Homeಮುಖಪುಟಆರ್ಥಿಕ ಸ್ವಾತಂತ್ರ್ಯ & ಸಂವಿಧಾನ ರಕ್ಷಣೆಗಾಗಿ ಮತ್ತೊಂದು ಬೃಹತ್ ಹೋರಾಟದತ್ತ ದೇಶ ಸಾಗುತ್ತಿದೆ

ಆರ್ಥಿಕ ಸ್ವಾತಂತ್ರ್ಯ & ಸಂವಿಧಾನ ರಕ್ಷಣೆಗಾಗಿ ಮತ್ತೊಂದು ಬೃಹತ್ ಹೋರಾಟದತ್ತ ದೇಶ ಸಾಗುತ್ತಿದೆ

ರೈತ ಹೋರಾಟ ಮತ್ತು ಸಂವಿಧಾನ ರಕ್ಷಣೆಯ ಕುರಿತು ಡಾ.ಬಿ.ಪಿ ಮಹೇಶ ಚಂದ್ರಗುರುರವರ ಲೇಖನ

- Advertisement -
- Advertisement -

ಭಾರತ ಸರ್ಕಾರ ಜಾರಿಗೆ ತಂದ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರೈತರು ಭಾರತದಲ್ಲಿ ಸಭ್ಯವಾಗಿ, ಅಹಿಂಸಾತ್ಮಕವಾಗಿ ಮತ್ತು ಪ್ರಜಾಸತ್ತಾತ್ಮಕವಾಗಿ ಪ್ರತಿಭಟನೆ ನಡೆಸಿ ವಿಶ್ವದ ಗಮನ ಸೆಳೆದಿದ್ದಾರೆ. ಪ್ರಗತಿಪರ ಚಿಂತಕರು, ಕಾನೂನು ತಜ್ಞರು ಮತ್ತು ರೈತರ ಮುಖಂಡರು ಹೊಸ ಕಾನೂನುಗಳು ಮೂಲಭೂತವಾಗಿ ಕಾರ್ಪೊರೇಟ್ ವಲಯಕ್ಕೆ ಪ್ರಯೋಜನ ಉಂಟುಮಾಡಿ ಭಾರತದ ಆರ್ಥಿಕತೆಯ ಬೆನ್ನೆಲುಬನ್ನು ಮುರಿಯುತ್ತವೆಯೆಂದು ತೀವ್ರವಾಗಿ ವಾದಿಸಿದ್ದಾರೆ. ದೊಡ್ಡ ಉದ್ದಿಮೆಗಳು ಆಹಾರ ಧಾನ್ಯಗಳು, ಹಣ್ಣು ಹಂಪಲುಗಳು ಮತ್ತು ತರಕಾರಿಗಳನ್ನು ಸಂಗ್ರಹಿಸಿ ತಮಗೆ ಬೇಕಾದ ಹಾಗೆ ಮಾರಾಟ ಮಾಡಿ ರೈತರು, ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು, ಸಣ್ಣ ವ್ಯಾಪಾರಿಗಳು ಮತ್ತು ಭಾರತೀಯ ಸಮಾಜದ ಇತರ ಅಂಚಿನಲ್ಲಿರುವ ವರ್ಗಗಳ ಜೀವನದ ಮೇಲೆ ಮಾರಣಾಂತಿಕ ಪರಿಣಾಮ ಬೀರುವುದಾಗಿ ಚಳುವಳಿಗಾರರು ಪ್ರತಿಪಾದಿಸಿದ್ದಾರೆ. ಇದರ ಪರಿಣಾಮವಾಗಿ, ಕೆಲವು ದೊಡ್ಡ ಉದ್ದಿಮೆಗಳು ಸುಮಾರು 90%ರಷ್ಟು ಕೃಷಿ ವ್ಯವಹಾರವನ್ನು ನಿಯಂತ್ರಿಸುವ, ಆರ್ಥಿಕ ಏಕಸ್ವಾಮ್ಯ ಸಾಧಿಸುವ ಮತ್ತು ಜನಸಾಮಾನ್ಯರ ಜೀವನೋಪಾಯ ಮಾರ್ಗಗಳನ್ನು ಕಸಿದುಕೊಳ್ಳುವ ಬಹುದೊಡ್ಡ ಅಪಾಯ ಎದುರಾಗಿದೆ.

