Homeಮುಖಪುಟಭಾರತ-ಅಮೆರಿಕಾದಲ್ಲಿದ್ದ ಸಹಿಷ್ಣುತೆಯ ವಂಶವಾಹಿ ಕಣ್ಮರೆಯಾಗಿದೆ: ರಾಹುಲ್ ಗಾಂಧಿ

ಭಾರತ-ಅಮೆರಿಕಾದಲ್ಲಿದ್ದ ಸಹಿಷ್ಣುತೆಯ ವಂಶವಾಹಿ ಕಣ್ಮರೆಯಾಗಿದೆ: ರಾಹುಲ್ ಗಾಂಧಿ

- Advertisement -
- Advertisement -

ಭಾರತ ಮತ್ತು ಅಮೆರಿಕಾದಲ್ಲಿದ್ದ ಸಹಿಷ್ಣುತೆಯ ವಂಶವಾಹಿ ಕಣ್ಮರೆಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಮೆರಿಕದ ಮಾಜಿ ರಾಜತಾಂತ್ರಿಕ ನಿಕೋಲಸ್ ಬರ್ನ್ಸ್ ಅವರೊಂದಿಗಿನ ಸಂಭಾಷಣೆಯಲ್ಲಿ ಹೇಳಿದ್ದಾರೆ.

ಚಿಂತಕರ ಜೊತೆಗಿನ ವಿಡಿಯೋ ಮಾತುಕತೆ ಸರಣಿಯ ಭಾಗವಾಗಿ ರಾಹುಲ್‌ ಗಾಂಧಿ ಅವರು ಕೊರೊನಾ ವೈರಸ್ ಬಿಕ್ಕಟ್ಟು ವಿಶ್ವವನ್ನು ಹೇಗೆ ಮರುರೂಪಿಸುತ್ತಿದೆ ಎಂಬುದರ ಕುರಿತು ನಿಕೋಲಸ್ ಬರ್ನ್ಸ್ ಅವರೊಂದಿಗೆ ಮಾತನಾಡುತ್ತಿದ್ದರು.

ಬಹಳ ವಿಶಾಲವಾಗಿದ್ದ ಭಾರತ-ಅಮೆರಿಕಾದ ಸಂಬಂಧವು ಈಗ ಮುಖ್ಯವಾಗಿ ರಕ್ಷಣೆಯ ವಿಷಯದ ಮೇಲಷ್ಟೇ ಕೇಂದ್ರೀಕರಿಸಿದೆ ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

“ಭಾರತ ಮತ್ತು ಅಮೆರಿಕಾದ ಪಾಲುದಾರಿಕೆ ಏಕೆ ಕೆಲಸ ಮಾಡುತ್ತದೆ ಎಂದರೆ ನಾವು ಸಹಿಷ್ಣುತೆ ವ್ಯವಸ್ಥೆಗಳನ್ನು ಹೊಂದಿದ್ದೆವು. ನೀವು ಪ್ರಸ್ತಾಪಿಸಿದಂತೆ ಅಮೆರಿಕಾ ವಲಸಿಗರ ರಾಷ್ಟ್ರ. ನಾವು ತುಂಬಾ ಸಹಿಷ್ಣು ರಾಷ್ಟ್ರವಾಗಿದ್ದೇವೆ. ಆದರೆ ಎರಡೂ ರಾಷ್ಟ್ರಗಳಲ್ಲಿನ ಬಲಪಂಥೀಯವಾದದಿಂದಾಗಿ ಪರಿಸ್ಥಿತಿ ದಿನೇ ದಿನೇ ಬದಲಾಗುತ್ತಿದೆ” ಎಂದು ಇಬ್ಬರೂ ವಿಷಾಧ ವ್ಯಕ್ತಪಡಿಸಿದ್ದಾರೆ.

ಧಾಮಿಕ ಸಹಿಷ್ಣುತೆ ಮತ್ತು ಜನಾಂಗೀಯ ಸಹೋದರತ್ವ ನಮ್ಮ ವಂಶವಾಹಿ ಆಗಿದ್ದವು. “ಆದರೆ ಆಶ್ಚರ್ಯಕರ ಸಂಗತಿಯೆಂದರೆ, ಈ ಸಹಿಷ್ಣುತೆಯ ವಂಶವಾಹಿಯೂ ಈಗ ಕಣ್ಮರೆಯಾಗಿದೆ. ಈಗ ನೋಡುವಾಗ ಭಾರತ ಹಾಗೂ ಅಮೆರಿಕಾದಲ್ಲಿ ಹಿಂದಿನ ಸಹಿಷ್ಣುತೆಯ ಮಟ್ಟ ನಾನು ಕಾಣುತ್ತಿಲ್ಲ” ಎಂದು ಅವರು ಅಮೆರಿಕದ ಮಾಜಿ ರಾಜತಾಂತ್ರಿಕರಿಗೆ ತಿಳಿಸಿದ್ದಾರೆ.

