Homeಮುಖಪುಟಆರ್ಥಿಕ ಸ್ವಾತಂತ್ರ್ಯ & ಸಂವಿಧಾನ ರಕ್ಷಣೆಗಾಗಿ ಮತ್ತೊಂದು ಬೃಹತ್ ಹೋರಾಟದತ್ತ ದೇಶ ಸಾಗುತ್ತಿದೆ

ಆರ್ಥಿಕ ಸ್ವಾತಂತ್ರ್ಯ & ಸಂವಿಧಾನ ರಕ್ಷಣೆಗಾಗಿ ಮತ್ತೊಂದು ಬೃಹತ್ ಹೋರಾಟದತ್ತ ದೇಶ ಸಾಗುತ್ತಿದೆ

ರೈತ ಹೋರಾಟ ಮತ್ತು ಸಂವಿಧಾನ ರಕ್ಷಣೆಯ ಕುರಿತು ಡಾ.ಬಿ.ಪಿ ಮಹೇಶ ಚಂದ್ರಗುರುರವರ ಲೇಖನ

- Advertisement -
- Advertisement -

ಭಾರತ ಸರ್ಕಾರ ಜಾರಿಗೆ ತಂದ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರೈತರು ಭಾರತದಲ್ಲಿ ಸಭ್ಯವಾಗಿ, ಅಹಿಂಸಾತ್ಮಕವಾಗಿ ಮತ್ತು ಪ್ರಜಾಸತ್ತಾತ್ಮಕವಾಗಿ ಪ್ರತಿಭಟನೆ ನಡೆಸಿ ವಿಶ್ವದ ಗಮನ ಸೆಳೆದಿದ್ದಾರೆ. ಪ್ರಗತಿಪರ ಚಿಂತಕರು, ಕಾನೂನು ತಜ್ಞರು ಮತ್ತು ರೈತರ ಮುಖಂಡರು ಹೊಸ ಕಾನೂನುಗಳು ಮೂಲಭೂತವಾಗಿ ಕಾರ್ಪೊರೇಟ್ ವಲಯಕ್ಕೆ ಪ್ರಯೋಜನ ಉಂಟುಮಾಡಿ ಭಾರತದ ಆರ್ಥಿಕತೆಯ ಬೆನ್ನೆಲುಬನ್ನು ಮುರಿಯುತ್ತವೆಯೆಂದು ತೀವ್ರವಾಗಿ ವಾದಿಸಿದ್ದಾರೆ. ದೊಡ್ಡ ಉದ್ದಿಮೆಗಳು ಆಹಾರ ಧಾನ್ಯಗಳು, ಹಣ್ಣು ಹಂಪಲುಗಳು ಮತ್ತು ತರಕಾರಿಗಳನ್ನು ಸಂಗ್ರಹಿಸಿ ತಮಗೆ ಬೇಕಾದ ಹಾಗೆ ಮಾರಾಟ ಮಾಡಿ ರೈತರು, ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು, ಸಣ್ಣ ವ್ಯಾಪಾರಿಗಳು ಮತ್ತು ಭಾರತೀಯ ಸಮಾಜದ ಇತರ ಅಂಚಿನಲ್ಲಿರುವ ವರ್ಗಗಳ ಜೀವನದ ಮೇಲೆ ಮಾರಣಾಂತಿಕ ಪರಿಣಾಮ ಬೀರುವುದಾಗಿ ಚಳುವಳಿಗಾರರು ಪ್ರತಿಪಾದಿಸಿದ್ದಾರೆ. ಇದರ ಪರಿಣಾಮವಾಗಿ, ಕೆಲವು ದೊಡ್ಡ ಉದ್ದಿಮೆಗಳು ಸುಮಾರು 90%ರಷ್ಟು ಕೃಷಿ ವ್ಯವಹಾರವನ್ನು ನಿಯಂತ್ರಿಸುವ, ಆರ್ಥಿಕ ಏಕಸ್ವಾಮ್ಯ ಸಾಧಿಸುವ ಮತ್ತು ಜನಸಾಮಾನ್ಯರ ಜೀವನೋಪಾಯ ಮಾರ್ಗಗಳನ್ನು ಕಸಿದುಕೊಳ್ಳುವ ಬಹುದೊಡ್ಡ ಅಪಾಯ ಎದುರಾಗಿದೆ.

