Homeಕರ್ನಾಟಕಪ್ರಬಲ ಜಾತಿಗಳನ್ನು 2 ಎ ವರ್ಗಕ್ಕೆ ಸೇರಿಸಬಾರದು: ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಒತ್ತಾಯ

ಪ್ರಬಲ ಜಾತಿಗಳನ್ನು 2 ಎ ವರ್ಗಕ್ಕೆ ಸೇರಿಸಬಾರದು: ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಒತ್ತಾಯ

ಸರ್ಕಾರ ಬಲಿಷ್ಠರ ನ್ಯಾಯಬದ್ಧವಲ್ಲದ ಒತ್ತಾಯಕ್ಕೆ ಮಣಿದರೆ ತಬ್ಬಲಿ ಸಮುದಾಯಗಳ ಸಾಮೂಹಿಕ ಆತ್ಮಹತ್ಯೆಗೆ ಪ್ರೇರಣೆಯಾಗುತ್ತದೆ. 102 ಜಾತಿಗಳೂ ಒಟ್ಟಾಗಿ ಹೋರಾಟಕ್ಕೆ ಇಳಿಯುವುದು ಅನಿವಾರ್ಯವಾಗುತ್ತದೆ- ಪಿ.ಆರ್‌. ರಮೇಶ್

- Advertisement -
- Advertisement -

2ಎ ಮೀಸಲಾತಿಗೆ ಒತ್ತಾಯಿಸಿ ಪಂಚಮಸಾಲಿ ಲಿಂಗಾಯತ ಸಮುದಾಯ ಆಗ್ರಹಿಸುತ್ತಿರುವ ಬೆನ್ನಲ್ಲೇ, “ಪ್ರಬಲ ಸಮುದಾಯಗಳನ್ನು ಪ್ರವರ್ಗ 2ಎ ಪಟ್ಟಿಗೆ ಸೇರ್ಪಡೆ ಮಾಡಬಾರದು” ಎಂದು ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಒತ್ತಾಯಿಸಿದೆ.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನು ಅತಿ ಹಿಂದುಳಿದ ವರ್ಗಗಳ ವೇದಿಕೆಯ ಗೌರವಾಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಅಧ್ಯಕ್ಷ ಎಂ.ಸಿ.ವೇಣುಗೋಪಾಲ್‌ ನೇತೃತ್ವದ ನಿಯೋಗ ಮಂಗಳವಾರ ಭೇಟಿ ಮಾಡಿ ಮನವಿ ಸಲ್ಲಿಸಿದೆ.

“ಪ್ರವರ್ಗ 2ಎ ಪಟ್ಟಿಯಲ್ಲಿ 102 ಸಮುದಾಯಗಳಿದ್ದು, ಕೇವಲ ಶೇ 15ರಷ್ಟು ಮೀಸಲಾತಿ ಹಂಚಿಕೊಳ್ಳುತ್ತಿವೆ. ಪ್ರಬಲ ಸಮುದಾಯಗಳ ಒತ್ತಡ ಗಮನಿಸಿದರೆ ಸಣ್ಣಪುಟ್ಟ ಸಮುದಾಯಗಳ ಭವಿಷ್ಯ ಅತ್ಯಂತ ದಾರುಣವಾಗುವ ಸಾಧ್ಯತೆ ಇದೆ” ಎಂದು ಸಮಿತಿಯ ಗೌರವ ಸಲಹೆಗಾರ ವಿ.ಆರ್. ಸುದರ್ಶನ್ ಮತ್ತು ಸಿ.ಎಸ್. ದ್ವಾರಕನಾಥ್ ಕಳವಳ ವ್ಯಕ್ತಪಡಿಸಿದ್ದಾರೆ.

ಮನವಿ ಸ್ವೀಕರಿಸಿದ ಯಡಿಯೂರಪ್ಪ, ಈ ಬಗ್ಗೆ ಪರಿಶೀಲಿಸುವ ಭರವಸೆ ನೀಡಿದರು. ಹಿಂದುಳಿದ ವರ್ಗಗಳಿಗೆ ಇನ್ನಷ್ಟು ಅನುದಾನ ನೀಡುವುದಾಗಿ ತಿಳಿಸಿದರು.

