Homeಮುಖಪುಟಹೀಗೊಬ್ಬ ಬಡವರ ವೈದ್ಯ : ಒಂದು ರೂ ಸಹ ಪಡೆಯದೆ ಸೇವೆ ನೀಡುತ್ತಿರುವ ಡಾ.ಬಿ.ಸಂಜೀವ ರೈ

ಹೀಗೊಬ್ಬ ಬಡವರ ವೈದ್ಯ : ಒಂದು ರೂ ಸಹ ಪಡೆಯದೆ ಸೇವೆ ನೀಡುತ್ತಿರುವ ಡಾ.ಬಿ.ಸಂಜೀವ ರೈ

- Advertisement -
- Advertisement -

ನಾವು ಅಪರೂಪದಲ್ಲಿ ಅಪರೂಪವಾಗಿರುವ ಎರಡು ರೂಪಾಯಿ ವೈದ್ಯರು, ಐದು ರೂಪಾಯಿ ವೈದ್ಯರ ಬಗ್ಗೆಯೆಲ್ಲಾ ಕೇಳಿದ್ದೇವೆ. ಸುಮಾರು ಹತ್ತು ವರ್ಷಗಳ ಹಿಂದೆ ನಮ್ಮ ಮಂಗಳೂರು ತಾಲೂಕಿನ ಉಚ್ಚಿಲ- ಕೆ.ಸಿ.ರೋಡ್ ಎಂಬಲ್ಲಿ ಎರಡು ರೂಪಾಯಿ ವೈದ್ಯರೆಂದೇ ಖ್ಯಾತರಾಗಿದ್ದ ಶೆಟ್ಟಿ ಡಾಕ್ಟರ್‌ರ ಬಗ್ಗೆ ವಾರ್ತಾಭಾರತಿ ಪತ್ರಿಕೆಯಲ್ಲಿ ಬರೆದಿದ್ದೆ. ಇಂತವರಿಗಿಂತಲೂ ವಿಶಿಷ್ಟ ಉಚಿತ ಡಾಕ್ಟರ್ ಒಬ್ಬರು ಮಂಗಳೂರು ನಗರದಲ್ಲೇ ಇದ್ದಾರೆ.‌ ಅವರೇ ಮಂಗಳೂರಿನ ಖ್ಯಾತ ಮಕ್ಕಳ ತಜ್ಞ ಡಾ.ಬಿ.ಸಂಜೀವ ರೈ..

ಫಾದರ್ ಮುಲ್ಲರ್ಸ್ ವೈದ್ಯಕೀಯ ಕಾಲೇಜಿನ ಡೀನ್ ಆಗಿದ್ದು, ಅಕಾಡೆಮಿಕ್ ವಲಯದಲ್ಲಿ ಇವರ ಅತ್ಯುನ್ನತ ಸಾಧನೆಗಳಿಂದ ಮತ್ತು ಒಳ್ಳೆಯ ಮಕ್ಕಳ ತಜ್ಞರೆಂದು ಇವರು ಪ್ರಸಿದ್ಧರಾಗಿದ್ದರೂ ಇವರ ಮಾನವೀಯ ಸೇವೆಗಳು ಎಲ್ಲೂ ಪ್ರಚಾರಕ್ಕೆ ಬಂದಿಲ್ಲ. ಅವರು ತಾನು ನೀಡುತ್ತಿರುವ ಮಾನವೀಯ ಸೇವೆಯನ್ನು ಈ ವರೆಗೆ ಪ್ರಚಾರ ಮಾಡಿದ್ದೂ ಇಲ್ಲ.. ಅವರದಕ್ಕೆ ಪ್ರಚಾರವನ್ನು ಬಯಸಿಯೂ ಇಲ್ಲ.

