Homeಮುಖಪುಟಡಬಲ್ ಎಂಜಿನ್ ಸರ್ಕಾರ ಸಮರ್ಥವಾಗಿಲ್ಲ, ವಲಸಿಗರ ಪ್ರಯಾಣದ ಖರ್ಚು ನಾವು ನೀಡುತ್ತೇವೆ: ತೇಜಸ್ವಿ ಯಾದವ್

ಡಬಲ್ ಎಂಜಿನ್ ಸರ್ಕಾರ ಸಮರ್ಥವಾಗಿಲ್ಲ, ವಲಸಿಗರ ಪ್ರಯಾಣದ ಖರ್ಚು ನಾವು ನೀಡುತ್ತೇವೆ: ತೇಜಸ್ವಿ ಯಾದವ್

- Advertisement -
- Advertisement -

ತಮ್ಮ ರಾಜ್ಯಕ್ಕೆ ವಾಪಾಸು ಬರುತ್ತಿರುವ ವಲಸೆ ಕಾರ್ಮಿಕರ 50 ರೈಲುಗಳ ಎಲ್ಲಾ ಪ್ರಯಾಣಿಕರ ಪ್ರಯಾಣ ದರವನ್ನು ಪಾವತಿಸಲು ಸಿದ್ದರಿದ್ದೇವೆ ಎಂದು ಬಿಹಾರದ ಪ್ರಮುಖ ವಿರೋಧ ಪಕ್ಷದ ನಾಯಕ ತೇಜಶ್ವಿ ಯಾದವ್ ಪ್ರಸ್ತಾಪಿಸಿದ್ದಾರೆ. ಇದಾದ ಕೆಲವೇ ಗಂಟೆಗಳ ನಂತರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಸರ್ಕಾರವೇ ರೈಲು ದರ ಪಾವತಿಸಲಿದೆ ಎಂಬ ನಿಲುವು ಪ್ರಕಟಿಸಿದ್ದಾರೆ.

ರೈಲಿನಲ್ಲಿ ಮನೆಗೆ ಮರಳುವ ಪ್ರತಿಯೊಬ್ಬ ಕಾರ್ಮಿಕರಿಗೆ ಪೂರ್ಣ ಟಿಕೆಟ್ ಶುಲ್ಕವನ್ನು ಮರುಪಾವತಿ ಮಾಡಲಾಗುವುದು ಮತ್ತು ಹೆಚ್ಚುವರಿ 500ರೂ. ಗಳ ನೆರವು ನೀಡಲಾಗುವುದು ಎಂದು ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಘೋಷಿಸಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು “ನಮ್ಮ ವಿದ್ಯಾರ್ಥಿಗಳಿಗೆ ಮರಳಿ ಮನೆಗೆ ಉಚಿತ ಪ್ರಯಾಣವನ್ನು ಖಾತ್ರಿಪಡಿಸುವ ನಿರ್ಧಾರವನ್ನು ನಾವು ತೆಗೆದುಕೊಂಡಿದ್ದೇವೆ ಮತ್ತು ಈಗ ಅದೇ ರೀತಿಯ ಸೌಲಭ್ಯವನ್ನು ವಲಸೆ ಕಾರ್ಮಿಕರಿಗೂ ವಿಸ್ತರಿಸಲಾಗುತ್ತಿದೆ” ಎಂದು ತಮ್ಮ ಪರೀಷ್ಕೃತ ನಿಲುವನ್ನು ಹೇಳಿದ್ದಾರೆ.

