Homeಮುಖಪುಟಡಬಲ್ ಎಂಜಿನ್ ಸರ್ಕಾರ ಸಮರ್ಥವಾಗಿಲ್ಲ, ವಲಸಿಗರ ಪ್ರಯಾಣದ ಖರ್ಚು ನಾವು ನೀಡುತ್ತೇವೆ: ತೇಜಸ್ವಿ ಯಾದವ್

ಡಬಲ್ ಎಂಜಿನ್ ಸರ್ಕಾರ ಸಮರ್ಥವಾಗಿಲ್ಲ, ವಲಸಿಗರ ಪ್ರಯಾಣದ ಖರ್ಚು ನಾವು ನೀಡುತ್ತೇವೆ: ತೇಜಸ್ವಿ ಯಾದವ್

- Advertisement -
- Advertisement -

ತಮ್ಮ ರಾಜ್ಯಕ್ಕೆ ವಾಪಾಸು ಬರುತ್ತಿರುವ ವಲಸೆ ಕಾರ್ಮಿಕರ 50 ರೈಲುಗಳ ಎಲ್ಲಾ ಪ್ರಯಾಣಿಕರ ಪ್ರಯಾಣ ದರವನ್ನು ಪಾವತಿಸಲು ಸಿದ್ದರಿದ್ದೇವೆ ಎಂದು ಬಿಹಾರದ ಪ್ರಮುಖ ವಿರೋಧ ಪಕ್ಷದ ನಾಯಕ ತೇಜಶ್ವಿ ಯಾದವ್ ಪ್ರಸ್ತಾಪಿಸಿದ್ದಾರೆ. ಇದಾದ ಕೆಲವೇ ಗಂಟೆಗಳ ನಂತರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಸರ್ಕಾರವೇ ರೈಲು ದರ ಪಾವತಿಸಲಿದೆ ಎಂಬ ನಿಲುವು ಪ್ರಕಟಿಸಿದ್ದಾರೆ.

ರೈಲಿನಲ್ಲಿ ಮನೆಗೆ ಮರಳುವ ಪ್ರತಿಯೊಬ್ಬ ಕಾರ್ಮಿಕರಿಗೆ ಪೂರ್ಣ ಟಿಕೆಟ್ ಶುಲ್ಕವನ್ನು ಮರುಪಾವತಿ ಮಾಡಲಾಗುವುದು ಮತ್ತು ಹೆಚ್ಚುವರಿ 500ರೂ. ಗಳ ನೆರವು ನೀಡಲಾಗುವುದು ಎಂದು ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಘೋಷಿಸಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು “ನಮ್ಮ ವಿದ್ಯಾರ್ಥಿಗಳಿಗೆ ಮರಳಿ ಮನೆಗೆ ಉಚಿತ ಪ್ರಯಾಣವನ್ನು ಖಾತ್ರಿಪಡಿಸುವ ನಿರ್ಧಾರವನ್ನು ನಾವು ತೆಗೆದುಕೊಂಡಿದ್ದೇವೆ ಮತ್ತು ಈಗ ಅದೇ ರೀತಿಯ ಸೌಲಭ್ಯವನ್ನು ವಲಸೆ ಕಾರ್ಮಿಕರಿಗೂ ವಿಸ್ತರಿಸಲಾಗುತ್ತಿದೆ” ಎಂದು ತಮ್ಮ ಪರೀಷ್ಕೃತ ನಿಲುವನ್ನು ಹೇಳಿದ್ದಾರೆ.

