Homeಕರ್ನಾಟಕಮ್ಯಾನ್‌ಹೋಲ್‌ಗೆ ಇಳಿದ ಪರಿಣಾಮ ಗಂಭೀರ ಆರೋಗ್ಯ ಸಮಸ್ಯೆ: ಪೌರಕಾರ್ಮಿಕ ICU ಗೆ ದಾಖಲು

ಮ್ಯಾನ್‌ಹೋಲ್‌ಗೆ ಇಳಿದ ಪರಿಣಾಮ ಗಂಭೀರ ಆರೋಗ್ಯ ಸಮಸ್ಯೆ: ಪೌರಕಾರ್ಮಿಕ ICU ಗೆ ದಾಖಲು

- Advertisement -
- Advertisement -

ಮ್ಯಾನ್‌ಹೋಲ್‌‌ಗೆ ಇಳಿದ ಪರಿಣಾಮದಿಂದಾಗಿ ಚಿನ್ಮಯ ಮಿಷನ್ ಆಸ್ಪತ್ರೆಯ (CMH) ಉದ್ಯೋಗಿ ದೈವದೀನಂ(53) ಅವರು ಉಸಿರಾಟದ ತೊಂದರೆ, ರಕ್ತದೊತ್ತಡ ಮತ್ತು ಇತರ ಅನಾರೋಗ್ಯ ತೊಂದರೆಗೆ ಒಳಗಾಗಿದ್ದಾರೆ ಎಂದು TOI ವರದಿ ಮಾಡಿದೆ. ಇದರ ನಂತರ ಅವರನ್ನು ಅದೇ ಆಸ್ಪತ್ರೆಯ ICU ಗೆ ದಾಖಲಿಸಲಾಗಿದೆ.

ಅವರನ್ನು ಮ್ಯಾನ್‌ಹೋಲ್‌ಗೆ ಇಳಿದು ಅದನ್ನು ಸ್ವಚ್ಛ ಮಾಡುವಂತೆ ಆಸ್ಪತ್ರೆಯ ಮೇಲಾಧಿಕಾರಿಗಳು ಒತ್ತಾಯಿಸಿದ್ದರಿಂದ ಅವರು ಮ್ಯಾನ್‌ಹೋಲ್‌ಗೆ ಇಳಿದಿದ್ದರು. ಈ ಬಗ್ಗೆ ಕಳೆದ ಮಂಗಳವಾದಂದು ವರದಿಯಾಗಿತ್ತು. ಘಟನೆಯ ಬಗ್ಗೆ ವರದಿಯಾದ ಎರಡು ದಿನಗಳ ನಂತರ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರು ಗುರುವಾರ ಆಸ್ಪತ್ರೆಗೆ ಭೇಟಿ ನೀಡಿ, ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಆಸ್ಪತ್ರೆ ಮತ್ತು ಅದರ ಇಬ್ಬರು ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ಹಲಸೂರು ಸಹಾಯಕ ಪೊಲೀಸ್ ಆಯುಕ್ತ ಕುಮಾರ್, ನಡೆಯುತ್ತಿರುವ ತನಿಖೆಯ ವಿವರಗಳನ್ನು ಬಹಿರಂಗಪಡಿಸುವುದು ಸೂಕ್ತವಲ್ಲ ಎಂದು ಹೇಳಿದ್ದಾರೆಂದು TOI ವರದಿ ಹೇಳಿದೆ. “ತನಿಖೆಯಲ್ಲಿ ಪ್ರಗತಿ ಕಂಡುಬಂದಿದೆ ಆದರೆ ಸಂಪೂರ್ಣ ಪ್ರಕ್ರಿಯೆಯು ಪೂರ್ಣಗೊಂಡ ನಂತರ ಮಾತ್ರ ಅದನ್ನು ಬಹಿರಂಗಪಡಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಚಿನ್ಮಯ ಮಿಷನ್ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೋಪಾಲ್ ಬಿ ಹೊಸೂರ್ ಅವರಯ ಘಟನೆಯ ಬಗ್ಗೆ ಪ್ರತಿಕ್ರಿಯಿಸಲು ಅಥವಾ ವಿವರಿಸಲು ನಿರಾಕರಿಸಿದ್ದು, “ಆಸ್ಪತ್ರೆಯು ಅಧಿಕಾರಿಗಳೊಂದಿಗೆ ಸಹಕರಿಸುತ್ತದೆ” ಎಂದು ಅವರು ಹೇಳಿದ್ದಾರೆ.

ದೈವದೀನಂ ಅವರು ಆಸ್ಪತ್ರೆಯ ಒಳಚರಂಡಿ ಸ್ವಚ್ಛಗೊಳಿಸಿದ ನಂತರ ಅವರ ಆರೋಗ್ಯವು ಹದಗೆಟ್ಟಿದೆ ಎಂದು ಸಿಎಂಹೆಚ್ ಮೂಲಗಳು ತಿಳಿಸಿವೆ ಎಂದು ಪತ್ರಿಕೆ ಹೇಳಿದೆ.

