Homeಮುಖಪುಟಡಬಲ್ ಎಂಜಿನ್ ಸರ್ಕಾರ ಸಮರ್ಥವಾಗಿಲ್ಲ, ವಲಸಿಗರ ಪ್ರಯಾಣದ ಖರ್ಚು ನಾವು ನೀಡುತ್ತೇವೆ: ತೇಜಸ್ವಿ ಯಾದವ್

ಡಬಲ್ ಎಂಜಿನ್ ಸರ್ಕಾರ ಸಮರ್ಥವಾಗಿಲ್ಲ, ವಲಸಿಗರ ಪ್ರಯಾಣದ ಖರ್ಚು ನಾವು ನೀಡುತ್ತೇವೆ: ತೇಜಸ್ವಿ ಯಾದವ್

- Advertisement -
- Advertisement -

ತಮ್ಮ ರಾಜ್ಯಕ್ಕೆ ವಾಪಾಸು ಬರುತ್ತಿರುವ ವಲಸೆ ಕಾರ್ಮಿಕರ 50 ರೈಲುಗಳ ಎಲ್ಲಾ ಪ್ರಯಾಣಿಕರ ಪ್ರಯಾಣ ದರವನ್ನು ಪಾವತಿಸಲು ಸಿದ್ದರಿದ್ದೇವೆ ಎಂದು ಬಿಹಾರದ ಪ್ರಮುಖ ವಿರೋಧ ಪಕ್ಷದ ನಾಯಕ ತೇಜಶ್ವಿ ಯಾದವ್ ಪ್ರಸ್ತಾಪಿಸಿದ್ದಾರೆ. ಇದಾದ ಕೆಲವೇ ಗಂಟೆಗಳ ನಂತರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಸರ್ಕಾರವೇ ರೈಲು ದರ ಪಾವತಿಸಲಿದೆ ಎಂಬ ನಿಲುವು ಪ್ರಕಟಿಸಿದ್ದಾರೆ.

ರೈಲಿನಲ್ಲಿ ಮನೆಗೆ ಮರಳುವ ಪ್ರತಿಯೊಬ್ಬ ಕಾರ್ಮಿಕರಿಗೆ ಪೂರ್ಣ ಟಿಕೆಟ್ ಶುಲ್ಕವನ್ನು ಮರುಪಾವತಿ ಮಾಡಲಾಗುವುದು ಮತ್ತು ಹೆಚ್ಚುವರಿ 500ರೂ. ಗಳ ನೆರವು ನೀಡಲಾಗುವುದು ಎಂದು ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಘೋಷಿಸಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು “ನಮ್ಮ ವಿದ್ಯಾರ್ಥಿಗಳಿಗೆ ಮರಳಿ ಮನೆಗೆ ಉಚಿತ ಪ್ರಯಾಣವನ್ನು ಖಾತ್ರಿಪಡಿಸುವ ನಿರ್ಧಾರವನ್ನು ನಾವು ತೆಗೆದುಕೊಂಡಿದ್ದೇವೆ ಮತ್ತು ಈಗ ಅದೇ ರೀತಿಯ ಸೌಲಭ್ಯವನ್ನು ವಲಸೆ ಕಾರ್ಮಿಕರಿಗೂ ವಿಸ್ತರಿಸಲಾಗುತ್ತಿದೆ” ಎಂದು ತಮ್ಮ ಪರೀಷ್ಕೃತ ನಿಲುವನ್ನು ಹೇಳಿದ್ದಾರೆ.