ವಿರೋಧ ಪಕ್ಷಗಳು ಮಾತ್ರವಲ್ಲದೇ ತಮ್ಮದೇ ಸಮ್ಮಿಶ್ರ ಸರ್ಕಾರದ ಹಲವು ನಾಯಕರು ಸಹ ನಿತೀಶ್‌ ಕುಮಾರ್‌ರವರ ಮೊದಲಿನ ನಿಲುವನ್ನು ಟೀಕಿಸಿದ್ದರು. ಇತರ ರಾಜ್ಯಗಳು ತಮ್ಮ ಕಾರ್ಮಿಕರನ್ನು ವಾಪಸ್ ಕಳುಹಿಸುವಂತೆ ಕೇಂದ್ರಕ್ಕೆ ಮನವಿ ಮಾಡಿಕೊಂಡಾಗ ನಿತೀಶ್ ಕುಮಾರ್ ಅವರು ಕಾರ್ಮಿಕರು ಇದ್ದಲ್ಲಿಯೇ ಇರಬೇಕೆಂದು ಒತ್ತಾಯಿಸಿದರು. ಕಾರ್ಮಿಕರು ಹಿಂದಿರುಗಿದ ನಂತರ 14 ದಿನಗಳವರೆಗೆ ಕಾರ್ಮಿಕರನ್ನು ಪ್ರತ್ಯೇಕವಾಗಿರಿಸಲು ಸಮರ್ಪಕ ಸೌಲಭ್ಯಗಳಿಲ್ಲ. ಉತ್ತರ ಪ್ರದೇಶದಂತಹ ರಾಜ್ಯಗಳ ಅವರ ಸಹವರ್ತಿಗಳು ಇತರ ನಗರಗಳಿಂದ ವಿದ್ಯಾರ್ಥಿಗಳು ಮತ್ತು ಕಾರ್ಮಿಕರನ್ನು ಮರಳಿ ಕರೆತರಲು ಬಸ್ಸುಗಳನ್ನು ಆಯೋಜಿಸಿದರೆ ನಿತೀಶ್ ಅವರು ರೈಲುಗಳನ್ನು ತಡೆದು ಕೇಂದ್ರ ಸರ್ಕಾರಕ್ಕೆ ಅನುಕೂಲ ಮಾಡಿಕೊಟ್ಟರು ಎಂಬ ಟೀಕೆಗಳು ಅವರ ಮೇಲಿದ್ದವು.

ಆರ್‌ಜೆಡಿ ಮುಖಂಡ ಹಾಗೂ ವಿರೋಧ ಪಕ್ಷದ ನಾಯಕರಾದ ತೇಜಸ್ವಿ ಯಾದವ್ ” ಆರ್‌ಜೆಡಿ 50 ರೈಲುಗಳ ಶುಲ್ಕವನ್ನು ಅಸಮರ್ಥ ಬಿಹಾರ ಸರ್ಕಾರಕ್ಕೆ ಕಾರ್ಮಿಕರ ಪರವಾಗಿ ನೀಡುತ್ತೇವೆ. ಮುಂದಿನ 5 ದಿನಗಳಲ್ಲಿ ಸರ್ಕಾರವು ರೈಲುಗಳನ್ನು ವ್ಯವಸ್ಥೆಗೊಳಿಸಬೇಕು, ಪಕ್ಷವು ತನ್ನ ಶುಲ್ಕವನ್ನು ತಕ್ಷಣವೇ ಸರ್ಕಾರಿ ಖಾತೆಗೆ ವರ್ಗಾಯಿಸುತ್ತದೆ” ಎಂದು ಹೇಳಿದ್ದರು.

ಅಲ್ಲದೆ ಟ್ವಿಟ್ಟರ್‌ನಲ್ಲಿ “ಗೌರವಾನ್ವಿತ ನಿತೀಶ್ ಕುಮಾರ್ ಅವರೇ, ಬಡ ಕಾರ್ಮಿಕರ 50 ರೈಲುಗಳ ಶುಲ್ಕವನ್ನು ಭರಿಸಲು ಆರ್‌ಜೆಡಿ ಸಿದ್ಧವಾಗಿದೆ, ಯಾಕೆಂದರೆ ಡಬಲ್ ಎಂಜಿನ್ ಸರ್ಕಾರ ಸಮರ್ಥವಾಗಿಲ್ಲ. ದಯವಿಟ್ಟು ಈಗ ನಿರ್ವಹಣೆಯನ್ನು ತಕ್ಷಣವೇ ಮಾಡಿ. ಸುಶಿಲ್ ಮೋದಿಯವರೇ, ದಯವಿಟ್ಟು ಒಟ್ಟು ಮೊತ್ತವನ್ನು ಹೇಳಿ, ಚೆಕ್ ಅನ್ನು ತಕ್ಷಣ ಕಳುಹಿಸಲಾಗುತ್ತದೆ. ಹೇಗಾದರೂ, ನೀವು ಲೆಕ್ಕ ಪತ್ರವನ್ನು ನೋಡಲು ಇಷ್ಟಪಡುತ್ತೀರಿ” ಎಂದು ಕುಟುಕಿದ್ದರು.

