Homeಕರ್ನಾಟಕಮ್ಯಾನ್‌ಹೋಲ್‌ಗೆ ಇಳಿದ ಪರಿಣಾಮ ಗಂಭೀರ ಆರೋಗ್ಯ ಸಮಸ್ಯೆ: ಪೌರಕಾರ್ಮಿಕ ICU ಗೆ ದಾಖಲು

ಮ್ಯಾನ್‌ಹೋಲ್‌ಗೆ ಇಳಿದ ಪರಿಣಾಮ ಗಂಭೀರ ಆರೋಗ್ಯ ಸಮಸ್ಯೆ: ಪೌರಕಾರ್ಮಿಕ ICU ಗೆ ದಾಖಲು

- Advertisement -
- Advertisement -

ಮ್ಯಾನ್‌ಹೋಲ್‌‌ಗೆ ಇಳಿದ ಪರಿಣಾಮದಿಂದಾಗಿ ಚಿನ್ಮಯ ಮಿಷನ್ ಆಸ್ಪತ್ರೆಯ (CMH) ಉದ್ಯೋಗಿ ದೈವದೀನಂ(53) ಅವರು ಉಸಿರಾಟದ ತೊಂದರೆ, ರಕ್ತದೊತ್ತಡ ಮತ್ತು ಇತರ ಅನಾರೋಗ್ಯ ತೊಂದರೆಗೆ ಒಳಗಾಗಿದ್ದಾರೆ ಎಂದು TOI ವರದಿ ಮಾಡಿದೆ. ಇದರ ನಂತರ ಅವರನ್ನು ಅದೇ ಆಸ್ಪತ್ರೆಯ ICU ಗೆ ದಾಖಲಿಸಲಾಗಿದೆ.

ಅವರನ್ನು ಮ್ಯಾನ್‌ಹೋಲ್‌ಗೆ ಇಳಿದು ಅದನ್ನು ಸ್ವಚ್ಛ ಮಾಡುವಂತೆ ಆಸ್ಪತ್ರೆಯ ಮೇಲಾಧಿಕಾರಿಗಳು ಒತ್ತಾಯಿಸಿದ್ದರಿಂದ ಅವರು ಮ್ಯಾನ್‌ಹೋಲ್‌ಗೆ ಇಳಿದಿದ್ದರು. ಈ ಬಗ್ಗೆ ಕಳೆದ ಮಂಗಳವಾದಂದು ವರದಿಯಾಗಿತ್ತು. ಘಟನೆಯ ಬಗ್ಗೆ ವರದಿಯಾದ ಎರಡು ದಿನಗಳ ನಂತರ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರು ಗುರುವಾರ ಆಸ್ಪತ್ರೆಗೆ ಭೇಟಿ ನೀಡಿ, ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಆಸ್ಪತ್ರೆ ಮತ್ತು ಅದರ ಇಬ್ಬರು ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ಹಲಸೂರು ಸಹಾಯಕ ಪೊಲೀಸ್ ಆಯುಕ್ತ ಕುಮಾರ್, ನಡೆಯುತ್ತಿರುವ ತನಿಖೆಯ ವಿವರಗಳನ್ನು ಬಹಿರಂಗಪಡಿಸುವುದು ಸೂಕ್ತವಲ್ಲ ಎಂದು ಹೇಳಿದ್ದಾರೆಂದು TOI ವರದಿ ಹೇಳಿದೆ. “ತನಿಖೆಯಲ್ಲಿ ಪ್ರಗತಿ ಕಂಡುಬಂದಿದೆ ಆದರೆ ಸಂಪೂರ್ಣ ಪ್ರಕ್ರಿಯೆಯು ಪೂರ್ಣಗೊಂಡ ನಂತರ ಮಾತ್ರ ಅದನ್ನು ಬಹಿರಂಗಪಡಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಚಿನ್ಮಯ ಮಿಷನ್ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೋಪಾಲ್ ಬಿ ಹೊಸೂರ್ ಅವರಯ ಘಟನೆಯ ಬಗ್ಗೆ ಪ್ರತಿಕ್ರಿಯಿಸಲು ಅಥವಾ ವಿವರಿಸಲು ನಿರಾಕರಿಸಿದ್ದು, “ಆಸ್ಪತ್ರೆಯು ಅಧಿಕಾರಿಗಳೊಂದಿಗೆ ಸಹಕರಿಸುತ್ತದೆ” ಎಂದು ಅವರು ಹೇಳಿದ್ದಾರೆ.

ದೈವದೀನಂ ಅವರು ಆಸ್ಪತ್ರೆಯ ಒಳಚರಂಡಿ ಸ್ವಚ್ಛಗೊಳಿಸಿದ ನಂತರ ಅವರ ಆರೋಗ್ಯವು ಹದಗೆಟ್ಟಿದೆ ಎಂದು ಸಿಎಂಹೆಚ್ ಮೂಲಗಳು ತಿಳಿಸಿವೆ ಎಂದು ಪತ್ರಿಕೆ ಹೇಳಿದೆ.

