Homeಅಂಕಣಗಳುಯತ್ನಾಳಶಾಹಿಯ ಚದುರಂಗದಾಟ

ಯತ್ನಾಳಶಾಹಿಯ ಚದುರಂಗದಾಟ

- Advertisement -
- Advertisement -

ಮನ್ನೆ ಏನಾತಪಾ ಅಂದರ ನಮ್ಮ ಬಿಜಾಪುರದ ಬಸನಗೌಡರು ಜನಪರ ಹೋರಾಟಗಾರ ಹಾಗೂ ಸ್ವಾತಂತ್ರ್ಯ ಸೇನಾನಿ ದೊರೆಸ್ವಾಮಿ ಅವರ ಬಗ್ಗೆ ಅಪದ್ಧ ಅಪದ್ಧ ಮಾತಾಡ್ಯಾರ.

ಯತ್ನಾಳಗೌಡರು ದೊರೆಸ್ವಾಮಿ ಅವರನ್ನ ಪಾಕಿಸ್ತಾನದ ಏಜಂಟ ಅಂತ ಕರದಾರ. ನಕಲಿ ದೇಶಭಕ್ತ ಅಂತ ಹೆಸರು ಇಟ್ಟಾರ. “ಅವರೇನು ಸಾವರಕರನ ಗತೆ ದೇಶಪ್ರೇಮಿನಾ? ಬ್ರಿಟಿಷರ ಲಾಠಿ ಏಟು ತಿಂದಾರ?” ಅಂತ ಕೇಳ್ಯಾರ. ಇದು ಬರೇ ಒಬ್ಬ ಎಮ್ಮೆಲ್ಲೇ ಒಬ್ಬ ಹಿರಿಯ ಹೋರಾಟಗಾರರ ಬಗ್ಗೆ ಬಡಬಡಿಸಿದ್ದು ಅಂತ ತಿಳಕೋಬ್ಯಾಡ್ರಿ. ಅದು ಅಷ್ಟ ಸಿಂಪಲ್ಲಾದ ವಿಷಯ ಅಲ್ಲ. ಇದು ಇಲ್ಲಿಗೇ ಮುಗಿಯಂಗಿಲ್ಲ. ಇದು ಈಗ ಸುರು ಆಗೇದ. ದೊರೆಸ್ವಾಮಿಯವರನ್ನೇ ಬಿಡಲಾರದವರು ಇನ್ನು ಮತ್ತ ಯಾರನ್ನು ಬಿಟ್ಟಾರು? ಹಳ್ಳಿ ಊರಾಗ ಗೌಡನ ಕಪಾಳಕ್ಕ ಹೊಡೆದ ಹುಡುಗಾ ಉಳಿದವರನ್ನ ಬರೇ ಬೆದರಿಕೆಯಿಂದಲೇ ಮುಗಿಸಿಬಿಟ್ಟನಂತ, ಹಂಗಾತು ಇದು ಕತಿ.

ಉಪಚುನಾವಣೆಯೊಳಗ ಮಹಿಳಾ ಶಾಸಕಿಯೊಬ್ಬರನ್ನ ಹಂಗಿಸಲಿಕ್ಕೆ ಯತ್ನಾಳರು ಒಂದು ಕುಚೋದ್ಯ ಮಾಡತಿದ್ದರು. ಅವರು ಏನು ಮಾಡ್ಯಾರ? ಡ್ಯಾಶ್ -ಡ್ಯಾಶ್. ಇವರೇನು ಮಾಡ್ಯಾರ? ಡ್ಯಾಶ್- ಡ್ಯಾಶ್ ಅಂತ ಹೋದಲ್ಲೆ – ಬಂದಲ್ಲೆ ಭಾಷಣ ಮಾಡತಿದ್ದರು. ಅದರ ಹಂಗನ ಇದು ಬರೇ ಟಿಆರ್‍ಪಿ ಸಲುವಾಗಿ ಮಾಡಿದ ಡ್ಯಾಶ್ ಡ್ಯಾಶ್ ಭಾಷಣ ಅಂತ ತಿಳಕೋಬ್ಯಾಡ್ರಿ ಮತ್ತ.

