Homeಮುಖಪುಟಡಬಲ್ ಎಂಜಿನ್ ಸರ್ಕಾರ ಸಮರ್ಥವಾಗಿಲ್ಲ, ವಲಸಿಗರ ಪ್ರಯಾಣದ ಖರ್ಚು ನಾವು ನೀಡುತ್ತೇವೆ: ತೇಜಸ್ವಿ ಯಾದವ್

ಡಬಲ್ ಎಂಜಿನ್ ಸರ್ಕಾರ ಸಮರ್ಥವಾಗಿಲ್ಲ, ವಲಸಿಗರ ಪ್ರಯಾಣದ ಖರ್ಚು ನಾವು ನೀಡುತ್ತೇವೆ: ತೇಜಸ್ವಿ ಯಾದವ್

- Advertisement -
- Advertisement -

ತಮ್ಮ ರಾಜ್ಯಕ್ಕೆ ವಾಪಾಸು ಬರುತ್ತಿರುವ ವಲಸೆ ಕಾರ್ಮಿಕರ 50 ರೈಲುಗಳ ಎಲ್ಲಾ ಪ್ರಯಾಣಿಕರ ಪ್ರಯಾಣ ದರವನ್ನು ಪಾವತಿಸಲು ಸಿದ್ದರಿದ್ದೇವೆ ಎಂದು ಬಿಹಾರದ ಪ್ರಮುಖ ವಿರೋಧ ಪಕ್ಷದ ನಾಯಕ ತೇಜಶ್ವಿ ಯಾದವ್ ಪ್ರಸ್ತಾಪಿಸಿದ್ದಾರೆ. ಇದಾದ ಕೆಲವೇ ಗಂಟೆಗಳ ನಂತರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಸರ್ಕಾರವೇ ರೈಲು ದರ ಪಾವತಿಸಲಿದೆ ಎಂಬ ನಿಲುವು ಪ್ರಕಟಿಸಿದ್ದಾರೆ.

ರೈಲಿನಲ್ಲಿ ಮನೆಗೆ ಮರಳುವ ಪ್ರತಿಯೊಬ್ಬ ಕಾರ್ಮಿಕರಿಗೆ ಪೂರ್ಣ ಟಿಕೆಟ್ ಶುಲ್ಕವನ್ನು ಮರುಪಾವತಿ ಮಾಡಲಾಗುವುದು ಮತ್ತು ಹೆಚ್ಚುವರಿ 500ರೂ. ಗಳ ನೆರವು ನೀಡಲಾಗುವುದು ಎಂದು ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಘೋಷಿಸಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು “ನಮ್ಮ ವಿದ್ಯಾರ್ಥಿಗಳಿಗೆ ಮರಳಿ ಮನೆಗೆ ಉಚಿತ ಪ್ರಯಾಣವನ್ನು ಖಾತ್ರಿಪಡಿಸುವ ನಿರ್ಧಾರವನ್ನು ನಾವು ತೆಗೆದುಕೊಂಡಿದ್ದೇವೆ ಮತ್ತು ಈಗ ಅದೇ ರೀತಿಯ ಸೌಲಭ್ಯವನ್ನು ವಲಸೆ ಕಾರ್ಮಿಕರಿಗೂ ವಿಸ್ತರಿಸಲಾಗುತ್ತಿದೆ” ಎಂದು ತಮ್ಮ ಪರೀಷ್ಕೃತ ನಿಲುವನ್ನು ಹೇಳಿದ್ದಾರೆ.

