Homeಮುಖಪುಟಡಬಲ್ ಎಂಜಿನ್ ಸರ್ಕಾರ ಸಮರ್ಥವಾಗಿಲ್ಲ, ವಲಸಿಗರ ಪ್ರಯಾಣದ ಖರ್ಚು ನಾವು ನೀಡುತ್ತೇವೆ: ತೇಜಸ್ವಿ ಯಾದವ್

ಡಬಲ್ ಎಂಜಿನ್ ಸರ್ಕಾರ ಸಮರ್ಥವಾಗಿಲ್ಲ, ವಲಸಿಗರ ಪ್ರಯಾಣದ ಖರ್ಚು ನಾವು ನೀಡುತ್ತೇವೆ: ತೇಜಸ್ವಿ ಯಾದವ್

- Advertisement -
- Advertisement -

ತಮ್ಮ ರಾಜ್ಯಕ್ಕೆ ವಾಪಾಸು ಬರುತ್ತಿರುವ ವಲಸೆ ಕಾರ್ಮಿಕರ 50 ರೈಲುಗಳ ಎಲ್ಲಾ ಪ್ರಯಾಣಿಕರ ಪ್ರಯಾಣ ದರವನ್ನು ಪಾವತಿಸಲು ಸಿದ್ದರಿದ್ದೇವೆ ಎಂದು ಬಿಹಾರದ ಪ್ರಮುಖ ವಿರೋಧ ಪಕ್ಷದ ನಾಯಕ ತೇಜಶ್ವಿ ಯಾದವ್ ಪ್ರಸ್ತಾಪಿಸಿದ್ದಾರೆ. ಇದಾದ ಕೆಲವೇ ಗಂಟೆಗಳ ನಂತರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಸರ್ಕಾರವೇ ರೈಲು ದರ ಪಾವತಿಸಲಿದೆ ಎಂಬ ನಿಲುವು ಪ್ರಕಟಿಸಿದ್ದಾರೆ.

ರೈಲಿನಲ್ಲಿ ಮನೆಗೆ ಮರಳುವ ಪ್ರತಿಯೊಬ್ಬ ಕಾರ್ಮಿಕರಿಗೆ ಪೂರ್ಣ ಟಿಕೆಟ್ ಶುಲ್ಕವನ್ನು ಮರುಪಾವತಿ ಮಾಡಲಾಗುವುದು ಮತ್ತು ಹೆಚ್ಚುವರಿ 500ರೂ. ಗಳ ನೆರವು ನೀಡಲಾಗುವುದು ಎಂದು ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಘೋಷಿಸಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು “ನಮ್ಮ ವಿದ್ಯಾರ್ಥಿಗಳಿಗೆ ಮರಳಿ ಮನೆಗೆ ಉಚಿತ ಪ್ರಯಾಣವನ್ನು ಖಾತ್ರಿಪಡಿಸುವ ನಿರ್ಧಾರವನ್ನು ನಾವು ತೆಗೆದುಕೊಂಡಿದ್ದೇವೆ ಮತ್ತು ಈಗ ಅದೇ ರೀತಿಯ ಸೌಲಭ್ಯವನ್ನು ವಲಸೆ ಕಾರ್ಮಿಕರಿಗೂ ವಿಸ್ತರಿಸಲಾಗುತ್ತಿದೆ” ಎಂದು ತಮ್ಮ ಪರೀಷ್ಕೃತ ನಿಲುವನ್ನು ಹೇಳಿದ್ದಾರೆ.

