Homeಕರೋನಾ ತಲ್ಲಣಸಾರ್ವಜನಿಕ ಆಕ್ರೋಶ, ಅಸಮಾಧಾನದ ಪರಿಣಾಮ: ‘ಮನೆಯಿಂದ ಹೊರಬಂದು ಜನರಿಗೆ ನೆರವಾಗಿ’ ಎಂದ ಬಿಜೆಪಿ ಅಧ್ಯಕ್ಷ ನಡ್ಡಾ

ಸಾರ್ವಜನಿಕ ಆಕ್ರೋಶ, ಅಸಮಾಧಾನದ ಪರಿಣಾಮ: ‘ಮನೆಯಿಂದ ಹೊರಬಂದು ಜನರಿಗೆ ನೆರವಾಗಿ’ ಎಂದ ಬಿಜೆಪಿ ಅಧ್ಯಕ್ಷ ನಡ್ಡಾ

- Advertisement -
- Advertisement -

ಸಾಂಕ್ರಾಮಿಕ ರೋಗದ ಎರಡನೇ ಅಲೆಯಲ್ಲಿ ಬಿಜೆಪಿಯ ಸ್ಪಷ್ಟ ಅನುಪಸ್ಥಿತಿಯ ಕಾರಣಕ್ಕೆ ಸಾರ್ವಜನಿಕರಲ್ಲಿ ಪಕ್ಷದ ಬಗ್ಗೆ ಆಕ್ರೋಶ ಮತ್ತು ಅಸಮಾಧಾನ ಶುರುವಾಗಿದೆ ಎಂಬುದನ್ನು ಮನಗಂಡಿರುವ ಬಿಜೆಪಿ ಪಕ್ಷ ತನ್ನ ಎಲ್ಲ ಹಂತದ ನಾಯಕರಿಗೂ ಜನರಿಗೆ ನೆರವಾಗಲು ಸೂಚಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಕಷ್ಟದಲ್ಲಿರುವ ಜನರೊಂದಿಗೆ “ಅನುಭೂತಿ ಮತ್ತು ಸಹಾನುಭೂತಿ”ಯಿಂದ ವರ್ತಿಸಲು ಹೇಳಿದೆ.
ಈ ಕುರಿತು ಎಲ್ಲ ಹಂತಗಳ ನಾಯಕರೊಂದಿಗೆ ವರ್ಚುವಲ್ ಸಭೆಗಳನ್ನು ನಡೆಸುತ್ತಿರುವ ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ, ಪಕ್ಷದ ಮುಖಂಡರಿಗೆ ಔಷಧಿಗಳ ವಿತರಣೆ, ಆಸ್ಪತ್ರೆ ಹಾಸಿಗೆಗಳ ಲಭ್ಯತೆ ಮತ್ತು ಆರೋಗ್ಯ ಮೂಲಸೌಕರ್ಯಗಳ ಹೆಚ್ಚಳ, ಆಮ್ಲಜನಕ ಲಭ್ಯತೆಗಳನ್ನು ಸಕ್ರಿಯವಾಗಿ ಮೇಲ್ವಿಚಾರಣೆ ಮಾಡಲು ತಿಳಿಸಿದ್ದಾರೆ. ‘ಮನೆಯಿಂದ ಹೊರಬನ್ನಿ ಜನರಿಗೆ ನೆರವಾಗಿ’ ಎಂದು ನೇರವಾಗಿ ತಿಳಿಸಿದ್ದಾರೆ.

ಎರಡನೇ ಅಲೆಯು ಗ್ರಾಮೀಣ ಪ್ರದೇಶಗಳಿಗೆ ಹರಡುತ್ತಿರುವಾಗ ಕೇಂದ್ರ ಸರ್ಕಾರದ ಮೇಲೆ ಆರೋಪಿಸಿ, ನಮ್ಮ ಇಮೇಜ್ ಹಾಳು ಮಾಡಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಟೂಲ್‌ಕಿಟ್ ಹೆಸರಲ್ಲಿ ಬಿಜೆಪಿ ಟ್ವೀಟ್‌ಗಳನ್ನು ಮಾಡಲಾಗಿತ್ತು. ಕಾಂಗ್ರೆಸ್‌ನ ನಕಲಿ ಲೆಟರ್‌ಹೆಡ್ ಬಳಸಿ ಇದನ್ನು ರಚಿಸಲಾಗಿದೆ ಎಂಬುದನ್ನು ಒಪ್ಪಿಕೊಂಡಿದ್ದ ಟ್ವೀಟರ್ ಈ ಟ್ವೀಟ್‌ಗಳನ್ನು ಮ್ಯಾನಿಪುಲೆಟೆಡ್ ಮೀಡಿಯಾ ಎಂದು ಕರೆದಿತ್ತು. ಇದು ಬಿಜೆಪಿಗೆ ಮುಜುಗರ ತಂದಿತ್ತು
“ಪಕ್ಷ ಮತ್ತು ಸರ್ಕಾರದ ವಿರುದ್ಧ ನಕಾರಾತ್ಮಕ ನಿರೂಪಣೆ ಸೃಷ್ಟಿಯಾಗಿದೆ ಎಂಬುದು ನಿಜ” ಎಂದು ಬಿಜೆಪಿಯ ಹಿರಿಯ ಮುಖಂಡರು ಇಂಡಿಯನ್ ಎಕ್ಸ್‌ಪ್ರೆಸ್‌ ಎದುರು ಒಪ್ಪಿಕೊಂಡರು.