ವಿರೋಧ ಪಕ್ಷಗಳು ಮಾತ್ರವಲ್ಲದೇ ತಮ್ಮದೇ ಸಮ್ಮಿಶ್ರ ಸರ್ಕಾರದ ಹಲವು ನಾಯಕರು ಸಹ ನಿತೀಶ್‌ ಕುಮಾರ್‌ರವರ ಮೊದಲಿನ ನಿಲುವನ್ನು ಟೀಕಿಸಿದ್ದರು. ಇತರ ರಾಜ್ಯಗಳು ತಮ್ಮ ಕಾರ್ಮಿಕರನ್ನು ವಾಪಸ್ ಕಳುಹಿಸುವಂತೆ ಕೇಂದ್ರಕ್ಕೆ ಮನವಿ ಮಾಡಿಕೊಂಡಾಗ ನಿತೀಶ್ ಕುಮಾರ್ ಅವರು ಕಾರ್ಮಿಕರು ಇದ್ದಲ್ಲಿಯೇ ಇರಬೇಕೆಂದು ಒತ್ತಾಯಿಸಿದರು. ಕಾರ್ಮಿಕರು ಹಿಂದಿರುಗಿದ ನಂತರ 14 ದಿನಗಳವರೆಗೆ ಕಾರ್ಮಿಕರನ್ನು ಪ್ರತ್ಯೇಕವಾಗಿರಿಸಲು ಸಮರ್ಪಕ ಸೌಲಭ್ಯಗಳಿಲ್ಲ. ಉತ್ತರ ಪ್ರದೇಶದಂತಹ ರಾಜ್ಯಗಳ ಅವರ ಸಹವರ್ತಿಗಳು ಇತರ ನಗರಗಳಿಂದ ವಿದ್ಯಾರ್ಥಿಗಳು ಮತ್ತು ಕಾರ್ಮಿಕರನ್ನು ಮರಳಿ ಕರೆತರಲು ಬಸ್ಸುಗಳನ್ನು ಆಯೋಜಿಸಿದರೆ ನಿತೀಶ್ ಅವರು ರೈಲುಗಳನ್ನು ತಡೆದು ಕೇಂದ್ರ ಸರ್ಕಾರಕ್ಕೆ ಅನುಕೂಲ ಮಾಡಿಕೊಟ್ಟರು ಎಂಬ ಟೀಕೆಗಳು ಅವರ ಮೇಲಿದ್ದವು.

ಆರ್‌ಜೆಡಿ ಮುಖಂಡ ಹಾಗೂ ವಿರೋಧ ಪಕ್ಷದ ನಾಯಕರಾದ ತೇಜಸ್ವಿ ಯಾದವ್ ” ಆರ್‌ಜೆಡಿ 50 ರೈಲುಗಳ ಶುಲ್ಕವನ್ನು ಅಸಮರ್ಥ ಬಿಹಾರ ಸರ್ಕಾರಕ್ಕೆ ಕಾರ್ಮಿಕರ ಪರವಾಗಿ ನೀಡುತ್ತೇವೆ. ಮುಂದಿನ 5 ದಿನಗಳಲ್ಲಿ ಸರ್ಕಾರವು ರೈಲುಗಳನ್ನು ವ್ಯವಸ್ಥೆಗೊಳಿಸಬೇಕು, ಪಕ್ಷವು ತನ್ನ ಶುಲ್ಕವನ್ನು ತಕ್ಷಣವೇ ಸರ್ಕಾರಿ ಖಾತೆಗೆ ವರ್ಗಾಯಿಸುತ್ತದೆ” ಎಂದು ಹೇಳಿದ್ದರು.

ಅಲ್ಲದೆ ಟ್ವಿಟ್ಟರ್‌ನಲ್ಲಿ “ಗೌರವಾನ್ವಿತ ನಿತೀಶ್ ಕುಮಾರ್ ಅವರೇ, ಬಡ ಕಾರ್ಮಿಕರ 50 ರೈಲುಗಳ ಶುಲ್ಕವನ್ನು ಭರಿಸಲು ಆರ್‌ಜೆಡಿ ಸಿದ್ಧವಾಗಿದೆ, ಯಾಕೆಂದರೆ ಡಬಲ್ ಎಂಜಿನ್ ಸರ್ಕಾರ ಸಮರ್ಥವಾಗಿಲ್ಲ. ದಯವಿಟ್ಟು ಈಗ ನಿರ್ವಹಣೆಯನ್ನು ತಕ್ಷಣವೇ ಮಾಡಿ. ಸುಶಿಲ್ ಮೋದಿಯವರೇ, ದಯವಿಟ್ಟು ಒಟ್ಟು ಮೊತ್ತವನ್ನು ಹೇಳಿ, ಚೆಕ್ ಅನ್ನು ತಕ್ಷಣ ಕಳುಹಿಸಲಾಗುತ್ತದೆ. ಹೇಗಾದರೂ, ನೀವು ಲೆಕ್ಕ ಪತ್ರವನ್ನು ನೋಡಲು ಇಷ್ಟಪಡುತ್ತೀರಿ” ಎಂದು ಕುಟುಕಿದ್ದರು.

