Homeಮುಖಪುಟಡಬಲ್ ಎಂಜಿನ್ ಸರ್ಕಾರ ಸಮರ್ಥವಾಗಿಲ್ಲ, ವಲಸಿಗರ ಪ್ರಯಾಣದ ಖರ್ಚು ನಾವು ನೀಡುತ್ತೇವೆ: ತೇಜಸ್ವಿ ಯಾದವ್

ಡಬಲ್ ಎಂಜಿನ್ ಸರ್ಕಾರ ಸಮರ್ಥವಾಗಿಲ್ಲ, ವಲಸಿಗರ ಪ್ರಯಾಣದ ಖರ್ಚು ನಾವು ನೀಡುತ್ತೇವೆ: ತೇಜಸ್ವಿ ಯಾದವ್

- Advertisement -
- Advertisement -

ತಮ್ಮ ರಾಜ್ಯಕ್ಕೆ ವಾಪಾಸು ಬರುತ್ತಿರುವ ವಲಸೆ ಕಾರ್ಮಿಕರ 50 ರೈಲುಗಳ ಎಲ್ಲಾ ಪ್ರಯಾಣಿಕರ ಪ್ರಯಾಣ ದರವನ್ನು ಪಾವತಿಸಲು ಸಿದ್ದರಿದ್ದೇವೆ ಎಂದು ಬಿಹಾರದ ಪ್ರಮುಖ ವಿರೋಧ ಪಕ್ಷದ ನಾಯಕ ತೇಜಶ್ವಿ ಯಾದವ್ ಪ್ರಸ್ತಾಪಿಸಿದ್ದಾರೆ. ಇದಾದ ಕೆಲವೇ ಗಂಟೆಗಳ ನಂತರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಸರ್ಕಾರವೇ ರೈಲು ದರ ಪಾವತಿಸಲಿದೆ ಎಂಬ ನಿಲುವು ಪ್ರಕಟಿಸಿದ್ದಾರೆ.

ರೈಲಿನಲ್ಲಿ ಮನೆಗೆ ಮರಳುವ ಪ್ರತಿಯೊಬ್ಬ ಕಾರ್ಮಿಕರಿಗೆ ಪೂರ್ಣ ಟಿಕೆಟ್ ಶುಲ್ಕವನ್ನು ಮರುಪಾವತಿ ಮಾಡಲಾಗುವುದು ಮತ್ತು ಹೆಚ್ಚುವರಿ 500ರೂ. ಗಳ ನೆರವು ನೀಡಲಾಗುವುದು ಎಂದು ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಘೋಷಿಸಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು “ನಮ್ಮ ವಿದ್ಯಾರ್ಥಿಗಳಿಗೆ ಮರಳಿ ಮನೆಗೆ ಉಚಿತ ಪ್ರಯಾಣವನ್ನು ಖಾತ್ರಿಪಡಿಸುವ ನಿರ್ಧಾರವನ್ನು ನಾವು ತೆಗೆದುಕೊಂಡಿದ್ದೇವೆ ಮತ್ತು ಈಗ ಅದೇ ರೀತಿಯ ಸೌಲಭ್ಯವನ್ನು ವಲಸೆ ಕಾರ್ಮಿಕರಿಗೂ ವಿಸ್ತರಿಸಲಾಗುತ್ತಿದೆ” ಎಂದು ತಮ್ಮ ಪರೀಷ್ಕೃತ ನಿಲುವನ್ನು ಹೇಳಿದ್ದಾರೆ.