ಇದನ್ನೂ ಓದಿ: ಟೈಟಾನಿಕ್ ಚಲನಚಿತ್ರ ನೋಡಿದ್ದೀರಾ?- ಲಸಿಕೆ ಆದ್ಯತೆಯ ಬಗ್ಗೆ ಬಾಂಬೆ ಹೈಕೋರ್ಟ್ ಹೇಳಿದ್ದೇನು?

ಇದಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಚಂದ್ರು, “ಪ್ರವರ್ಗ 2ಎ ಪಟ್ಟಿಗೆ ಸೇರ್ಪಡೆ ಮಾಡುವಂತೆ ಪ್ರಬಲ ಸಮುದಾಯಗಳು ಬಲ ಪ್ರದರ್ಶನ ಮಾಡುತ್ತಿವೆ. ಈಗಾಗಲೇ ಈ ಪಟ್ಟಿಯಲ್ಲಿರುವ ಅತಿ ಹಿಂದುಳಿದ ಜಾತಿಗಳು ಮೀಸಲಾತಿ ಪ್ರಯೋಜನ ಪಡೆದುಕೊಳ್ಳಲು ಸಾಧ್ಯವಾಗಿಲ್ಲ. ಹೀಗಿರುವಾಗ ಇನ್ನು ಹೆಚ್ಚಿನ ಜಾತಿಗಳ ಸೇರ್ಪಡೆಯಿಂದ ಈ ಸಣ್ಣಪುಟ್ಟ ಸಮುದಾಯಗಳಿಗೆ ತೊಂದರೆಯಾಗುತ್ತದೆ. ಅತಿ ಹಿಂದುಳಿದ ಜಾತಿಗಳ ಅಸ್ತಿತ್ವ ಮತ್ತು ಆಸ್ಮಿತೆಯನ್ನು ಕಾಪಾಡಬೇಕು” ಎಂದು ಹೇಳಿದರು.

ಅಧ್ಯಕ್ಷ ಎಂ.ಸಿ ವೇಣುಗೋಪಾಲ್‌ ಮಾತನಾಡಿ, “ಈ ಪಟ್ಟಿಯಲ್ಲಿರುವ ಸಮುದಾಯಗಳಿಗೆ ರಕ್ಷಣೆ ನೀಡುವ ಅವಶ್ಯಕತೆ ಇದೆ. ‌ಈಗಾಗಲೇ ಸಿದ್ಧಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದರು.

ವೇದಿಕೆಯ ಉಪಾಧ್ಯಕ್ಷ ಪಿ.ಆರ್‌. ರಮೇಶ್‌, “ಈ ಪಟ್ಟಿಯಲ್ಲಿರುವ ಅಸಹಾಯಕ, ಅಸಂಘಟಿತ ಜಾತಿಗಳ ಅಳಿವು-ಉಳಿವಿನ ಪ್ರಶ್ನೆ ಇದಾಗಿದೆ. ಸರ್ಕಾರ ಬಲಿಷ್ಠರ ನ್ಯಾಯಬದ್ಧವಲ್ಲದ ಒತ್ತಾಯಕ್ಕೆ ಮಣಿದರೆ ತಬ್ಬಲಿ ಸಮುದಾಯಗಳ ಸಾಮೂಹಿಕ ಆತ್ಮಹತ್ಯೆಗೆ ಪ್ರೇರಣೆಯಾಗುತ್ತದೆ. 102 ಜಾತಿಗಳೂ ಒಟ್ಟಾಗಿ ಹೋರಾಟಕ್ಕೆ ಇಳಿಯುವುದು ಅನಿವಾರ್ಯವಾಗುತ್ತದೆ” ಎಂದರು.


ಇದನ್ನೂ ಓದಿ: ಪಿಕೆ ಟಾಕೀಸ್: ನಿಗೂಢ ಅಥೆನ್ಸ್‌ನ ಜನಜೀವನವನ್ನು ಚಿತ್ರಿಸಿರುವ ಅದನ್ನು ಅಲೆಗರಿಯಾಗಿಸುವ ಸಿನಿಮಾಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...