರಾಹುಲ್ ಗಾಂಧಿ ಪ್ರಮುಖ ತಜ್ಞರೊಂದಿಗಿನ ಸರಣಿ ಸಂಭಾಷಣೆಯಲ್ಲಿ, ರಘುರಾಮ್ ರಾಜನ್, ಅಭಿಜಿತ್ ಬ್ಯಾನರ್ಜಿ, ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಜೋಹಾನ್ ಗೀಸೆಕೆ ಮತ್ತು ಕೈಗಾರಿಕೋದ್ಯಮಿ ರಾಜೀವ್ ಬಜಾಜ್ ಮುಂತಾದವರೊಂದಿಗೆ ಮಾತನಾಡಿದ್ದಾರೆ.


ಓದಿ: ಕೊರೊನಾ ವಿಷಯದಲ್ಲಿ ರಾಹುಲ್‌ ಮಾತು ಕೇಳಿದ್ದರೆ ಭಾರತ ಇಟಲಿಯಾಗುತ್ತಿತ್ತು: ಯೋಗಿ ಆದಿತ್ಯನಾಥ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...