ಮಂಗಳೂರು ನಗರದ ಕರಂಗಲ್ಪಾಡಿಯಲ್ಲಿರುವ ಮೆಡಿಕೇರ್ ಎಂಬ ಕಟ್ಟಡದ ಮಾಲಕರೂ ಆಗಿರುವ ಡಾ.ಬಿ.ಸಂಜೀವ ರೈ ಅದೇ ಕಟ್ಟಡದಲ್ಲಿ ತನ್ನದೊಂದು ಮಕ್ಕಳ ಚಿಕಿತ್ಸಾಲಯವನ್ನಿಟ್ಟು ವೃತ್ತಿ ನಿರತರಾಗಿದ್ದಾರೆ. ಅವರು ವೃತ್ತಿ ನಿರತರಾಗಿದ್ದಾರೆ ಎನ್ನುವುದಕ್ಕಿಂತಲೂ ಅಲ್ಲಿ ಅವರು ಸೇವೆ ನೀಡುತ್ತಿದ್ದಾರೆ ಎನ್ನುವುದು ಹೆಚ್ಚು ಸೂಕ್ತ. ಅವರು ತನ್ನ ಕ್ಲಿನಿಕಿಗೆ ಚಿಕಿತ್ಸೆಗೆಂದು ಬರುವ ಮಕ್ಕಳ ಹೆತ್ತವರಿಂದ ನಯಾ ಪೈಸೆಯ ಶುಲ್ಕ ಪಡೆಯುವುದಿಲ್ಲ. ಔಷಧಿಗಳನ್ನು ಫಾರ್ಮಸಿಗಳಿಗೆ ಬರೆದು ಕೊಡುತ್ತಾರೆ. ತನ್ನ ಬಳಿ ಸ್ಯಾಂಪಲ್‌ಗಳಿದ್ದರೆ ಅದನ್ನೂ ಉಚಿತವಾಗಿ ನೀಡುತ್ತಾರೆ. ಅಗತ್ಯ ಬಿದ್ದರೆ ಮಾತ್ರ ಔಷಧಿ ಬರೆಯುತ್ತಾರೆ. ಎಷ್ಟೋ ಮಕ್ಕಳಿಗೆ ಔಷಧಿಯೇ ಬೇಡ ಎನ್ನುತ್ತಾರೆ. ಆದರೆ ಈ ಡಾಕ್ಟರ್ ಔಷಧಿ ನೀಡುವುದಿಲ್ಲ ಎಂದು ಕೆಲವರಿಗೆ ಅಸಮಾಧಾನವಾಗುವುದೂ ಇದೆ. ವೃತ್ತಿಯನ್ನು ವಾಣಿಜ್ಯೀಕರಿಸದ್ದರಿಂದ ಅಗತ್ಯವಿರುವವರಿಗೆ ಮಾತ್ರ ಔಷಧಿ ಬರೆಯುತ್ತಾರೆ.

ಇವರು ಓರ್ವ ಮಕ್ಕಳ ತಜ್ಞನಾಗಿ ಮಕ್ಕಳೊಂದಿಗೆ ಮಕ್ಕಳಂತೆ ಅತ್ಯಂತ ಪ್ರೀತಿಯಿಂದ ವರ್ತಿಸುತ್ತಾರೆ. ಮಕ್ಕಳಿಗೆ ಔಷಧಿ ಕುಡಿಸುವ ಹೆತ್ತವರ ಕಷ್ಟವನ್ನು ಚೆನ್ನಾಗಿ ಅರಿತಿರುವ ಇವರು ಯಾವತ್ತೂ ಪುಟಗಟ್ಟಲೆ ಪ್ರಿಸ್ಕ್ರಿಪ್ಷನ್ ಬರೆಯುವುದಿಲ್ಲ.‌ ಅನಗತ್ಯ ಆಂಟಿ ಬಯೋಟಿಕ್‌ಗಳನ್ನೂ ಹಾಕುವುದಿಲ್ಲ ಎಂದು ಇವರ ಬಳಿ ಚಿಕಿತ್ಸೆ ಪಡೆಯುವ ಮಕ್ಕಳ ಹೆತ್ತವರು ಹೇಳುತ್ತಾರೆ.