ವಿರೋಧ ಪಕ್ಷಗಳು ಮಾತ್ರವಲ್ಲದೇ ತಮ್ಮದೇ ಸಮ್ಮಿಶ್ರ ಸರ್ಕಾರದ ಹಲವು ನಾಯಕರು ಸಹ ನಿತೀಶ್‌ ಕುಮಾರ್‌ರವರ ಮೊದಲಿನ ನಿಲುವನ್ನು ಟೀಕಿಸಿದ್ದರು. ಇತರ ರಾಜ್ಯಗಳು ತಮ್ಮ ಕಾರ್ಮಿಕರನ್ನು ವಾಪಸ್ ಕಳುಹಿಸುವಂತೆ ಕೇಂದ್ರಕ್ಕೆ ಮನವಿ ಮಾಡಿಕೊಂಡಾಗ ನಿತೀಶ್ ಕುಮಾರ್ ಅವರು ಕಾರ್ಮಿಕರು ಇದ್ದಲ್ಲಿಯೇ ಇರಬೇಕೆಂದು ಒತ್ತಾಯಿಸಿದರು. ಕಾರ್ಮಿಕರು ಹಿಂದಿರುಗಿದ ನಂತರ 14 ದಿನಗಳವರೆಗೆ ಕಾರ್ಮಿಕರನ್ನು ಪ್ರತ್ಯೇಕವಾಗಿರಿಸಲು ಸಮರ್ಪಕ ಸೌಲಭ್ಯಗಳಿಲ್ಲ. ಉತ್ತರ ಪ್ರದೇಶದಂತಹ ರಾಜ್ಯಗಳ ಅವರ ಸಹವರ್ತಿಗಳು ಇತರ ನಗರಗಳಿಂದ ವಿದ್ಯಾರ್ಥಿಗಳು ಮತ್ತು ಕಾರ್ಮಿಕರನ್ನು ಮರಳಿ ಕರೆತರಲು ಬಸ್ಸುಗಳನ್ನು ಆಯೋಜಿಸಿದರೆ ನಿತೀಶ್ ಅವರು ರೈಲುಗಳನ್ನು ತಡೆದು ಕೇಂದ್ರ ಸರ್ಕಾರಕ್ಕೆ ಅನುಕೂಲ ಮಾಡಿಕೊಟ್ಟರು ಎಂಬ ಟೀಕೆಗಳು ಅವರ ಮೇಲಿದ್ದವು.

ಆರ್‌ಜೆಡಿ ಮುಖಂಡ ಹಾಗೂ ವಿರೋಧ ಪಕ್ಷದ ನಾಯಕರಾದ ತೇಜಸ್ವಿ ಯಾದವ್ ” ಆರ್‌ಜೆಡಿ 50 ರೈಲುಗಳ ಶುಲ್ಕವನ್ನು ಅಸಮರ್ಥ ಬಿಹಾರ ಸರ್ಕಾರಕ್ಕೆ ಕಾರ್ಮಿಕರ ಪರವಾಗಿ ನೀಡುತ್ತೇವೆ. ಮುಂದಿನ 5 ದಿನಗಳಲ್ಲಿ ಸರ್ಕಾರವು ರೈಲುಗಳನ್ನು ವ್ಯವಸ್ಥೆಗೊಳಿಸಬೇಕು, ಪಕ್ಷವು ತನ್ನ ಶುಲ್ಕವನ್ನು ತಕ್ಷಣವೇ ಸರ್ಕಾರಿ ಖಾತೆಗೆ ವರ್ಗಾಯಿಸುತ್ತದೆ” ಎಂದು ಹೇಳಿದ್ದರು.

ಅಲ್ಲದೆ ಟ್ವಿಟ್ಟರ್‌ನಲ್ಲಿ “ಗೌರವಾನ್ವಿತ ನಿತೀಶ್ ಕುಮಾರ್ ಅವರೇ, ಬಡ ಕಾರ್ಮಿಕರ 50 ರೈಲುಗಳ ಶುಲ್ಕವನ್ನು ಭರಿಸಲು ಆರ್‌ಜೆಡಿ ಸಿದ್ಧವಾಗಿದೆ, ಯಾಕೆಂದರೆ ಡಬಲ್ ಎಂಜಿನ್ ಸರ್ಕಾರ ಸಮರ್ಥವಾಗಿಲ್ಲ. ದಯವಿಟ್ಟು ಈಗ ನಿರ್ವಹಣೆಯನ್ನು ತಕ್ಷಣವೇ ಮಾಡಿ. ಸುಶಿಲ್ ಮೋದಿಯವರೇ, ದಯವಿಟ್ಟು ಒಟ್ಟು ಮೊತ್ತವನ್ನು ಹೇಳಿ, ಚೆಕ್ ಅನ್ನು ತಕ್ಷಣ ಕಳುಹಿಸಲಾಗುತ್ತದೆ. ಹೇಗಾದರೂ, ನೀವು ಲೆಕ್ಕ ಪತ್ರವನ್ನು ನೋಡಲು ಇಷ್ಟಪಡುತ್ತೀರಿ” ಎಂದು ಕುಟುಕಿದ್ದರು.