ಮಾರ್ಚ್ 24 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ನಾಲ್ಕು ಗಂಟೆಗಳ ಸೂಚನೆಯೊಂದಿಗೆ ದೇಶಾದ್ಯಂತ ಲಾಕ್ ಡೌನ್ ಘೋಷಿಸಿದಾಗ, ಲಕ್ಷಾಂತರ ವಲಸೆ ಕಾರ್ಮಿಕರು ತಾವು ದುಡಿಯುವ ನಗರಗಳಲ್ಲಿ ಸಿಲುಕಿಕೊಂಡರು. ಅವರ ದುಡಿಮೆಗಳು ಹಠಾತ್ತನೆ ನಿಂತು ಹೋದುದರಿಂದ, ಹಲವಾರು ಕಾರ್ಮಿಕರು ಮನೆಗೆ ತೆರಳಲು ನಿರ್ಧರಿಸಿದರು. ಆದರೆ ಯಾವುದೇ ಸಾರ್ವಜನಿಕ ಸಾರಿಗೆ ಇಲ್ಲದೆ ಸಾವಿರಾರು ಜನರು ತಮ್ಮ ಊರಿಗೆ ಮರಳಲು ಸಾವಿರಾರು ಕಿಲೋಮೀಟರನ್ನು ಕಾಲ್ನಡಿಗೆಯಲ್ಲೇ ನಡೆದರು. ಈ ಸಂಧರ್ಭದಲ್ಲಿ ನೂರಾರು ಜನರು ನೀರು-ಆಹಾರವಿಲ್ಲದೆ ಸಾವಿಗೀಡಾಗಿದ್ದರು.

ಇದರಿಂದಾಗಿ ಕಳೆದ ಶುಕ್ರವಾರ ಬಿಜೆಪಿ ತಮಗೆ ರಾಜಕೀಯ ಹಿನ್ನಡೆಯಾಗುತ್ತಿರುವ ಬಗ್ಗೆ ಚರ್ಚಿಸಿ, ವಿಶೇಷ ರೈಲುಗಳ ಮೂಲಕ ವಲಸೆ ಕಾರ್ಮಿಕರನ್ನು ಮನೆಗೆ ಹಿಂದಿರುಗಿಸುವುದಾಗಿ ಘೋಷಿಸಿತು. ಬಿಜೆಪಿ ಆಡಳಿತವಿಲ್ಲದ ರಾಜ್ಯ ಸರ್ಕಾರಗಳು ರೈಲುಗಳಿಗೆ ಪಾವತಿಸಲು ಹಣವಿಲ್ಲ ಎಂದು ಹೇಳಿದ್ದು, ಸಾಂಕ್ರಾಮಿಕ ರೋಗವನ್ನು ಎದುರಿಸುವ ಕಾರಣದಿಂದಾಗಿ ಅವರ ಹಣಕಾಸು ವೆಚ್ಚ ಒತ್ತಡದಲ್ಲಿದೆ ಎಂದು ಹೇಳಿದ್ದವು.

ಇಂದು ಬೆಳಿಗ್ಗೆ ಕಾಂಗ್ರೆಸ್ ಮುಖಂಡೆ ಸೋನಿಯಾ ಗಾಂಧಿ ತಮ್ಮ ಪಕ್ಷವು ಕಾರ್ಮಿಕರ ಪ್ರಯಾಣ ಹಣವನ್ನು ಭರಿಸುತ್ತದೆ ಎಂದು ಘೋಷಿಸಿದ್ದಾರೆ.


ಇದನ್ನೂ ಓದಿ:  ರೈಲು ದರ ವಿವಾದ: ಕೇಂದ್ರದ ಮೂರ್ಖತನವೆಂದ ಬಿಜಿಪಿ ಸಂಸದ ಸುಬ್ರಮಣ್ಯ ಸ್ವಾಮಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...