ಮಾರ್ಚ್ 24 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ನಾಲ್ಕು ಗಂಟೆಗಳ ಸೂಚನೆಯೊಂದಿಗೆ ದೇಶಾದ್ಯಂತ ಲಾಕ್ ಡೌನ್ ಘೋಷಿಸಿದಾಗ, ಲಕ್ಷಾಂತರ ವಲಸೆ ಕಾರ್ಮಿಕರು ತಾವು ದುಡಿಯುವ ನಗರಗಳಲ್ಲಿ ಸಿಲುಕಿಕೊಂಡರು. ಅವರ ದುಡಿಮೆಗಳು ಹಠಾತ್ತನೆ ನಿಂತು ಹೋದುದರಿಂದ, ಹಲವಾರು ಕಾರ್ಮಿಕರು ಮನೆಗೆ ತೆರಳಲು ನಿರ್ಧರಿಸಿದರು. ಆದರೆ ಯಾವುದೇ ಸಾರ್ವಜನಿಕ ಸಾರಿಗೆ ಇಲ್ಲದೆ ಸಾವಿರಾರು ಜನರು ತಮ್ಮ ಊರಿಗೆ ಮರಳಲು ಸಾವಿರಾರು ಕಿಲೋಮೀಟರನ್ನು ಕಾಲ್ನಡಿಗೆಯಲ್ಲೇ ನಡೆದರು. ಈ ಸಂಧರ್ಭದಲ್ಲಿ ನೂರಾರು ಜನರು ನೀರು-ಆಹಾರವಿಲ್ಲದೆ ಸಾವಿಗೀಡಾಗಿದ್ದರು.

ಇದರಿಂದಾಗಿ ಕಳೆದ ಶುಕ್ರವಾರ ಬಿಜೆಪಿ ತಮಗೆ ರಾಜಕೀಯ ಹಿನ್ನಡೆಯಾಗುತ್ತಿರುವ ಬಗ್ಗೆ ಚರ್ಚಿಸಿ, ವಿಶೇಷ ರೈಲುಗಳ ಮೂಲಕ ವಲಸೆ ಕಾರ್ಮಿಕರನ್ನು ಮನೆಗೆ ಹಿಂದಿರುಗಿಸುವುದಾಗಿ ಘೋಷಿಸಿತು. ಬಿಜೆಪಿ ಆಡಳಿತವಿಲ್ಲದ ರಾಜ್ಯ ಸರ್ಕಾರಗಳು ರೈಲುಗಳಿಗೆ ಪಾವತಿಸಲು ಹಣವಿಲ್ಲ ಎಂದು ಹೇಳಿದ್ದು, ಸಾಂಕ್ರಾಮಿಕ ರೋಗವನ್ನು ಎದುರಿಸುವ ಕಾರಣದಿಂದಾಗಿ ಅವರ ಹಣಕಾಸು ವೆಚ್ಚ ಒತ್ತಡದಲ್ಲಿದೆ ಎಂದು ಹೇಳಿದ್ದವು.

ಇಂದು ಬೆಳಿಗ್ಗೆ ಕಾಂಗ್ರೆಸ್ ಮುಖಂಡೆ ಸೋನಿಯಾ ಗಾಂಧಿ ತಮ್ಮ ಪಕ್ಷವು ಕಾರ್ಮಿಕರ ಪ್ರಯಾಣ ಹಣವನ್ನು ಭರಿಸುತ್ತದೆ ಎಂದು ಘೋಷಿಸಿದ್ದಾರೆ.


ಇದನ್ನೂ ಓದಿ:  ರೈಲು ದರ ವಿವಾದ: ಕೇಂದ್ರದ ಮೂರ್ಖತನವೆಂದ ಬಿಜಿಪಿ ಸಂಸದ ಸುಬ್ರಮಣ್ಯ ಸ್ವಾಮಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...