ಪಟ್ಟಭದ್ರ ಹಿತಾಸಕ್ತಿಗಳು ನಿರಂತರವಾಗಿ ಸಮಾಜ, ಆರ್ಥಿಕತೆ, ರಾಜಕಾರಣ, ಸಂಸ್ಕೃತಿ ಮೊದಲಾದ ಕ್ಷೇತ್ರಗಳಲ್ಲಿ ತಮ್ಮ ಏಕಸ್ವಾಮ್ಯವನ್ನು ಸುಸ್ಥಿರಗೊಳಿಸಲು ಎಲ್ಲ ಬಗೆಯ ಪ್ರಜಾಸತ್ತಾತ್ಮಕ ಹೋರಾಟಗಳನ್ನು ಅಡ್ಡಿಪಡಿಸುತ್ತವೆ. ಜನವರಿ 26ರಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಹಿಂಸಾಚಾರದ ಹಿಂದೆ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪಕ್ಷದ ಬೆಂಬಲಿಗರ ಕೈವಾಡವಿರುವುದನ್ನು ದೇಶದ ಜನತೆ ಆತಂಕದಿಂದ ಗಮನಿಸಿದ್ದಾರೆ. ತಮ್ಮ ಆತ್ಮಸಾಕ್ಷಿ, ಸ್ವಂತ ಬಲ ಮತ್ತು ಸಂಪನ್ಮೂಲಗಳ ಆಧಾರದ ಮೇಲೆ ಸುಮಾರು 3 ತಿಂಗಳಿನಿಂದ ತಮ್ಮ ಮೂಲಭೂತ ಹಕ್ಕುಗಳಿಗಾಗಿ ಸಾಂವಿಧಾನಿಕ ರಕ್ಷಣೆಗಳಿಗೆ ಅನುಸಾರವಾಗಿ ಅಹಿಂಸಾತ್ಮಕ ಸತ್ಯಾಗ್ರಹ ನಡೆಸುತ್ತಿರುವ ರೈತರು ವಿದೇಶಿ ಸಂಸ್ಥೆಗಳಿಂದ ಆರ್ಥಿಕ ನೆರವು, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಪಡೆದಿರುವುದಾಗಿ ಹೊಲಸು ಹೇಳಿಕೆ ನೀಡಿ ಚಳುವಳಿಯನ್ನು ದಿಕ್ಕುತಪ್ಪಿಸಲು ಪ್ರಯತ್ನಿಸುತ್ತಿರುವ ರೈತವಿರೋಧಿಗಳನ್ನು ಪ್ರಜ್ಞಾವಂತರು ಖಂಡಿಸಲೇಬೇಕು. ಪ್ರತಿಭಟನಾ ನಿರತ ರೈತರು ಅಪ್ಪಟ ದೇಶಭಕ್ತಿ ಮತ್ತು ಸಾಮಾಜಿಕ ಹೊಣೆಗಾರಿಕೆಯ ಆಧಾರದ ಮೇಲೆ ರೈತ ವಿರೋಧಿ ಕಾನೂನುಗಳ ವಿರುದ್ಧ ದೀರ್ಘಕಾಲಿಕ ಹೋರಾಟ ನಡೆಸಲು ಪ್ರಾಮಾಣಿಕವಾಗಿ ಸಜ್ಜುಗೊಂಡಿರುವುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ. ಆರ್ಥಿಕ ಮತ್ತು ರಾಜಕೀಯ ಏಕಸ್ವಾಮ್ಯಕ್ಕೆ ಬದ್ಧರಾಗಿ ಸಾಮಾಜಿಕ ನ್ಯಾಯ ಮತ್ತು ಪ್ರಜಾಸತ್ತಾತ್ಮಕ ಹೋರಾಟಗಳನ್ನು ಭಗ್ನಗೊಳಿಸುವ ಸ್ಥಾಪಿತ ಹಿತಾಸಕ್ತಿಗಳ ಹುನ್ನಾರಗಳನ್ನು ಪ್ರಜ್ಞಾವಂತರು ಒಕ್ಕೊರಲಿನಿಂದ ಖಂಡಿಸಬೇಕು.