ಪಟ್ಟಭದ್ರ ಹಿತಾಸಕ್ತಿಗಳು ನಿರಂತರವಾಗಿ ಸಮಾಜ, ಆರ್ಥಿಕತೆ, ರಾಜಕಾರಣ, ಸಂಸ್ಕೃತಿ ಮೊದಲಾದ ಕ್ಷೇತ್ರಗಳಲ್ಲಿ ತಮ್ಮ ಏಕಸ್ವಾಮ್ಯವನ್ನು ಸುಸ್ಥಿರಗೊಳಿಸಲು ಎಲ್ಲ ಬಗೆಯ ಪ್ರಜಾಸತ್ತಾತ್ಮಕ ಹೋರಾಟಗಳನ್ನು ಅಡ್ಡಿಪಡಿಸುತ್ತವೆ. ಜನವರಿ 26ರಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಹಿಂಸಾಚಾರದ ಹಿಂದೆ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪಕ್ಷದ ಬೆಂಬಲಿಗರ ಕೈವಾಡವಿರುವುದನ್ನು ದೇಶದ ಜನತೆ ಆತಂಕದಿಂದ ಗಮನಿಸಿದ್ದಾರೆ. ತಮ್ಮ ಆತ್ಮಸಾಕ್ಷಿ, ಸ್ವಂತ ಬಲ ಮತ್ತು ಸಂಪನ್ಮೂಲಗಳ ಆಧಾರದ ಮೇಲೆ ಸುಮಾರು 3 ತಿಂಗಳಿನಿಂದ ತಮ್ಮ ಮೂಲಭೂತ ಹಕ್ಕುಗಳಿಗಾಗಿ ಸಾಂವಿಧಾನಿಕ ರಕ್ಷಣೆಗಳಿಗೆ ಅನುಸಾರವಾಗಿ ಅಹಿಂಸಾತ್ಮಕ ಸತ್ಯಾಗ್ರಹ ನಡೆಸುತ್ತಿರುವ ರೈತರು ವಿದೇಶಿ ಸಂಸ್ಥೆಗಳಿಂದ ಆರ್ಥಿಕ ನೆರವು, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಪಡೆದಿರುವುದಾಗಿ ಹೊಲಸು ಹೇಳಿಕೆ ನೀಡಿ ಚಳುವಳಿಯನ್ನು ದಿಕ್ಕುತಪ್ಪಿಸಲು ಪ್ರಯತ್ನಿಸುತ್ತಿರುವ ರೈತವಿರೋಧಿಗಳನ್ನು ಪ್ರಜ್ಞಾವಂತರು ಖಂಡಿಸಲೇಬೇಕು. ಪ್ರತಿಭಟನಾ ನಿರತ ರೈತರು ಅಪ್ಪಟ ದೇಶಭಕ್ತಿ ಮತ್ತು ಸಾಮಾಜಿಕ ಹೊಣೆಗಾರಿಕೆಯ ಆಧಾರದ ಮೇಲೆ ರೈತ ವಿರೋಧಿ ಕಾನೂನುಗಳ ವಿರುದ್ಧ ದೀರ್ಘಕಾಲಿಕ ಹೋರಾಟ ನಡೆಸಲು ಪ್ರಾಮಾಣಿಕವಾಗಿ ಸಜ್ಜುಗೊಂಡಿರುವುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ. ಆರ್ಥಿಕ ಮತ್ತು ರಾಜಕೀಯ ಏಕಸ್ವಾಮ್ಯಕ್ಕೆ ಬದ್ಧರಾಗಿ ಸಾಮಾಜಿಕ ನ್ಯಾಯ ಮತ್ತು ಪ್ರಜಾಸತ್ತಾತ್ಮಕ ಹೋರಾಟಗಳನ್ನು ಭಗ್ನಗೊಳಿಸುವ ಸ್ಥಾಪಿತ ಹಿತಾಸಕ್ತಿಗಳ ಹುನ್ನಾರಗಳನ್ನು ಪ್ರಜ್ಞಾವಂತರು ಒಕ್ಕೊರಲಿನಿಂದ ಖಂಡಿಸಬೇಕು.

