Homeಕರ್ನಾಟಕಡಬಲ್ ಎಂಜಿನ್ ಸರಕಾರ ಡಬಲ್ ಗೇಮ್ ಆಡುತ್ತಿದೆ; ಕರಾವಳಿಯ ಎಲ್ಲ ಕೊಲೆ ತನಿಖೆ ಎನ್‌ಎಐಗೆ ವಹಿಸಲಿ:...

ಡಬಲ್ ಎಂಜಿನ್ ಸರಕಾರ ಡಬಲ್ ಗೇಮ್ ಆಡುತ್ತಿದೆ; ಕರಾವಳಿಯ ಎಲ್ಲ ಕೊಲೆ ತನಿಖೆ ಎನ್‌ಎಐಗೆ ವಹಿಸಲಿ: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ

- Advertisement -
- Advertisement -

ರಾಜ್ಯ ಸರ್ಕಾರವು ನಾಡಿನ ಜನರನ್ನಷ್ಟೇ ಅಲ್ಲ, ತನ್ನ ಕಾರ್ಯಕರ್ತರನ್ನೇ ರಕ್ಷಣೆ ಮಾಡಿಕೊಳ್ಳಲಾಗದಷ್ಟು ಅಸಮರ್ಥವಾಗಿದೆ ಎಂದು ಬಿಜೆಪಿ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಶನಿವಾರ ತೀವ್ರವಾಗಿ ಹರಿಹಾಯ್ದಿದ್ದು, “ಡಬಲ್ ಎಂಜಿನ್ ಸರಕಾರ ಡಬಲ್ ಗೇಮ್” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ನಾಡಿನ ಜನರನ್ನಷ್ಟೇ ಅಲ್ಲ, ತನ್ನ ಕಾರ್ಯಕರ್ತರನ್ನೇ ರಕ್ಷಣೆ ಮಾಡಿಕೊಳ್ಳಲಾಗದ ಅಸಮರ್ಥ, ಅಸಹಾಯಕ ರಾಜ್ಯ ಬಿಜೆಪಿ ಸರಕಾರ, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು NIA ತನಿಖೆಗೆ ಒಪ್ಪಿಸಿದೆ. ಆದರೆ, ಕರಾವಳಿಯಲ್ಲಿ ನಡೆದ ಎಲ್ಲ ಹತ್ಯೆಗಳನ್ನೂ NIA ತನಿಖೆಗೆ ವಹಿಸಲು ಹಿಂಜರಿಯುತ್ತಿದೆ! ಏಕೆ?” ಎಂದು ಮಾಜಿ ಮುಖ್ಯಮಂತ್ರಿ ಪ್ರಶ್ನೆ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕರಾವಳಿ ಭಾಗದಲ್ಲಿ ಪ್ರತಿ ಕೊಲೆ ಬಗ್ಗೆಯೂ ಸರಕಾರಕ್ಕೆ ಮಾಹಿತಿ ಇದೆ. ಆ ಕೊಲೆಗಳು ಏಕಾಗುತ್ತಿವೆ ಎನ್ನುವುದೂ ಗೊತ್ತಿದೆ. ಆದರೆ, ‘ಡಬಲ್ ಎಂಜಿನ್ ಸರಕಾರ ಡಬಲ್ ಗೇಮ್’ ಆಡುತ್ತಿದೆ. ಜಗತ್ತಿನ ಅತಿದೊಡ್ಡ ರಾಜಕೀಯ ಪಕ್ಷ ಎಂದು ಬೀಗುವ ಬಿಜೆಪಿ ಪಕ್ಷ, ತನಗೆ ಅಧಿಕಾರ ತಂದುಕೊಟ್ಟ ಯುವಕರ ಜೀವಗಳಿಗೇ ಗ್ಯಾರಂಟಿ ಕೊಡದಷ್ಟು ದುರ್ಬಲವಾಗಿದೆ’’ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ರಸ್ತೆಗಿಳಿದು ಕಲ್ಲು ಹೊಡೆಯಬಹುದು: ಸಂಸದ ತೇಜಸ್ವಿ ಸೂರ್ಯ ಆಡಿಯೋ ವೈರಲ್