ಅವರು ಶುಲ್ಕ ಪಡೆಯುವುದಿಲ್ಲ ಎಂದು ನನಗೆ ಗೊತ್ತಾಗಿದ್ದೇ ನನ್ನ ತಂಗಿಯಿಂದ. ಅವಳು ನನ್ನ ಸೋದರಳಿಯನನ್ನು ಸುಮಾರು ಮೂರು ವರ್ಷಗಳ ಹಿಂದೆ ಎರಡು ಬಾರಿ ಅವರ ಬಳಿ ಚಿಕಿತ್ಸೆಗೆಂದು ಕರೆದೊಯ್ದು ಫೀಸ್ ಎಷ್ಟು ಸರ್ ಎಂದು ಕೇಳಿದಾಗ.. ಬೇಡ.. ಹೋಗಮ್ಮಾ ಎಂದರಂತೆ.. ಈಕೆಗೆ ಆಶ್ಚರ್ಯವಾಗಿತ್ತು. ನನ್ನ ತಂಗಿ ಈ ಕತೆ ಹೇಳಿದಾಗ ನನಗಿದನ್ನು ನಂಬಲು ಸಾಧ್ಯವಾಗಿರಲಿಲ್ಲ. ಆ ಬಳಿಕ ಅವರ ಬಳಿ ಚಿಕಿತ್ಸೆಗೆಂದು ಹೋಗುವ ಮೂರ್ನಾಲ್ಕು ಮಂದಿ ಹೆತ್ತವರ ಬಳಿ ವಿಚಾರಿಸಿದಾಗ “ನಿಮಗಿದು ಗೊತ್ತೇ ಇಲ್ವಾ…?” ಎಂದು ಮರುಪ್ರಶ್ನೆ ಹಾಕಿದರು. ಶ್ರೀಮಂತರಿಗೆ ಮತ್ತಷ್ಟು ಶ್ರೀಮಂತಿಕೆ ಗಳಿಸುವ ಆಶೆಯಿರುವುದೇ ಹೆಚ್ಚು. ಆದರೆ ಡಾ.ಬಿ.ಸಂಜೀವ ರೈ ಅವರಿಗೆ ವೈದ್ಯಕೀಯ ವೃತ್ತಿ ಒಂದು ಅಪ್ಪಟ ಮಾನವೀಯ ಸೇವೆ.

ಅವರಿಗೆ ತನ್ನ ಕಟ್ಟಡದಿಂದ ಬಾಡಿಗೆ ಬರುತ್ತದೆ, ಇನ್ನೊಂದೆಡೆ ಫಾದರ್ ಮುಲ್ಲರ್ಸ್ ವೈದ್ಯಕೀಯ ಕಾಲೇಜಿನ ಡೀನ್ ಆಗಿದ್ದುದರಿಂದ ಒಳ್ಳೆಯ ಸಂಬಳ ಬರುತ್ತದೆ. ಈ ನೆಲೆಯಲ್ಲಿ ತನ್ನಿಂದ ಸಮಾಜಕ್ಕೆ ಒಂದಿಷ್ಟು ಸೇವೆಯಿರಲಿ ಎಂದು ಅವರು ಶುಲ್ಕವನ್ನೇ ಪಡೆಯದೆ ಸೇವೆ ನೀಡುತ್ತಿದ್ದಾರೆ.

ಮೂಲತಃ ಪುತ್ತೂರು ತಾಲೂಕಿನ ಬೂಡಿಯಾರ್ ಎಂಬ ಹಳ್ಳಿಯವರಾದ ಇವರದ್ದು ಪ್ರತಿಷ್ಟಿತ ಬಂಟ ಮನೆತನ. ಆದರೆ ಬಂಟರ ಗುತ್ತಿನ ಗತ್ತಾಗಲಿ, ಪ್ರತಿಷ್ಟಿತ ವೈದ್ಯಕೀಯ ಕಾಲೇಜೊಂದರ ಶೈಕ್ಷಣಿಕ ಮುಖ್ಯಸ್ಥನೆಂಬ ಅಹಂ ಆಗಲೀ ಡಾ.ಬಿ.ಸಂಜೀವ ರೈಯವರ ಮಾತಿನಲ್ಲೋ, ವರ್ತನೆಯಲ್ಲೋ ಕಾಣಲು ಸಾಧ್ಯವಿಲ್ಲ. ನಾನು ವಿದ್ಯಾರ್ಥಿಯಾಗಿದ್ದ ಕಾಲದಲ್ಲೊಮ್ಮೆ ಇವರನ್ನು ಫಾದರ್ ಮುಲ್ಲರ್ಸ್ ಕಾಲೇಜಿನಲ್ಲಿ ಭೇಟಿಯಾಗಿದ್ದೆ. ಅಷ್ಟು ದೊಡ್ಡ ಹುದ್ದೆಯಲ್ಲಿದ್ದರೂ ನನ್ನೊಂದಿಗೆ ಅತ್ಯಂತ ಸಜ್ಜನಿಕೆಯಿಂದ ತುಳುವಿನಲ್ಲಿ ಮಾತನಾಡಿದ್ದರು. ಅವರು ಫಾದರ್ ಮುಲ್ಲರ್ಸ್ ಕಾಲೇಜಿನ ಡೀನ್ ಆಗಿದ್ದ ಕಾಲದಲ್ಲಿ ಅದೆಷ್ಟೋ ಬಡವರಿಗೆ ಆಸ್ಪತ್ರೆಯಲ್ಲಿ ಸಹಾಯ ಮಾಡುತ್ತಿದ್ದರೆನ್ನುವುದನ್ನು ಹಲವರಿಂದ ಕೇಳಿ ಬಲ್ಲೆ.