ಇದು ಒಂದು ವೈರಲ್ ಆಗುವ ಸಾಧ್ಯತೆ ಇರುವ ರೋಗ. ಎಲ್ಲಾ ಉದಾರವಾದಿಗಳನ್ನ, ಪ್ರಗತಿಪರರನ್ನ, ಕೆಳಗಿನವರನ್ನ ಮ್ಯಾಲೆ ಎತ್ತಲಿಕ್ಕೆ ಕೈ ಎತ್ತಿದವರನ್ನ ಸಂಶಯದಿಂದ ನೋಡೋ ಜಡ್ಡು. ಈಗ ನಮ್ಮ ಭವ್ಯ ಭಾರತದಾಗ ಈ ಗುಮಾನಿಯ ರೋಗ ಸುರು ಆಗೇದ. ಅದು ಕೊರೋನಾ ವೈರಸ್ಸಿಗಿಂತ ಅಪಾಯಕಾರಿ. ಆಳುವ ಪಕ್ಷದವರನ್ನ, ಅಧಿಕಾರಶಾಹಿಯನ್ನ, ಯಾರೋ ಒಬ್ಬ ಜನಪ್ರಿಯ ನಾಯಕನನ್ನ ವಿರೋಧ ಮಾಡೋದನ್ನ ದೇಶದ್ರೋಹ ಅಂತ ಥೂತ್ಕರಿಸೋ ಅಸಹ್ಯವಾದ ಆಟ ಈಗ ಸುರು ಆಗೇದ. ಇದು ಯತ್ನಾಳ ಒಬ್ಬರ ಮಾತಲ್ಲ. ಅವರು ಈ ಚದುರಂಗದ ಆಟದಾಗ ಒಬ್ಬ ಬಡ ಪ್ಯಾದೆ ಅಷ್ಟ. ಇವು ಯತ್ನಾಳಶಾಹಿ ದಿನಗಳು. ಎಲ್ಲ ನಾಗರಿಕರನ್ನ ಪೇದೆಗಳನ್ನಾಗಿ ಮಾಡಿ, ಕೆಲವು ಪೇದೆಗಳನ್ನ ರಾಜರನ್ನಾಗಿ ಮಾಡಿ ಆಟ ಮುಗಿಸೋ ಮಂತ್ರಿಗಳ ಷಡ್ಯಂತ್ರ.

ಇಲ್ಲೆ ವ್ಯವಸ್ಥೆಯ ವಿರುದ್ಧ ಮಾತಾಡುವ -ಹೋರಾಟಗಾರರು, ಸಾಹಿತಿಗಳು, ಚಿಂತಕರು, ಕಲಾವಿದರು, ಶಿಲ್ಪಿ, ನಾಟಕಕಾರರು, ಚಿತ್ರಕತೆಗಾರರು, ನಟ-ನಟಿಯರು, ನಿರ್ದೇಶಕರು – ಯಾರನ್ನೂ ಸಹಿಸಲಾರದ ಮನಸ್ಥಿತಿ ತಯಾರಾಗಲಿಕ್ಕೆ ಹತ್ತೇದ. ಈ ಪಟ್ಟಿ ಬೆಳಕೋತ ಹೋಗತದ. ಇದು ಯಾವುದೇ ಹೊಸ ವಿಷಯವನ್ನ ಮಾತಾಡುವ, ಪ್ರಚಾರ ಮಾಡುವ- ತಿಳಿ ಹೇಳುವ ಯಾರನ್ನೂ ಸಹಿಸಲಾರದು. ಅವರನ್ನ ಅವಮಾನ ಮಾಡಿ, ಅವರಿಗೆ, ಅವರ ವ್ಯಕ್ತಿತ್ವಕ್ಕ, ಅವರ ವಿಚಾರಕ್ಕ ಕಿಮ್ಮತ್ತು ಇಲ್ಲಾ ಅನ್ನೋ ