Homeಅಂಕಣಗಳುಯತ್ನಾಳಶಾಹಿಯ ಚದುರಂಗದಾಟ

ಯತ್ನಾಳಶಾಹಿಯ ಚದುರಂಗದಾಟ

- Advertisement -
- Advertisement -

ಮನ್ನೆ ಏನಾತಪಾ ಅಂದರ ನಮ್ಮ ಬಿಜಾಪುರದ ಬಸನಗೌಡರು ಜನಪರ ಹೋರಾಟಗಾರ ಹಾಗೂ ಸ್ವಾತಂತ್ರ್ಯ ಸೇನಾನಿ ದೊರೆಸ್ವಾಮಿ ಅವರ ಬಗ್ಗೆ ಅಪದ್ಧ ಅಪದ್ಧ ಮಾತಾಡ್ಯಾರ.

ಯತ್ನಾಳಗೌಡರು ದೊರೆಸ್ವಾಮಿ ಅವರನ್ನ ಪಾಕಿಸ್ತಾನದ ಏಜಂಟ ಅಂತ ಕರದಾರ. ನಕಲಿ ದೇಶಭಕ್ತ ಅಂತ ಹೆಸರು ಇಟ್ಟಾರ. “ಅವರೇನು ಸಾವರಕರನ ಗತೆ ದೇಶಪ್ರೇಮಿನಾ? ಬ್ರಿಟಿಷರ ಲಾಠಿ ಏಟು ತಿಂದಾರ?” ಅಂತ ಕೇಳ್ಯಾರ. ಇದು ಬರೇ ಒಬ್ಬ ಎಮ್ಮೆಲ್ಲೇ ಒಬ್ಬ ಹಿರಿಯ ಹೋರಾಟಗಾರರ ಬಗ್ಗೆ ಬಡಬಡಿಸಿದ್ದು ಅಂತ ತಿಳಕೋಬ್ಯಾಡ್ರಿ. ಅದು ಅಷ್ಟ ಸಿಂಪಲ್ಲಾದ ವಿಷಯ ಅಲ್ಲ. ಇದು ಇಲ್ಲಿಗೇ ಮುಗಿಯಂಗಿಲ್ಲ. ಇದು ಈಗ ಸುರು ಆಗೇದ. ದೊರೆಸ್ವಾಮಿಯವರನ್ನೇ ಬಿಡಲಾರದವರು ಇನ್ನು ಮತ್ತ ಯಾರನ್ನು ಬಿಟ್ಟಾರು? ಹಳ್ಳಿ ಊರಾಗ ಗೌಡನ ಕಪಾಳಕ್ಕ ಹೊಡೆದ ಹುಡುಗಾ ಉಳಿದವರನ್ನ ಬರೇ ಬೆದರಿಕೆಯಿಂದಲೇ ಮುಗಿಸಿಬಿಟ್ಟನಂತ, ಹಂಗಾತು ಇದು ಕತಿ.

ಉಪಚುನಾವಣೆಯೊಳಗ ಮಹಿಳಾ ಶಾಸಕಿಯೊಬ್ಬರನ್ನ ಹಂಗಿಸಲಿಕ್ಕೆ ಯತ್ನಾಳರು ಒಂದು ಕುಚೋದ್ಯ ಮಾಡತಿದ್ದರು. ಅವರು ಏನು ಮಾಡ್ಯಾರ? ಡ್ಯಾಶ್ -ಡ್ಯಾಶ್. ಇವರೇನು ಮಾಡ್ಯಾರ? ಡ್ಯಾಶ್- ಡ್ಯಾಶ್ ಅಂತ ಹೋದಲ್ಲೆ – ಬಂದಲ್ಲೆ ಭಾಷಣ ಮಾಡತಿದ್ದರು. ಅದರ ಹಂಗನ ಇದು ಬರೇ ಟಿಆರ್‍ಪಿ ಸಲುವಾಗಿ ಮಾಡಿದ ಡ್ಯಾಶ್ ಡ್ಯಾಶ್ ಭಾಷಣ ಅಂತ ತಿಳಕೋಬ್ಯಾಡ್ರಿ ಮತ್ತ.

