Homeಮುಖಪುಟಹೀಗೊಬ್ಬ ಬಡವರ ವೈದ್ಯ : ಒಂದು ರೂ ಸಹ ಪಡೆಯದೆ ಸೇವೆ ನೀಡುತ್ತಿರುವ ಡಾ.ಬಿ.ಸಂಜೀವ ರೈ

ಹೀಗೊಬ್ಬ ಬಡವರ ವೈದ್ಯ : ಒಂದು ರೂ ಸಹ ಪಡೆಯದೆ ಸೇವೆ ನೀಡುತ್ತಿರುವ ಡಾ.ಬಿ.ಸಂಜೀವ ರೈ

- Advertisement -
- Advertisement -

ನಾವು ಅಪರೂಪದಲ್ಲಿ ಅಪರೂಪವಾಗಿರುವ ಎರಡು ರೂಪಾಯಿ ವೈದ್ಯರು, ಐದು ರೂಪಾಯಿ ವೈದ್ಯರ ಬಗ್ಗೆಯೆಲ್ಲಾ ಕೇಳಿದ್ದೇವೆ. ಸುಮಾರು ಹತ್ತು ವರ್ಷಗಳ ಹಿಂದೆ ನಮ್ಮ ಮಂಗಳೂರು ತಾಲೂಕಿನ ಉಚ್ಚಿಲ- ಕೆ.ಸಿ.ರೋಡ್ ಎಂಬಲ್ಲಿ ಎರಡು ರೂಪಾಯಿ ವೈದ್ಯರೆಂದೇ ಖ್ಯಾತರಾಗಿದ್ದ ಶೆಟ್ಟಿ ಡಾಕ್ಟರ್‌ರ ಬಗ್ಗೆ ವಾರ್ತಾಭಾರತಿ ಪತ್ರಿಕೆಯಲ್ಲಿ ಬರೆದಿದ್ದೆ. ಇಂತವರಿಗಿಂತಲೂ ವಿಶಿಷ್ಟ ಉಚಿತ ಡಾಕ್ಟರ್ ಒಬ್ಬರು ಮಂಗಳೂರು ನಗರದಲ್ಲೇ ಇದ್ದಾರೆ.‌ ಅವರೇ ಮಂಗಳೂರಿನ ಖ್ಯಾತ ಮಕ್ಕಳ ತಜ್ಞ ಡಾ.ಬಿ.ಸಂಜೀವ ರೈ..

ಫಾದರ್ ಮುಲ್ಲರ್ಸ್ ವೈದ್ಯಕೀಯ ಕಾಲೇಜಿನ ಡೀನ್ ಆಗಿದ್ದು, ಅಕಾಡೆಮಿಕ್ ವಲಯದಲ್ಲಿ ಇವರ ಅತ್ಯುನ್ನತ ಸಾಧನೆಗಳಿಂದ ಮತ್ತು ಒಳ್ಳೆಯ ಮಕ್ಕಳ ತಜ್ಞರೆಂದು ಇವರು ಪ್ರಸಿದ್ಧರಾಗಿದ್ದರೂ ಇವರ ಮಾನವೀಯ ಸೇವೆಗಳು ಎಲ್ಲೂ ಪ್ರಚಾರಕ್ಕೆ ಬಂದಿಲ್ಲ. ಅವರು ತಾನು ನೀಡುತ್ತಿರುವ ಮಾನವೀಯ ಸೇವೆಯನ್ನು ಈ ವರೆಗೆ ಪ್ರಚಾರ ಮಾಡಿದ್ದೂ ಇಲ್ಲ.. ಅವರದಕ್ಕೆ ಪ್ರಚಾರವನ್ನು ಬಯಸಿಯೂ ಇಲ್ಲ.

ಮಂಗಳೂರು ನಗರದ ಕರಂಗಲ್ಪಾಡಿಯಲ್ಲಿರುವ ಮೆಡಿಕೇರ್ ಎಂಬ ಕಟ್ಟಡದ ಮಾಲಕರೂ ಆಗಿರುವ ಡಾ.ಬಿ.ಸಂಜೀವ ರೈ ಅದೇ ಕಟ್ಟಡದಲ್ಲಿ ತನ್ನದೊಂದು ಮಕ್ಕಳ ಚಿಕಿತ್ಸಾಲಯವನ್ನಿಟ್ಟು ವೃತ್ತಿ ನಿರತರಾಗಿದ್ದಾರೆ. ಅವರು ವೃತ್ತಿ ನಿರತರಾಗಿದ್ದಾರೆ ಎನ್ನುವುದಕ್ಕಿಂತಲೂ ಅಲ್ಲಿ ಅವರು ಸೇವೆ ನೀಡುತ್ತಿದ್ದಾರೆ ಎನ್ನುವುದು ಹೆಚ್ಚು ಸೂಕ್ತ. ಅವರು ತನ್ನ ಕ್ಲಿನಿಕಿಗೆ ಚಿಕಿತ್ಸೆಗೆಂದು ಬರುವ ಮಕ್ಕಳ ಹೆತ್ತವರಿಂದ ನಯಾ ಪೈಸೆಯ ಶುಲ್ಕ ಪಡೆಯುವುದಿಲ್ಲ. ಔಷಧಿಗಳನ್ನು ಫಾರ್ಮಸಿಗಳಿಗೆ ಬರೆದು ಕೊಡುತ್ತಾರೆ. ತನ್ನ ಬಳಿ ಸ್ಯಾಂಪಲ್‌ಗಳಿದ್ದರೆ ಅದನ್ನೂ ಉಚಿತವಾಗಿ ನೀಡುತ್ತಾರೆ. ಅಗತ್ಯ ಬಿದ್ದರೆ ಮಾತ್ರ ಔಷಧಿ ಬರೆಯುತ್ತಾರೆ. ಎಷ್ಟೋ ಮಕ್ಕಳಿಗೆ ಔಷಧಿಯೇ ಬೇಡ ಎನ್ನುತ್ತಾರೆ. ಆದರೆ ಈ ಡಾಕ್ಟರ್ ಔಷಧಿ ನೀಡುವುದಿಲ್ಲ ಎಂದು ಕೆಲವರಿಗೆ ಅಸಮಾಧಾನವಾಗುವುದೂ ಇದೆ. ವೃತ್ತಿಯನ್ನು ವಾಣಿಜ್ಯೀಕರಿಸದ್ದರಿಂದ ಅಗತ್ಯವಿರುವವರಿಗೆ ಮಾತ್ರ ಔಷಧಿ ಬರೆಯುತ್ತಾರೆ.

ಇವರು ಓರ್ವ ಮಕ್ಕಳ ತಜ್ಞನಾಗಿ ಮಕ್ಕಳೊಂದಿಗೆ ಮಕ್ಕಳಂತೆ ಅತ್ಯಂತ ಪ್ರೀತಿಯಿಂದ ವರ್ತಿಸುತ್ತಾರೆ. ಮಕ್ಕಳಿಗೆ ಔಷಧಿ ಕುಡಿಸುವ ಹೆತ್ತವರ ಕಷ್ಟವನ್ನು ಚೆನ್ನಾಗಿ ಅರಿತಿರುವ ಇವರು ಯಾವತ್ತೂ ಪುಟಗಟ್ಟಲೆ ಪ್ರಿಸ್ಕ್ರಿಪ್ಷನ್ ಬರೆಯುವುದಿಲ್ಲ.‌ ಅನಗತ್ಯ ಆಂಟಿ ಬಯೋಟಿಕ್‌ಗಳನ್ನೂ ಹಾಕುವುದಿಲ್ಲ ಎಂದು ಇವರ ಬಳಿ ಚಿಕಿತ್ಸೆ ಪಡೆಯುವ ಮಕ್ಕಳ ಹೆತ್ತವರು ಹೇಳುತ್ತಾರೆ.