ವಿರೋಧ ಪಕ್ಷಗಳು ಮಾತ್ರವಲ್ಲದೇ ತಮ್ಮದೇ ಸಮ್ಮಿಶ್ರ ಸರ್ಕಾರದ ಹಲವು ನಾಯಕರು ಸಹ ನಿತೀಶ್‌ ಕುಮಾರ್‌ರವರ ಮೊದಲಿನ ನಿಲುವನ್ನು ಟೀಕಿಸಿದ್ದರು. ಇತರ ರಾಜ್ಯಗಳು ತಮ್ಮ ಕಾರ್ಮಿಕರನ್ನು ವಾಪಸ್ ಕಳುಹಿಸುವಂತೆ ಕೇಂದ್ರಕ್ಕೆ ಮನವಿ ಮಾಡಿಕೊಂಡಾಗ ನಿತೀಶ್ ಕುಮಾರ್ ಅವರು ಕಾರ್ಮಿಕರು ಇದ್ದಲ್ಲಿಯೇ ಇರಬೇಕೆಂದು ಒತ್ತಾಯಿಸಿದರು. ಕಾರ್ಮಿಕರು ಹಿಂದಿರುಗಿದ ನಂತರ 14 ದಿನಗಳವರೆಗೆ ಕಾರ್ಮಿಕರನ್ನು ಪ್ರತ್ಯೇಕವಾಗಿರಿಸಲು ಸಮರ್ಪಕ ಸೌಲಭ್ಯಗಳಿಲ್ಲ. ಉತ್ತರ ಪ್ರದೇಶದಂತಹ ರಾಜ್ಯಗಳ ಅವರ ಸಹವರ್ತಿಗಳು ಇತರ ನಗರಗಳಿಂದ ವಿದ್ಯಾರ್ಥಿಗಳು ಮತ್ತು ಕಾರ್ಮಿಕರನ್ನು ಮರಳಿ ಕರೆತರಲು ಬಸ್ಸುಗಳನ್ನು ಆಯೋಜಿಸಿದರೆ ನಿತೀಶ್ ಅವರು ರೈಲುಗಳನ್ನು ತಡೆದು ಕೇಂದ್ರ ಸರ್ಕಾರಕ್ಕೆ ಅನುಕೂಲ ಮಾಡಿಕೊಟ್ಟರು ಎಂಬ ಟೀಕೆಗಳು ಅವರ ಮೇಲಿದ್ದವು.

ಆರ್‌ಜೆಡಿ ಮುಖಂಡ ಹಾಗೂ ವಿರೋಧ ಪಕ್ಷದ ನಾಯಕರಾದ ತೇಜಸ್ವಿ ಯಾದವ್ ” ಆರ್‌ಜೆಡಿ 50 ರೈಲುಗಳ ಶುಲ್ಕವನ್ನು ಅಸಮರ್ಥ ಬಿಹಾರ ಸರ್ಕಾರಕ್ಕೆ ಕಾರ್ಮಿಕರ ಪರವಾಗಿ ನೀಡುತ್ತೇವೆ. ಮುಂದಿನ 5 ದಿನಗಳಲ್ಲಿ ಸರ್ಕಾರವು ರೈಲುಗಳನ್ನು ವ್ಯವಸ್ಥೆಗೊಳಿಸಬೇಕು, ಪಕ್ಷವು ತನ್ನ ಶುಲ್ಕವನ್ನು ತಕ್ಷಣವೇ ಸರ್ಕಾರಿ ಖಾತೆಗೆ ವರ್ಗಾಯಿಸುತ್ತದೆ” ಎಂದು ಹೇಳಿದ್ದರು.

ಅಲ್ಲದೆ ಟ್ವಿಟ್ಟರ್‌ನಲ್ಲಿ “ಗೌರವಾನ್ವಿತ ನಿತೀಶ್ ಕುಮಾರ್ ಅವರೇ, ಬಡ ಕಾರ್ಮಿಕರ 50 ರೈಲುಗಳ ಶುಲ್ಕವನ್ನು ಭರಿಸಲು ಆರ್‌ಜೆಡಿ ಸಿದ್ಧವಾಗಿದೆ, ಯಾಕೆಂದರೆ ಡಬಲ್ ಎಂಜಿನ್ ಸರ್ಕಾರ ಸಮರ್ಥವಾಗಿಲ್ಲ. ದಯವಿಟ್ಟು ಈಗ ನಿರ್ವಹಣೆಯನ್ನು ತಕ್ಷಣವೇ ಮಾಡಿ. ಸುಶಿಲ್ ಮೋದಿಯವರೇ, ದಯವಿಟ್ಟು ಒಟ್ಟು ಮೊತ್ತವನ್ನು ಹೇಳಿ, ಚೆಕ್ ಅನ್ನು ತಕ್ಷಣ ಕಳುಹಿಸಲಾಗುತ್ತದೆ. ಹೇಗಾದರೂ, ನೀವು ಲೆಕ್ಕ ಪತ್ರವನ್ನು ನೋಡಲು ಇಷ್ಟಪಡುತ್ತೀರಿ” ಎಂದು ಕುಟುಕಿದ್ದರು.