“ಪ್ರವೀಣ್ ಹತ್ಯೆ ಪ್ರಕರಣವನ್ನು NIA ತನಿಖೆಗೆ ಒಪ್ಪಿಸಿ ವೀರಾವೇಶ ಮೆರೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಂಗಳೂರಿನಲ್ಲಿ ಜನರಿಗೆ ಕೊಟ್ಟ ಸಂದೇಶವೇನು? ಅವರ ನಾಲಿಗೆಯ ಮೇಲೆ ಒಮ್ಮೆಯಾದರೂ ‘ಶಾಂತಿ ಕಾಪಾಡಿ’ ಎನ್ನುವ ಮಾತು ಬಂತಾ? ಬರಲಿಲ್ಲ. ನೆಮ್ಮದಿಗಾಗಿ ಕಿಂಚಿತ್ ಕ್ರಮ ವಹಿಸಿದಿರಾ? ಅದೂ ಇಲ್ಲ. ಹಿಂಸೆಗೆ ಇನ್ನಷ್ಟು ತುಪ್ಪಾ ಸುರಿದು ಬಂದರು” ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

“NIA ತನಿಖೆಗೆ ವಹಿಸಿದ ಎಷ್ಟು ಪ್ರಕರಣಗಳಿಗೆ ತಾರ್ಕಿಕ ಅಂತ್ಯ ಸಿಕ್ಕಿದೆ? ಒಂದೂ ಇಲ್ಲ. NIAಗೆ ಒಪ್ಪಿಸಿದ ಮೇಲೆ ತನಿಖೆಯಲ್ಲಿ ಮುಂದೆ ಸಾಗುತ್ತಿದ್ದ ರಾಜ್ಯ ಪೊಲೀಸರಿಗೆ ಮುಖ್ಯಮಂತ್ರಿಗಳು ಕೊಟ್ಟ ಸಂದೇಶವೇನು? ಸ್ವತಃ ಗೃಹ ಸಚಿವರಾಗಿದ್ದ ಅವರು, ಸಿಎಂ ಆದ ಮೇಲೆ ತಮ್ಮ ಅಧೀನದ ಪೊಲೀಸ್ ವ್ಯವಸ್ಥೆಯನ್ನೇ ನಂಬುತ್ತಿಲ್ಲ. ಇದಲ್ಲವೇ ವಿಪರ್ಯಾಸ” ಎಂದು ಅವರು ವ್ಯಂಗ್ಯವಾಡಿದ್ದಾರೆ.

“ರಾಜ್ಯದಲ್ಲಿ ದಕ್ಷ ಪೊಲೀಸ್ ಅಧಿಕಾರಿಗಳು ಇಲ್ಲವೆ? ನಿಷ್ಠಾವಂತ, ಪ್ರಾಮಾಣಿಕ ಅಧಿಕಾರಿಗಳಿಗೆ ಮುಕ್ತ ಸ್ವಾತಂತ್ರ್ಯ ಕೊಟ್ಟರೆ ಕರಾವಳಿ ಹಿಂಸಾಕಾಂಡವನ್ನು ಮೂಲೋತ್ಪಾಟನೆ ಮಾಡಬಲ್ಲರು. ರಾಜ್ಯ ಬಿಜೆಪಿ ಸರಕಾರಕ್ಕೆ ಅದು ಬೇಕಿಲ್ಲ. ಸಮರ್ಥ ಅಧಿಕಾರಿಗಳನ್ನು ನಂಬದೆ NIAಗೆ ವಹಿಸುವ ನಾಟಕವಾಡಿ ಕಗ್ಗೊಲೆಗಳ ತನಿಖೆಗೆ ‘ಸಮಾಧಿ’ ಕಟ್ಟಲು ಹೊರಟಿದೆ” ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