ಮಾರ್ಚ್ 24 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ನಾಲ್ಕು ಗಂಟೆಗಳ ಸೂಚನೆಯೊಂದಿಗೆ ದೇಶಾದ್ಯಂತ ಲಾಕ್ ಡೌನ್ ಘೋಷಿಸಿದಾಗ, ಲಕ್ಷಾಂತರ ವಲಸೆ ಕಾರ್ಮಿಕರು ತಾವು ದುಡಿಯುವ ನಗರಗಳಲ್ಲಿ ಸಿಲುಕಿಕೊಂಡರು. ಅವರ ದುಡಿಮೆಗಳು ಹಠಾತ್ತನೆ ನಿಂತು ಹೋದುದರಿಂದ, ಹಲವಾರು ಕಾರ್ಮಿಕರು ಮನೆಗೆ ತೆರಳಲು ನಿರ್ಧರಿಸಿದರು. ಆದರೆ ಯಾವುದೇ ಸಾರ್ವಜನಿಕ ಸಾರಿಗೆ ಇಲ್ಲದೆ ಸಾವಿರಾರು ಜನರು ತಮ್ಮ ಊರಿಗೆ ಮರಳಲು ಸಾವಿರಾರು ಕಿಲೋಮೀಟರನ್ನು ಕಾಲ್ನಡಿಗೆಯಲ್ಲೇ ನಡೆದರು. ಈ ಸಂಧರ್ಭದಲ್ಲಿ ನೂರಾರು ಜನರು ನೀರು-ಆಹಾರವಿಲ್ಲದೆ ಸಾವಿಗೀಡಾಗಿದ್ದರು.

ಇದರಿಂದಾಗಿ ಕಳೆದ ಶುಕ್ರವಾರ ಬಿಜೆಪಿ ತಮಗೆ ರಾಜಕೀಯ ಹಿನ್ನಡೆಯಾಗುತ್ತಿರುವ ಬಗ್ಗೆ ಚರ್ಚಿಸಿ, ವಿಶೇಷ ರೈಲುಗಳ ಮೂಲಕ ವಲಸೆ ಕಾರ್ಮಿಕರನ್ನು ಮನೆಗೆ ಹಿಂದಿರುಗಿಸುವುದಾಗಿ ಘೋಷಿಸಿತು. ಬಿಜೆಪಿ ಆಡಳಿತವಿಲ್ಲದ ರಾಜ್ಯ ಸರ್ಕಾರಗಳು ರೈಲುಗಳಿಗೆ ಪಾವತಿಸಲು ಹಣವಿಲ್ಲ ಎಂದು ಹೇಳಿದ್ದು, ಸಾಂಕ್ರಾಮಿಕ ರೋಗವನ್ನು ಎದುರಿಸುವ ಕಾರಣದಿಂದಾಗಿ ಅವರ ಹಣಕಾಸು ವೆಚ್ಚ ಒತ್ತಡದಲ್ಲಿದೆ ಎಂದು ಹೇಳಿದ್ದವು.

ಇಂದು ಬೆಳಿಗ್ಗೆ ಕಾಂಗ್ರೆಸ್ ಮುಖಂಡೆ ಸೋನಿಯಾ ಗಾಂಧಿ ತಮ್ಮ ಪಕ್ಷವು ಕಾರ್ಮಿಕರ ಪ್ರಯಾಣ ಹಣವನ್ನು ಭರಿಸುತ್ತದೆ ಎಂದು ಘೋಷಿಸಿದ್ದಾರೆ.


ಇದನ್ನೂ ಓದಿ:  ರೈಲು ದರ ವಿವಾದ: ಕೇಂದ್ರದ ಮೂರ್ಖತನವೆಂದ ಬಿಜಿಪಿ ಸಂಸದ ಸುಬ್ರಮಣ್ಯ ಸ್ವಾಮಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಬಿಜೆಪಿ ಶಾಸಕ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...