Homeಮುಖಪುಟ‘ಇಡಿ’ ತನಿಖೆ ನ್ಯಾಯಸಮ್ಮತಲ್ಲ, ತನಿಖೆಗೆ ಹಾಜರಾಗುವುದಿಲ್ಲ: ಅನಿಲ್ ದೇಶ್ಮುಖ್‌ ವಕೀಲ

‘ಇಡಿ’ ತನಿಖೆ ನ್ಯಾಯಸಮ್ಮತಲ್ಲ, ತನಿಖೆಗೆ ಹಾಜರಾಗುವುದಿಲ್ಲ: ಅನಿಲ್ ದೇಶ್ಮುಖ್‌ ವಕೀಲ

- Advertisement -
- Advertisement -

ಹಣ ವಂಚನೆ ಪ್ರಕರಣದಲ್ಲಿ ತನ್ನ ವಿರುದ್ಧ ಜಾರಿ ನಿರ್ದೇಶನಾಲಯದ (ಇಡಿ) ತನಿಖೆ ನ್ಯಾಯ ಸಮ್ಮತವಲ್ಲ ಎಂದು ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್‌ ಅಭಿಪ್ರಾಯಪಟ್ಟಿದ್ದಾರೆ, ಆದ್ದರಿಂದ ಅವರು ತನಿಖೆಗೆ ಕೈಜೋಡಿಸುವುದಿಲ್ಲ ಎಂದು ಅವರ ವಕೀಲ ಬುಧವಾರ ಹೇಳಿದ್ದಾರೆ.

ಮುಂಬೈನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದೇಶ್ಮುಖ್ ಅವರ ವಕೀಲ ಕಮಲೇಶ್ ಘುಮ್ರೆ, ಇಡಿಯ ತನಿಖೆಯು ನಿಜವಾದ ತನಿಖೆಯಂತೆ ಕಾಣುತ್ತಿಲ್ಲ, ಅದು ‘ಕಿರುಕುಳ’ ಎಂದು ಆರೋಪಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಇಡಿ’ ದೇಶ್ಮುಖ್ ಅವರ ಪತ್ನಿ ಆರತಿಗೆ ಬುಧವಾರ ಸಮನ್ಸ್ ಜಾರಿಗೊಳಿಸಿದ್ದು, ವಿಚಾರಣೆಗೆ ತನ್ನ ಮುಂದೆ ಹಾಜರಾಗುವಂತೆ ಹೇಳಿದೆ ಎಂದು ಅವರು ಹೇಳಿದ್ದಾರೆ. ಆದರೆ ತಾನು ವಿಡಿಯೊ ಕಾನ್ಫರೆನ್ಸಿಂಗ್‌‌ ಮೂಲಕ ತನಿಖೆಗೆ ಸಹಕರಿಸುತ್ತೇನೆ ಎಂದು ಪತ್ರ ಬರೆದಿದ್ದಾರೆ ಎಂದು ಕಮಲೇಶ್‌‌ ತಿಳಿಸಿದ್ದಾರೆ.

ಈ ಹಿಂದೆ ಇಡಿ ಅನಿಲ್ ದೇಶ್ಮುಖ್ ಅವರಿಗೆ ಅನೇಕ ಸಮನ್ಸ್ ನೀಡಿತ್ತು, ಅವರ ಹೇಳಿಕೆಯನ್ನು ದಾಖಲಿಸುವಂತೆ ಕೇಳಿಕೊಂಡಿತ್ತು. ಆದಾಗ್ಯೂ, ದೇಶ್ಮುಖ್‌ ಅವರು ಕೊರೊನಾವನ್ನು ಉಲ್ಲೇಖಿಸಿ ಸಮನ್ಸ್‌ಗೆ ಉತ್ತರಿಸಿರಲಿಲ್ಲ.