“ಎರಡು ಕೊಲೆಗಳು ನಡೆದ ಬೆಳ್ಳಾರೆ ಗ್ರಾಮದಲ್ಲಾದರೂ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಹೊಣೆಯ ಘನತೆಗೆ ತಕ್ಕಂತೆ ಶಾಂತಿ ರಕ್ಷಣೆ ಬಗ್ಗೆ ಒಂದು ಮಾತನ್ನಾದರೂ ಹೇಳಿದಿರಾ? ಇಲ್ಲ, ಚುನಾವಣೆ ವರ್ಷವಲ್ಲವೆ, ಕೊಲೆಗಳೇ ಹೆಚ್ಚೆಚ್ಚು ಆಗಬೇಕು, ಅವರ ಮತಪೆಟ್ಟಿಗೆ ಕೊಬ್ಬಬೇಕು. ನೆತ್ತರಧಾರೆ ಹರಿದಷ್ಟೂ ಭರ್ಜರಿ ಮತಧಾರೆ” ಎಂದು ಹೆಚ್‌ಡಿಕೆ ವಾಗ್ದಾಳಿ ನಡೆಸಿದ್ದಾರೆ.

“ಬೆಳ್ಳಾರೆ ಬೇಗೆ ಇಡೀ ಕರಾವಳಿಯನ್ನು ವ್ಯಾಪಿಸಿದೆ. ಆದರೆ, ಜೀವ ಭಯದಲ್ಲಿರುವ ಎರಡು ಕೋಮುಗಳ ಜನರು ನೆಮ್ಮದಿಯಿಂದ ಬದುಕಲು ಏನು ಮಾಡಿದ್ದೀರಿ ಬೊಮ್ಮಾಯಿ ಅವರೇ? ಅವರ ಜೀವಕ್ಕೆ ಏನು ಖಾತರಿ ಕೊಟ್ಟಿದ್ದೀರಿ? ಪ್ರತಿ ಕೊಲೆ ಆದಾಗಲೂ ಈ ಕೊಲೆಪಾತಕ ರಾಜಕಾರಣ ನಮ್ಮ ಕುಟುಂಬಕ್ಕೇ ಕೊನೆಯಾಗಲಿ ಎನ್ನುವ ತಾಯಂದಿರ ಆರ್ತನಾದಕ್ಕೆ ನಿಮ್ಮ ಉತ್ತರವೇನು?” ಎಂದು ಮಾಜಿ ಸಿಎಂ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪ್ರವೀಣ್ ಹತ್ಯೆ ಸಂಬಂಧ ಬಿಜೆಪಿ ಅಧ್ಯಕ್ಷ ಕಟೀಲ್‌ರನ್ನು ತನಿಖೆಗೊಳಪಡಿಸಬೇಕು – ಸಿದ್ದರಾಮಯ್ಯ ಆಗ್ರಹ

“ಕರ್ನಾಟಕ ಸರ್ವಜನಾಂಗದ ಶಾಂತಿಯ ತೋಟ. ಇದನ್ನು ಸರ್ವಶನಾಶ ಮಾಡಿದ್ದೀರಿ. ಹಿಂಸೆಯ ಎಂಬ ವಿಷಸರ್ಪದ ಹೆಡೆಯಡಿ ಕಟ್ಟಿರುವ ನಿಮ್ಮ ಸಾಮ್ರಾಜ್ಯ ಹಿಂಸೆಗೇ ಬಲಿ ಆಗುವುದು ಖಚಿತ. ಕಾರ್ಯಕರ್ತರ ನೆತ್ತರಿನ ಮೇಲಿನ ಅಧಿಕಾರದ ಸುಖಕ್ಕೆ ಅದೇ ಕಾರ್ಯಕರ್ತರ ಆಕ್ರೋಶವೇ ಚರಮಗೀತೆ ಬರೆಯಲಿದೆ. ಕರಾವಳಿ ಕೆರಳಿದೆ, ಕರ್ನಾಟಕ ಕೆರಳುವುದು ಬಾಕಿ ಇದೆ” ಎಂದು ಕುಮಾರ ಸ್ವಾಮಿ ಅವರು ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...