Homeಅಂಕಣಗಳುಯತ್ನಾಳಶಾಹಿಯ ಚದುರಂಗದಾಟ

ಯತ್ನಾಳಶಾಹಿಯ ಚದುರಂಗದಾಟ

- Advertisement -
- Advertisement -

ಮನ್ನೆ ಏನಾತಪಾ ಅಂದರ ನಮ್ಮ ಬಿಜಾಪುರದ ಬಸನಗೌಡರು ಜನಪರ ಹೋರಾಟಗಾರ ಹಾಗೂ ಸ್ವಾತಂತ್ರ್ಯ ಸೇನಾನಿ ದೊರೆಸ್ವಾಮಿ ಅವರ ಬಗ್ಗೆ ಅಪದ್ಧ ಅಪದ್ಧ ಮಾತಾಡ್ಯಾರ.

ಯತ್ನಾಳಗೌಡರು ದೊರೆಸ್ವಾಮಿ ಅವರನ್ನ ಪಾಕಿಸ್ತಾನದ ಏಜಂಟ ಅಂತ ಕರದಾರ. ನಕಲಿ ದೇಶಭಕ್ತ ಅಂತ ಹೆಸರು ಇಟ್ಟಾರ. “ಅವರೇನು ಸಾವರಕರನ ಗತೆ ದೇಶಪ್ರೇಮಿನಾ? ಬ್ರಿಟಿಷರ ಲಾಠಿ ಏಟು ತಿಂದಾರ?” ಅಂತ ಕೇಳ್ಯಾರ. ಇದು ಬರೇ ಒಬ್ಬ ಎಮ್ಮೆಲ್ಲೇ ಒಬ್ಬ ಹಿರಿಯ ಹೋರಾಟಗಾರರ ಬಗ್ಗೆ ಬಡಬಡಿಸಿದ್ದು ಅಂತ ತಿಳಕೋಬ್ಯಾಡ್ರಿ. ಅದು ಅಷ್ಟ ಸಿಂಪಲ್ಲಾದ ವಿಷಯ ಅಲ್ಲ. ಇದು ಇಲ್ಲಿಗೇ ಮುಗಿಯಂಗಿಲ್ಲ. ಇದು ಈಗ ಸುರು ಆಗೇದ. ದೊರೆಸ್ವಾಮಿಯವರನ್ನೇ ಬಿಡಲಾರದವರು ಇನ್ನು ಮತ್ತ ಯಾರನ್ನು ಬಿಟ್ಟಾರು? ಹಳ್ಳಿ ಊರಾಗ ಗೌಡನ ಕಪಾಳಕ್ಕ ಹೊಡೆದ ಹುಡುಗಾ ಉಳಿದವರನ್ನ ಬರೇ ಬೆದರಿಕೆಯಿಂದಲೇ ಮುಗಿಸಿಬಿಟ್ಟನಂತ, ಹಂಗಾತು ಇದು ಕತಿ.

ಉಪಚುನಾವಣೆಯೊಳಗ ಮಹಿಳಾ ಶಾಸಕಿಯೊಬ್ಬರನ್ನ ಹಂಗಿಸಲಿಕ್ಕೆ ಯತ್ನಾಳರು ಒಂದು ಕುಚೋದ್ಯ ಮಾಡತಿದ್ದರು. ಅವರು ಏನು ಮಾಡ್ಯಾರ? ಡ್ಯಾಶ್ -ಡ್ಯಾಶ್. ಇವರೇನು ಮಾಡ್ಯಾರ? ಡ್ಯಾಶ್- ಡ್ಯಾಶ್ ಅಂತ ಹೋದಲ್ಲೆ – ಬಂದಲ್ಲೆ ಭಾಷಣ ಮಾಡತಿದ್ದರು. ಅದರ ಹಂಗನ ಇದು ಬರೇ ಟಿಆರ್‍ಪಿ ಸಲುವಾಗಿ ಮಾಡಿದ ಡ್ಯಾಶ್ ಡ್ಯಾಶ್ ಭಾಷಣ ಅಂತ ತಿಳಕೋಬ್ಯಾಡ್ರಿ ಮತ್ತ.

