Homeಮುಖಪುಟಡಬಲ್ ಎಂಜಿನ್ ಸರ್ಕಾರ ಸಮರ್ಥವಾಗಿಲ್ಲ, ವಲಸಿಗರ ಪ್ರಯಾಣದ ಖರ್ಚು ನಾವು ನೀಡುತ್ತೇವೆ: ತೇಜಸ್ವಿ ಯಾದವ್

ಡಬಲ್ ಎಂಜಿನ್ ಸರ್ಕಾರ ಸಮರ್ಥವಾಗಿಲ್ಲ, ವಲಸಿಗರ ಪ್ರಯಾಣದ ಖರ್ಚು ನಾವು ನೀಡುತ್ತೇವೆ: ತೇಜಸ್ವಿ ಯಾದವ್

- Advertisement -
- Advertisement -

ತಮ್ಮ ರಾಜ್ಯಕ್ಕೆ ವಾಪಾಸು ಬರುತ್ತಿರುವ ವಲಸೆ ಕಾರ್ಮಿಕರ 50 ರೈಲುಗಳ ಎಲ್ಲಾ ಪ್ರಯಾಣಿಕರ ಪ್ರಯಾಣ ದರವನ್ನು ಪಾವತಿಸಲು ಸಿದ್ದರಿದ್ದೇವೆ ಎಂದು ಬಿಹಾರದ ಪ್ರಮುಖ ವಿರೋಧ ಪಕ್ಷದ ನಾಯಕ ತೇಜಶ್ವಿ ಯಾದವ್ ಪ್ರಸ್ತಾಪಿಸಿದ್ದಾರೆ. ಇದಾದ ಕೆಲವೇ ಗಂಟೆಗಳ ನಂತರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಸರ್ಕಾರವೇ ರೈಲು ದರ ಪಾವತಿಸಲಿದೆ ಎಂಬ ನಿಲುವು ಪ್ರಕಟಿಸಿದ್ದಾರೆ.

ರೈಲಿನಲ್ಲಿ ಮನೆಗೆ ಮರಳುವ ಪ್ರತಿಯೊಬ್ಬ ಕಾರ್ಮಿಕರಿಗೆ ಪೂರ್ಣ ಟಿಕೆಟ್ ಶುಲ್ಕವನ್ನು ಮರುಪಾವತಿ ಮಾಡಲಾಗುವುದು ಮತ್ತು ಹೆಚ್ಚುವರಿ 500ರೂ. ಗಳ ನೆರವು ನೀಡಲಾಗುವುದು ಎಂದು ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಘೋಷಿಸಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು “ನಮ್ಮ ವಿದ್ಯಾರ್ಥಿಗಳಿಗೆ ಮರಳಿ ಮನೆಗೆ ಉಚಿತ ಪ್ರಯಾಣವನ್ನು ಖಾತ್ರಿಪಡಿಸುವ ನಿರ್ಧಾರವನ್ನು ನಾವು ತೆಗೆದುಕೊಂಡಿದ್ದೇವೆ ಮತ್ತು ಈಗ ಅದೇ ರೀತಿಯ ಸೌಲಭ್ಯವನ್ನು ವಲಸೆ ಕಾರ್ಮಿಕರಿಗೂ ವಿಸ್ತರಿಸಲಾಗುತ್ತಿದೆ” ಎಂದು ತಮ್ಮ ಪರೀಷ್ಕೃತ ನಿಲುವನ್ನು ಹೇಳಿದ್ದಾರೆ.

