Homeಮುಖಪುಟಭುಗಿಲೆದ್ದ ಆರ್ಥಿಕ ಬಿಕ್ಕಟ್ಟು; ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಜಾರಿ

ಭುಗಿಲೆದ್ದ ಆರ್ಥಿಕ ಬಿಕ್ಕಟ್ಟು; ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಜಾರಿ

- Advertisement -
- Advertisement -

ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟಿನ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗಳು ಭುಗಿಲೆದ್ದಿದ್ದು, ಶ್ರೀಲಂಕಾದ ಅಧ್ಯಕ್ಷ ಗೋತಬಯ ರಾಜಪಕ್ಸ ಅವರು ಶುಕ್ರವಾರ ತಡರಾತ್ರಿ ರಾಷ್ಟ್ರವ್ಯಾಪಿ ಸಾರ್ವಜನಿಕ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ.

ಪ್ರತಿಭಟನಾಕಾರರನ್ನು, ಶಂಕಿತರನ್ನು ವಿಚಾರಣೆಯಿಲ್ಲದೆ ದೀರ್ಘಾವಧಿಯವರೆಗೆ ಬಂಧಿಸಲು ಮಿಲಿಟರಿಗೆ ಅವಕಾಶ ನೀಡುವ ಕಠಿಣ ಕಾನೂನುಗಳನ್ನು ಅಧ್ಯಕ್ಷರು ಜಾರಿಗೊಳಿಸಿದ್ದಾರೆ.

22 ಮಿಲಿಯನ್ ಜನರಿರುವ ದ್ವೀಪ ರಾಷ್ಟ್ರದಲ್ಲಿ ತೀವ್ರವಾದ ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ರಾಜಪಕ್ಸ ಸೋತಿದ್ದು, ಅವರ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಗುರುವಾರ ತಡರಾತ್ರಿ ಹಿಂಸಾಚಾರಕ್ಕೆ ತಿರುಗಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ನೂರಾರು ಪ್ರತಿಭಟನಾಕಾರರು ಹಲವಾರು ಗಂಟೆಗಳ ಕಾಲ ಪೊಲೀಸರೊಂದಿಗೆ ಘರ್ಷಣೆ ನಡೆಸಿದರು. ವಿದೇಶಿ ಕರೆನ್ಸಿಯ ತೀವ್ರ ಕೊರತೆಯಿಂದಾಗಿ ಇಂಧನ ಸೇರಿದಂತೆ ಅಗತ್ಯ ಆಮದುಗಳಿಗೆ ರಾಜಪಕ್ಸ ಸರ್ಕಾರ ಹಣ ಪಾವತಿಸಲು ಸಾಧ್ಯವಾಗಿಲ್ಲ. ಹೀಗಾಗಿ 13 ಗಂಟೆಗಳವರೆಗೆ ವಿದ್ಯುತ್ ಕಡಿತಕ್ಕೂ ಇದು ಕಾರಣವಾಗಿದೆ.

ಶ್ರೀಲಂಕಾದ ಕೊಲಂಬೊದಲ್ಲಿ ಶುಕ್ರವಾರ ರಾತ್ರಿ ನಡೆದ ಘರ್ಷಣೆಯ ನಂತರ ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸ ಶ್ರೀಲಂಕಾದ ಅಧ್ಯಕ್ಷ ಗೋತಬಯ ರಾಜಪಕ್ಸ ಅವರ ಖಾಸಗಿ ನಿವಾಸಕ್ಕೆ ಆಗಮಿಸಿದರು. ದೇಶದ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟಿನ ಕಾರಣ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಅಧ್ಯಕ್ಷರ ಮನೆಯ ಬಳಿ ಪ್ರತಿಭಟನೆ ನಡೆಸಿದಾಗ ಹತ್ತಾರು ಜನರನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಶ್ರೀಲಂಕಾ ಷೇರುಗಳು ಶುಕ್ರವಾರ ಅತ್ಯಂತ ಕೆಟ್ಟ ಕುಸಿತ ಕಂಡಿದ್ದು, ಕೊಲಂಬೊ ಸ್ಟಾಕ್ ಎಕ್ಸ್‌ಚೇಂಜ್‌  ಸತತ ಮೂರನೇ ದಿನ ವ್ಯಾಪಾರವನ್ನು ಸ್ಥಗಿತಗೊಳಿಸಿತು. ಆಹಾರ ಮತ್ತು ಇಂಧನ ಸೇರಿದಂತೆ ಅಗತ್ಯ ಆಮದುಗಳಿಗೆ ಪಾವತಿಸಲು ಶ್ರೀಲಂಕಾ ಹೆಣಗಾಡುತ್ತಿದೆ. ದೇಶದ ವಿದೇಶಿ ವಿನಿಮಯ ಸಂಗ್ರಹವು ಕಳೆದ ಎರಡು ವರ್ಷಗಳಲ್ಲಿ ಸುಮಾರು 2.31 ಡಾಲರ್‌‌ ಬಿಲಿಯನ್‌ಗೆ ಅಂದರೆ ಶೇ. 70 ಕುಸಿತ ಕಂಡಿದೆ.