ಇದು ಒಂದು ವೈರಲ್ ಆಗುವ ಸಾಧ್ಯತೆ ಇರುವ ರೋಗ. ಎಲ್ಲಾ ಉದಾರವಾದಿಗಳನ್ನ, ಪ್ರಗತಿಪರರನ್ನ, ಕೆಳಗಿನವರನ್ನ ಮ್ಯಾಲೆ ಎತ್ತಲಿಕ್ಕೆ ಕೈ ಎತ್ತಿದವರನ್ನ ಸಂಶಯದಿಂದ ನೋಡೋ ಜಡ್ಡು. ಈಗ ನಮ್ಮ ಭವ್ಯ ಭಾರತದಾಗ ಈ ಗುಮಾನಿಯ ರೋಗ ಸುರು ಆಗೇದ. ಅದು ಕೊರೋನಾ ವೈರಸ್ಸಿಗಿಂತ ಅಪಾಯಕಾರಿ. ಆಳುವ ಪಕ್ಷದವರನ್ನ, ಅಧಿಕಾರಶಾಹಿಯನ್ನ, ಯಾರೋ ಒಬ್ಬ ಜನಪ್ರಿಯ ನಾಯಕನನ್ನ ವಿರೋಧ ಮಾಡೋದನ್ನ ದೇಶದ್ರೋಹ ಅಂತ ಥೂತ್ಕರಿಸೋ ಅಸಹ್ಯವಾದ ಆಟ ಈಗ ಸುರು ಆಗೇದ. ಇದು ಯತ್ನಾಳ ಒಬ್ಬರ ಮಾತಲ್ಲ. ಅವರು ಈ ಚದುರಂಗದ ಆಟದಾಗ ಒಬ್ಬ ಬಡ ಪ್ಯಾದೆ ಅಷ್ಟ. ಇವು ಯತ್ನಾಳಶಾಹಿ ದಿನಗಳು. ಎಲ್ಲ ನಾಗರಿಕರನ್ನ ಪೇದೆಗಳನ್ನಾಗಿ ಮಾಡಿ, ಕೆಲವು ಪೇದೆಗಳನ್ನ ರಾಜರನ್ನಾಗಿ ಮಾಡಿ ಆಟ ಮುಗಿಸೋ ಮಂತ್ರಿಗಳ ಷಡ್ಯಂತ್ರ.

ಇಲ್ಲೆ ವ್ಯವಸ್ಥೆಯ ವಿರುದ್ಧ ಮಾತಾಡುವ -ಹೋರಾಟಗಾರರು, ಸಾಹಿತಿಗಳು, ಚಿಂತಕರು, ಕಲಾವಿದರು, ಶಿಲ್ಪಿ, ನಾಟಕಕಾರರು, ಚಿತ್ರಕತೆಗಾರರು, ನಟ-ನಟಿಯರು, ನಿರ್ದೇಶಕರು – ಯಾರನ್ನೂ ಸಹಿಸಲಾರದ ಮನಸ್ಥಿತಿ ತಯಾರಾಗಲಿಕ್ಕೆ ಹತ್ತೇದ. ಈ ಪಟ್ಟಿ ಬೆಳಕೋತ ಹೋಗತದ. ಇದು ಯಾವುದೇ ಹೊಸ ವಿಷಯವನ್ನ ಮಾತಾಡುವ, ಪ್ರಚಾರ ಮಾಡುವ- ತಿಳಿ ಹೇಳುವ ಯಾರನ್ನೂ ಸಹಿಸಲಾರದು. ಅವರನ್ನ ಅವಮಾನ ಮಾಡಿ, ಅವರಿಗೆ, ಅವರ ವ್ಯಕ್ತಿತ್ವಕ್ಕ, ಅವರ ವಿಚಾರಕ್ಕ ಕಿಮ್ಮತ್ತು ಇಲ್ಲಾ ಅನ್ನೋ ಹಂಗ ಮಾಡಿ ಅವರನ್ನ ಜನರ ಮನಸ್ಸಿನಿಂದಾ ದೂರ ಸರಿಸಿ ಬಿಡೋ ಸಂಚು ಇದು. ಯಾರಿಗೆ ತಮ್ಮ ಬಲದ ಬಗ್ಗೆ, ಜಾಣತನದ ಬಗ್ಗೆ ಸಂಶಯ ಇರತದೋ ಅವರು ಇತರರ ಮೌಲ್ಯಗಳ ಬಗ್ಗೆ, ಸಂಶಯ ವ್ಯಕ್ತಪಡಿಸತಾರ. ದೊಡ್ಡ ದೊಡ್ಡ ಸ್ಥಾನದಾಗ ಇರೋವರು ಇಂಥಾ ಮಾತಾಡಲಿಕ್ಕೆ ಹತ್ತಿದಾಗ ಸಣ್ಣ ವಯಸ್ಸಿನ ಹುಡುಗರು, ಕುರುಡ ಬೆಂಬಲಿಗರು ಹೌದು ಹೌದು ಅಂತ ಚಪ್ಪಾಳೆ ತಟ್ಟತಾರ. ಅವಕಾಶ ಸಿಕ್ಕರ ಈ ವಿಚಾರಗಳನ್ನ ಹಿಂಸೆಯಿಂದ ಎದುರಿಸಲಿಕ್ಕೂ ತಯಾರಾಗತಾರ. ಅದಕ್ಕ ಮಹಾತ್ಯಾಗ ಅನ್ನೋ ಹೆಸರು ಕೊಡತಾರ.