ವಿರೋಧ ಪಕ್ಷಗಳು ಮಾತ್ರವಲ್ಲದೇ ತಮ್ಮದೇ ಸಮ್ಮಿಶ್ರ ಸರ್ಕಾರದ ಹಲವು ನಾಯಕರು ಸಹ ನಿತೀಶ್‌ ಕುಮಾರ್‌ರವರ ಮೊದಲಿನ ನಿಲುವನ್ನು ಟೀಕಿಸಿದ್ದರು. ಇತರ ರಾಜ್ಯಗಳು ತಮ್ಮ ಕಾರ್ಮಿಕರನ್ನು ವಾಪಸ್ ಕಳುಹಿಸುವಂತೆ ಕೇಂದ್ರಕ್ಕೆ ಮನವಿ ಮಾಡಿಕೊಂಡಾಗ ನಿತೀಶ್ ಕುಮಾರ್ ಅವರು ಕಾರ್ಮಿಕರು ಇದ್ದಲ್ಲಿಯೇ ಇರಬೇಕೆಂದು ಒತ್ತಾಯಿಸಿದರು. ಕಾರ್ಮಿಕರು ಹಿಂದಿರುಗಿದ ನಂತರ 14 ದಿನಗಳವರೆಗೆ ಕಾರ್ಮಿಕರನ್ನು ಪ್ರತ್ಯೇಕವಾಗಿರಿಸಲು ಸಮರ್ಪಕ ಸೌಲಭ್ಯಗಳಿಲ್ಲ. ಉತ್ತರ ಪ್ರದೇಶದಂತಹ ರಾಜ್ಯಗಳ ಅವರ ಸಹವರ್ತಿಗಳು ಇತರ ನಗರಗಳಿಂದ ವಿದ್ಯಾರ್ಥಿಗಳು ಮತ್ತು ಕಾರ್ಮಿಕರನ್ನು ಮರಳಿ ಕರೆತರಲು ಬಸ್ಸುಗಳನ್ನು ಆಯೋಜಿಸಿದರೆ ನಿತೀಶ್ ಅವರು ರೈಲುಗಳನ್ನು ತಡೆದು ಕೇಂದ್ರ ಸರ್ಕಾರಕ್ಕೆ ಅನುಕೂಲ ಮಾಡಿಕೊಟ್ಟರು ಎಂಬ ಟೀಕೆಗಳು ಅವರ ಮೇಲಿದ್ದವು.

ಆರ್‌ಜೆಡಿ ಮುಖಂಡ ಹಾಗೂ ವಿರೋಧ ಪಕ್ಷದ ನಾಯಕರಾದ ತೇಜಸ್ವಿ ಯಾದವ್ ” ಆರ್‌ಜೆಡಿ 50 ರೈಲುಗಳ ಶುಲ್ಕವನ್ನು ಅಸಮರ್ಥ ಬಿಹಾರ ಸರ್ಕಾರಕ್ಕೆ ಕಾರ್ಮಿಕರ ಪರವಾಗಿ ನೀಡುತ್ತೇವೆ. ಮುಂದಿನ 5 ದಿನಗಳಲ್ಲಿ ಸರ್ಕಾರವು ರೈಲುಗಳನ್ನು ವ್ಯವಸ್ಥೆಗೊಳಿಸಬೇಕು, ಪಕ್ಷವು ತನ್ನ ಶುಲ್ಕವನ್ನು ತಕ್ಷಣವೇ ಸರ್ಕಾರಿ ಖಾತೆಗೆ ವರ್ಗಾಯಿಸುತ್ತದೆ” ಎಂದು ಹೇಳಿದ್ದರು.

ಅಲ್ಲದೆ ಟ್ವಿಟ್ಟರ್‌ನಲ್ಲಿ “ಗೌರವಾನ್ವಿತ ನಿತೀಶ್ ಕುಮಾರ್ ಅವರೇ, ಬಡ ಕಾರ್ಮಿಕರ 50 ರೈಲುಗಳ ಶುಲ್ಕವನ್ನು ಭರಿಸಲು ಆರ್‌ಜೆಡಿ ಸಿದ್ಧವಾಗಿದೆ, ಯಾಕೆಂದರೆ ಡಬಲ್ ಎಂಜಿನ್ ಸರ್ಕಾರ ಸಮರ್ಥವಾಗಿಲ್ಲ. ದಯವಿಟ್ಟು ಈಗ ನಿರ್ವಹಣೆಯನ್ನು ತಕ್ಷಣವೇ ಮಾಡಿ. ಸುಶಿಲ್ ಮೋದಿಯವರೇ, ದಯವಿಟ್ಟು ಒಟ್ಟು ಮೊತ್ತವನ್ನು ಹೇಳಿ, ಚೆಕ್ ಅನ್ನು ತಕ್ಷಣ ಕಳುಹಿಸಲಾಗುತ್ತದೆ. ಹೇಗಾದರೂ, ನೀವು ಲೆಕ್ಕ ಪತ್ರವನ್ನು ನೋಡಲು ಇಷ್ಟಪಡುತ್ತೀರಿ” ಎಂದು ಕುಟುಕಿದ್ದರು.

