Homeಮುಖಪುಟಡಬಲ್ ಎಂಜಿನ್ ಸರ್ಕಾರ ಸಮರ್ಥವಾಗಿಲ್ಲ, ವಲಸಿಗರ ಪ್ರಯಾಣದ ಖರ್ಚು ನಾವು ನೀಡುತ್ತೇವೆ: ತೇಜಸ್ವಿ ಯಾದವ್

ಡಬಲ್ ಎಂಜಿನ್ ಸರ್ಕಾರ ಸಮರ್ಥವಾಗಿಲ್ಲ, ವಲಸಿಗರ ಪ್ರಯಾಣದ ಖರ್ಚು ನಾವು ನೀಡುತ್ತೇವೆ: ತೇಜಸ್ವಿ ಯಾದವ್

- Advertisement -
- Advertisement -

ತಮ್ಮ ರಾಜ್ಯಕ್ಕೆ ವಾಪಾಸು ಬರುತ್ತಿರುವ ವಲಸೆ ಕಾರ್ಮಿಕರ 50 ರೈಲುಗಳ ಎಲ್ಲಾ ಪ್ರಯಾಣಿಕರ ಪ್ರಯಾಣ ದರವನ್ನು ಪಾವತಿಸಲು ಸಿದ್ದರಿದ್ದೇವೆ ಎಂದು ಬಿಹಾರದ ಪ್ರಮುಖ ವಿರೋಧ ಪಕ್ಷದ ನಾಯಕ ತೇಜಶ್ವಿ ಯಾದವ್ ಪ್ರಸ್ತಾಪಿಸಿದ್ದಾರೆ. ಇದಾದ ಕೆಲವೇ ಗಂಟೆಗಳ ನಂತರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಸರ್ಕಾರವೇ ರೈಲು ದರ ಪಾವತಿಸಲಿದೆ ಎಂಬ ನಿಲುವು ಪ್ರಕಟಿಸಿದ್ದಾರೆ.

ರೈಲಿನಲ್ಲಿ ಮನೆಗೆ ಮರಳುವ ಪ್ರತಿಯೊಬ್ಬ ಕಾರ್ಮಿಕರಿಗೆ ಪೂರ್ಣ ಟಿಕೆಟ್ ಶುಲ್ಕವನ್ನು ಮರುಪಾವತಿ ಮಾಡಲಾಗುವುದು ಮತ್ತು ಹೆಚ್ಚುವರಿ 500ರೂ. ಗಳ ನೆರವು ನೀಡಲಾಗುವುದು ಎಂದು ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಘೋಷಿಸಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು “ನಮ್ಮ ವಿದ್ಯಾರ್ಥಿಗಳಿಗೆ ಮರಳಿ ಮನೆಗೆ ಉಚಿತ ಪ್ರಯಾಣವನ್ನು ಖಾತ್ರಿಪಡಿಸುವ ನಿರ್ಧಾರವನ್ನು ನಾವು ತೆಗೆದುಕೊಂಡಿದ್ದೇವೆ ಮತ್ತು ಈಗ ಅದೇ ರೀತಿಯ ಸೌಲಭ್ಯವನ್ನು ವಲಸೆ ಕಾರ್ಮಿಕರಿಗೂ ವಿಸ್ತರಿಸಲಾಗುತ್ತಿದೆ” ಎಂದು ತಮ್ಮ ಪರೀಷ್ಕೃತ ನಿಲುವನ್ನು ಹೇಳಿದ್ದಾರೆ.