ಪ್ರತಿಭಟನಾ ಸ್ಥಳಗಳಲ್ಲಿ ತಾತ್ಕಾಲಿಕ ನಾಗರೀಕ ಸೌಲಭ್ಯಗಳನ್ನು ರೈತರೇ ಸ್ವತಹ ಏರ್ಪಾಟು ಮಾಡಿಕೊಂಡು ದೀರ್ಘಾವಧಿಯವರೆಗೆ ಭಾರತದ ಆರ್ಥಿಕತೆಯ ಬೆನ್ನೆಲುಬಾದ ಕೃಷಿಯನ್ನು ರಕ್ಷಿಸಲು ಹೊರಟಿರುವುದು ಆಶಾದಾಯಕ ಸಂಗತಿಯಾಗಿದೆ. ಇವರು ಹೆದ್ದಾರಿಯುದ್ದಕ್ಕೂ ಪಾದಚಾರಿ ವ್ಯವಸ್ಥೆಯನ್ನು ದುರಸ್ಥಿಗೊಳಿಸಿ ಆಂದೋಲನ ನಡೆಸುತ್ತಿರುವ ರೈತರ ಸೌಕರ್ಯವನ್ನು ಹೆಚ್ಚಿಸುವ ಕೆಲಸದಲ್ಲಿ ನಿರತರಾಗಿದ್ದಾರೆ. ರೈತ ವಿರೋಧಿ ಶಕ್ತಿಗಳು ಮತ್ತು ಮಾರುಕಟ್ಟೆ ಶಕ್ತಿಗಳ ನಡುವಣ ಅನೈತಿಕ ಮೈತ್ರಿಯಿಂದಾಗಿ ಕೃಷಿ ಕ್ಷೇತ್ರವನ್ನು ದುರ್ಬಲಗೊಳಿಸಿ ಅನ್ನದಾತರ ಬದುಕನ್ನು ಅತಂತ್ರಗೊಳಿಸಲು ಹೊರಟಿರುವ ಸ್ಥಾಪಿತ ಹಿತಾಸಕ್ತಿಗಳ ಹುನ್ನಾರಗಳು ಪ್ರಗತಿಪರ ಭಾರತೀಯರ ಅಂತರರಾಷ್ಟ್ರೀಯ ಸಮುದಾಯದ ಉಗ್ರ ಖಂಡನೆಗೆ ಗುರಿಯಾಗಿದೆ.

ಸರ್ಕಾರ, ನ್ಯಾಯಾಂಗ, ಮಾಧ್ಯಮ ಮತ್ತು ನಾಗರೀಕ ಸಮಾಜಗಳು ಪ್ರತಿಭಟನಾ ನಿರತ ರೈತರ ನ್ಯಾಯೋಚಿತ ಬೇಡಿಕೆಗಳನ್ನು ಮಾನವೀಯ ನೆಲೆಗಟ್ಟಿನಲ್ಲಿ ಆಲಿಸಿ ರಾಜ್ಯ ನಿರ್ದೇಶಕ ತತ್ವಗಳು ಮತ್ತು ಮೂಲಭೂತ ಹಕ್ಕುಗಳಿಗೆ ವಿರುದ್ಧವಾಗಿರುವ ಕೃಷಿ ಕಾನೂನುಗಳನ್ನು ರದ್ಧುಗೊಳಿಸುವಂತೆ ಭಾರತ ಸರ್ಕಾರದ ಮೇಲೆ ಅಂತರಾಷ್ಟ್ರೀಯ ಮಾನವ ಹಕ್ಕು ಸಂಘಟನೆಗಳು ಒತ್ತಾಯ ಹೇರಿವೆ.

ಭಾರತ ಸರ್ಕಾರವು ಜಾರಿಗೊಳಿಸಿರುವ ಅಸಾಂವಿಧಾನಿಕ ಹಾಗೂ ಅಮಾನವೀಯ ರೈತ ವಿರೋಧಿ ಕಾನೂನುಗಳ ವಿರುದ್ಧ ಯೂರೋಪ್, ಅಮೇರಿಕಾ ಮೊದಲಾದೆಡೆ ಅಂತರರಾಷ್ಟ್ರೀಯ ಸಾರ್ವಜನಿಕ ಅಭಿಪ್ರಾಯ ಹೆಚ್ಚುತ್ತಲಿದೆ. ರಿಹಾನ್ನಾ, ಗ್ರೇಟಾ ಥನ್‌ಬರ್ಗ್ ಮೊದಲಾದ ಪ್ರಜ್ಞಾವಂತ ಹೆಣ್ಣುಮಕ್ಕಳು ಭಾರತದ ರೈತರ ಬಗ್ಗೆ ವ್ಯಕ್ತಪಡಿಸಿರುವ ಮಾನವೀಯ ಕಾಳಜಿ ಪ್ರಶಂಸನೀಯವಾಗಿದೆ. ಆದರೆ ಚಲನಚಿತ್ರ, ಕ್ರೀಡೆ ಮೊದಲಾದ ಕ್ಷೇತ್ರಗಳಲ್ಲಿ ಸಾಕಷ್ಟು ಹೆಸರು ಮತ್ತು ಹಣ ಗಳಿಸಿರುವ ಸ್ವಯಂಘೋಷಿತ ಪ್ರಸಿದ್ಧ ತಾರೆಗಳೆನಿಸಿಕೊಂಡವರು ತಮ್ಮ ವರ್ಗಹಿತಾಸಕ್ತಿಯನ್ನು ನಾಚಿಕೆಯಿಲ್ಲದೆ ರಕ್ಷಿಸಿಕೊಳ್ಳಲು ಹೊರಟಿರುವುದು ಖಂಡನೀಯ. ಇವರಿಗೆ ಸಂವಿಧಾನ ನಿಷ್ಟೆಗಿಂತ ಹೆಚ್ಚಾಗಿ ವರ್ಗನಿಷ್ಟೆಯನ್ನು ಪ್ರದರ್ಶಿಸುವುದು ಇಂದು ಮುಖ್ಯವೆನಿಸಿರುವುದನ್ನು ಪ್ರಜ್ಞಾವಂತರು ಎತ್ತಿಹಿಡಿದಿದ್ದಾರೆ.