ಎಲ್ಲ ಕಡೆಯಿಂದ ಉದಾರ ವಿಚಾರ ಬರೋದನ್ನ ನಿಲ್ಲಿಸಬೇಕು, ಬರೇ ನಮ್ಮ ವಿಚಾರ ತುಂಬಿ ತುಳುಕಬೇಕು ಅಂಥೇಳಿ ಅಡ್ನಾಡಿ ಪ್ರಯತ್ನ ಮಾಡತಾರ. ಅದಕ್ಕ ಎಲ್ಲಾ ವಿಶ್ವವಿದ್ಯಾಲಯದಾಗೂ ‘ನಮ್ಮ ವಿಚಾರದ ಜನಾ ಇರಬೇಕು’ ಅನ್ನೋದರ ಮ್ಯಾಲೆ ನೇಮಕಾತಿ ಆಗ್ಯಾವು. ಆ ಮನುಷ್ಯ ಆ ಕೆಲಸಕ್ಕ ಯೋಗ್ಯ ಇದ್ದಾನೋ ಇಲ್ಲವೋ ಅನ್ನೋದರ ಬಗ್ಗೆ ಯಾರೂ ವಿಚಾರ ಮಾಡಲಿಕ್ಕೆ ಹತ್ತಿಲ್ಲ.

ಎಲ್ಲ ಪ್ರಗತಿಪರರನ್ನ, ಮುಂದಾಲೋಚನೆ ಉಳ್ಳವರನ್ನ, ಸಮಾನತಾವಾದಿಗಳನ್ನ, ವೈಜ್ಞಾನಿಕ ಮನೋಭಾವ ಇದ್ದವರನ್ನ, ಕಮ್ಯುನಿಸ್ಟ ಅಂತನೋ, ದೇಶದ್ರೋಹಿ ಅಂತನೋ, ವೈರಿದೇಶದ ಏಜೆಂಟ ಅಂತನೋ ಪಟ್ಟ ಕಟ್ಟಿ ಬಿಡುವುದು ಸಹಜ ಆಗೇತಿ. ಇದು ಭಯಂಕರ ಅಪಾಯಕಾರಿ. ಇದನ್ನ ತಲಿ ಸಮಾ ಇರೋರೆಲ್ಲಾ ವಿರೋಧಿಸಬೇಕು. ಮೂರ್ಖರ ರಾಜ್ಯದಾಗ ಬುದ್ಧಿವಂತರಾಗಿರೋದು ತಪ್ಪು ಅಂತಂತಾರ ಖರೆ. ಆದರೆ ಸುತ್ತಲಿನ ಮೂರ್ಖರ ಹುಚ್ಚುತನ ನೋಡಿಕೊಂಡು ಸುಮ್ಮನಿದ್ದರ ಅವರಿಗೂ ಇವರಿಗೂ ಏನೂ ವ್ಯತ್ಯಾಸ ಉಳಿಯಂಗಿಲ್ಲ. ಇಷ್ಟೇಲ್ಲಾ ರಾಜಾರೋಷವಾಗಿ ನಡೀಲಿಕ್ಕೆ ಹತ್ತಿದಾಗ ಇವರೆಲ್ಲಾ ಹೆಂಗ ಸುಮ್ಮನಿದ್ದರು, ಅಂತ ನಾಳೆ ಹುಟ್ಟುವವರು ತಮ್ಮ ಹಿರಿಯರನ್ನ ಆಡಿಕೊಳ್ಳೋಹಂಗಾಗತದ.

