Homeಕರೋನಾ ತಲ್ಲಣಸಾರ್ವಜನಿಕ ಆಕ್ರೋಶ, ಅಸಮಾಧಾನದ ಪರಿಣಾಮ: ‘ಮನೆಯಿಂದ ಹೊರಬಂದು ಜನರಿಗೆ ನೆರವಾಗಿ’ ಎಂದ ಬಿಜೆಪಿ ಅಧ್ಯಕ್ಷ ನಡ್ಡಾ

ಸಾರ್ವಜನಿಕ ಆಕ್ರೋಶ, ಅಸಮಾಧಾನದ ಪರಿಣಾಮ: ‘ಮನೆಯಿಂದ ಹೊರಬಂದು ಜನರಿಗೆ ನೆರವಾಗಿ’ ಎಂದ ಬಿಜೆಪಿ ಅಧ್ಯಕ್ಷ ನಡ್ಡಾ

- Advertisement -
- Advertisement -

ಸಾಂಕ್ರಾಮಿಕ ರೋಗದ ಎರಡನೇ ಅಲೆಯಲ್ಲಿ ಬಿಜೆಪಿಯ ಸ್ಪಷ್ಟ ಅನುಪಸ್ಥಿತಿಯ ಕಾರಣಕ್ಕೆ ಸಾರ್ವಜನಿಕರಲ್ಲಿ ಪಕ್ಷದ ಬಗ್ಗೆ ಆಕ್ರೋಶ ಮತ್ತು ಅಸಮಾಧಾನ ಶುರುವಾಗಿದೆ ಎಂಬುದನ್ನು ಮನಗಂಡಿರುವ ಬಿಜೆಪಿ ಪಕ್ಷ ತನ್ನ ಎಲ್ಲ ಹಂತದ ನಾಯಕರಿಗೂ ಜನರಿಗೆ ನೆರವಾಗಲು ಸೂಚಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಕಷ್ಟದಲ್ಲಿರುವ ಜನರೊಂದಿಗೆ “ಅನುಭೂತಿ ಮತ್ತು ಸಹಾನುಭೂತಿ”ಯಿಂದ ವರ್ತಿಸಲು ಹೇಳಿದೆ.
ಈ ಕುರಿತು ಎಲ್ಲ ಹಂತಗಳ ನಾಯಕರೊಂದಿಗೆ ವರ್ಚುವಲ್ ಸಭೆಗಳನ್ನು ನಡೆಸುತ್ತಿರುವ ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ, ಪಕ್ಷದ ಮುಖಂಡರಿಗೆ ಔಷಧಿಗಳ ವಿತರಣೆ, ಆಸ್ಪತ್ರೆ ಹಾಸಿಗೆಗಳ ಲಭ್ಯತೆ ಮತ್ತು ಆರೋಗ್ಯ ಮೂಲಸೌಕರ್ಯಗಳ ಹೆಚ್ಚಳ, ಆಮ್ಲಜನಕ ಲಭ್ಯತೆಗಳನ್ನು ಸಕ್ರಿಯವಾಗಿ ಮೇಲ್ವಿಚಾರಣೆ ಮಾಡಲು ತಿಳಿಸಿದ್ದಾರೆ. ‘ಮನೆಯಿಂದ ಹೊರಬನ್ನಿ ಜನರಿಗೆ ನೆರವಾಗಿ’ ಎಂದು ನೇರವಾಗಿ ತಿಳಿಸಿದ್ದಾರೆ.

ಎರಡನೇ ಅಲೆಯು ಗ್ರಾಮೀಣ ಪ್ರದೇಶಗಳಿಗೆ ಹರಡುತ್ತಿರುವಾಗ ಕೇಂದ್ರ ಸರ್ಕಾರದ ಮೇಲೆ ಆರೋಪಿಸಿ, ನಮ್ಮ ಇಮೇಜ್ ಹಾಳು ಮಾಡಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಟೂಲ್‌ಕಿಟ್ ಹೆಸರಲ್ಲಿ ಬಿಜೆಪಿ ಟ್ವೀಟ್‌ಗಳನ್ನು ಮಾಡಲಾಗಿತ್ತು. ಕಾಂಗ್ರೆಸ್‌ನ ನಕಲಿ ಲೆಟರ್‌ಹೆಡ್ ಬಳಸಿ ಇದನ್ನು ರಚಿಸಲಾಗಿದೆ ಎಂಬುದನ್ನು ಒಪ್ಪಿಕೊಂಡಿದ್ದ ಟ್ವೀಟರ್ ಈ ಟ್ವೀಟ್‌ಗಳನ್ನು ಮ್ಯಾನಿಪುಲೆಟೆಡ್ ಮೀಡಿಯಾ ಎಂದು ಕರೆದಿತ್ತು. ಇದು ಬಿಜೆಪಿಗೆ ಮುಜುಗರ ತಂದಿತ್ತು
“ಪಕ್ಷ ಮತ್ತು ಸರ್ಕಾರದ ವಿರುದ್ಧ ನಕಾರಾತ್ಮಕ ನಿರೂಪಣೆ ಸೃಷ್ಟಿಯಾಗಿದೆ ಎಂಬುದು ನಿಜ” ಎಂದು ಬಿಜೆಪಿಯ ಹಿರಿಯ ಮುಖಂಡರು ಇಂಡಿಯನ್ ಎಕ್ಸ್‌ಪ್ರೆಸ್‌ ಎದುರು ಒಪ್ಪಿಕೊಂಡರು.

