Homeಮುಖಪುಟಹೀಗೊಬ್ಬ ಬಡವರ ವೈದ್ಯ : ಒಂದು ರೂ ಸಹ ಪಡೆಯದೆ ಸೇವೆ ನೀಡುತ್ತಿರುವ ಡಾ.ಬಿ.ಸಂಜೀವ ರೈ

ಹೀಗೊಬ್ಬ ಬಡವರ ವೈದ್ಯ : ಒಂದು ರೂ ಸಹ ಪಡೆಯದೆ ಸೇವೆ ನೀಡುತ್ತಿರುವ ಡಾ.ಬಿ.ಸಂಜೀವ ರೈ

- Advertisement -
- Advertisement -

ನಾವು ಅಪರೂಪದಲ್ಲಿ ಅಪರೂಪವಾಗಿರುವ ಎರಡು ರೂಪಾಯಿ ವೈದ್ಯರು, ಐದು ರೂಪಾಯಿ ವೈದ್ಯರ ಬಗ್ಗೆಯೆಲ್ಲಾ ಕೇಳಿದ್ದೇವೆ. ಸುಮಾರು ಹತ್ತು ವರ್ಷಗಳ ಹಿಂದೆ ನಮ್ಮ ಮಂಗಳೂರು ತಾಲೂಕಿನ ಉಚ್ಚಿಲ- ಕೆ.ಸಿ.ರೋಡ್ ಎಂಬಲ್ಲಿ ಎರಡು ರೂಪಾಯಿ ವೈದ್ಯರೆಂದೇ ಖ್ಯಾತರಾಗಿದ್ದ ಶೆಟ್ಟಿ ಡಾಕ್ಟರ್‌ರ ಬಗ್ಗೆ ವಾರ್ತಾಭಾರತಿ ಪತ್ರಿಕೆಯಲ್ಲಿ ಬರೆದಿದ್ದೆ. ಇಂತವರಿಗಿಂತಲೂ ವಿಶಿಷ್ಟ ಉಚಿತ ಡಾಕ್ಟರ್ ಒಬ್ಬರು ಮಂಗಳೂರು ನಗರದಲ್ಲೇ ಇದ್ದಾರೆ.‌ ಅವರೇ ಮಂಗಳೂರಿನ ಖ್ಯಾತ ಮಕ್ಕಳ ತಜ್ಞ ಡಾ.ಬಿ.ಸಂಜೀವ ರೈ..

ಫಾದರ್ ಮುಲ್ಲರ್ಸ್ ವೈದ್ಯಕೀಯ ಕಾಲೇಜಿನ ಡೀನ್ ಆಗಿದ್ದು, ಅಕಾಡೆಮಿಕ್ ವಲಯದಲ್ಲಿ ಇವರ ಅತ್ಯುನ್ನತ ಸಾಧನೆಗಳಿಂದ ಮತ್ತು ಒಳ್ಳೆಯ ಮಕ್ಕಳ ತಜ್ಞರೆಂದು ಇವರು ಪ್ರಸಿದ್ಧರಾಗಿದ್ದರೂ ಇವರ ಮಾನವೀಯ ಸೇವೆಗಳು ಎಲ್ಲೂ ಪ್ರಚಾರಕ್ಕೆ ಬಂದಿಲ್ಲ. ಅವರು ತಾನು ನೀಡುತ್ತಿರುವ ಮಾನವೀಯ ಸೇವೆಯನ್ನು ಈ ವರೆಗೆ ಪ್ರಚಾರ ಮಾಡಿದ್ದೂ ಇಲ್ಲ.. ಅವರದಕ್ಕೆ ಪ್ರಚಾರವನ್ನು ಬಯಸಿಯೂ ಇಲ್ಲ.