ವಿರೋಧ ಪಕ್ಷಗಳು ಮಾತ್ರವಲ್ಲದೇ ತಮ್ಮದೇ ಸಮ್ಮಿಶ್ರ ಸರ್ಕಾರದ ಹಲವು ನಾಯಕರು ಸಹ ನಿತೀಶ್‌ ಕುಮಾರ್‌ರವರ ಮೊದಲಿನ ನಿಲುವನ್ನು ಟೀಕಿಸಿದ್ದರು. ಇತರ ರಾಜ್ಯಗಳು ತಮ್ಮ ಕಾರ್ಮಿಕರನ್ನು ವಾಪಸ್ ಕಳುಹಿಸುವಂತೆ ಕೇಂದ್ರಕ್ಕೆ ಮನವಿ ಮಾಡಿಕೊಂಡಾಗ ನಿತೀಶ್ ಕುಮಾರ್ ಅವರು ಕಾರ್ಮಿಕರು ಇದ್ದಲ್ಲಿಯೇ ಇರಬೇಕೆಂದು ಒತ್ತಾಯಿಸಿದರು. ಕಾರ್ಮಿಕರು ಹಿಂದಿರುಗಿದ ನಂತರ 14 ದಿನಗಳವರೆಗೆ ಕಾರ್ಮಿಕರನ್ನು ಪ್ರತ್ಯೇಕವಾಗಿರಿಸಲು ಸಮರ್ಪಕ ಸೌಲಭ್ಯಗಳಿಲ್ಲ. ಉತ್ತರ ಪ್ರದೇಶದಂತಹ ರಾಜ್ಯಗಳ ಅವರ ಸಹವರ್ತಿಗಳು ಇತರ ನಗರಗಳಿಂದ ವಿದ್ಯಾರ್ಥಿಗಳು ಮತ್ತು ಕಾರ್ಮಿಕರನ್ನು ಮರಳಿ ಕರೆತರಲು ಬಸ್ಸುಗಳನ್ನು ಆಯೋಜಿಸಿದರೆ ನಿತೀಶ್ ಅವರು ರೈಲುಗಳನ್ನು ತಡೆದು ಕೇಂದ್ರ ಸರ್ಕಾರಕ್ಕೆ ಅನುಕೂಲ ಮಾಡಿಕೊಟ್ಟರು ಎಂಬ ಟೀಕೆಗಳು ಅವರ ಮೇಲಿದ್ದವು.

ಆರ್‌ಜೆಡಿ ಮುಖಂಡ ಹಾಗೂ ವಿರೋಧ ಪಕ್ಷದ ನಾಯಕರಾದ ತೇಜಸ್ವಿ ಯಾದವ್ ” ಆರ್‌ಜೆಡಿ 50 ರೈಲುಗಳ ಶುಲ್ಕವನ್ನು ಅಸಮರ್ಥ ಬಿಹಾರ ಸರ್ಕಾರಕ್ಕೆ ಕಾರ್ಮಿಕರ ಪರವಾಗಿ ನೀಡುತ್ತೇವೆ. ಮುಂದಿನ 5 ದಿನಗಳಲ್ಲಿ ಸರ್ಕಾರವು ರೈಲುಗಳನ್ನು ವ್ಯವಸ್ಥೆಗೊಳಿಸಬೇಕು, ಪಕ್ಷವು ತನ್ನ ಶುಲ್ಕವನ್ನು ತಕ್ಷಣವೇ ಸರ್ಕಾರಿ ಖಾತೆಗೆ ವರ್ಗಾಯಿಸುತ್ತದೆ” ಎಂದು ಹೇಳಿದ್ದರು.

ಅಲ್ಲದೆ ಟ್ವಿಟ್ಟರ್‌ನಲ್ಲಿ “ಗೌರವಾನ್ವಿತ ನಿತೀಶ್ ಕುಮಾರ್ ಅವರೇ, ಬಡ ಕಾರ್ಮಿಕರ 50 ರೈಲುಗಳ ಶುಲ್ಕವನ್ನು ಭರಿಸಲು ಆರ್‌ಜೆಡಿ ಸಿದ್ಧವಾಗಿದೆ, ಯಾಕೆಂದರೆ ಡಬಲ್ ಎಂಜಿನ್ ಸರ್ಕಾರ ಸಮರ್ಥವಾಗಿಲ್ಲ. ದಯವಿಟ್ಟು ಈಗ ನಿರ್ವಹಣೆಯನ್ನು ತಕ್ಷಣವೇ ಮಾಡಿ. ಸುಶಿಲ್ ಮೋದಿಯವರೇ, ದಯವಿಟ್ಟು ಒಟ್ಟು ಮೊತ್ತವನ್ನು ಹೇಳಿ, ಚೆಕ್ ಅನ್ನು ತಕ್ಷಣ ಕಳುಹಿಸಲಾಗುತ್ತದೆ. ಹೇಗಾದರೂ, ನೀವು ಲೆಕ್ಕ ಪತ್ರವನ್ನು ನೋಡಲು ಇಷ್ಟಪಡುತ್ತೀರಿ” ಎಂದು ಕುಟುಕಿದ್ದರು.