ಇದನ್ನೂ ಓದಿ: ಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ಅವರು ಕೂಡಾ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ತಮ್ಮ ಹೇಳಿಕೆಯನ್ನು ದಾಖಲಿಸಲು ಇಡಿಗೆ ಪ್ರಸ್ತಾಪಿಸಿದ್ದರು. ಪ್ರಕರಣದಲ್ಲಿ ಯಾವುದೇ ಬಲವಂತದ ಕ್ರಮದಿಂದ ರಕ್ಷಣೆ ಕೋರಿ ದೇಶ್ಮುಖ್‌ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದಾರೆ.

ಈ ವರ್ಷದ ಆರಂಭದಲ್ಲಿ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರು ಮಾಡಿದ ಕನಿಷ್ಠ 100 ಕೋಟಿ ರೂ.ಗಳ ಲಂಚದ ಆರೋಪಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ದೇಶ್ಮುಖ್‌‌ ವಿರುದ್ಧ ಪ್ರಕರಣ ದಾಖಲಿಸಿತ್ತು. ಇದರ ನಂತರ ದೇಶ್ಮುಖ್ ಮತ್ತು ಇತರರ ವಿರುದ್ಧ ಇಡಿ ಕೂಡಾ ಪ್ರಕರಣವನ್ನು ದಾಖಲಿಸಿತ್ತು.

“ದೇಶ್ಮುಖ್ ಅವರು ಈ ತನಿಖೆ ನ್ಯಾಯಸಮ್ಮತವಲ್ಲ ಎಂದು ಭಾವಿಸುತ್ತಾರೆ. ಆದ್ದರಿಂದ ಅವರು ತನಿಖೆಗೆ ಕೈಜೋಡಿಸುತ್ತಿಲ್ಲ. ತನಿಖಾ ಸಂಸ್ಥೆ ಬಯಸಿದ ಯಾವುದೇ ದಾಖಲೆಗಳ ಬಗ್ಗೆ ಕನಿಷ್ಠ ನಮಗೆ ಹೇಳಬೇಕು. ಇಡಿ ತನಿಖೆ ಕಿರುಕುಳದಂತೆ ಕಾಣುತ್ತಿದೆಯೆ ಹೊರತು, ನಿಜವಾದ ತನಿಖೆಯಲ್ಲ” ಎಂದು ವಕೀಲ ಕಮಲೇಶ್‌ ಹೇಳಿದ್ದಾರೆ.

ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು ಮತ್ತು ಇತರ ಮಾರ್ಗಗಳಿದ್ದರೂ, ದೇಶ್ಮುಖ್ ಅವರನ್ನು ನೇರವಾಗಿ ಪ್ರಶ್ನಿಸುವ ಸಲುವಾಗಿ ಹಾಜರಾಗುವಂತೆ ಕೇಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಪೊಲೀಸ್‌ ಅಧಿಕಾರಿ ಪರಮ್ ಬಿರ್ ಸಿಂಗ್ ಅವರ ಆರೋಪಗಳು ನಿಜವಲ್ಲ ಎಂದಿರುವ ಕಮಲೇಶ್‌‌, “ಈ ಬಗ್ಗೆ ಅವರು ತಿಂಗಳುಗಟ್ಟಲೆ ಯಾಕೆ ಮೌನವಾಗಿದ್ದರು ಎಂದ ಹೈಕೋರ್ಟ್ ಪ್ರಶ್ನಿಸಿದೆ” ಎಂದು ಹೇಳಿದ್ದಾರೆ.

ಭ್ರಷ್ಟಾಚಾರದ ಆರೋಪದ ಬಗ್ಗೆ ಪ್ರಾಥಮಿಕ ತನಿಖೆ ನಡೆಸುವಂತೆ ಬಾಂಬೆ ಹೈಕೋರ್ಟ್ ಸಿಬಿಐಗೆ ನಿರ್ದೇಶನ ನೀಡಿದ ನಂತರ ದೇಶ್ಮುಖ್‌ ಏಪ್ರಿಲ್‌ನಲ್ಲಿ ತನ್ನ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ಅನಿಲ್ ದೇಶ್ಮುಖ್ ವಿರುದ್ಧ ಸಿಬಿಐ ತನಿಖೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಮಹಾರಾಷ್ಟ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...