ಇದು ಒಂದು ವೈರಲ್ ಆಗುವ ಸಾಧ್ಯತೆ ಇರುವ ರೋಗ. ಎಲ್ಲಾ ಉದಾರವಾದಿಗಳನ್ನ, ಪ್ರಗತಿಪರರನ್ನ, ಕೆಳಗಿನವರನ್ನ ಮ್ಯಾಲೆ ಎತ್ತಲಿಕ್ಕೆ ಕೈ ಎತ್ತಿದವರನ್ನ ಸಂಶಯದಿಂದ ನೋಡೋ ಜಡ್ಡು. ಈಗ ನಮ್ಮ ಭವ್ಯ ಭಾರತದಾಗ ಈ ಗುಮಾನಿಯ ರೋಗ ಸುರು ಆಗೇದ. ಅದು ಕೊರೋನಾ ವೈರಸ್ಸಿಗಿಂತ ಅಪಾಯಕಾರಿ. ಆಳುವ ಪಕ್ಷದವರನ್ನ, ಅಧಿಕಾರಶಾಹಿಯನ್ನ, ಯಾರೋ ಒಬ್ಬ ಜನಪ್ರಿಯ ನಾಯಕನನ್ನ ವಿರೋಧ ಮಾಡೋದನ್ನ ದೇಶದ್ರೋಹ ಅಂತ ಥೂತ್ಕರಿಸೋ ಅಸಹ್ಯವಾದ ಆಟ ಈಗ ಸುರು ಆಗೇದ. ಇದು ಯತ್ನಾಳ ಒಬ್ಬರ ಮಾತಲ್ಲ. ಅವರು ಈ ಚದುರಂಗದ ಆಟದಾಗ ಒಬ್ಬ ಬಡ ಪ್ಯಾದೆ ಅಷ್ಟ. ಇವು ಯತ್ನಾಳಶಾಹಿ ದಿನಗಳು. ಎಲ್ಲ ನಾಗರಿಕರನ್ನ ಪೇದೆಗಳನ್ನಾಗಿ ಮಾಡಿ, ಕೆಲವು ಪೇದೆಗಳನ್ನ ರಾಜರನ್ನಾಗಿ ಮಾಡಿ ಆಟ ಮುಗಿಸೋ ಮಂತ್ರಿಗಳ ಷಡ್ಯಂತ್ರ.

ಇಲ್ಲೆ ವ್ಯವಸ್ಥೆಯ ವಿರುದ್ಧ ಮಾತಾಡುವ -ಹೋರಾಟಗಾರರು, ಸಾಹಿತಿಗಳು, ಚಿಂತಕರು, ಕಲಾವಿದರು, ಶಿಲ್ಪಿ, ನಾಟಕಕಾರರು, ಚಿತ್ರಕತೆಗಾರರು, ನಟ-ನಟಿಯರು, ನಿರ್ದೇಶಕರು – ಯಾರನ್ನೂ ಸಹಿಸಲಾರದ ಮನಸ್ಥಿತಿ ತಯಾರಾಗಲಿಕ್ಕೆ ಹತ್ತೇದ. ಈ ಪಟ್ಟಿ ಬೆಳಕೋತ ಹೋಗತದ. ಇದು ಯಾವುದೇ ಹೊಸ ವಿಷಯವನ್ನ ಮಾತಾಡುವ, ಪ್ರಚಾರ ಮಾಡುವ- ತಿಳಿ ಹೇಳುವ ಯಾರನ್ನೂ ಸಹಿಸಲಾರದು. ಅವರನ್ನ ಅವಮಾನ ಮಾಡಿ, ಅವರಿಗೆ, ಅವರ ವ್ಯಕ್ತಿತ್ವಕ್ಕ, ಅವರ ವಿಚಾರಕ್ಕ ಕಿಮ್ಮತ್ತು ಇಲ್ಲಾ ಅನ್ನೋ ಹಂಗ ಮಾಡಿ ಅವರನ್ನ ಜನರ ಮನಸ್ಸಿನಿಂದಾ ದೂರ ಸರಿಸಿ ಬಿಡೋ ಸಂಚು ಇದು. ಯಾರಿಗೆ ತಮ್ಮ ಬಲದ ಬಗ್ಗೆ, ಜಾಣತನದ ಬಗ್ಗೆ ಸಂಶಯ ಇರತದೋ ಅವರು ಇತರರ ಮೌಲ್ಯಗಳ ಬಗ್ಗೆ, ಸಂಶಯ ವ್ಯಕ್ತಪಡಿಸತಾರ. ದೊಡ್ಡ ದೊಡ್ಡ ಸ್ಥಾನದಾಗ ಇರೋವರು ಇಂಥಾ ಮಾತಾಡಲಿಕ್ಕೆ ಹತ್ತಿದಾಗ ಸಣ್ಣ ವಯಸ್ಸಿನ ಹುಡುಗರು, ಕುರುಡ ಬೆಂಬಲಿಗರು ಹೌದು ಹೌದು ಅಂತ ಚಪ್ಪಾಳೆ ತಟ್ಟತಾರ. ಅವಕಾಶ ಸಿಕ್ಕರ ಈ ವಿಚಾರಗಳನ್ನ ಹಿಂಸೆಯಿಂದ ಎದುರಿಸಲಿಕ್ಕೂ ತಯಾರಾಗತಾರ. ಅದಕ್ಕ ಮಹಾತ್ಯಾಗ ಅನ್ನೋ ಹೆಸರು ಕೊಡತಾರ.