ವಿರೋಧ ಪಕ್ಷಗಳು ಮಾತ್ರವಲ್ಲದೇ ತಮ್ಮದೇ ಸಮ್ಮಿಶ್ರ ಸರ್ಕಾರದ ಹಲವು ನಾಯಕರು ಸಹ ನಿತೀಶ್‌ ಕುಮಾರ್‌ರವರ ಮೊದಲಿನ ನಿಲುವನ್ನು ಟೀಕಿಸಿದ್ದರು. ಇತರ ರಾಜ್ಯಗಳು ತಮ್ಮ ಕಾರ್ಮಿಕರನ್ನು ವಾಪಸ್ ಕಳುಹಿಸುವಂತೆ ಕೇಂದ್ರಕ್ಕೆ ಮನವಿ ಮಾಡಿಕೊಂಡಾಗ ನಿತೀಶ್ ಕುಮಾರ್ ಅವರು ಕಾರ್ಮಿಕರು ಇದ್ದಲ್ಲಿಯೇ ಇರಬೇಕೆಂದು ಒತ್ತಾಯಿಸಿದರು. ಕಾರ್ಮಿಕರು ಹಿಂದಿರುಗಿದ ನಂತರ 14 ದಿನಗಳವರೆಗೆ ಕಾರ್ಮಿಕರನ್ನು ಪ್ರತ್ಯೇಕವಾಗಿರಿಸಲು ಸಮರ್ಪಕ ಸೌಲಭ್ಯಗಳಿಲ್ಲ. ಉತ್ತರ ಪ್ರದೇಶದಂತಹ ರಾಜ್ಯಗಳ ಅವರ ಸಹವರ್ತಿಗಳು ಇತರ ನಗರಗಳಿಂದ ವಿದ್ಯಾರ್ಥಿಗಳು ಮತ್ತು ಕಾರ್ಮಿಕರನ್ನು ಮರಳಿ ಕರೆತರಲು ಬಸ್ಸುಗಳನ್ನು ಆಯೋಜಿಸಿದರೆ ನಿತೀಶ್ ಅವರು ರೈಲುಗಳನ್ನು ತಡೆದು ಕೇಂದ್ರ ಸರ್ಕಾರಕ್ಕೆ ಅನುಕೂಲ ಮಾಡಿಕೊಟ್ಟರು ಎಂಬ ಟೀಕೆಗಳು ಅವರ ಮೇಲಿದ್ದವು.

ಆರ್‌ಜೆಡಿ ಮುಖಂಡ ಹಾಗೂ ವಿರೋಧ ಪಕ್ಷದ ನಾಯಕರಾದ ತೇಜಸ್ವಿ ಯಾದವ್ ” ಆರ್‌ಜೆಡಿ 50 ರೈಲುಗಳ ಶುಲ್ಕವನ್ನು ಅಸಮರ್ಥ ಬಿಹಾರ ಸರ್ಕಾರಕ್ಕೆ ಕಾರ್ಮಿಕರ ಪರವಾಗಿ ನೀಡುತ್ತೇವೆ. ಮುಂದಿನ 5 ದಿನಗಳಲ್ಲಿ ಸರ್ಕಾರವು ರೈಲುಗಳನ್ನು ವ್ಯವಸ್ಥೆಗೊಳಿಸಬೇಕು, ಪಕ್ಷವು ತನ್ನ ಶುಲ್ಕವನ್ನು ತಕ್ಷಣವೇ ಸರ್ಕಾರಿ ಖಾತೆಗೆ ವರ್ಗಾಯಿಸುತ್ತದೆ” ಎಂದು ಹೇಳಿದ್ದರು.

ಅಲ್ಲದೆ ಟ್ವಿಟ್ಟರ್‌ನಲ್ಲಿ “ಗೌರವಾನ್ವಿತ ನಿತೀಶ್ ಕುಮಾರ್ ಅವರೇ, ಬಡ ಕಾರ್ಮಿಕರ 50 ರೈಲುಗಳ ಶುಲ್ಕವನ್ನು ಭರಿಸಲು ಆರ್‌ಜೆಡಿ ಸಿದ್ಧವಾಗಿದೆ, ಯಾಕೆಂದರೆ ಡಬಲ್ ಎಂಜಿನ್ ಸರ್ಕಾರ ಸಮರ್ಥವಾಗಿಲ್ಲ. ದಯವಿಟ್ಟು ಈಗ ನಿರ್ವಹಣೆಯನ್ನು ತಕ್ಷಣವೇ ಮಾಡಿ. ಸುಶಿಲ್ ಮೋದಿಯವರೇ, ದಯವಿಟ್ಟು ಒಟ್ಟು ಮೊತ್ತವನ್ನು ಹೇಳಿ, ಚೆಕ್ ಅನ್ನು ತಕ್ಷಣ ಕಳುಹಿಸಲಾಗುತ್ತದೆ. ಹೇಗಾದರೂ, ನೀವು ಲೆಕ್ಕ ಪತ್ರವನ್ನು ನೋಡಲು ಇಷ್ಟಪಡುತ್ತೀರಿ” ಎಂದು ಕುಟುಕಿದ್ದರು.