“ವಿಷಯಗಳನ್ನು ಸಾಮಾನ್ಯ ಸ್ಥಿತಿಗೆ ತಂದ ನಂತರವೇ ನಾವು ಅದರ ವಿರುದ್ಧ ಕೆಲಸ ಮಾಡಬಹುದು. ಅನೇಕರು ತಮ್ಮ ಕುಟುಂಬ ಸದಸ್ಯರನ್ನು ಮತ್ತು ಹತ್ತಿರದವರನ್ನು ಕಳೆದುಕೊಂಡಿರುವ ಸಮಯ ಇದು. ನಾವು ಅವರ ನೋವನ್ನು ಶಮನಗೊಳಿಸುವ, ಅವರ ತೊಂದರೆಗಳನ್ನು ಸರಾಗಗೊಳಿಸುವ ಮತ್ತು ಅವರೊಂದಿಗೆ ನಿಲ್ಲುವ ಸಮಯ. ಪಕ್ಷದ ಮುಖಂಡರು ಮತ್ತು ರಾಜ್ಯದಾದ್ಯಂತದ ಕಾರ್ಯಕರ್ತರು ಜನರ ಬಗ್ಗೆ ಸಹಾನುಭೂತಿ ಹೊಂದಲು ಕೇಳಿಕೊಳ್ಳಲಾಗಿದೆ’ ಎಂದರು.

ಕೋವಿಡ್ ಸಂತ್ರಸ್ತರಿಗೆ ಪರಿಹಾರ ಮತ್ತು ಪುನರ್ವಸತಿ ಕಾರ್ಯತಂತ್ರದ ಭಾಗವಾಗಲಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. ಕೋವಿಡ್ ಸಾಂಕ್ರಾಮಿಕದಿಂದ ಅನಾಥವಾಗಿರುವ ಮಕ್ಕಳ ಕಲ್ಯಾಣಕ್ಕಾಗಿ ಕಾರ್ಯಕ್ರಮವನ್ನು ಸಿದ್ಧಪಡಿಸುವಂತೆ ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಶನಿವಾರ ಪಕ್ಷದ ಆಡಳಿತದ ರಾಜ್ಯಗಳನ್ನು ಕೇಳಿದರು. ಮೋದಿ ಸರ್ಕಾರ ಏಳು ವರ್ಷಗಳ ಅಧಿಕಾರವನ್ನು ಪೂರ್ಣಗೊಳಿಸಿದಾಗ ಅದನ್ನು ಮೇ 30 ರಂದು ಪ್ರಾರಂಭಿಸಬೇಕು ಎಂದು ಹೇಳಿದರು.

ಬಿಜೆಪಿ ಆಡಳಿತದ ರಾಜ್ಯಗಳ ಸಿಎಂಗಳಿಗೆ ಬರೆದ ಪತ್ರದಲ್ಲಿ, ಎನ್‌ಡಿಎ ಸರ್ಕಾರದ ವಾರ್ಷಿಕೋತ್ಸವದಂದು ಯಾವುದೇ ಕಾರ್ಯಕ್ರಮ ನಡೆಯುವುದಿಲ್ಲ ಎಂದು ನಡ್ಡಾ ಒತ್ತಿ ಹೇಳಿದ್ದಾರೆ. ಬದಲಾಗಿ, ಜನರಿಗೆ ಪಕ್ಷದ ಕೃತಜ್ಞತೆಯನ್ನು ವ್ಯಕ್ತಪಡಿಸಲು ವಿವಿಧ ಕಲ್ಯಾಣ ಕಾರ್ಯಕ್ರಮಗಳನ್ನು ಪ್ರಾರಂಭಿಸಬೇಕು ಎಂದಿದ್ದಾರೆ.

“ಸಂಸದರು ಮತ್ತು ಶಾಸಕರು ಆಯಾ ಪ್ರದೇಶಗಳಲ್ಲಿನ ಆಸ್ಪತ್ರೆಗಳಲ್ಲಿ ಆಮ್ಲಜನಕ ಸ್ಥಾವರ ಅಳವಡಿಸಲಾಗಿದೆಯೇ ಎಂದು ನೋಡಬೇಕು, ಹಾಸಿಗೆಗಳ ಲಭ್ಯತೆಗಾಗಿ ಖಾಸಗಿ ಆಸ್ಪತ್ರೆಗಳ ಅಧಿಕಾರಿಗಳೊಂದಿಗೆ ಸಂಪರ್ಕ ಹೊಂದಬೇಕು, ಔಷಧಿಗಳನ್ನು ವಿತರಿಸಬೇಕು ಮತ್ತು ಕಷ್ಟದ ಸಮಯದಲ್ಲಿ ಸಂತ್ರಸ್ತರಿಗೆ ನೈತಿಕ ಬೆಂಬಲವಾಗಿರಬೇಕು” ಎಂದು ಬಿಜೆಪಿ ನಾಯಕ ಸೂಚಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಮಿಲಿಟರಿ ಕೇಂದ್ರಕ್ಕೆೆ ಸೋನು ಸೂದ್ ಸಹಾಯ ಕೋರಿದ ಕಮಾಂಡರ್‌, ಕೋಪಗೊಂಡ ಹಿರಿಯ ಸೇನಾ ಅಧಿಕಾರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...