Homeಮುಖಪುಟಡಬಲ್ ಎಂಜಿನ್ ಸರ್ಕಾರ ಸಮರ್ಥವಾಗಿಲ್ಲ, ವಲಸಿಗರ ಪ್ರಯಾಣದ ಖರ್ಚು ನಾವು ನೀಡುತ್ತೇವೆ: ತೇಜಸ್ವಿ ಯಾದವ್

ಡಬಲ್ ಎಂಜಿನ್ ಸರ್ಕಾರ ಸಮರ್ಥವಾಗಿಲ್ಲ, ವಲಸಿಗರ ಪ್ರಯಾಣದ ಖರ್ಚು ನಾವು ನೀಡುತ್ತೇವೆ: ತೇಜಸ್ವಿ ಯಾದವ್

- Advertisement -
- Advertisement -

ತಮ್ಮ ರಾಜ್ಯಕ್ಕೆ ವಾಪಾಸು ಬರುತ್ತಿರುವ ವಲಸೆ ಕಾರ್ಮಿಕರ 50 ರೈಲುಗಳ ಎಲ್ಲಾ ಪ್ರಯಾಣಿಕರ ಪ್ರಯಾಣ ದರವನ್ನು ಪಾವತಿಸಲು ಸಿದ್ದರಿದ್ದೇವೆ ಎಂದು ಬಿಹಾರದ ಪ್ರಮುಖ ವಿರೋಧ ಪಕ್ಷದ ನಾಯಕ ತೇಜಶ್ವಿ ಯಾದವ್ ಪ್ರಸ್ತಾಪಿಸಿದ್ದಾರೆ. ಇದಾದ ಕೆಲವೇ ಗಂಟೆಗಳ ನಂತರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಸರ್ಕಾರವೇ ರೈಲು ದರ ಪಾವತಿಸಲಿದೆ ಎಂಬ ನಿಲುವು ಪ್ರಕಟಿಸಿದ್ದಾರೆ.

ರೈಲಿನಲ್ಲಿ ಮನೆಗೆ ಮರಳುವ ಪ್ರತಿಯೊಬ್ಬ ಕಾರ್ಮಿಕರಿಗೆ ಪೂರ್ಣ ಟಿಕೆಟ್ ಶುಲ್ಕವನ್ನು ಮರುಪಾವತಿ ಮಾಡಲಾಗುವುದು ಮತ್ತು ಹೆಚ್ಚುವರಿ 500ರೂ. ಗಳ ನೆರವು ನೀಡಲಾಗುವುದು ಎಂದು ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಘೋಷಿಸಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು “ನಮ್ಮ ವಿದ್ಯಾರ್ಥಿಗಳಿಗೆ ಮರಳಿ ಮನೆಗೆ ಉಚಿತ ಪ್ರಯಾಣವನ್ನು ಖಾತ್ರಿಪಡಿಸುವ ನಿರ್ಧಾರವನ್ನು ನಾವು ತೆಗೆದುಕೊಂಡಿದ್ದೇವೆ ಮತ್ತು ಈಗ ಅದೇ ರೀತಿಯ ಸೌಲಭ್ಯವನ್ನು ವಲಸೆ ಕಾರ್ಮಿಕರಿಗೂ ವಿಸ್ತರಿಸಲಾಗುತ್ತಿದೆ” ಎಂದು ತಮ್ಮ ಪರೀಷ್ಕೃತ ನಿಲುವನ್ನು ಹೇಳಿದ್ದಾರೆ.