ಮಾರ್ಚ್ 24 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ನಾಲ್ಕು ಗಂಟೆಗಳ ಸೂಚನೆಯೊಂದಿಗೆ ದೇಶಾದ್ಯಂತ ಲಾಕ್ ಡೌನ್ ಘೋಷಿಸಿದಾಗ, ಲಕ್ಷಾಂತರ ವಲಸೆ ಕಾರ್ಮಿಕರು ತಾವು ದುಡಿಯುವ ನಗರಗಳಲ್ಲಿ ಸಿಲುಕಿಕೊಂಡರು. ಅವರ ದುಡಿಮೆಗಳು ಹಠಾತ್ತನೆ ನಿಂತು ಹೋದುದರಿಂದ, ಹಲವಾರು ಕಾರ್ಮಿಕರು ಮನೆಗೆ ತೆರಳಲು ನಿರ್ಧರಿಸಿದರು. ಆದರೆ ಯಾವುದೇ ಸಾರ್ವಜನಿಕ ಸಾರಿಗೆ ಇಲ್ಲದೆ ಸಾವಿರಾರು ಜನರು ತಮ್ಮ ಊರಿಗೆ ಮರಳಲು ಸಾವಿರಾರು ಕಿಲೋಮೀಟರನ್ನು ಕಾಲ್ನಡಿಗೆಯಲ್ಲೇ ನಡೆದರು. ಈ ಸಂಧರ್ಭದಲ್ಲಿ ನೂರಾರು ಜನರು ನೀರು-ಆಹಾರವಿಲ್ಲದೆ ಸಾವಿಗೀಡಾಗಿದ್ದರು.

ಇದರಿಂದಾಗಿ ಕಳೆದ ಶುಕ್ರವಾರ ಬಿಜೆಪಿ ತಮಗೆ ರಾಜಕೀಯ ಹಿನ್ನಡೆಯಾಗುತ್ತಿರುವ ಬಗ್ಗೆ ಚರ್ಚಿಸಿ, ವಿಶೇಷ ರೈಲುಗಳ ಮೂಲಕ ವಲಸೆ ಕಾರ್ಮಿಕರನ್ನು ಮನೆಗೆ ಹಿಂದಿರುಗಿಸುವುದಾಗಿ ಘೋಷಿಸಿತು. ಬಿಜೆಪಿ ಆಡಳಿತವಿಲ್ಲದ ರಾಜ್ಯ ಸರ್ಕಾರಗಳು ರೈಲುಗಳಿಗೆ ಪಾವತಿಸಲು ಹಣವಿಲ್ಲ ಎಂದು ಹೇಳಿದ್ದು, ಸಾಂಕ್ರಾಮಿಕ ರೋಗವನ್ನು ಎದುರಿಸುವ ಕಾರಣದಿಂದಾಗಿ ಅವರ ಹಣಕಾಸು ವೆಚ್ಚ ಒತ್ತಡದಲ್ಲಿದೆ ಎಂದು ಹೇಳಿದ್ದವು.

ಇಂದು ಬೆಳಿಗ್ಗೆ ಕಾಂಗ್ರೆಸ್ ಮುಖಂಡೆ ಸೋನಿಯಾ ಗಾಂಧಿ ತಮ್ಮ ಪಕ್ಷವು ಕಾರ್ಮಿಕರ ಪ್ರಯಾಣ ಹಣವನ್ನು ಭರಿಸುತ್ತದೆ ಎಂದು ಘೋಷಿಸಿದ್ದಾರೆ.


ಇದನ್ನೂ ಓದಿ:  ರೈಲು ದರ ವಿವಾದ: ಕೇಂದ್ರದ ಮೂರ್ಖತನವೆಂದ ಬಿಜಿಪಿ ಸಂಸದ ಸುಬ್ರಮಣ್ಯ ಸ್ವಾಮಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...