ಮಂಗಳೂರು ನಗರದ ಕರಂಗಲ್ಪಾಡಿಯಲ್ಲಿರುವ ಮೆಡಿಕೇರ್ ಎಂಬ ಕಟ್ಟಡದ ಮಾಲಕರೂ ಆಗಿರುವ ಡಾ.ಬಿ.ಸಂಜೀವ ರೈ ಅದೇ ಕಟ್ಟಡದಲ್ಲಿ ತನ್ನದೊಂದು ಮಕ್ಕಳ ಚಿಕಿತ್ಸಾಲಯವನ್ನಿಟ್ಟು ವೃತ್ತಿ ನಿರತರಾಗಿದ್ದಾರೆ. ಅವರು ವೃತ್ತಿ ನಿರತರಾಗಿದ್ದಾರೆ ಎನ್ನುವುದಕ್ಕಿಂತಲೂ ಅಲ್ಲಿ ಅವರು ಸೇವೆ ನೀಡುತ್ತಿದ್ದಾರೆ ಎನ್ನುವುದು ಹೆಚ್ಚು ಸೂಕ್ತ. ಅವರು ತನ್ನ ಕ್ಲಿನಿಕಿಗೆ ಚಿಕಿತ್ಸೆಗೆಂದು ಬರುವ ಮಕ್ಕಳ ಹೆತ್ತವರಿಂದ ನಯಾ ಪೈಸೆಯ ಶುಲ್ಕ ಪಡೆಯುವುದಿಲ್ಲ. ಔಷಧಿಗಳನ್ನು ಫಾರ್ಮಸಿಗಳಿಗೆ ಬರೆದು ಕೊಡುತ್ತಾರೆ. ತನ್ನ ಬಳಿ ಸ್ಯಾಂಪಲ್‌ಗಳಿದ್ದರೆ ಅದನ್ನೂ ಉಚಿತವಾಗಿ ನೀಡುತ್ತಾರೆ. ಅಗತ್ಯ ಬಿದ್ದರೆ ಮಾತ್ರ ಔಷಧಿ ಬರೆಯುತ್ತಾರೆ. ಎಷ್ಟೋ ಮಕ್ಕಳಿಗೆ ಔಷಧಿಯೇ ಬೇಡ ಎನ್ನುತ್ತಾರೆ. ಆದರೆ ಈ ಡಾಕ್ಟರ್ ಔಷಧಿ ನೀಡುವುದಿಲ್ಲ ಎಂದು ಕೆಲವರಿಗೆ ಅಸಮಾಧಾನವಾಗುವುದೂ ಇದೆ. ವೃತ್ತಿಯನ್ನು ವಾಣಿಜ್ಯೀಕರಿಸದ್ದರಿಂದ ಅಗತ್ಯವಿರುವವರಿಗೆ ಮಾತ್ರ ಔಷಧಿ ಬರೆಯುತ್ತಾರೆ.

ಇವರು ಓರ್ವ ಮಕ್ಕಳ ತಜ್ಞನಾಗಿ ಮಕ್ಕಳೊಂದಿಗೆ ಮಕ್ಕಳಂತೆ ಅತ್ಯಂತ ಪ್ರೀತಿಯಿಂದ ವರ್ತಿಸುತ್ತಾರೆ. ಮಕ್ಕಳಿಗೆ ಔಷಧಿ ಕುಡಿಸುವ ಹೆತ್ತವರ ಕಷ್ಟವನ್ನು ಚೆನ್ನಾಗಿ ಅರಿತಿರುವ ಇವರು ಯಾವತ್ತೂ ಪುಟಗಟ್ಟಲೆ ಪ್ರಿಸ್ಕ್ರಿಪ್ಷನ್ ಬರೆಯುವುದಿಲ್ಲ.‌ ಅನಗತ್ಯ ಆಂಟಿ ಬಯೋಟಿಕ್‌ಗಳನ್ನೂ ಹಾಕುವುದಿಲ್ಲ ಎಂದು ಇವರ ಬಳಿ ಚಿಕಿತ್ಸೆ ಪಡೆಯುವ ಮಕ್ಕಳ ಹೆತ್ತವರು ಹೇಳುತ್ತಾರೆ.