ಎಲ್ಲ ಕಡೆಯಿಂದ ಉದಾರ ವಿಚಾರ ಬರೋದನ್ನ ನಿಲ್ಲಿಸಬೇಕು, ಬರೇ ನಮ್ಮ ವಿಚಾರ ತುಂಬಿ ತುಳುಕಬೇಕು ಅಂಥೇಳಿ ಅಡ್ನಾಡಿ ಪ್ರಯತ್ನ ಮಾಡತಾರ. ಅದಕ್ಕ ಎಲ್ಲಾ ವಿಶ್ವವಿದ್ಯಾಲಯದಾಗೂ ‘ನಮ್ಮ ವಿಚಾರದ ಜನಾ ಇರಬೇಕು’ ಅನ್ನೋದರ ಮ್ಯಾಲೆ ನೇಮಕಾತಿ ಆಗ್ಯಾವು. ಆ ಮನುಷ್ಯ ಆ ಕೆಲಸಕ್ಕ ಯೋಗ್ಯ ಇದ್ದಾನೋ ಇಲ್ಲವೋ ಅನ್ನೋದರ ಬಗ್ಗೆ ಯಾರೂ ವಿಚಾರ ಮಾಡಲಿಕ್ಕೆ ಹತ್ತಿಲ್ಲ.

ಎಲ್ಲ ಪ್ರಗತಿಪರರನ್ನ, ಮುಂದಾಲೋಚನೆ ಉಳ್ಳವರನ್ನ, ಸಮಾನತಾವಾದಿಗಳನ್ನ, ವೈಜ್ಞಾನಿಕ ಮನೋಭಾವ ಇದ್ದವರನ್ನ, ಕಮ್ಯುನಿಸ್ಟ ಅಂತನೋ, ದೇಶದ್ರೋಹಿ ಅಂತನೋ, ವೈರಿದೇಶದ ಏಜೆಂಟ ಅಂತನೋ ಪಟ್ಟ ಕಟ್ಟಿ ಬಿಡುವುದು ಸಹಜ ಆಗೇತಿ. ಇದು ಭಯಂಕರ ಅಪಾಯಕಾರಿ. ಇದನ್ನ ತಲಿ ಸಮಾ ಇರೋರೆಲ್ಲಾ ವಿರೋಧಿಸಬೇಕು. ಮೂರ್ಖರ ರಾಜ್ಯದಾಗ ಬುದ್ಧಿವಂತರಾಗಿರೋದು ತಪ್ಪು ಅಂತಂತಾರ ಖರೆ. ಆದರೆ ಸುತ್ತಲಿನ ಮೂರ್ಖರ ಹುಚ್ಚುತನ ನೋಡಿಕೊಂಡು ಸುಮ್ಮನಿದ್ದರ ಅವರಿಗೂ ಇವರಿಗೂ ಏನೂ ವ್ಯತ್ಯಾಸ ಉಳಿಯಂಗಿಲ್ಲ. ಇಷ್ಟೇಲ್ಲಾ ರಾಜಾರೋಷವಾಗಿ ನಡೀಲಿಕ್ಕೆ ಹತ್ತಿದಾಗ ಇವರೆಲ್ಲಾ ಹೆಂಗ ಸುಮ್ಮನಿದ್ದರು, ಅಂತ ನಾಳೆ ಹುಟ್ಟುವವರು ತಮ್ಮ ಹಿರಿಯರನ್ನ ಆಡಿಕೊಳ್ಳೋಹಂಗಾಗತದ.