ವಿರೋಧ ಪಕ್ಷಗಳು ಮಾತ್ರವಲ್ಲದೇ ತಮ್ಮದೇ ಸಮ್ಮಿಶ್ರ ಸರ್ಕಾರದ ಹಲವು ನಾಯಕರು ಸಹ ನಿತೀಶ್‌ ಕುಮಾರ್‌ರವರ ಮೊದಲಿನ ನಿಲುವನ್ನು ಟೀಕಿಸಿದ್ದರು. ಇತರ ರಾಜ್ಯಗಳು ತಮ್ಮ ಕಾರ್ಮಿಕರನ್ನು ವಾಪಸ್ ಕಳುಹಿಸುವಂತೆ ಕೇಂದ್ರಕ್ಕೆ ಮನವಿ ಮಾಡಿಕೊಂಡಾಗ ನಿತೀಶ್ ಕುಮಾರ್ ಅವರು ಕಾರ್ಮಿಕರು ಇದ್ದಲ್ಲಿಯೇ ಇರಬೇಕೆಂದು ಒತ್ತಾಯಿಸಿದರು. ಕಾರ್ಮಿಕರು ಹಿಂದಿರುಗಿದ ನಂತರ 14 ದಿನಗಳವರೆಗೆ ಕಾರ್ಮಿಕರನ್ನು ಪ್ರತ್ಯೇಕವಾಗಿರಿಸಲು ಸಮರ್ಪಕ ಸೌಲಭ್ಯಗಳಿಲ್ಲ. ಉತ್ತರ ಪ್ರದೇಶದಂತಹ ರಾಜ್ಯಗಳ ಅವರ ಸಹವರ್ತಿಗಳು ಇತರ ನಗರಗಳಿಂದ ವಿದ್ಯಾರ್ಥಿಗಳು ಮತ್ತು ಕಾರ್ಮಿಕರನ್ನು ಮರಳಿ ಕರೆತರಲು ಬಸ್ಸುಗಳನ್ನು ಆಯೋಜಿಸಿದರೆ ನಿತೀಶ್ ಅವರು ರೈಲುಗಳನ್ನು ತಡೆದು ಕೇಂದ್ರ ಸರ್ಕಾರಕ್ಕೆ ಅನುಕೂಲ ಮಾಡಿಕೊಟ್ಟರು ಎಂಬ ಟೀಕೆಗಳು ಅವರ ಮೇಲಿದ್ದವು.

ಆರ್‌ಜೆಡಿ ಮುಖಂಡ ಹಾಗೂ ವಿರೋಧ ಪಕ್ಷದ ನಾಯಕರಾದ ತೇಜಸ್ವಿ ಯಾದವ್ ” ಆರ್‌ಜೆಡಿ 50 ರೈಲುಗಳ ಶುಲ್ಕವನ್ನು ಅಸಮರ್ಥ ಬಿಹಾರ ಸರ್ಕಾರಕ್ಕೆ ಕಾರ್ಮಿಕರ ಪರವಾಗಿ ನೀಡುತ್ತೇವೆ. ಮುಂದಿನ 5 ದಿನಗಳಲ್ಲಿ ಸರ್ಕಾರವು ರೈಲುಗಳನ್ನು ವ್ಯವಸ್ಥೆಗೊಳಿಸಬೇಕು, ಪಕ್ಷವು ತನ್ನ ಶುಲ್ಕವನ್ನು ತಕ್ಷಣವೇ ಸರ್ಕಾರಿ ಖಾತೆಗೆ ವರ್ಗಾಯಿಸುತ್ತದೆ” ಎಂದು ಹೇಳಿದ್ದರು.

ಅಲ್ಲದೆ ಟ್ವಿಟ್ಟರ್‌ನಲ್ಲಿ “ಗೌರವಾನ್ವಿತ ನಿತೀಶ್ ಕುಮಾರ್ ಅವರೇ, ಬಡ ಕಾರ್ಮಿಕರ 50 ರೈಲುಗಳ ಶುಲ್ಕವನ್ನು ಭರಿಸಲು ಆರ್‌ಜೆಡಿ ಸಿದ್ಧವಾಗಿದೆ, ಯಾಕೆಂದರೆ ಡಬಲ್ ಎಂಜಿನ್ ಸರ್ಕಾರ ಸಮರ್ಥವಾಗಿಲ್ಲ. ದಯವಿಟ್ಟು ಈಗ ನಿರ್ವಹಣೆಯನ್ನು ತಕ್ಷಣವೇ ಮಾಡಿ. ಸುಶಿಲ್ ಮೋದಿಯವರೇ, ದಯವಿಟ್ಟು ಒಟ್ಟು ಮೊತ್ತವನ್ನು ಹೇಳಿ, ಚೆಕ್ ಅನ್ನು ತಕ್ಷಣ ಕಳುಹಿಸಲಾಗುತ್ತದೆ. ಹೇಗಾದರೂ, ನೀವು ಲೆಕ್ಕ ಪತ್ರವನ್ನು ನೋಡಲು ಇಷ್ಟಪಡುತ್ತೀರಿ” ಎಂದು ಕುಟುಕಿದ್ದರು.