ವಿರೋಧ ಪಕ್ಷಗಳು ಮಾತ್ರವಲ್ಲದೇ ತಮ್ಮದೇ ಸಮ್ಮಿಶ್ರ ಸರ್ಕಾರದ ಹಲವು ನಾಯಕರು ಸಹ ನಿತೀಶ್‌ ಕುಮಾರ್‌ರವರ ಮೊದಲಿನ ನಿಲುವನ್ನು ಟೀಕಿಸಿದ್ದರು. ಇತರ ರಾಜ್ಯಗಳು ತಮ್ಮ ಕಾರ್ಮಿಕರನ್ನು ವಾಪಸ್ ಕಳುಹಿಸುವಂತೆ ಕೇಂದ್ರಕ್ಕೆ ಮನವಿ ಮಾಡಿಕೊಂಡಾಗ ನಿತೀಶ್ ಕುಮಾರ್ ಅವರು ಕಾರ್ಮಿಕರು ಇದ್ದಲ್ಲಿಯೇ ಇರಬೇಕೆಂದು ಒತ್ತಾಯಿಸಿದರು. ಕಾರ್ಮಿಕರು ಹಿಂದಿರುಗಿದ ನಂತರ 14 ದಿನಗಳವರೆಗೆ ಕಾರ್ಮಿಕರನ್ನು ಪ್ರತ್ಯೇಕವಾಗಿರಿಸಲು ಸಮರ್ಪಕ ಸೌಲಭ್ಯಗಳಿಲ್ಲ. ಉತ್ತರ ಪ್ರದೇಶದಂತಹ ರಾಜ್ಯಗಳ ಅವರ ಸಹವರ್ತಿಗಳು ಇತರ ನಗರಗಳಿಂದ ವಿದ್ಯಾರ್ಥಿಗಳು ಮತ್ತು ಕಾರ್ಮಿಕರನ್ನು ಮರಳಿ ಕರೆತರಲು ಬಸ್ಸುಗಳನ್ನು ಆಯೋಜಿಸಿದರೆ ನಿತೀಶ್ ಅವರು ರೈಲುಗಳನ್ನು ತಡೆದು ಕೇಂದ್ರ ಸರ್ಕಾರಕ್ಕೆ ಅನುಕೂಲ ಮಾಡಿಕೊಟ್ಟರು ಎಂಬ ಟೀಕೆಗಳು ಅವರ ಮೇಲಿದ್ದವು.

ಆರ್‌ಜೆಡಿ ಮುಖಂಡ ಹಾಗೂ ವಿರೋಧ ಪಕ್ಷದ ನಾಯಕರಾದ ತೇಜಸ್ವಿ ಯಾದವ್ ” ಆರ್‌ಜೆಡಿ 50 ರೈಲುಗಳ ಶುಲ್ಕವನ್ನು ಅಸಮರ್ಥ ಬಿಹಾರ ಸರ್ಕಾರಕ್ಕೆ ಕಾರ್ಮಿಕರ ಪರವಾಗಿ ನೀಡುತ್ತೇವೆ. ಮುಂದಿನ 5 ದಿನಗಳಲ್ಲಿ ಸರ್ಕಾರವು ರೈಲುಗಳನ್ನು ವ್ಯವಸ್ಥೆಗೊಳಿಸಬೇಕು, ಪಕ್ಷವು ತನ್ನ ಶುಲ್ಕವನ್ನು ತಕ್ಷಣವೇ ಸರ್ಕಾರಿ ಖಾತೆಗೆ ವರ್ಗಾಯಿಸುತ್ತದೆ” ಎಂದು ಹೇಳಿದ್ದರು.

ಅಲ್ಲದೆ ಟ್ವಿಟ್ಟರ್‌ನಲ್ಲಿ “ಗೌರವಾನ್ವಿತ ನಿತೀಶ್ ಕುಮಾರ್ ಅವರೇ, ಬಡ ಕಾರ್ಮಿಕರ 50 ರೈಲುಗಳ ಶುಲ್ಕವನ್ನು ಭರಿಸಲು ಆರ್‌ಜೆಡಿ ಸಿದ್ಧವಾಗಿದೆ, ಯಾಕೆಂದರೆ ಡಬಲ್ ಎಂಜಿನ್ ಸರ್ಕಾರ ಸಮರ್ಥವಾಗಿಲ್ಲ. ದಯವಿಟ್ಟು ಈಗ ನಿರ್ವಹಣೆಯನ್ನು ತಕ್ಷಣವೇ ಮಾಡಿ. ಸುಶಿಲ್ ಮೋದಿಯವರೇ, ದಯವಿಟ್ಟು ಒಟ್ಟು ಮೊತ್ತವನ್ನು ಹೇಳಿ, ಚೆಕ್ ಅನ್ನು ತಕ್ಷಣ ಕಳುಹಿಸಲಾಗುತ್ತದೆ. ಹೇಗಾದರೂ, ನೀವು ಲೆಕ್ಕ ಪತ್ರವನ್ನು ನೋಡಲು ಇಷ್ಟಪಡುತ್ತೀರಿ” ಎಂದು ಕುಟುಕಿದ್ದರು.