ಪ್ರತಿಭಟನಾ ಸ್ಥಳಗಳಲ್ಲಿ ತಾತ್ಕಾಲಿಕ ನಾಗರೀಕ ಸೌಲಭ್ಯಗಳನ್ನು ರೈತರೇ ಸ್ವತಹ ಏರ್ಪಾಟು ಮಾಡಿಕೊಂಡು ದೀರ್ಘಾವಧಿಯವರೆಗೆ ಭಾರತದ ಆರ್ಥಿಕತೆಯ ಬೆನ್ನೆಲುಬಾದ ಕೃಷಿಯನ್ನು ರಕ್ಷಿಸಲು ಹೊರಟಿರುವುದು ಆಶಾದಾಯಕ ಸಂಗತಿಯಾಗಿದೆ. ಇವರು ಹೆದ್ದಾರಿಯುದ್ದಕ್ಕೂ ಪಾದಚಾರಿ ವ್ಯವಸ್ಥೆಯನ್ನು ದುರಸ್ಥಿಗೊಳಿಸಿ ಆಂದೋಲನ ನಡೆಸುತ್ತಿರುವ ರೈತರ ಸೌಕರ್ಯವನ್ನು ಹೆಚ್ಚಿಸುವ ಕೆಲಸದಲ್ಲಿ ನಿರತರಾಗಿದ್ದಾರೆ. ರೈತ ವಿರೋಧಿ ಶಕ್ತಿಗಳು ಮತ್ತು ಮಾರುಕಟ್ಟೆ ಶಕ್ತಿಗಳ ನಡುವಣ ಅನೈತಿಕ ಮೈತ್ರಿಯಿಂದಾಗಿ ಕೃಷಿ ಕ್ಷೇತ್ರವನ್ನು ದುರ್ಬಲಗೊಳಿಸಿ ಅನ್ನದಾತರ ಬದುಕನ್ನು ಅತಂತ್ರಗೊಳಿಸಲು ಹೊರಟಿರುವ ಸ್ಥಾಪಿತ ಹಿತಾಸಕ್ತಿಗಳ ಹುನ್ನಾರಗಳು ಪ್ರಗತಿಪರ ಭಾರತೀಯರ ಅಂತರರಾಷ್ಟ್ರೀಯ ಸಮುದಾಯದ ಉಗ್ರ ಖಂಡನೆಗೆ ಗುರಿಯಾಗಿದೆ.

ಸರ್ಕಾರ, ನ್ಯಾಯಾಂಗ, ಮಾಧ್ಯಮ ಮತ್ತು ನಾಗರೀಕ ಸಮಾಜಗಳು ಪ್ರತಿಭಟನಾ ನಿರತ ರೈತರ ನ್ಯಾಯೋಚಿತ ಬೇಡಿಕೆಗಳನ್ನು ಮಾನವೀಯ ನೆಲೆಗಟ್ಟಿನಲ್ಲಿ ಆಲಿಸಿ ರಾಜ್ಯ ನಿರ್ದೇಶಕ ತತ್ವಗಳು ಮತ್ತು ಮೂಲಭೂತ ಹಕ್ಕುಗಳಿಗೆ ವಿರುದ್ಧವಾಗಿರುವ ಕೃಷಿ ಕಾನೂನುಗಳನ್ನು ರದ್ಧುಗೊಳಿಸುವಂತೆ ಭಾರತ ಸರ್ಕಾರದ ಮೇಲೆ ಅಂತರಾಷ್ಟ್ರೀಯ ಮಾನವ ಹಕ್ಕು ಸಂಘಟನೆಗಳು ಒತ್ತಾಯ ಹೇರಿವೆ.

ಭಾರತ ಸರ್ಕಾರವು ಜಾರಿಗೊಳಿಸಿರುವ ಅಸಾಂವಿಧಾನಿಕ ಹಾಗೂ ಅಮಾನವೀಯ ರೈತ ವಿರೋಧಿ ಕಾನೂನುಗಳ ವಿರುದ್ಧ ಯೂರೋಪ್, ಅಮೇರಿಕಾ ಮೊದಲಾದೆಡೆ ಅಂತರರಾಷ್ಟ್ರೀಯ ಸಾರ್ವಜನಿಕ ಅಭಿಪ್ರಾಯ ಹೆಚ್ಚುತ್ತಲಿದೆ. ರಿಹಾನ್ನಾ, ಗ್ರೇಟಾ ಥನ್‌ಬರ್ಗ್ ಮೊದಲಾದ ಪ್ರಜ್ಞಾವಂತ ಹೆಣ್ಣುಮಕ್ಕಳು ಭಾರತದ ರೈತರ ಬಗ್ಗೆ ವ್ಯಕ್ತಪಡಿಸಿರುವ ಮಾನವೀಯ ಕಾಳಜಿ ಪ್ರಶಂಸನೀಯವಾಗಿದೆ. ಆದರೆ ಚಲನಚಿತ್ರ, ಕ್ರೀಡೆ ಮೊದಲಾದ ಕ್ಷೇತ್ರಗಳಲ್ಲಿ ಸಾಕಷ್ಟು ಹೆಸರು ಮತ್ತು ಹಣ ಗಳಿಸಿರುವ ಸ್ವಯಂಘೋಷಿತ ಪ್ರಸಿದ್ಧ ತಾರೆಗಳೆನಿಸಿಕೊಂಡವರು ತಮ್ಮ ವರ್ಗಹಿತಾಸಕ್ತಿಯನ್ನು ನಾಚಿಕೆಯಿಲ್ಲದೆ ರಕ್ಷಿಸಿಕೊಳ್ಳಲು ಹೊರಟಿರುವುದು ಖಂಡನೀಯ. ಇವರಿಗೆ ಸಂವಿಧಾನ ನಿಷ್ಟೆಗಿಂತ ಹೆಚ್ಚಾಗಿ ವರ್ಗನಿಷ್ಟೆಯನ್ನು ಪ್ರದರ್ಶಿಸುವುದು ಇಂದು ಮುಖ್ಯವೆನಿಸಿರುವುದನ್ನು ಪ್ರಜ್ಞಾವಂತರು ಎತ್ತಿಹಿಡಿದಿದ್ದಾರೆ.