ಮಾರ್ಚ್ 24 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ನಾಲ್ಕು ಗಂಟೆಗಳ ಸೂಚನೆಯೊಂದಿಗೆ ದೇಶಾದ್ಯಂತ ಲಾಕ್ ಡೌನ್ ಘೋಷಿಸಿದಾಗ, ಲಕ್ಷಾಂತರ ವಲಸೆ ಕಾರ್ಮಿಕರು ತಾವು ದುಡಿಯುವ ನಗರಗಳಲ್ಲಿ ಸಿಲುಕಿಕೊಂಡರು. ಅವರ ದುಡಿಮೆಗಳು ಹಠಾತ್ತನೆ ನಿಂತು ಹೋದುದರಿಂದ, ಹಲವಾರು ಕಾರ್ಮಿಕರು ಮನೆಗೆ ತೆರಳಲು ನಿರ್ಧರಿಸಿದರು. ಆದರೆ ಯಾವುದೇ ಸಾರ್ವಜನಿಕ ಸಾರಿಗೆ ಇಲ್ಲದೆ ಸಾವಿರಾರು ಜನರು ತಮ್ಮ ಊರಿಗೆ ಮರಳಲು ಸಾವಿರಾರು ಕಿಲೋಮೀಟರನ್ನು ಕಾಲ್ನಡಿಗೆಯಲ್ಲೇ ನಡೆದರು. ಈ ಸಂಧರ್ಭದಲ್ಲಿ ನೂರಾರು ಜನರು ನೀರು-ಆಹಾರವಿಲ್ಲದೆ ಸಾವಿಗೀಡಾಗಿದ್ದರು.

ಇದರಿಂದಾಗಿ ಕಳೆದ ಶುಕ್ರವಾರ ಬಿಜೆಪಿ ತಮಗೆ ರಾಜಕೀಯ ಹಿನ್ನಡೆಯಾಗುತ್ತಿರುವ ಬಗ್ಗೆ ಚರ್ಚಿಸಿ, ವಿಶೇಷ ರೈಲುಗಳ ಮೂಲಕ ವಲಸೆ ಕಾರ್ಮಿಕರನ್ನು ಮನೆಗೆ ಹಿಂದಿರುಗಿಸುವುದಾಗಿ ಘೋಷಿಸಿತು. ಬಿಜೆಪಿ ಆಡಳಿತವಿಲ್ಲದ ರಾಜ್ಯ ಸರ್ಕಾರಗಳು ರೈಲುಗಳಿಗೆ ಪಾವತಿಸಲು ಹಣವಿಲ್ಲ ಎಂದು ಹೇಳಿದ್ದು, ಸಾಂಕ್ರಾಮಿಕ ರೋಗವನ್ನು ಎದುರಿಸುವ ಕಾರಣದಿಂದಾಗಿ ಅವರ ಹಣಕಾಸು ವೆಚ್ಚ ಒತ್ತಡದಲ್ಲಿದೆ ಎಂದು ಹೇಳಿದ್ದವು.

ಇಂದು ಬೆಳಿಗ್ಗೆ ಕಾಂಗ್ರೆಸ್ ಮುಖಂಡೆ ಸೋನಿಯಾ ಗಾಂಧಿ ತಮ್ಮ ಪಕ್ಷವು ಕಾರ್ಮಿಕರ ಪ್ರಯಾಣ ಹಣವನ್ನು ಭರಿಸುತ್ತದೆ ಎಂದು ಘೋಷಿಸಿದ್ದಾರೆ.


ಇದನ್ನೂ ಓದಿ:  ರೈಲು ದರ ವಿವಾದ: ಕೇಂದ್ರದ ಮೂರ್ಖತನವೆಂದ ಬಿಜಿಪಿ ಸಂಸದ ಸುಬ್ರಮಣ್ಯ ಸ್ವಾಮಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...