ಫಾದರ್ ಮುಲ್ಲರ್ಸ್ ಕಾಲೇಜಿನಲ್ಲಿ, ಆಸ್ಪತ್ರೆಯಲ್ಲಿ ಚಿಕ್ಕ ಪುಟ್ಟ ಗುಮಾಸ್ತ, ಜವಾನ, ಹೌಸ್ ಕೀಪಿಂಗ್ ಹುದ್ದೆಗಳಿಗಾಗಿ ಅರ್ಜಿ ಹಾಕುವವರಿಗೆ ಸ್ವಯಂ ಆಸಕ್ತಿಯಿಂದ ಉದ್ಯೋಗವನ್ನೂ ಕೊಡಿಸುತ್ತಿದ್ದರು. ಅಲ್ಲಿನ ಹೌಸ್ ಕೀಪಿಂಗ್ ಸಿಬ್ಬಂದಿಗಳೊಂದಿಗೂ ಅತ್ಯಂತ ಪ್ರೀತಿಯಿಂದ ಮಾತನಾಡಿಸುತ್ತಿದ್ದರು ಎಂದು ಅವರ ಒಡನಾಟವಿದ್ದ ಕಸ ಗುಡಿಸುವ ಮಹಿಳೆಯರಿಂದ ಅರಿತು ಬಲ್ಲೆ. ಆದರೆ ಅವರು ಯಾವತ್ತೂ ತಾನು ಮಾಡಿದ ಉಪಕಾರಗಳನ್ನು ಹೇಳಿಕೊಂಡು ನಡೆದವರಲ್ಲ.

ಕೆಲವು ವೈದ್ಯರ ಧನದಾಹದಿಂದ ವೈದ್ಯರೆಂದರೆ ಹಾಗೆಯೇ… ಜನರನ್ನು ಸುಲಿಯಲೆಂದೇ ಇರುವವರು ಎಂಬ ಆರೋಪವಿರುವ ಈ ಕಾಲದಲ್ಲೂ ಮಂಗಳೂರಿನಂತಹ ವಾಣಿಜ್ಯ ನಗರದಲ್ಲಿ ಇಂತಹ ಮಾನವೀಯ ಮುಖದ ವೈದ್ಯರಿದ್ದಾರೆ ಎಂದರೆ ಎಂತವರಿಗೂ ಆಶ್ಚರ್ಯವಾಗದಿರದು. ಡಾ.ಬಿ.ಸಂಜೀವ ರೈಯವರಂತಹವರ ಸಂಖ್ಯೆ ಇನ್ನಷ್ಟು ಹೆಚ್ಚಾಗಲಿ.. ವೈದ್ಯರ ದಿನದ ಶುಭಾಶಯಗಳು ಸಂಜೀವ್ ಸರ್…

  • ಇಸ್ಮತ್ ಪಜೀರ್

ಇದನ್ನೂ ಓದಿ: ಎಲೆಮರೆ -39: ಊರನ್ನೇ ರಂಗಭೂಮಿ ಮಾಡಿದ ಶಿಕ್ಷಕ ಅಶೋಕ ತೋಟ್ನಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...