ಮಾರ್ಚ್ 24 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ನಾಲ್ಕು ಗಂಟೆಗಳ ಸೂಚನೆಯೊಂದಿಗೆ ದೇಶಾದ್ಯಂತ ಲಾಕ್ ಡೌನ್ ಘೋಷಿಸಿದಾಗ, ಲಕ್ಷಾಂತರ ವಲಸೆ ಕಾರ್ಮಿಕರು ತಾವು ದುಡಿಯುವ ನಗರಗಳಲ್ಲಿ ಸಿಲುಕಿಕೊಂಡರು. ಅವರ ದುಡಿಮೆಗಳು ಹಠಾತ್ತನೆ ನಿಂತು ಹೋದುದರಿಂದ, ಹಲವಾರು ಕಾರ್ಮಿಕರು ಮನೆಗೆ ತೆರಳಲು ನಿರ್ಧರಿಸಿದರು. ಆದರೆ ಯಾವುದೇ ಸಾರ್ವಜನಿಕ ಸಾರಿಗೆ ಇಲ್ಲದೆ ಸಾವಿರಾರು ಜನರು ತಮ್ಮ ಊರಿಗೆ ಮರಳಲು ಸಾವಿರಾರು ಕಿಲೋಮೀಟರನ್ನು ಕಾಲ್ನಡಿಗೆಯಲ್ಲೇ ನಡೆದರು. ಈ ಸಂಧರ್ಭದಲ್ಲಿ ನೂರಾರು ಜನರು ನೀರು-ಆಹಾರವಿಲ್ಲದೆ ಸಾವಿಗೀಡಾಗಿದ್ದರು.

ಇದರಿಂದಾಗಿ ಕಳೆದ ಶುಕ್ರವಾರ ಬಿಜೆಪಿ ತಮಗೆ ರಾಜಕೀಯ ಹಿನ್ನಡೆಯಾಗುತ್ತಿರುವ ಬಗ್ಗೆ ಚರ್ಚಿಸಿ, ವಿಶೇಷ ರೈಲುಗಳ ಮೂಲಕ ವಲಸೆ ಕಾರ್ಮಿಕರನ್ನು ಮನೆಗೆ ಹಿಂದಿರುಗಿಸುವುದಾಗಿ ಘೋಷಿಸಿತು. ಬಿಜೆಪಿ ಆಡಳಿತವಿಲ್ಲದ ರಾಜ್ಯ ಸರ್ಕಾರಗಳು ರೈಲುಗಳಿಗೆ ಪಾವತಿಸಲು ಹಣವಿಲ್ಲ ಎಂದು ಹೇಳಿದ್ದು, ಸಾಂಕ್ರಾಮಿಕ ರೋಗವನ್ನು ಎದುರಿಸುವ ಕಾರಣದಿಂದಾಗಿ ಅವರ ಹಣಕಾಸು ವೆಚ್ಚ ಒತ್ತಡದಲ್ಲಿದೆ ಎಂದು ಹೇಳಿದ್ದವು.

ಇಂದು ಬೆಳಿಗ್ಗೆ ಕಾಂಗ್ರೆಸ್ ಮುಖಂಡೆ ಸೋನಿಯಾ ಗಾಂಧಿ ತಮ್ಮ ಪಕ್ಷವು ಕಾರ್ಮಿಕರ ಪ್ರಯಾಣ ಹಣವನ್ನು ಭರಿಸುತ್ತದೆ ಎಂದು ಘೋಷಿಸಿದ್ದಾರೆ.


ಇದನ್ನೂ ಓದಿ:  ರೈಲು ದರ ವಿವಾದ: ಕೇಂದ್ರದ ಮೂರ್ಖತನವೆಂದ ಬಿಜಿಪಿ ಸಂಸದ ಸುಬ್ರಮಣ್ಯ ಸ್ವಾಮಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...