ಮಾರ್ಚ್ 24 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ನಾಲ್ಕು ಗಂಟೆಗಳ ಸೂಚನೆಯೊಂದಿಗೆ ದೇಶಾದ್ಯಂತ ಲಾಕ್ ಡೌನ್ ಘೋಷಿಸಿದಾಗ, ಲಕ್ಷಾಂತರ ವಲಸೆ ಕಾರ್ಮಿಕರು ತಾವು ದುಡಿಯುವ ನಗರಗಳಲ್ಲಿ ಸಿಲುಕಿಕೊಂಡರು. ಅವರ ದುಡಿಮೆಗಳು ಹಠಾತ್ತನೆ ನಿಂತು ಹೋದುದರಿಂದ, ಹಲವಾರು ಕಾರ್ಮಿಕರು ಮನೆಗೆ ತೆರಳಲು ನಿರ್ಧರಿಸಿದರು. ಆದರೆ ಯಾವುದೇ ಸಾರ್ವಜನಿಕ ಸಾರಿಗೆ ಇಲ್ಲದೆ ಸಾವಿರಾರು ಜನರು ತಮ್ಮ ಊರಿಗೆ ಮರಳಲು ಸಾವಿರಾರು ಕಿಲೋಮೀಟರನ್ನು ಕಾಲ್ನಡಿಗೆಯಲ್ಲೇ ನಡೆದರು. ಈ ಸಂಧರ್ಭದಲ್ಲಿ ನೂರಾರು ಜನರು ನೀರು-ಆಹಾರವಿಲ್ಲದೆ ಸಾವಿಗೀಡಾಗಿದ್ದರು.

ಇದರಿಂದಾಗಿ ಕಳೆದ ಶುಕ್ರವಾರ ಬಿಜೆಪಿ ತಮಗೆ ರಾಜಕೀಯ ಹಿನ್ನಡೆಯಾಗುತ್ತಿರುವ ಬಗ್ಗೆ ಚರ್ಚಿಸಿ, ವಿಶೇಷ ರೈಲುಗಳ ಮೂಲಕ ವಲಸೆ ಕಾರ್ಮಿಕರನ್ನು ಮನೆಗೆ ಹಿಂದಿರುಗಿಸುವುದಾಗಿ ಘೋಷಿಸಿತು. ಬಿಜೆಪಿ ಆಡಳಿತವಿಲ್ಲದ ರಾಜ್ಯ ಸರ್ಕಾರಗಳು ರೈಲುಗಳಿಗೆ ಪಾವತಿಸಲು ಹಣವಿಲ್ಲ ಎಂದು ಹೇಳಿದ್ದು, ಸಾಂಕ್ರಾಮಿಕ ರೋಗವನ್ನು ಎದುರಿಸುವ ಕಾರಣದಿಂದಾಗಿ ಅವರ ಹಣಕಾಸು ವೆಚ್ಚ ಒತ್ತಡದಲ್ಲಿದೆ ಎಂದು ಹೇಳಿದ್ದವು.

ಇಂದು ಬೆಳಿಗ್ಗೆ ಕಾಂಗ್ರೆಸ್ ಮುಖಂಡೆ ಸೋನಿಯಾ ಗಾಂಧಿ ತಮ್ಮ ಪಕ್ಷವು ಕಾರ್ಮಿಕರ ಪ್ರಯಾಣ ಹಣವನ್ನು ಭರಿಸುತ್ತದೆ ಎಂದು ಘೋಷಿಸಿದ್ದಾರೆ.


ಇದನ್ನೂ ಓದಿ:  ರೈಲು ದರ ವಿವಾದ: ಕೇಂದ್ರದ ಮೂರ್ಖತನವೆಂದ ಬಿಜಿಪಿ ಸಂಸದ ಸುಬ್ರಮಣ್ಯ ಸ್ವಾಮಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...