ಅವರು ಶುಲ್ಕ ಪಡೆಯುವುದಿಲ್ಲ ಎಂದು ನನಗೆ ಗೊತ್ತಾಗಿದ್ದೇ ನನ್ನ ತಂಗಿಯಿಂದ. ಅವಳು ನನ್ನ ಸೋದರಳಿಯನನ್ನು ಸುಮಾರು ಮೂರು ವರ್ಷಗಳ ಹಿಂದೆ ಎರಡು ಬಾರಿ ಅವರ ಬಳಿ ಚಿಕಿತ್ಸೆಗೆಂದು ಕರೆದೊಯ್ದು ಫೀಸ್ ಎಷ್ಟು ಸರ್ ಎಂದು ಕೇಳಿದಾಗ.. ಬೇಡ.. ಹೋಗಮ್ಮಾ ಎಂದರಂತೆ.. ಈಕೆಗೆ ಆಶ್ಚರ್ಯವಾಗಿತ್ತು. ನನ್ನ ತಂಗಿ ಈ ಕತೆ ಹೇಳಿದಾಗ ನನಗಿದನ್ನು ನಂಬಲು ಸಾಧ್ಯವಾಗಿರಲಿಲ್ಲ. ಆ ಬಳಿಕ ಅವರ ಬಳಿ ಚಿಕಿತ್ಸೆಗೆಂದು ಹೋಗುವ ಮೂರ್ನಾಲ್ಕು ಮಂದಿ ಹೆತ್ತವರ ಬಳಿ ವಿಚಾರಿಸಿದಾಗ “ನಿಮಗಿದು ಗೊತ್ತೇ ಇಲ್ವಾ…?” ಎಂದು ಮರುಪ್ರಶ್ನೆ ಹಾಕಿದರು. ಶ್ರೀಮಂತರಿಗೆ ಮತ್ತಷ್ಟು ಶ್ರೀಮಂತಿಕೆ ಗಳಿಸುವ ಆಶೆಯಿರುವುದೇ ಹೆಚ್ಚು. ಆದರೆ ಡಾ.ಬಿ.ಸಂಜೀವ ರೈ ಅವರಿಗೆ ವೈದ್ಯಕೀಯ ವೃತ್ತಿ ಒಂದು ಅಪ್ಪಟ ಮಾನವೀಯ ಸೇವೆ.

ಅವರಿಗೆ ತನ್ನ ಕಟ್ಟಡದಿಂದ ಬಾಡಿಗೆ ಬರುತ್ತದೆ, ಇನ್ನೊಂದೆಡೆ ಫಾದರ್ ಮುಲ್ಲರ್ಸ್ ವೈದ್ಯಕೀಯ ಕಾಲೇಜಿನ ಡೀನ್ ಆಗಿದ್ದುದರಿಂದ ಒಳ್ಳೆಯ ಸಂಬಳ ಬರುತ್ತದೆ. ಈ ನೆಲೆಯಲ್ಲಿ ತನ್ನಿಂದ ಸಮಾಜಕ್ಕೆ ಒಂದಿಷ್ಟು ಸೇವೆಯಿರಲಿ ಎಂದು ಅವರು ಶುಲ್ಕವನ್ನೇ ಪಡೆಯದೆ ಸೇವೆ ನೀಡುತ್ತಿದ್ದಾರೆ.

ಮೂಲತಃ ಪುತ್ತೂರು ತಾಲೂಕಿನ ಬೂಡಿಯಾರ್ ಎಂಬ ಹಳ್ಳಿಯವರಾದ ಇವರದ್ದು ಪ್ರತಿಷ್ಟಿತ ಬಂಟ ಮನೆತನ. ಆದರೆ ಬಂಟರ ಗುತ್ತಿನ ಗತ್ತಾಗಲಿ, ಪ್ರತಿಷ್ಟಿತ ವೈದ್ಯಕೀಯ ಕಾಲೇಜೊಂದರ ಶೈಕ್ಷಣಿಕ ಮುಖ್ಯಸ್ಥನೆಂಬ ಅಹಂ ಆಗಲೀ ಡಾ.ಬಿ.ಸಂಜೀವ ರೈಯವರ ಮಾತಿನಲ್ಲೋ, ವರ್ತನೆಯಲ್ಲೋ ಕಾಣಲು ಸಾಧ್ಯವಿಲ್ಲ. ನಾನು ವಿದ್ಯಾರ್ಥಿಯಾಗಿದ್ದ ಕಾಲದಲ್ಲೊಮ್ಮೆ ಇವರನ್ನು ಫಾದರ್ ಮುಲ್ಲರ್ಸ್ ಕಾಲೇಜಿನಲ್ಲಿ ಭೇಟಿಯಾಗಿದ್ದೆ. ಅಷ್ಟು ದೊಡ್ಡ ಹುದ್ದೆಯಲ್ಲಿದ್ದರೂ ನನ್ನೊಂದಿಗೆ ಅತ್ಯಂತ ಸಜ್ಜನಿಕೆಯಿಂದ ತುಳುವಿನಲ್ಲಿ ಮಾತನಾಡಿದ್ದರು. ಅವರು ಫಾದರ್ ಮುಲ್ಲರ್ಸ್ ಕಾಲೇಜಿನ ಡೀನ್ ಆಗಿದ್ದ ಕಾಲದಲ್ಲಿ ಅದೆಷ್ಟೋ ಬಡವರಿಗೆ ಆಸ್ಪತ್ರೆಯಲ್ಲಿ ಸಹಾಯ ಮಾಡುತ್ತಿದ್ದರೆನ್ನುವುದನ್ನು ಹಲವರಿಂದ ಕೇಳಿ ಬಲ್ಲೆ.