ಮತ್ತೊಂದೆಡೆ ಮೂರು ದಿನಗಳ ದೆಹಲಿ ಪ್ರವಾಸದಲ್ಲಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಶ್ರೀಲಂಕಾ ತಮಿಳರಿಗೆ ಮಾನವೀಯ ನೆರವು ನೀಡಲು ರಾಜ್ಯ ಸರ್ಕಾರಕ್ಕೆ ಅವಕಾಶ ನೀಡುವಂತೆ ಕೇಂದ್ರವನ್ನು ಒತ್ತಾಯಿಸಿದ್ದಾರೆ.

ದ್ವೀಪ-ರಾಷ್ಟ್ರದಲ್ಲಿ ಆರ್ಥಿಕ ಬಿಕ್ಕಟ್ಟು ತಲೆದೋರಿದ ಹಿನ್ನೆಲೆಯಲ್ಲಿ ಹಲವಾರು ಜನರು ಲಂಕಾದಿಂದ ಪಲಾಯನಗೈದು ಸಮುದ್ರ ಮಾರ್ಗದ ಮೂಲಕ ರಾಜ್ಯಕ್ಕೆ ಬರುತ್ತಿದ್ದಾರೆ ಎಂದು ಸ್ಟಾಲಿನ್‌ ತಿಳಿಸಿದ್ದಾರೆ.

ಮಾಜಿ  ರಾಯಭಾರಿ ತಪ್ಪೊಪ್ಪಿಗೆ: ಶ್ರೀಲಂಕಾದ ಮಾಜಿ ರಾಯಭಾರಿಯೊಬ್ಬರು 2013ರಲ್ಲಿ ವಾಷಿಂಗ್ಟನ್ ಡಿಸಿಯಲ್ಲಿ ಹೊಸ ರಾಯಭಾರ ಕಚೇರಿಯ ಕಟ್ಟಡವನ್ನು ಖರೀದಿಸುವಾಗ ಶ್ರೀಲಂಕಾ ಸರ್ಕಾರದಿಂದ 332,027 ಅಮೆರಿಕನ್‌ ಡಾಲರ್‌‌ ದುರುಪಯೋಗಪಡಿಸಿಕೊಳ್ಳಲು ಪ್ರಯತ್ನಿಸಿದ್ದರು. ಇದನ್ನು ಮಾಜಿ ರಾಯಭಾರಿಯವರೇ ತಪ್ಪೊಪ್ಪಿಕೊಂಡಿರುವುದಾಗಿ ನ್ಯಾಯಾಂಗ ಇಲಾಖೆ ತಿಳಿಸಿದೆ.

ಈಗ ವರ್ಜೀನಿಯಾದ ಆರ್ಲಿಂಗ್ಟನ್‌ನಲ್ಲಿ ವಾಸಿಸುತ್ತಿರುವ 61 ವರ್ಷದ ಜಾಲಿಯಾ ಚಿತ್ರನ್ ವಿಕ್ರಮಸೂರ್ಯ ಅವರು 2008 ರಿಂದ 2014 ರವರೆಗೆ ಯುಎಸ್‌ನಲ್ಲಿ ಶ್ರೀಲಂಕಾದ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಯುಎಸ್‌ ಜಿಲ್ಲಾ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾರೆ.

ಈ ಆರೋಪವು ಶಾಸನಬದ್ಧ ಗರಿಷ್ಠ ಐದು ವರ್ಷಗಳ ಜೈಲು ಶಿಕ್ಷೆ ಮತ್ತು ಸಂಭಾವ್ಯ ಆರ್ಥಿಕ ದಂಡವನ್ನು ಹೊಂದಿರುತ್ತದೆ ಎಂದು ಮಾಧ್ಯಮ ಪ್ರಕಟಣೆ ತಿಳಿಸಿದೆ. ನ್ಯಾಯಾಲಯದ ದಾಖಲೆಗಳ ಪ್ರಕಾರ, 2012ರ ಅಂತ್ಯದಿಂದ ಅಥವಾ ನವೆಂಬರ್ 2013ರವರೆಗೆ, ರಿಯಲ್ ಎಸ್ಟೇಟ್ ವಹಿವಾಟಿನ ಬೆಲೆಯನ್ನು 332,027 ಡಾಲರ್‌ಗೆ ಹೆಚ್ಚಿಸುವ ಮೂಲಕ ವಾಷಿಂಗ್ಟನ್ ಡಿಸಿ ಯಲ್ಲಿ 2013ರ ಹೊಸ ರಾಯಭಾರ ಕಚೇರಿಯ ಕಟ್ಟಡವನ್ನು ಖರೀದಿಸುವಾಗ ವಿಕ್ರಮಸೂರ್ಯ ಶ್ರೀಲಂಕಾ ಸರ್ಕಾರವನ್ನು ವಂಚಿಸುವ ಯೋಜನೆಯನ್ನು ಅವರು ರೂಪಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿರಿ: ಆಹಾರ ಮತ್ತು ಉದ್ಯೋಗದ ಕೊರತೆ: ತಮಿಳುನಾಡು ಕರಾವಳಿಯನ್ನು ತಲುಪಿದ ಶ್ರೀಲಂಕಾ ನಿರಾಶ್ರಿತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...