ಈ ಅಸಹಿಷ್ಣುತೆಯನ್ನು ಆಳುವ ಸರ್ಕಾರಗಳೇ ಪ್ರೋತ್ಸಾಹಿಸುತ್ತಿರುವುದು ದುರಂತವಾಗಿದೆ. ಸದ್ಯದ ಕೋವಿಡ್‌ ಬಿಕ್ಕಟ್ಟನ್ನು ಎರಡೂ ರಾಷ್ಟ್ರಗಳುಸೇರಿ ಒಟ್ಟಿಗೆ ಎದುರಿಸಲಿಲ್ಲ, ಬದಲಿಗೆ ಎರಡೂ ರಾಷ್ಟ್ರಗಳು ಅದನ್ನು ಎದುರಿಸುವಲ್ಲಿ ಸಂಪೂರ್ಣ ವಿಫಲವಾಗಿವೆ ಎಂಬು ಅಂಶಗಳು ಚರ್ಚೆಯಲ್ಲಿ ಕೇಳಿಬಂದಿವೆ.

ಕೊರೊನಾ ವೈರಸ್ ಬಿಕ್ಕಟ್ಟಿನ ನಂತರ ವಿಶ್ವವನ್ನು ಮರುರೂಪಿಸುವುದು, ಇಂಡೋ-ಅಮೆರಿಕಾ ಸಂಬಂಧಗಳ ಭವಿಷ್ಯ ಮತ್ತು ಅದನ್ನು ನಿರ್ಮಿಸುವಲ್ಲಿ ಅಮೆರಿಕಾದಲ್ಲಿ ಭಾರತೀಯ ವಲಸಿಗರು ವಹಿಸಿದ ಪ್ರಮುಖ ಪಾತ್ರದ ಮೇಲೆ ರಾಹುಲ್ ಗಾಂಧಿಯ ಸಂವಾದವಾಗಿದೆ ಎಂದು ಕಾಂಗ್ರೆಸ್ ಹೇಳಿದೆ.

ನಿಕೋಲಸ್ ಬರ್ನ್ಸ್ ಪ್ರಸ್ತುತ ಹಾರ್ವರ್ಡ್‌ನ ಜಾನ್ ಎಫ್ ಕೆನಡಿ ಸ್ಕೂಲ್ ಆಫ್ ಗವರ್ನಮೆಂಟ್‌ನಲ್ಲಿ ಪ್ರಾಕ್ಟೀಸ್ ಆಫ್ ಡಿಪ್ಲೊಮಸಿ ಮತ್ತು ಇಂಟರ್ನ್ಯಾಷನಲ್ ಪಾಲಿಟಿಕ್ಸ್ ಪ್ರಾಧ್ಯಾಪಕರಾಗಿದ್ದಾರೆ.

ಬರ್ನ್ಸ್ ಅಮೆರಿಕಾದ ರಾಜಕೀಯ ವ್ಯವಹಾರಗಳ ರಾಜ್ಯ ಕಾರ್ಯದರ್ಶಿ ಆಗಿದ್ದರು ಹಾಗೂ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಭಾರತ-ಅಮೆರಿಕಾ ಪರಮಾಣು ಒಪ್ಪಂದದ ಮುಖ್ಯ ಸಮಾಲೋಚಕರಾಗಿದ್ದರು.

ವೈರಸ್ ಬಿಕ್ಕಟ್ಟು ಪ್ರಾರಂಭವಾದಾಗಿನಿಂದ ರಾಹುಲ್ ಗಾಂಧಿ ಪ್ರಮುಖ ತಜ್ಞರೊಂದಿಗಿನ ಸರಣಿ ಸಂಭಾಷಣೆಯಲ್ಲಿ, ರಘುರಾಮ್ ರಾಜನ್, ಅಭಿಜಿತ್ ಬ್ಯಾನರ್ಜಿ, ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಜೋಹಾನ್ ಗೀಸೆಕೆ ಮತ್ತು ಕೈಗಾರಿಕೋದ್ಯಮಿ ರಾಜೀವ್ ಬಜಾಜ್ ಮುಂತಾದವರೊಂದಿಗೆ ಮಾತನಾಡಿದ್ದಾರೆ.


ಓದಿ: ಕೊರೊನಾ ವಿಷಯದಲ್ಲಿ ರಾಹುಲ್‌ ಮಾತು ಕೇಳಿದ್ದರೆ ಭಾರತ ಇಟಲಿಯಾಗುತ್ತಿತ್ತು: ಯೋಗಿ ಆದಿತ್ಯನಾಥ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...