“ವಿಷಯಗಳನ್ನು ಸಾಮಾನ್ಯ ಸ್ಥಿತಿಗೆ ತಂದ ನಂತರವೇ ನಾವು ಅದರ ವಿರುದ್ಧ ಕೆಲಸ ಮಾಡಬಹುದು. ಅನೇಕರು ತಮ್ಮ ಕುಟುಂಬ ಸದಸ್ಯರನ್ನು ಮತ್ತು ಹತ್ತಿರದವರನ್ನು ಕಳೆದುಕೊಂಡಿರುವ ಸಮಯ ಇದು. ನಾವು ಅವರ ನೋವನ್ನು ಶಮನಗೊಳಿಸುವ, ಅವರ ತೊಂದರೆಗಳನ್ನು ಸರಾಗಗೊಳಿಸುವ ಮತ್ತು ಅವರೊಂದಿಗೆ ನಿಲ್ಲುವ ಸಮಯ. ಪಕ್ಷದ ಮುಖಂಡರು ಮತ್ತು ರಾಜ್ಯದಾದ್ಯಂತದ ಕಾರ್ಯಕರ್ತರು ಜನರ ಬಗ್ಗೆ ಸಹಾನುಭೂತಿ ಹೊಂದಲು ಕೇಳಿಕೊಳ್ಳಲಾಗಿದೆ’ ಎಂದರು.

ಕೋವಿಡ್ ಸಂತ್ರಸ್ತರಿಗೆ ಪರಿಹಾರ ಮತ್ತು ಪುನರ್ವಸತಿ ಕಾರ್ಯತಂತ್ರದ ಭಾಗವಾಗಲಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. ಕೋವಿಡ್ ಸಾಂಕ್ರಾಮಿಕದಿಂದ ಅನಾಥವಾಗಿರುವ ಮಕ್ಕಳ ಕಲ್ಯಾಣಕ್ಕಾಗಿ ಕಾರ್ಯಕ್ರಮವನ್ನು ಸಿದ್ಧಪಡಿಸುವಂತೆ ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಶನಿವಾರ ಪಕ್ಷದ ಆಡಳಿತದ ರಾಜ್ಯಗಳನ್ನು ಕೇಳಿದರು. ಮೋದಿ ಸರ್ಕಾರ ಏಳು ವರ್ಷಗಳ ಅಧಿಕಾರವನ್ನು ಪೂರ್ಣಗೊಳಿಸಿದಾಗ ಅದನ್ನು ಮೇ 30 ರಂದು ಪ್ರಾರಂಭಿಸಬೇಕು ಎಂದು ಹೇಳಿದರು.

ಬಿಜೆಪಿ ಆಡಳಿತದ ರಾಜ್ಯಗಳ ಸಿಎಂಗಳಿಗೆ ಬರೆದ ಪತ್ರದಲ್ಲಿ, ಎನ್‌ಡಿಎ ಸರ್ಕಾರದ ವಾರ್ಷಿಕೋತ್ಸವದಂದು ಯಾವುದೇ ಕಾರ್ಯಕ್ರಮ ನಡೆಯುವುದಿಲ್ಲ ಎಂದು ನಡ್ಡಾ ಒತ್ತಿ ಹೇಳಿದ್ದಾರೆ. ಬದಲಾಗಿ, ಜನರಿಗೆ ಪಕ್ಷದ ಕೃತಜ್ಞತೆಯನ್ನು ವ್ಯಕ್ತಪಡಿಸಲು ವಿವಿಧ ಕಲ್ಯಾಣ ಕಾರ್ಯಕ್ರಮಗಳನ್ನು ಪ್ರಾರಂಭಿಸಬೇಕು ಎಂದಿದ್ದಾರೆ.

“ಸಂಸದರು ಮತ್ತು ಶಾಸಕರು ಆಯಾ ಪ್ರದೇಶಗಳಲ್ಲಿನ ಆಸ್ಪತ್ರೆಗಳಲ್ಲಿ ಆಮ್ಲಜನಕ ಸ್ಥಾವರ ಅಳವಡಿಸಲಾಗಿದೆಯೇ ಎಂದು ನೋಡಬೇಕು, ಹಾಸಿಗೆಗಳ ಲಭ್ಯತೆಗಾಗಿ ಖಾಸಗಿ ಆಸ್ಪತ್ರೆಗಳ ಅಧಿಕಾರಿಗಳೊಂದಿಗೆ ಸಂಪರ್ಕ ಹೊಂದಬೇಕು, ಔಷಧಿಗಳನ್ನು ವಿತರಿಸಬೇಕು ಮತ್ತು ಕಷ್ಟದ ಸಮಯದಲ್ಲಿ ಸಂತ್ರಸ್ತರಿಗೆ ನೈತಿಕ ಬೆಂಬಲವಾಗಿರಬೇಕು” ಎಂದು ಬಿಜೆಪಿ ನಾಯಕ ಸೂಚಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಮಿಲಿಟರಿ ಕೇಂದ್ರಕ್ಕೆೆ ಸೋನು ಸೂದ್ ಸಹಾಯ ಕೋರಿದ ಕಮಾಂಡರ್‌, ಕೋಪಗೊಂಡ ಹಿರಿಯ ಸೇನಾ ಅಧಿಕಾರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...