ಅವರು ಶುಲ್ಕ ಪಡೆಯುವುದಿಲ್ಲ ಎಂದು ನನಗೆ ಗೊತ್ತಾಗಿದ್ದೇ ನನ್ನ ತಂಗಿಯಿಂದ. ಅವಳು ನನ್ನ ಸೋದರಳಿಯನನ್ನು ಸುಮಾರು ಮೂರು ವರ್ಷಗಳ ಹಿಂದೆ ಎರಡು ಬಾರಿ ಅವರ ಬಳಿ ಚಿಕಿತ್ಸೆಗೆಂದು ಕರೆದೊಯ್ದು ಫೀಸ್ ಎಷ್ಟು ಸರ್ ಎಂದು ಕೇಳಿದಾಗ.. ಬೇಡ.. ಹೋಗಮ್ಮಾ ಎಂದರಂತೆ.. ಈಕೆಗೆ ಆಶ್ಚರ್ಯವಾಗಿತ್ತು. ನನ್ನ ತಂಗಿ ಈ ಕತೆ ಹೇಳಿದಾಗ ನನಗಿದನ್ನು ನಂಬಲು ಸಾಧ್ಯವಾಗಿರಲಿಲ್ಲ. ಆ ಬಳಿಕ ಅವರ ಬಳಿ ಚಿಕಿತ್ಸೆಗೆಂದು ಹೋಗುವ ಮೂರ್ನಾಲ್ಕು ಮಂದಿ ಹೆತ್ತವರ ಬಳಿ ವಿಚಾರಿಸಿದಾಗ “ನಿಮಗಿದು ಗೊತ್ತೇ ಇಲ್ವಾ…?” ಎಂದು ಮರುಪ್ರಶ್ನೆ ಹಾಕಿದರು. ಶ್ರೀಮಂತರಿಗೆ ಮತ್ತಷ್ಟು ಶ್ರೀಮಂತಿಕೆ ಗಳಿಸುವ ಆಶೆಯಿರುವುದೇ ಹೆಚ್ಚು. ಆದರೆ ಡಾ.ಬಿ.ಸಂಜೀವ ರೈ ಅವರಿಗೆ ವೈದ್ಯಕೀಯ ವೃತ್ತಿ ಒಂದು ಅಪ್ಪಟ ಮಾನವೀಯ ಸೇವೆ.

ಅವರಿಗೆ ತನ್ನ ಕಟ್ಟಡದಿಂದ ಬಾಡಿಗೆ ಬರುತ್ತದೆ, ಇನ್ನೊಂದೆಡೆ ಫಾದರ್ ಮುಲ್ಲರ್ಸ್ ವೈದ್ಯಕೀಯ ಕಾಲೇಜಿನ ಡೀನ್ ಆಗಿದ್ದುದರಿಂದ ಒಳ್ಳೆಯ ಸಂಬಳ ಬರುತ್ತದೆ. ಈ ನೆಲೆಯಲ್ಲಿ ತನ್ನಿಂದ ಸಮಾಜಕ್ಕೆ ಒಂದಿಷ್ಟು ಸೇವೆಯಿರಲಿ ಎಂದು ಅವರು ಶುಲ್ಕವನ್ನೇ ಪಡೆಯದೆ ಸೇವೆ ನೀಡುತ್ತಿದ್ದಾರೆ.

ಮೂಲತಃ ಪುತ್ತೂರು ತಾಲೂಕಿನ ಬೂಡಿಯಾರ್ ಎಂಬ ಹಳ್ಳಿಯವರಾದ ಇವರದ್ದು ಪ್ರತಿಷ್ಟಿತ ಬಂಟ ಮನೆತನ. ಆದರೆ ಬಂಟರ ಗುತ್ತಿನ ಗತ್ತಾಗಲಿ, ಪ್ರತಿಷ್ಟಿತ ವೈದ್ಯಕೀಯ ಕಾಲೇಜೊಂದರ ಶೈಕ್ಷಣಿಕ ಮುಖ್ಯಸ್ಥನೆಂಬ ಅಹಂ ಆಗಲೀ ಡಾ.ಬಿ.ಸಂಜೀವ ರೈಯವರ ಮಾತಿನಲ್ಲೋ, ವರ್ತನೆಯಲ್ಲೋ ಕಾಣಲು ಸಾಧ್ಯವಿಲ್ಲ. ನಾನು ವಿದ್ಯಾರ್ಥಿಯಾಗಿದ್ದ ಕಾಲದಲ್ಲೊಮ್ಮೆ ಇವರನ್ನು ಫಾದರ್ ಮುಲ್ಲರ್ಸ್ ಕಾಲೇಜಿನಲ್ಲಿ ಭೇಟಿಯಾಗಿದ್ದೆ. ಅಷ್ಟು ದೊಡ್ಡ ಹುದ್ದೆಯಲ್ಲಿದ್ದರೂ ನನ್ನೊಂದಿಗೆ ಅತ್ಯಂತ ಸಜ್ಜನಿಕೆಯಿಂದ ತುಳುವಿನಲ್ಲಿ ಮಾತನಾಡಿದ್ದರು. ಅವರು ಫಾದರ್ ಮುಲ್ಲರ್ಸ್ ಕಾಲೇಜಿನ ಡೀನ್ ಆಗಿದ್ದ ಕಾಲದಲ್ಲಿ ಅದೆಷ್ಟೋ ಬಡವರಿಗೆ ಆಸ್ಪತ್ರೆಯಲ್ಲಿ ಸಹಾಯ ಮಾಡುತ್ತಿದ್ದರೆನ್ನುವುದನ್ನು ಹಲವರಿಂದ ಕೇಳಿ ಬಲ್ಲೆ.

