Homeಕರ್ನಾಟಕಮ್ಯಾನ್‌ಹೋಲ್‌ಗೆ ಇಳಿದ ಪರಿಣಾಮ ಗಂಭೀರ ಆರೋಗ್ಯ ಸಮಸ್ಯೆ: ಪೌರಕಾರ್ಮಿಕ ICU ಗೆ ದಾಖಲು

ಮ್ಯಾನ್‌ಹೋಲ್‌ಗೆ ಇಳಿದ ಪರಿಣಾಮ ಗಂಭೀರ ಆರೋಗ್ಯ ಸಮಸ್ಯೆ: ಪೌರಕಾರ್ಮಿಕ ICU ಗೆ ದಾಖಲು

- Advertisement -
- Advertisement -

ಮ್ಯಾನ್‌ಹೋಲ್‌‌ಗೆ ಇಳಿದ ಪರಿಣಾಮದಿಂದಾಗಿ ಚಿನ್ಮಯ ಮಿಷನ್ ಆಸ್ಪತ್ರೆಯ (CMH) ಉದ್ಯೋಗಿ ದೈವದೀನಂ(53) ಅವರು ಉಸಿರಾಟದ ತೊಂದರೆ, ರಕ್ತದೊತ್ತಡ ಮತ್ತು ಇತರ ಅನಾರೋಗ್ಯ ತೊಂದರೆಗೆ ಒಳಗಾಗಿದ್ದಾರೆ ಎಂದು TOI ವರದಿ ಮಾಡಿದೆ. ಇದರ ನಂತರ ಅವರನ್ನು ಅದೇ ಆಸ್ಪತ್ರೆಯ ICU ಗೆ ದಾಖಲಿಸಲಾಗಿದೆ.

ಅವರನ್ನು ಮ್ಯಾನ್‌ಹೋಲ್‌ಗೆ ಇಳಿದು ಅದನ್ನು ಸ್ವಚ್ಛ ಮಾಡುವಂತೆ ಆಸ್ಪತ್ರೆಯ ಮೇಲಾಧಿಕಾರಿಗಳು ಒತ್ತಾಯಿಸಿದ್ದರಿಂದ ಅವರು ಮ್ಯಾನ್‌ಹೋಲ್‌ಗೆ ಇಳಿದಿದ್ದರು. ಈ ಬಗ್ಗೆ ಕಳೆದ ಮಂಗಳವಾದಂದು ವರದಿಯಾಗಿತ್ತು. ಘಟನೆಯ ಬಗ್ಗೆ ವರದಿಯಾದ ಎರಡು ದಿನಗಳ ನಂತರ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರು ಗುರುವಾರ ಆಸ್ಪತ್ರೆಗೆ ಭೇಟಿ ನೀಡಿ, ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಆಸ್ಪತ್ರೆ ಮತ್ತು ಅದರ ಇಬ್ಬರು ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ಹಲಸೂರು ಸಹಾಯಕ ಪೊಲೀಸ್ ಆಯುಕ್ತ ಕುಮಾರ್, ನಡೆಯುತ್ತಿರುವ ತನಿಖೆಯ ವಿವರಗಳನ್ನು ಬಹಿರಂಗಪಡಿಸುವುದು ಸೂಕ್ತವಲ್ಲ ಎಂದು ಹೇಳಿದ್ದಾರೆಂದು TOI ವರದಿ ಹೇಳಿದೆ. “ತನಿಖೆಯಲ್ಲಿ ಪ್ರಗತಿ ಕಂಡುಬಂದಿದೆ ಆದರೆ ಸಂಪೂರ್ಣ ಪ್ರಕ್ರಿಯೆಯು ಪೂರ್ಣಗೊಂಡ ನಂತರ ಮಾತ್ರ ಅದನ್ನು ಬಹಿರಂಗಪಡಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಚಿನ್ಮಯ ಮಿಷನ್ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೋಪಾಲ್ ಬಿ ಹೊಸೂರ್ ಅವರಯ ಘಟನೆಯ ಬಗ್ಗೆ ಪ್ರತಿಕ್ರಿಯಿಸಲು ಅಥವಾ ವಿವರಿಸಲು ನಿರಾಕರಿಸಿದ್ದು, “ಆಸ್ಪತ್ರೆಯು ಅಧಿಕಾರಿಗಳೊಂದಿಗೆ ಸಹಕರಿಸುತ್ತದೆ” ಎಂದು ಅವರು ಹೇಳಿದ್ದಾರೆ.