ಮಾರ್ಚ್ 24 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ನಾಲ್ಕು ಗಂಟೆಗಳ ಸೂಚನೆಯೊಂದಿಗೆ ದೇಶಾದ್ಯಂತ ಲಾಕ್ ಡೌನ್ ಘೋಷಿಸಿದಾಗ, ಲಕ್ಷಾಂತರ ವಲಸೆ ಕಾರ್ಮಿಕರು ತಾವು ದುಡಿಯುವ ನಗರಗಳಲ್ಲಿ ಸಿಲುಕಿಕೊಂಡರು. ಅವರ ದುಡಿಮೆಗಳು ಹಠಾತ್ತನೆ ನಿಂತು ಹೋದುದರಿಂದ, ಹಲವಾರು ಕಾರ್ಮಿಕರು ಮನೆಗೆ ತೆರಳಲು ನಿರ್ಧರಿಸಿದರು. ಆದರೆ ಯಾವುದೇ ಸಾರ್ವಜನಿಕ ಸಾರಿಗೆ ಇಲ್ಲದೆ ಸಾವಿರಾರು ಜನರು ತಮ್ಮ ಊರಿಗೆ ಮರಳಲು ಸಾವಿರಾರು ಕಿಲೋಮೀಟರನ್ನು ಕಾಲ್ನಡಿಗೆಯಲ್ಲೇ ನಡೆದರು. ಈ ಸಂಧರ್ಭದಲ್ಲಿ ನೂರಾರು ಜನರು ನೀರು-ಆಹಾರವಿಲ್ಲದೆ ಸಾವಿಗೀಡಾಗಿದ್ದರು.

ಇದರಿಂದಾಗಿ ಕಳೆದ ಶುಕ್ರವಾರ ಬಿಜೆಪಿ ತಮಗೆ ರಾಜಕೀಯ ಹಿನ್ನಡೆಯಾಗುತ್ತಿರುವ ಬಗ್ಗೆ ಚರ್ಚಿಸಿ, ವಿಶೇಷ ರೈಲುಗಳ ಮೂಲಕ ವಲಸೆ ಕಾರ್ಮಿಕರನ್ನು ಮನೆಗೆ ಹಿಂದಿರುಗಿಸುವುದಾಗಿ ಘೋಷಿಸಿತು. ಬಿಜೆಪಿ ಆಡಳಿತವಿಲ್ಲದ ರಾಜ್ಯ ಸರ್ಕಾರಗಳು ರೈಲುಗಳಿಗೆ ಪಾವತಿಸಲು ಹಣವಿಲ್ಲ ಎಂದು ಹೇಳಿದ್ದು, ಸಾಂಕ್ರಾಮಿಕ ರೋಗವನ್ನು ಎದುರಿಸುವ ಕಾರಣದಿಂದಾಗಿ ಅವರ ಹಣಕಾಸು ವೆಚ್ಚ ಒತ್ತಡದಲ್ಲಿದೆ ಎಂದು ಹೇಳಿದ್ದವು.

ಇಂದು ಬೆಳಿಗ್ಗೆ ಕಾಂಗ್ರೆಸ್ ಮುಖಂಡೆ ಸೋನಿಯಾ ಗಾಂಧಿ ತಮ್ಮ ಪಕ್ಷವು ಕಾರ್ಮಿಕರ ಪ್ರಯಾಣ ಹಣವನ್ನು ಭರಿಸುತ್ತದೆ ಎಂದು ಘೋಷಿಸಿದ್ದಾರೆ.


ಇದನ್ನೂ ಓದಿ:  ರೈಲು ದರ ವಿವಾದ: ಕೇಂದ್ರದ ಮೂರ್ಖತನವೆಂದ ಬಿಜಿಪಿ ಸಂಸದ ಸುಬ್ರಮಣ್ಯ ಸ್ವಾಮಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...