ಗಾಂಧಿ

ಇತ್ತೀಚೆಗೆ ಹಿರಿಯ ಗಾಂಧಿವಾದಿ ಅಣ್ಣಾಹಜಾರೆ ರೈತ ಚಳುವಳಿಗೆ ಬೆಂಬಲ ನೀಡುವ ನಿರ್ಧಾರದಿಂದ ಹಿಂದೆ ಸರಿದಿರುವುದು ಅವರ ಆರ್‌ಎಸ್‌ಎಸ್ ನಿಷ್ಟೆಯ ಪ್ರತೀಕವಾಗಿದೆ. ಆದಾಗ್ಯೂ, ಮಹಾತ್ಮ ಗಾಂಧಿಯವರ ಮೊಮ್ಮಗಳಾದ ತಾರಾಗಾಂಧಿ ಆಂದೋಲನ ನಿರತ ರೈತರನ್ನು ಭೇಟಿಯಾಗಿ ಅವರಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿರುವುದು ಆಶಾದಾಯಕ ಸಂಗತಿಯಾಗಿದೆ. ಅವರು ಸಾಂವಿಧಾನಿಕ ಮೌಲ್ಯಗಳು ಮತ್ತು ಮಾನವೀಯ ಮೌಲ್ಯಗಳ ಆಧಾರದ ಮೇಲೆ ರೈತರ ನ್ಯಾಯೋಚಿತ ಬೇಡಿಕೆಗಳನ್ನು ಶೀಘ್ರದಲ್ಲಿ ಈಡೇರಿಸಬೇಕೆಂಬ ಸಲಹೆಯನ್ನು ಕೇಂದ್ರ ಸರ್ಕಾರಕ್ಕೆ ಮಂಡಿಸಿದ್ದಾರೆ. ಅನೇಕ ಪ್ರಗತಿಪರ ಚಿಂತಕರು ಮತ್ತು ಸಂಘಟನೆಗಳು ದೇಶಾದ್ಯಂತ ಆಂದೋಲನ ನಡೆಸುತ್ತಿರುವ ರೈತರನ್ನು ಬಲವಾಗಿ ಬೆಂಬಲಿಸಿದ್ದಾರೆ. ಸಾಮಾಜಿಕ ನ್ಯಾಯ ಮತ್ತು ಹೊಣೆಗಾರಿಕೆಗಳ ಆಧಾರದ ಮೇಲೆ ದೇಶದ ರೈತ ಸಮುದಾಯವನ್ನು ರಕ್ಷಿಸುವುದು ಪ್ರಜ್ಞಾವಂತ ಭಾರತೀಯರ ಪರಮಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ನೂತನ ಸಹಸ್ರಮಾನದಲ್ಲಿ ಆರ್ಥಿಕ ಸ್ವಾತಂತ್ರ್ಯ ಮತ್ತು ಸಂವಿಧಾನ ರಕ್ಷಣೆಗಾಗಿ ಮತ್ತೊಂದು ಬೃಹತ್ ಹೋರಾಟದತ್ತ ದೇಶ ಸಾಗುತ್ತಿದೆ.

  • ಡಾ.ಬಿ.ಪಿ ಮಹೇಶ ಚಂದ್ರಗುರು

(ಚಿಂತಕರು ಮತ್ತು ವಿಶ್ರಾಂತ ಪ್ರಾಧ್ಯಾಪಕರು, ಮೈಸೂರು.)


ಇದನ್ನೂ ಓದಿ: ಹತ್ರಾಸ್, ಬಿಜ್ನೋರ್‌ ಗಳಲ್ಲಿ ಬೃಹತ್ ಮಹಾಪಂಚಾಯತ್: ಸರ್ಕಾರದ ವಿರುದ್ಧ ರೈತರ ಗುಡುಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...