ದೈವದೀನಂ ಅವರು ಆಸ್ಪತ್ರೆಯ ಒಳಚರಂಡಿ ಸ್ವಚ್ಛಗೊಳಿಸಿದ ನಂತರ ಅವರ ಆರೋಗ್ಯವು ಹದಗೆಟ್ಟಿದೆ ಎಂದು ಸಿಎಂಹೆಚ್ ಮೂಲಗಳು ತಿಳಿಸಿವೆ ಎಂದು ಪತ್ರಿಕೆ ಹೇಳಿದೆ.

ಇದನ್ನೂ ಓದಿ:ಪೊಲಿಟಿಕಲ್ ಕರೆಕ್ಟ್‌ನೆಸ್ ಮತ್ತು ಸಂವೇದನೆ; ಚಿತ್ರ, ಕಾರ್ಟೂನು, ಮಾಧ್ಯಮ ಮತ್ತು ತಿಳಿವಳಿಕೆಯ ಸಂವಾದ

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಮಾತನಾಡಿ, “ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಎಸಿಪಿ ಮತ್ತು ಆ ಭಾಗದ ವಿಭಾಗೀಯ ಮ್ಯಾಜಿಸ್ಟ್ರೇಟ್‌ ಆಗಿರುವ ಸಹಾಯಕ ಆಯುಕ್ತರಿಗೆ ಸೂಚನೆ ನೀಡಿದ್ದೇನೆ” ಎಂದು ಹೇಳಿದ್ದರೆ.

ಭಾರಿ ಬೆಲೆ ತೆರುತ್ತಿರುವ ನೈರ್ಮಲ್ಯ ಕಾರ್ಮಿಕರು

“ನೈರ್ಮಲ್ಯ ಕಾರ್ಮಿಕರ ತೆರುತ್ತಿರುವ ಅಂತಿಮ ಬೆಲೆ ಸಾವಾಗಿದೆ. ಉಸಿರಾಟದ ತೊಂದರೆಗಳು ಸೇರಿದಂತೆ ಇತರ ಗಂಭೀರ ಆರೋಗ್ಯ ಸಮಸ್ಯೆಗಳು ಅವರು ಸತತವಾಗಿ ಆಸ್ಪತ್ರೆ ಸೇರುವಂತೆ ಮಾಡುತ್ತದೆ” ಎಂದು ಸಫಾಯಿ ಕರ್ಮಚಾರಿಗಳು ಹೇಳಿದ್ದಾರೆ.

“ನನ್ನ ವೈದ್ಯಕೀಯ ಬಿಲ್‌ಗಳು ತುಂಬಾ ಹೆಚ್ಚಿದ್ದು, ಅದಕ್ಕೆ ಅಂತ್ಯವಿಲ್ಲ. ಇದರಿಂದ 4 ಲಕ್ಷ ರೂ.ಗೂ ಹೆಚ್ಚು ಸಾಲ ಹೊಂದಿದ್ದೇನೆ’’ ಎಂದು ಬಿಡಬ್ಲ್ಯುಎಸ್‌ಎಸ್‌ಬಿ ನೈರ್ಮಲ್ಯ ಕಾರ್ಮಿಕ ಸತೀಶ್ ಜೆ.ಆರ್. ಹೇಳಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.