ಸುಳ್ಳು ಅನ್ನೋದು ಸೆರಗಿನ್ಯಾಗಿನ ಕೆಂಡ. ಅದನ್ನ ಕಟ್ಟಿಕೊಂಡು ಯತ್ನಾಳಶಾಹಿ ಅಪಾಯಕಾರಿ ಆಟ ಆಡಲಿಕ್ಕೆ ಹತ್ತೇದ. ಬ್ಯಾರೆಯವರ ಮನಿಗೆ ಬೆಂಕಿ ಹಚ್ಚಲಿಕ್ಕೆ ನಾವು ಅದನ್ನು ಉಪಯೋಗಿಸಬಹುದು. ಆದರ ಅದು ಕಡೀಕೆ ಎಲ್ಲಾರಿಗೂ ಹತ್ತಿಕೊಳ್ಳೋದ. ಇದನ್ನ ತಿಳಕೊಳ್ಳಲಾರದವರು ಹಾಡಾಡಿ ಕುಣೀಲಿಕ್ಕೆ ಹತ್ಯಾರ. ಹಾಡು ಮುಗಿಯೋದರಾಗ ಸೆರಗು ಸುಟ್ಟು ಹೋಗಿರತದ. ಕೆಂಡ ಮೈಗೆಲ್ಲಾ ಮೆತ್ತಿಕೊಂಡಿರತದ. ಅಷ್ಟರಾಗ ಸತ್ಯ ಅನ್ನೋ ತಣ್ಣೀರಿನ ಝರಿ ಯೊಳಗ ಜಿಗೀಬೇಕು. ಎಲ್ಲಾ ಸಮಾ ಆಗೋತನಕಾ ತೇಲಿಕೋತ ಹೋಗಬೇಕು.

ನಮ್ಮ ಇಂದಿನ ಸಂಕಟವನ್ನ, ಅದಕ್ಕ ಉತ್ತರವಾಗಿ ಆಶಾವಾದವನ್ನ ತೋರಿಸೋ ಅಮೀರ ಕಜಲಬಾಷ ಅವರ ಒಂದು ಗಜಲ್ಲಿನ ಸಾಲು ಹಿಂಗವ

ಪೂರ್ತೆ ಹಾಳ ಬಿದ್ದದ ಈ ಊರು
ಇಂಥಾದರಾಗ ಕನ್ನಡಿ ಮಾರಾಕ ಬಂದೇವಲ್ಲಾ,
ನಾವೆಷ್ಟು ಹುಚ್ಚರಿರಬೇಕು ನೋಡು
ಅವರು ನಮ್ಮನ್ನ ಬಿಟ್ಟು ಅಡ್ಯಾಡಿದರೇನಾತು,
ನಾವು-ನಾವ ಭೆಟ್ಟಿ ಆಗಕೋತ ಇರಲಿಕ್ಕೆ,
ಮಾತಾಡಿಕೋತ ಹೋಗಲಿಕ್ಕೆ
ನೆವಾ ಹುಡಕಲಿಕ್ಕೆ ಬಂದೇವೆಲ್ಲಾ
ನಾವೆಷ್ಟು ಹುಚ್ಚರಿರಬೇಕು ನೋಡು
ಆದರ ಕತ್ತಲದಾಗ ಎಷ್ಟು ದಿನಾಂತ ಇರೋದು?
ಒಂದ ಸಣ್ಣ ದೀಪ ಹಚ್ಚಬೇಕೂಂತ ಹೊಂಟೆವೆಲ್ಲಾ
ನಾವು ಎಷ್ಟು ಹುಚ್ಚರಿರಬೇಕು ನೋಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈ: 2 ದಿನಗಳಿಂದ ಹೊತ್ತಿ ಉರಿಯುತ್ತಿರುವ ಪೊವೈ ಬೆಟ್ಟಗಳು: ನಿವಾಸಿಗಳಿಂದ ಅಧಿಕಾರಿಗಳ ನಿಷ್ಕ್ರಿಯತೆಯ ಆರೋಪ 

ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...

‘ದಲಿತ ಕ್ರೈಸ್ತ’ರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು: ಮಾನವ ಹಕ್ಕುಗಳ ಕಾರ್ಯಕರ್ತ ವಿನ್ಸೆಂಟ್ ಕಥಿರ್

"ದಲಿತ ಕ್ರೈಸ್ತರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು, ಇದರಿಂದಾಗಿ ಜಾತಿ ಹಿಂಸಾಚಾರದ ಬಲಿಪಶುಗಳು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಪ್ರಕಾರ ಸರ್ಕಾರದಿಂದ ಪರಿಹಾರವನ್ನು ಪಡೆಯಬಹುದು" ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹಾಗೂ...

ಪಶ್ಚಿಮ ಏಷ್ಯಾ ಬಿಕ್ಕಟ್ಟು : ಇರಾನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಚರ್ಚೆ

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಂಗಳವಾರ (ಮಾ.10) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳು...

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್‌ನ...

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...