Homeಮುಖಪುಟ‘ಇಡಿ’ ತನಿಖೆ ನ್ಯಾಯಸಮ್ಮತಲ್ಲ, ತನಿಖೆಗೆ ಹಾಜರಾಗುವುದಿಲ್ಲ: ಅನಿಲ್ ದೇಶ್ಮುಖ್‌ ವಕೀಲ

‘ಇಡಿ’ ತನಿಖೆ ನ್ಯಾಯಸಮ್ಮತಲ್ಲ, ತನಿಖೆಗೆ ಹಾಜರಾಗುವುದಿಲ್ಲ: ಅನಿಲ್ ದೇಶ್ಮುಖ್‌ ವಕೀಲ

- Advertisement -
- Advertisement -

ಹಣ ವಂಚನೆ ಪ್ರಕರಣದಲ್ಲಿ ತನ್ನ ವಿರುದ್ಧ ಜಾರಿ ನಿರ್ದೇಶನಾಲಯದ (ಇಡಿ) ತನಿಖೆ ನ್ಯಾಯ ಸಮ್ಮತವಲ್ಲ ಎಂದು ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್‌ ಅಭಿಪ್ರಾಯಪಟ್ಟಿದ್ದಾರೆ, ಆದ್ದರಿಂದ ಅವರು ತನಿಖೆಗೆ ಕೈಜೋಡಿಸುವುದಿಲ್ಲ ಎಂದು ಅವರ ವಕೀಲ ಬುಧವಾರ ಹೇಳಿದ್ದಾರೆ.

ಮುಂಬೈನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದೇಶ್ಮುಖ್ ಅವರ ವಕೀಲ ಕಮಲೇಶ್ ಘುಮ್ರೆ, ಇಡಿಯ ತನಿಖೆಯು ನಿಜವಾದ ತನಿಖೆಯಂತೆ ಕಾಣುತ್ತಿಲ್ಲ, ಅದು ‘ಕಿರುಕುಳ’ ಎಂದು ಆರೋಪಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಇಡಿ’ ದೇಶ್ಮುಖ್ ಅವರ ಪತ್ನಿ ಆರತಿಗೆ ಬುಧವಾರ ಸಮನ್ಸ್ ಜಾರಿಗೊಳಿಸಿದ್ದು, ವಿಚಾರಣೆಗೆ ತನ್ನ ಮುಂದೆ ಹಾಜರಾಗುವಂತೆ ಹೇಳಿದೆ ಎಂದು ಅವರು ಹೇಳಿದ್ದಾರೆ. ಆದರೆ ತಾನು ವಿಡಿಯೊ ಕಾನ್ಫರೆನ್ಸಿಂಗ್‌‌ ಮೂಲಕ ತನಿಖೆಗೆ ಸಹಕರಿಸುತ್ತೇನೆ ಎಂದು ಪತ್ರ ಬರೆದಿದ್ದಾರೆ ಎಂದು ಕಮಲೇಶ್‌‌ ತಿಳಿಸಿದ್ದಾರೆ.

ಈ ಹಿಂದೆ ಇಡಿ ಅನಿಲ್ ದೇಶ್ಮುಖ್ ಅವರಿಗೆ ಅನೇಕ ಸಮನ್ಸ್ ನೀಡಿತ್ತು, ಅವರ ಹೇಳಿಕೆಯನ್ನು ದಾಖಲಿಸುವಂತೆ ಕೇಳಿಕೊಂಡಿತ್ತು. ಆದಾಗ್ಯೂ, ದೇಶ್ಮುಖ್‌ ಅವರು ಕೊರೊನಾವನ್ನು ಉಲ್ಲೇಖಿಸಿ ಸಮನ್ಸ್‌ಗೆ ಉತ್ತರಿಸಿರಲಿಲ್ಲ.