ಇದನ್ನೂ ಓದಿ:ಪೊಲಿಟಿಕಲ್ ಕರೆಕ್ಟ್‌ನೆಸ್ ಮತ್ತು ಸಂವೇದನೆ; ಚಿತ್ರ, ಕಾರ್ಟೂನು, ಮಾಧ್ಯಮ ಮತ್ತು ತಿಳಿವಳಿಕೆಯ ಸಂವಾದ

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಮಾತನಾಡಿ, “ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಎಸಿಪಿ ಮತ್ತು ಆ ಭಾಗದ ವಿಭಾಗೀಯ ಮ್ಯಾಜಿಸ್ಟ್ರೇಟ್‌ ಆಗಿರುವ ಸಹಾಯಕ ಆಯುಕ್ತರಿಗೆ ಸೂಚನೆ ನೀಡಿದ್ದೇನೆ” ಎಂದು ಹೇಳಿದ್ದರೆ.

ಭಾರಿ ಬೆಲೆ ತೆರುತ್ತಿರುವ ನೈರ್ಮಲ್ಯ ಕಾರ್ಮಿಕರು

“ನೈರ್ಮಲ್ಯ ಕಾರ್ಮಿಕರ ತೆರುತ್ತಿರುವ ಅಂತಿಮ ಬೆಲೆ ಸಾವಾಗಿದೆ. ಉಸಿರಾಟದ ತೊಂದರೆಗಳು ಸೇರಿದಂತೆ ಇತರ ಗಂಭೀರ ಆರೋಗ್ಯ ಸಮಸ್ಯೆಗಳು ಅವರು ಸತತವಾಗಿ ಆಸ್ಪತ್ರೆ ಸೇರುವಂತೆ ಮಾಡುತ್ತದೆ” ಎಂದು ಸಫಾಯಿ ಕರ್ಮಚಾರಿಗಳು ಹೇಳಿದ್ದಾರೆ.

“ನನ್ನ ವೈದ್ಯಕೀಯ ಬಿಲ್‌ಗಳು ತುಂಬಾ ಹೆಚ್ಚಿದ್ದು, ಅದಕ್ಕೆ ಅಂತ್ಯವಿಲ್ಲ. ಇದರಿಂದ 4 ಲಕ್ಷ ರೂ.ಗೂ ಹೆಚ್ಚು ಸಾಲ ಹೊಂದಿದ್ದೇನೆ’’ ಎಂದು ಬಿಡಬ್ಲ್ಯುಎಸ್‌ಎಸ್‌ಬಿ ನೈರ್ಮಲ್ಯ ಕಾರ್ಮಿಕ ಸತೀಶ್ ಜೆ.ಆರ್. ಹೇಳಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.

ಇದನ್ನೂ ಓದಿ:ಪುರಸಭೆ ಅಧಿಕಾರಿಗಳಿಂದ ಕಿರುಕುಳ: ಡೆತ್‌ನೋಟ್ ಬರೆದಿಟ್ಟು ಪೌರಕಾರ್ಮಿಕ ಆತ್ಮಹತ್ಯೆ

ಅಪಾಯಕಾರಿ ಮತ್ತು ದೈಹಿಕವಾಗಿ ಹಾನಿಕರ ಕೆಲಸದ ಕಾರಣದಿಂದಾಗಿ ನೈರ್ಮಲ್ಯ ಕಾರ್ಮಿಕರು ಹೆಚ್ಚಾಗಿ ನ್ಯುಮೋಕೊನಿಯೋಸಿಸ್, ಸಿಲಿಕೋಸಿಸ್, ವಿವಿಧ ಚರ್ಮ ಮತ್ತು ಕಣ್ಣಿನ ಸೋಂಕುಗಳಿಂದ ಬಳಲುತ್ತಿದ್ದಾರೆ ಎಂದು ಸಫಾಯಿ ಕರ್ಮಾಚಾರಿಗಳ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿರುವ ಕಾರ್ಯಕರ್ತರು ಹೇಳಿದ್ದಾರೆ.

“ಕೆಲವು ಸಾವುಗಳು ಅವರು ಕೆಲಸದಲ್ಲಿರುವಾಗ ಸಂಭವಿಸುತ್ತವೆ. ಆದರೆ ಕಾನೂನುಬಾಹಿರ ಕೆಲಸಗಳಿಗೆ ಅವರನ್ನು ಹಚ್ಚುವುದರಿಂದ ಉಂಟಾಗುವ, ಅದರಿಂದ ಉಲ್ಬಣಗೊಳ್ಳುವ ತೀವ್ರ ಆರೋಗ್ಯ ಸಮಸ್ಯೆಗಳಿಂದಾಗಿಯೆ ನೈರ್ಮಲ್ಯ ಕಾರ್ಮಿಕರಲ್ಲಿ ಹೆಚ್ಚಿನವರು ಬೇಗನೆ ಸಾಯುತ್ತಾರೆ” ಎಂದು ನೈರ್ಮಲ್ಯ ಕಾರ್ಮಿಕರನ್ನು ಪ್ರತಿನಿಧಿಸುವ ವಕೀಲ ಎಸ್. ಬಾಲನ್ ಹೇಳಿದ್ದಾರೆ.

ಇದನ್ನೂ ಓದಿ:ಚಂದ್ರಯಾನ ಇರಲಿ; ಒಳಚರಂಡಿ ಸ್ವಚ್ಛಗೊಳಿಸುವ ತಂತ್ರಜ್ಞಾನ ಎಲ್ಲಿದೆ? ಗುಜರಾತ್ ಸರಕಾರಕ್ಕೆ ಜಿಗ್ನೇಶ್ ಮೇವಾನಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...