ಫಾದರ್ ಮುಲ್ಲರ್ಸ್ ಕಾಲೇಜಿನಲ್ಲಿ, ಆಸ್ಪತ್ರೆಯಲ್ಲಿ ಚಿಕ್ಕ ಪುಟ್ಟ ಗುಮಾಸ್ತ, ಜವಾನ, ಹೌಸ್ ಕೀಪಿಂಗ್ ಹುದ್ದೆಗಳಿಗಾಗಿ ಅರ್ಜಿ ಹಾಕುವವರಿಗೆ ಸ್ವಯಂ ಆಸಕ್ತಿಯಿಂದ ಉದ್ಯೋಗವನ್ನೂ ಕೊಡಿಸುತ್ತಿದ್ದರು. ಅಲ್ಲಿನ ಹೌಸ್ ಕೀಪಿಂಗ್ ಸಿಬ್ಬಂದಿಗಳೊಂದಿಗೂ ಅತ್ಯಂತ ಪ್ರೀತಿಯಿಂದ ಮಾತನಾಡಿಸುತ್ತಿದ್ದರು ಎಂದು ಅವರ ಒಡನಾಟವಿದ್ದ ಕಸ ಗುಡಿಸುವ ಮಹಿಳೆಯರಿಂದ ಅರಿತು ಬಲ್ಲೆ. ಆದರೆ ಅವರು ಯಾವತ್ತೂ ತಾನು ಮಾಡಿದ ಉಪಕಾರಗಳನ್ನು ಹೇಳಿಕೊಂಡು ನಡೆದವರಲ್ಲ.

ಕೆಲವು ವೈದ್ಯರ ಧನದಾಹದಿಂದ ವೈದ್ಯರೆಂದರೆ ಹಾಗೆಯೇ… ಜನರನ್ನು ಸುಲಿಯಲೆಂದೇ ಇರುವವರು ಎಂಬ ಆರೋಪವಿರುವ ಈ ಕಾಲದಲ್ಲೂ ಮಂಗಳೂರಿನಂತಹ ವಾಣಿಜ್ಯ ನಗರದಲ್ಲಿ ಇಂತಹ ಮಾನವೀಯ ಮುಖದ ವೈದ್ಯರಿದ್ದಾರೆ ಎಂದರೆ ಎಂತವರಿಗೂ ಆಶ್ಚರ್ಯವಾಗದಿರದು. ಡಾ.ಬಿ.ಸಂಜೀವ ರೈಯವರಂತಹವರ ಸಂಖ್ಯೆ ಇನ್ನಷ್ಟು ಹೆಚ್ಚಾಗಲಿ.. ವೈದ್ಯರ ದಿನದ ಶುಭಾಶಯಗಳು ಸಂಜೀವ್ ಸರ್…

  • ಇಸ್ಮತ್ ಪಜೀರ್

ಇದನ್ನೂ ಓದಿ: ಎಲೆಮರೆ -39: ಊರನ್ನೇ ರಂಗಭೂಮಿ ಮಾಡಿದ ಶಿಕ್ಷಕ ಅಶೋಕ ತೋಟ್ನಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...