ಸುಳ್ಳು ಅನ್ನೋದು ಸೆರಗಿನ್ಯಾಗಿನ ಕೆಂಡ. ಅದನ್ನ ಕಟ್ಟಿಕೊಂಡು ಯತ್ನಾಳಶಾಹಿ ಅಪಾಯಕಾರಿ ಆಟ ಆಡಲಿಕ್ಕೆ ಹತ್ತೇದ. ಬ್ಯಾರೆಯವರ ಮನಿಗೆ ಬೆಂಕಿ ಹಚ್ಚಲಿಕ್ಕೆ ನಾವು ಅದನ್ನು ಉಪಯೋಗಿಸಬಹುದು. ಆದರ ಅದು ಕಡೀಕೆ ಎಲ್ಲಾರಿಗೂ ಹತ್ತಿಕೊಳ್ಳೋದ. ಇದನ್ನ ತಿಳಕೊಳ್ಳಲಾರದವರು ಹಾಡಾಡಿ ಕುಣೀಲಿಕ್ಕೆ ಹತ್ಯಾರ. ಹಾಡು ಮುಗಿಯೋದರಾಗ ಸೆರಗು ಸುಟ್ಟು ಹೋಗಿರತದ. ಕೆಂಡ ಮೈಗೆಲ್ಲಾ ಮೆತ್ತಿಕೊಂಡಿರತದ. ಅಷ್ಟರಾಗ ಸತ್ಯ ಅನ್ನೋ ತಣ್ಣೀರಿನ ಝರಿ ಯೊಳಗ ಜಿಗೀಬೇಕು. ಎಲ್ಲಾ ಸಮಾ ಆಗೋತನಕಾ ತೇಲಿಕೋತ ಹೋಗಬೇಕು.

ನಮ್ಮ ಇಂದಿನ ಸಂಕಟವನ್ನ, ಅದಕ್ಕ ಉತ್ತರವಾಗಿ ಆಶಾವಾದವನ್ನ ತೋರಿಸೋ ಅಮೀರ ಕಜಲಬಾಷ ಅವರ ಒಂದು ಗಜಲ್ಲಿನ ಸಾಲು ಹಿಂಗವ

ಪೂರ್ತೆ ಹಾಳ ಬಿದ್ದದ ಈ ಊರು
ಇಂಥಾದರಾಗ ಕನ್ನಡಿ ಮಾರಾಕ ಬಂದೇವಲ್ಲಾ,
ನಾವೆಷ್ಟು ಹುಚ್ಚರಿರಬೇಕು ನೋಡು
ಅವರು ನಮ್ಮನ್ನ ಬಿಟ್ಟು ಅಡ್ಯಾಡಿದರೇನಾತು,
ನಾವು-ನಾವ ಭೆಟ್ಟಿ ಆಗಕೋತ ಇರಲಿಕ್ಕೆ,
ಮಾತಾಡಿಕೋತ ಹೋಗಲಿಕ್ಕೆ
ನೆವಾ ಹುಡಕಲಿಕ್ಕೆ ಬಂದೇವೆಲ್ಲಾ
ನಾವೆಷ್ಟು ಹುಚ್ಚರಿರಬೇಕು ನೋಡು
ಆದರ ಕತ್ತಲದಾಗ ಎಷ್ಟು ದಿನಾಂತ ಇರೋದು?
ಒಂದ ಸಣ್ಣ ದೀಪ ಹಚ್ಚಬೇಕೂಂತ ಹೊಂಟೆವೆಲ್ಲಾ
ನಾವು ಎಷ್ಟು ಹುಚ್ಚರಿರಬೇಕು ನೋಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...