ಇದನ್ನೂ ಓದಿ:ಪೊಲಿಟಿಕಲ್ ಕರೆಕ್ಟ್‌ನೆಸ್ ಮತ್ತು ಸಂವೇದನೆ; ಚಿತ್ರ, ಕಾರ್ಟೂನು, ಮಾಧ್ಯಮ ಮತ್ತು ತಿಳಿವಳಿಕೆಯ ಸಂವಾದ

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಮಾತನಾಡಿ, “ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಎಸಿಪಿ ಮತ್ತು ಆ ಭಾಗದ ವಿಭಾಗೀಯ ಮ್ಯಾಜಿಸ್ಟ್ರೇಟ್‌ ಆಗಿರುವ ಸಹಾಯಕ ಆಯುಕ್ತರಿಗೆ ಸೂಚನೆ ನೀಡಿದ್ದೇನೆ” ಎಂದು ಹೇಳಿದ್ದರೆ.

ಭಾರಿ ಬೆಲೆ ತೆರುತ್ತಿರುವ ನೈರ್ಮಲ್ಯ ಕಾರ್ಮಿಕರು

“ನೈರ್ಮಲ್ಯ ಕಾರ್ಮಿಕರ ತೆರುತ್ತಿರುವ ಅಂತಿಮ ಬೆಲೆ ಸಾವಾಗಿದೆ. ಉಸಿರಾಟದ ತೊಂದರೆಗಳು ಸೇರಿದಂತೆ ಇತರ ಗಂಭೀರ ಆರೋಗ್ಯ ಸಮಸ್ಯೆಗಳು ಅವರು ಸತತವಾಗಿ ಆಸ್ಪತ್ರೆ ಸೇರುವಂತೆ ಮಾಡುತ್ತದೆ” ಎಂದು ಸಫಾಯಿ ಕರ್ಮಚಾರಿಗಳು ಹೇಳಿದ್ದಾರೆ.

“ನನ್ನ ವೈದ್ಯಕೀಯ ಬಿಲ್‌ಗಳು ತುಂಬಾ ಹೆಚ್ಚಿದ್ದು, ಅದಕ್ಕೆ ಅಂತ್ಯವಿಲ್ಲ. ಇದರಿಂದ 4 ಲಕ್ಷ ರೂ.ಗೂ ಹೆಚ್ಚು ಸಾಲ ಹೊಂದಿದ್ದೇನೆ’’ ಎಂದು ಬಿಡಬ್ಲ್ಯುಎಸ್‌ಎಸ್‌ಬಿ ನೈರ್ಮಲ್ಯ ಕಾರ್ಮಿಕ ಸತೀಶ್ ಜೆ.ಆರ್. ಹೇಳಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.

ಇದನ್ನೂ ಓದಿ:ಪುರಸಭೆ ಅಧಿಕಾರಿಗಳಿಂದ ಕಿರುಕುಳ: ಡೆತ್‌ನೋಟ್ ಬರೆದಿಟ್ಟು ಪೌರಕಾರ್ಮಿಕ ಆತ್ಮಹತ್ಯೆ

ಅಪಾಯಕಾರಿ ಮತ್ತು ದೈಹಿಕವಾಗಿ ಹಾನಿಕರ ಕೆಲಸದ ಕಾರಣದಿಂದಾಗಿ ನೈರ್ಮಲ್ಯ ಕಾರ್ಮಿಕರು ಹೆಚ್ಚಾಗಿ ನ್ಯುಮೋಕೊನಿಯೋಸಿಸ್, ಸಿಲಿಕೋಸಿಸ್, ವಿವಿಧ ಚರ್ಮ ಮತ್ತು ಕಣ್ಣಿನ ಸೋಂಕುಗಳಿಂದ ಬಳಲುತ್ತಿದ್ದಾರೆ ಎಂದು ಸಫಾಯಿ ಕರ್ಮಾಚಾರಿಗಳ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿರುವ ಕಾರ್ಯಕರ್ತರು ಹೇಳಿದ್ದಾರೆ.

“ಕೆಲವು ಸಾವುಗಳು ಅವರು ಕೆಲಸದಲ್ಲಿರುವಾಗ ಸಂಭವಿಸುತ್ತವೆ. ಆದರೆ ಕಾನೂನುಬಾಹಿರ ಕೆಲಸಗಳಿಗೆ ಅವರನ್ನು ಹಚ್ಚುವುದರಿಂದ ಉಂಟಾಗುವ, ಅದರಿಂದ ಉಲ್ಬಣಗೊಳ್ಳುವ ತೀವ್ರ ಆರೋಗ್ಯ ಸಮಸ್ಯೆಗಳಿಂದಾಗಿಯೆ ನೈರ್ಮಲ್ಯ ಕಾರ್ಮಿಕರಲ್ಲಿ ಹೆಚ್ಚಿನವರು ಬೇಗನೆ ಸಾಯುತ್ತಾರೆ” ಎಂದು ನೈರ್ಮಲ್ಯ ಕಾರ್ಮಿಕರನ್ನು ಪ್ರತಿನಿಧಿಸುವ ವಕೀಲ ಎಸ್. ಬಾಲನ್ ಹೇಳಿದ್ದಾರೆ.

ಇದನ್ನೂ ಓದಿ:ಚಂದ್ರಯಾನ ಇರಲಿ; ಒಳಚರಂಡಿ ಸ್ವಚ್ಛಗೊಳಿಸುವ ತಂತ್ರಜ್ಞಾನ ಎಲ್ಲಿದೆ? ಗುಜರಾತ್ ಸರಕಾರಕ್ಕೆ ಜಿಗ್ನೇಶ್ ಮೇವಾನಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...