Homeಮುಖಪುಟಭುಗಿಲೆದ್ದ ಆರ್ಥಿಕ ಬಿಕ್ಕಟ್ಟು; ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಜಾರಿ

ಭುಗಿಲೆದ್ದ ಆರ್ಥಿಕ ಬಿಕ್ಕಟ್ಟು; ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಜಾರಿ

- Advertisement -
- Advertisement -

ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟಿನ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗಳು ಭುಗಿಲೆದ್ದಿದ್ದು, ಶ್ರೀಲಂಕಾದ ಅಧ್ಯಕ್ಷ ಗೋತಬಯ ರಾಜಪಕ್ಸ ಅವರು ಶುಕ್ರವಾರ ತಡರಾತ್ರಿ ರಾಷ್ಟ್ರವ್ಯಾಪಿ ಸಾರ್ವಜನಿಕ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ.

ಪ್ರತಿಭಟನಾಕಾರರನ್ನು, ಶಂಕಿತರನ್ನು ವಿಚಾರಣೆಯಿಲ್ಲದೆ ದೀರ್ಘಾವಧಿಯವರೆಗೆ ಬಂಧಿಸಲು ಮಿಲಿಟರಿಗೆ ಅವಕಾಶ ನೀಡುವ ಕಠಿಣ ಕಾನೂನುಗಳನ್ನು ಅಧ್ಯಕ್ಷರು ಜಾರಿಗೊಳಿಸಿದ್ದಾರೆ.

22 ಮಿಲಿಯನ್ ಜನರಿರುವ ದ್ವೀಪ ರಾಷ್ಟ್ರದಲ್ಲಿ ತೀವ್ರವಾದ ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ರಾಜಪಕ್ಸ ಸೋತಿದ್ದು, ಅವರ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಗುರುವಾರ ತಡರಾತ್ರಿ ಹಿಂಸಾಚಾರಕ್ಕೆ ತಿರುಗಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ನೂರಾರು ಪ್ರತಿಭಟನಾಕಾರರು ಹಲವಾರು ಗಂಟೆಗಳ ಕಾಲ ಪೊಲೀಸರೊಂದಿಗೆ ಘರ್ಷಣೆ ನಡೆಸಿದರು. ವಿದೇಶಿ ಕರೆನ್ಸಿಯ ತೀವ್ರ ಕೊರತೆಯಿಂದಾಗಿ ಇಂಧನ ಸೇರಿದಂತೆ ಅಗತ್ಯ ಆಮದುಗಳಿಗೆ ರಾಜಪಕ್ಸ ಸರ್ಕಾರ ಹಣ ಪಾವತಿಸಲು ಸಾಧ್ಯವಾಗಿಲ್ಲ. ಹೀಗಾಗಿ 13 ಗಂಟೆಗಳವರೆಗೆ ವಿದ್ಯುತ್ ಕಡಿತಕ್ಕೂ ಇದು ಕಾರಣವಾಗಿದೆ.

ಶ್ರೀಲಂಕಾದ ಕೊಲಂಬೊದಲ್ಲಿ ಶುಕ್ರವಾರ ರಾತ್ರಿ ನಡೆದ ಘರ್ಷಣೆಯ ನಂತರ ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸ ಶ್ರೀಲಂಕಾದ ಅಧ್ಯಕ್ಷ ಗೋತಬಯ ರಾಜಪಕ್ಸ ಅವರ ಖಾಸಗಿ ನಿವಾಸಕ್ಕೆ ಆಗಮಿಸಿದರು. ದೇಶದ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟಿನ ಕಾರಣ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಅಧ್ಯಕ್ಷರ ಮನೆಯ ಬಳಿ ಪ್ರತಿಭಟನೆ ನಡೆಸಿದಾಗ ಹತ್ತಾರು ಜನರನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಶ್ರೀಲಂಕಾ ಷೇರುಗಳು ಶುಕ್ರವಾರ ಅತ್ಯಂತ ಕೆಟ್ಟ ಕುಸಿತ ಕಂಡಿದ್ದು, ಕೊಲಂಬೊ ಸ್ಟಾಕ್ ಎಕ್ಸ್‌ಚೇಂಜ್‌  ಸತತ ಮೂರನೇ ದಿನ ವ್ಯಾಪಾರವನ್ನು ಸ್ಥಗಿತಗೊಳಿಸಿತು. ಆಹಾರ ಮತ್ತು ಇಂಧನ ಸೇರಿದಂತೆ ಅಗತ್ಯ ಆಮದುಗಳಿಗೆ ಪಾವತಿಸಲು ಶ್ರೀಲಂಕಾ ಹೆಣಗಾಡುತ್ತಿದೆ. ದೇಶದ ವಿದೇಶಿ ವಿನಿಮಯ ಸಂಗ್ರಹವು ಕಳೆದ ಎರಡು ವರ್ಷಗಳಲ್ಲಿ ಸುಮಾರು 2.31 ಡಾಲರ್‌‌ ಬಿಲಿಯನ್‌ಗೆ ಅಂದರೆ ಶೇ. 70 ಕುಸಿತ ಕಂಡಿದೆ.