ಗಾಂಧಿ

ಇತ್ತೀಚೆಗೆ ಹಿರಿಯ ಗಾಂಧಿವಾದಿ ಅಣ್ಣಾಹಜಾರೆ ರೈತ ಚಳುವಳಿಗೆ ಬೆಂಬಲ ನೀಡುವ ನಿರ್ಧಾರದಿಂದ ಹಿಂದೆ ಸರಿದಿರುವುದು ಅವರ ಆರ್‌ಎಸ್‌ಎಸ್ ನಿಷ್ಟೆಯ ಪ್ರತೀಕವಾಗಿದೆ. ಆದಾಗ್ಯೂ, ಮಹಾತ್ಮ ಗಾಂಧಿಯವರ ಮೊಮ್ಮಗಳಾದ ತಾರಾಗಾಂಧಿ ಆಂದೋಲನ ನಿರತ ರೈತರನ್ನು ಭೇಟಿಯಾಗಿ ಅವರಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿರುವುದು ಆಶಾದಾಯಕ ಸಂಗತಿಯಾಗಿದೆ. ಅವರು ಸಾಂವಿಧಾನಿಕ ಮೌಲ್ಯಗಳು ಮತ್ತು ಮಾನವೀಯ ಮೌಲ್ಯಗಳ ಆಧಾರದ ಮೇಲೆ ರೈತರ ನ್ಯಾಯೋಚಿತ ಬೇಡಿಕೆಗಳನ್ನು ಶೀಘ್ರದಲ್ಲಿ ಈಡೇರಿಸಬೇಕೆಂಬ ಸಲಹೆಯನ್ನು ಕೇಂದ್ರ ಸರ್ಕಾರಕ್ಕೆ ಮಂಡಿಸಿದ್ದಾರೆ. ಅನೇಕ ಪ್ರಗತಿಪರ ಚಿಂತಕರು ಮತ್ತು ಸಂಘಟನೆಗಳು ದೇಶಾದ್ಯಂತ ಆಂದೋಲನ ನಡೆಸುತ್ತಿರುವ ರೈತರನ್ನು ಬಲವಾಗಿ ಬೆಂಬಲಿಸಿದ್ದಾರೆ. ಸಾಮಾಜಿಕ ನ್ಯಾಯ ಮತ್ತು ಹೊಣೆಗಾರಿಕೆಗಳ ಆಧಾರದ ಮೇಲೆ ದೇಶದ ರೈತ ಸಮುದಾಯವನ್ನು ರಕ್ಷಿಸುವುದು ಪ್ರಜ್ಞಾವಂತ ಭಾರತೀಯರ ಪರಮಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ನೂತನ ಸಹಸ್ರಮಾನದಲ್ಲಿ ಆರ್ಥಿಕ ಸ್ವಾತಂತ್ರ್ಯ ಮತ್ತು ಸಂವಿಧಾನ ರಕ್ಷಣೆಗಾಗಿ ಮತ್ತೊಂದು ಬೃಹತ್ ಹೋರಾಟದತ್ತ ದೇಶ ಸಾಗುತ್ತಿದೆ.

  • ಡಾ.ಬಿ.ಪಿ ಮಹೇಶ ಚಂದ್ರಗುರು

(ಚಿಂತಕರು ಮತ್ತು ವಿಶ್ರಾಂತ ಪ್ರಾಧ್ಯಾಪಕರು, ಮೈಸೂರು.)


ಇದನ್ನೂ ಓದಿ: ಹತ್ರಾಸ್, ಬಿಜ್ನೋರ್‌ ಗಳಲ್ಲಿ ಬೃಹತ್ ಮಹಾಪಂಚಾಯತ್: ಸರ್ಕಾರದ ವಿರುದ್ಧ ರೈತರ ಗುಡುಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...