ಮಾರ್ಚ್ 24 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ನಾಲ್ಕು ಗಂಟೆಗಳ ಸೂಚನೆಯೊಂದಿಗೆ ದೇಶಾದ್ಯಂತ ಲಾಕ್ ಡೌನ್ ಘೋಷಿಸಿದಾಗ, ಲಕ್ಷಾಂತರ ವಲಸೆ ಕಾರ್ಮಿಕರು ತಾವು ದುಡಿಯುವ ನಗರಗಳಲ್ಲಿ ಸಿಲುಕಿಕೊಂಡರು. ಅವರ ದುಡಿಮೆಗಳು ಹಠಾತ್ತನೆ ನಿಂತು ಹೋದುದರಿಂದ, ಹಲವಾರು ಕಾರ್ಮಿಕರು ಮನೆಗೆ ತೆರಳಲು ನಿರ್ಧರಿಸಿದರು. ಆದರೆ ಯಾವುದೇ ಸಾರ್ವಜನಿಕ ಸಾರಿಗೆ ಇಲ್ಲದೆ ಸಾವಿರಾರು ಜನರು ತಮ್ಮ ಊರಿಗೆ ಮರಳಲು ಸಾವಿರಾರು ಕಿಲೋಮೀಟರನ್ನು ಕಾಲ್ನಡಿಗೆಯಲ್ಲೇ ನಡೆದರು. ಈ ಸಂಧರ್ಭದಲ್ಲಿ ನೂರಾರು ಜನರು ನೀರು-ಆಹಾರವಿಲ್ಲದೆ ಸಾವಿಗೀಡಾಗಿದ್ದರು.

ಇದರಿಂದಾಗಿ ಕಳೆದ ಶುಕ್ರವಾರ ಬಿಜೆಪಿ ತಮಗೆ ರಾಜಕೀಯ ಹಿನ್ನಡೆಯಾಗುತ್ತಿರುವ ಬಗ್ಗೆ ಚರ್ಚಿಸಿ, ವಿಶೇಷ ರೈಲುಗಳ ಮೂಲಕ ವಲಸೆ ಕಾರ್ಮಿಕರನ್ನು ಮನೆಗೆ ಹಿಂದಿರುಗಿಸುವುದಾಗಿ ಘೋಷಿಸಿತು. ಬಿಜೆಪಿ ಆಡಳಿತವಿಲ್ಲದ ರಾಜ್ಯ ಸರ್ಕಾರಗಳು ರೈಲುಗಳಿಗೆ ಪಾವತಿಸಲು ಹಣವಿಲ್ಲ ಎಂದು ಹೇಳಿದ್ದು, ಸಾಂಕ್ರಾಮಿಕ ರೋಗವನ್ನು ಎದುರಿಸುವ ಕಾರಣದಿಂದಾಗಿ ಅವರ ಹಣಕಾಸು ವೆಚ್ಚ ಒತ್ತಡದಲ್ಲಿದೆ ಎಂದು ಹೇಳಿದ್ದವು.

ಇಂದು ಬೆಳಿಗ್ಗೆ ಕಾಂಗ್ರೆಸ್ ಮುಖಂಡೆ ಸೋನಿಯಾ ಗಾಂಧಿ ತಮ್ಮ ಪಕ್ಷವು ಕಾರ್ಮಿಕರ ಪ್ರಯಾಣ ಹಣವನ್ನು ಭರಿಸುತ್ತದೆ ಎಂದು ಘೋಷಿಸಿದ್ದಾರೆ.


ಇದನ್ನೂ ಓದಿ:  ರೈಲು ದರ ವಿವಾದ: ಕೇಂದ್ರದ ಮೂರ್ಖತನವೆಂದ ಬಿಜಿಪಿ ಸಂಸದ ಸುಬ್ರಮಣ್ಯ ಸ್ವಾಮಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....