ಇದನ್ನೂ ಓದಿ: ಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ಅವರು ಕೂಡಾ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ತಮ್ಮ ಹೇಳಿಕೆಯನ್ನು ದಾಖಲಿಸಲು ಇಡಿಗೆ ಪ್ರಸ್ತಾಪಿಸಿದ್ದರು. ಪ್ರಕರಣದಲ್ಲಿ ಯಾವುದೇ ಬಲವಂತದ ಕ್ರಮದಿಂದ ರಕ್ಷಣೆ ಕೋರಿ ದೇಶ್ಮುಖ್‌ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದಾರೆ.

ಈ ವರ್ಷದ ಆರಂಭದಲ್ಲಿ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರು ಮಾಡಿದ ಕನಿಷ್ಠ 100 ಕೋಟಿ ರೂ.ಗಳ ಲಂಚದ ಆರೋಪಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ದೇಶ್ಮುಖ್‌‌ ವಿರುದ್ಧ ಪ್ರಕರಣ ದಾಖಲಿಸಿತ್ತು. ಇದರ ನಂತರ ದೇಶ್ಮುಖ್ ಮತ್ತು ಇತರರ ವಿರುದ್ಧ ಇಡಿ ಕೂಡಾ ಪ್ರಕರಣವನ್ನು ದಾಖಲಿಸಿತ್ತು.

“ದೇಶ್ಮುಖ್ ಅವರು ಈ ತನಿಖೆ ನ್ಯಾಯಸಮ್ಮತವಲ್ಲ ಎಂದು ಭಾವಿಸುತ್ತಾರೆ. ಆದ್ದರಿಂದ ಅವರು ತನಿಖೆಗೆ ಕೈಜೋಡಿಸುತ್ತಿಲ್ಲ. ತನಿಖಾ ಸಂಸ್ಥೆ ಬಯಸಿದ ಯಾವುದೇ ದಾಖಲೆಗಳ ಬಗ್ಗೆ ಕನಿಷ್ಠ ನಮಗೆ ಹೇಳಬೇಕು. ಇಡಿ ತನಿಖೆ ಕಿರುಕುಳದಂತೆ ಕಾಣುತ್ತಿದೆಯೆ ಹೊರತು, ನಿಜವಾದ ತನಿಖೆಯಲ್ಲ” ಎಂದು ವಕೀಲ ಕಮಲೇಶ್‌ ಹೇಳಿದ್ದಾರೆ.

ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು ಮತ್ತು ಇತರ ಮಾರ್ಗಗಳಿದ್ದರೂ, ದೇಶ್ಮುಖ್ ಅವರನ್ನು ನೇರವಾಗಿ ಪ್ರಶ್ನಿಸುವ ಸಲುವಾಗಿ ಹಾಜರಾಗುವಂತೆ ಕೇಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಪೊಲೀಸ್‌ ಅಧಿಕಾರಿ ಪರಮ್ ಬಿರ್ ಸಿಂಗ್ ಅವರ ಆರೋಪಗಳು ನಿಜವಲ್ಲ ಎಂದಿರುವ ಕಮಲೇಶ್‌‌, “ಈ ಬಗ್ಗೆ ಅವರು ತಿಂಗಳುಗಟ್ಟಲೆ ಯಾಕೆ ಮೌನವಾಗಿದ್ದರು ಎಂದ ಹೈಕೋರ್ಟ್ ಪ್ರಶ್ನಿಸಿದೆ” ಎಂದು ಹೇಳಿದ್ದಾರೆ.

ಭ್ರಷ್ಟಾಚಾರದ ಆರೋಪದ ಬಗ್ಗೆ ಪ್ರಾಥಮಿಕ ತನಿಖೆ ನಡೆಸುವಂತೆ ಬಾಂಬೆ ಹೈಕೋರ್ಟ್ ಸಿಬಿಐಗೆ ನಿರ್ದೇಶನ ನೀಡಿದ ನಂತರ ದೇಶ್ಮುಖ್‌ ಏಪ್ರಿಲ್‌ನಲ್ಲಿ ತನ್ನ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ಅನಿಲ್ ದೇಶ್ಮುಖ್ ವಿರುದ್ಧ ಸಿಬಿಐ ತನಿಖೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಮಹಾರಾಷ್ಟ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...