ಫಾದರ್ ಮುಲ್ಲರ್ಸ್ ಕಾಲೇಜಿನಲ್ಲಿ, ಆಸ್ಪತ್ರೆಯಲ್ಲಿ ಚಿಕ್ಕ ಪುಟ್ಟ ಗುಮಾಸ್ತ, ಜವಾನ, ಹೌಸ್ ಕೀಪಿಂಗ್ ಹುದ್ದೆಗಳಿಗಾಗಿ ಅರ್ಜಿ ಹಾಕುವವರಿಗೆ ಸ್ವಯಂ ಆಸಕ್ತಿಯಿಂದ ಉದ್ಯೋಗವನ್ನೂ ಕೊಡಿಸುತ್ತಿದ್ದರು. ಅಲ್ಲಿನ ಹೌಸ್ ಕೀಪಿಂಗ್ ಸಿಬ್ಬಂದಿಗಳೊಂದಿಗೂ ಅತ್ಯಂತ ಪ್ರೀತಿಯಿಂದ ಮಾತನಾಡಿಸುತ್ತಿದ್ದರು ಎಂದು ಅವರ ಒಡನಾಟವಿದ್ದ ಕಸ ಗುಡಿಸುವ ಮಹಿಳೆಯರಿಂದ ಅರಿತು ಬಲ್ಲೆ. ಆದರೆ ಅವರು ಯಾವತ್ತೂ ತಾನು ಮಾಡಿದ ಉಪಕಾರಗಳನ್ನು ಹೇಳಿಕೊಂಡು ನಡೆದವರಲ್ಲ.

ಕೆಲವು ವೈದ್ಯರ ಧನದಾಹದಿಂದ ವೈದ್ಯರೆಂದರೆ ಹಾಗೆಯೇ… ಜನರನ್ನು ಸುಲಿಯಲೆಂದೇ ಇರುವವರು ಎಂಬ ಆರೋಪವಿರುವ ಈ ಕಾಲದಲ್ಲೂ ಮಂಗಳೂರಿನಂತಹ ವಾಣಿಜ್ಯ ನಗರದಲ್ಲಿ ಇಂತಹ ಮಾನವೀಯ ಮುಖದ ವೈದ್ಯರಿದ್ದಾರೆ ಎಂದರೆ ಎಂತವರಿಗೂ ಆಶ್ಚರ್ಯವಾಗದಿರದು. ಡಾ.ಬಿ.ಸಂಜೀವ ರೈಯವರಂತಹವರ ಸಂಖ್ಯೆ ಇನ್ನಷ್ಟು ಹೆಚ್ಚಾಗಲಿ.. ವೈದ್ಯರ ದಿನದ ಶುಭಾಶಯಗಳು ಸಂಜೀವ್ ಸರ್…

  • ಇಸ್ಮತ್ ಪಜೀರ್

ಇದನ್ನೂ ಓದಿ: ಎಲೆಮರೆ -39: ಊರನ್ನೇ ರಂಗಭೂಮಿ ಮಾಡಿದ ಶಿಕ್ಷಕ ಅಶೋಕ ತೋಟ್ನಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...