ಮತ್ತೊಂದೆಡೆ ಮೂರು ದಿನಗಳ ದೆಹಲಿ ಪ್ರವಾಸದಲ್ಲಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಶ್ರೀಲಂಕಾ ತಮಿಳರಿಗೆ ಮಾನವೀಯ ನೆರವು ನೀಡಲು ರಾಜ್ಯ ಸರ್ಕಾರಕ್ಕೆ ಅವಕಾಶ ನೀಡುವಂತೆ ಕೇಂದ್ರವನ್ನು ಒತ್ತಾಯಿಸಿದ್ದಾರೆ.

ದ್ವೀಪ-ರಾಷ್ಟ್ರದಲ್ಲಿ ಆರ್ಥಿಕ ಬಿಕ್ಕಟ್ಟು ತಲೆದೋರಿದ ಹಿನ್ನೆಲೆಯಲ್ಲಿ ಹಲವಾರು ಜನರು ಲಂಕಾದಿಂದ ಪಲಾಯನಗೈದು ಸಮುದ್ರ ಮಾರ್ಗದ ಮೂಲಕ ರಾಜ್ಯಕ್ಕೆ ಬರುತ್ತಿದ್ದಾರೆ ಎಂದು ಸ್ಟಾಲಿನ್‌ ತಿಳಿಸಿದ್ದಾರೆ.

ಮಾಜಿ  ರಾಯಭಾರಿ ತಪ್ಪೊಪ್ಪಿಗೆ: ಶ್ರೀಲಂಕಾದ ಮಾಜಿ ರಾಯಭಾರಿಯೊಬ್ಬರು 2013ರಲ್ಲಿ ವಾಷಿಂಗ್ಟನ್ ಡಿಸಿಯಲ್ಲಿ ಹೊಸ ರಾಯಭಾರ ಕಚೇರಿಯ ಕಟ್ಟಡವನ್ನು ಖರೀದಿಸುವಾಗ ಶ್ರೀಲಂಕಾ ಸರ್ಕಾರದಿಂದ 332,027 ಅಮೆರಿಕನ್‌ ಡಾಲರ್‌‌ ದುರುಪಯೋಗಪಡಿಸಿಕೊಳ್ಳಲು ಪ್ರಯತ್ನಿಸಿದ್ದರು. ಇದನ್ನು ಮಾಜಿ ರಾಯಭಾರಿಯವರೇ ತಪ್ಪೊಪ್ಪಿಕೊಂಡಿರುವುದಾಗಿ ನ್ಯಾಯಾಂಗ ಇಲಾಖೆ ತಿಳಿಸಿದೆ.

ಈಗ ವರ್ಜೀನಿಯಾದ ಆರ್ಲಿಂಗ್ಟನ್‌ನಲ್ಲಿ ವಾಸಿಸುತ್ತಿರುವ 61 ವರ್ಷದ ಜಾಲಿಯಾ ಚಿತ್ರನ್ ವಿಕ್ರಮಸೂರ್ಯ ಅವರು 2008 ರಿಂದ 2014 ರವರೆಗೆ ಯುಎಸ್‌ನಲ್ಲಿ ಶ್ರೀಲಂಕಾದ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಯುಎಸ್‌ ಜಿಲ್ಲಾ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾರೆ.

ಈ ಆರೋಪವು ಶಾಸನಬದ್ಧ ಗರಿಷ್ಠ ಐದು ವರ್ಷಗಳ ಜೈಲು ಶಿಕ್ಷೆ ಮತ್ತು ಸಂಭಾವ್ಯ ಆರ್ಥಿಕ ದಂಡವನ್ನು ಹೊಂದಿರುತ್ತದೆ ಎಂದು ಮಾಧ್ಯಮ ಪ್ರಕಟಣೆ ತಿಳಿಸಿದೆ. ನ್ಯಾಯಾಲಯದ ದಾಖಲೆಗಳ ಪ್ರಕಾರ, 2012ರ ಅಂತ್ಯದಿಂದ ಅಥವಾ ನವೆಂಬರ್ 2013ರವರೆಗೆ, ರಿಯಲ್ ಎಸ್ಟೇಟ್ ವಹಿವಾಟಿನ ಬೆಲೆಯನ್ನು 332,027 ಡಾಲರ್‌ಗೆ ಹೆಚ್ಚಿಸುವ ಮೂಲಕ ವಾಷಿಂಗ್ಟನ್ ಡಿಸಿ ಯಲ್ಲಿ 2013ರ ಹೊಸ ರಾಯಭಾರ ಕಚೇರಿಯ ಕಟ್ಟಡವನ್ನು ಖರೀದಿಸುವಾಗ ವಿಕ್ರಮಸೂರ್ಯ ಶ್ರೀಲಂಕಾ ಸರ್ಕಾರವನ್ನು ವಂಚಿಸುವ ಯೋಜನೆಯನ್ನು ಅವರು ರೂಪಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿರಿ: ಆಹಾರ ಮತ್ತು ಉದ್ಯೋಗದ ಕೊರತೆ: ತಮಿಳುನಾಡು ಕರಾವಳಿಯನ್ನು ತಲುಪಿದ ಶ್ರೀಲಂಕಾ ನಿರಾಶ್ರಿತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....