ಇದನ್ನೂ ಓದಿ:ಪುರಸಭೆ ಅಧಿಕಾರಿಗಳಿಂದ ಕಿರುಕುಳ: ಡೆತ್‌ನೋಟ್ ಬರೆದಿಟ್ಟು ಪೌರಕಾರ್ಮಿಕ ಆತ್ಮಹತ್ಯೆ

ಅಪಾಯಕಾರಿ ಮತ್ತು ದೈಹಿಕವಾಗಿ ಹಾನಿಕರ ಕೆಲಸದ ಕಾರಣದಿಂದಾಗಿ ನೈರ್ಮಲ್ಯ ಕಾರ್ಮಿಕರು ಹೆಚ್ಚಾಗಿ ನ್ಯುಮೋಕೊನಿಯೋಸಿಸ್, ಸಿಲಿಕೋಸಿಸ್, ವಿವಿಧ ಚರ್ಮ ಮತ್ತು ಕಣ್ಣಿನ ಸೋಂಕುಗಳಿಂದ ಬಳಲುತ್ತಿದ್ದಾರೆ ಎಂದು ಸಫಾಯಿ ಕರ್ಮಾಚಾರಿಗಳ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿರುವ ಕಾರ್ಯಕರ್ತರು ಹೇಳಿದ್ದಾರೆ.

“ಕೆಲವು ಸಾವುಗಳು ಅವರು ಕೆಲಸದಲ್ಲಿರುವಾಗ ಸಂಭವಿಸುತ್ತವೆ. ಆದರೆ ಕಾನೂನುಬಾಹಿರ ಕೆಲಸಗಳಿಗೆ ಅವರನ್ನು ಹಚ್ಚುವುದರಿಂದ ಉಂಟಾಗುವ, ಅದರಿಂದ ಉಲ್ಬಣಗೊಳ್ಳುವ ತೀವ್ರ ಆರೋಗ್ಯ ಸಮಸ್ಯೆಗಳಿಂದಾಗಿಯೆ ನೈರ್ಮಲ್ಯ ಕಾರ್ಮಿಕರಲ್ಲಿ ಹೆಚ್ಚಿನವರು ಬೇಗನೆ ಸಾಯುತ್ತಾರೆ” ಎಂದು ನೈರ್ಮಲ್ಯ ಕಾರ್ಮಿಕರನ್ನು ಪ್ರತಿನಿಧಿಸುವ ವಕೀಲ ಎಸ್. ಬಾಲನ್ ಹೇಳಿದ್ದಾರೆ.

ಇದನ್ನೂ ಓದಿ:ಚಂದ್ರಯಾನ ಇರಲಿ; ಒಳಚರಂಡಿ ಸ್ವಚ್ಛಗೊಳಿಸುವ ತಂತ್ರಜ್ಞಾನ ಎಲ್ಲಿದೆ? ಗುಜರಾತ್ ಸರಕಾರಕ್ಕೆ ಜಿಗ್ನೇಶ್ ಮೇವಾನಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...

ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ. ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ...

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ...

ಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ

ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಗುರುವಾರ (ಫೆ.5) ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ...

ಸಭಾಪತಿ ಹೊರಟ್ಟಿ ಉಮಾಶ್ರೀ ಜೊತೆ ಬಳಸಿದ ಭಾಷೆ ಶಿಸ್ತಿನ ಹೆಸರಿನ ಅಹಂಕಾರ: ನಿರ್ದೇಶಕಿ ಸುಮನಾ ಕಿತ್ತೂರು

ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್‌ನಲ್ಲಿ ಉಮಾಶ್ರೀ ಅವರಿಗೆ ಬಳಸಿದ ಭಾಷೆ ಶಿಸ್ತಿನ ಹೆಸರಲ್ಲಿನ ಅಹಂಕಾರವಾಗಿದೆ ಎಂದು ನಿರ್ದೇಶಕಿ ಸುಮನಾ ಕಿತ್ತೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುರುವಾರ (ಫೆ.5) ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ...

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

ಪ್ರಮುಖ ಮಾಧ್ಯಮ ಸಂಸ್ಥೆ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಭಾರೀ ಉದ್ಯೋಗ ಕಡಿತ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಕೆಲಸ ಕಳೆದುಕೊಂಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಶಶಿ ತರೂರ್ ಅವರ ಮಗ...

ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ : ಲೋಕಸಭೆ ಕಲಾಪ ಮುಂದೂಡಿಕೆ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಗುರುವಾರ (ಫೆ.5) ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಮಧ್ಯಾಹ್ನದವರೆಗೆ ಮುಂದೂಡಿದರು. ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ವಿಶೇಷವಾಗಿ,...

ಗದಗ | ಕ್ಯಾಂಟರ್-ಕ್ರೂಸರ್ ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಗದಗ ಜಿಲ್ಲೆ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಜೇಂದ್ರಗಡದ...

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...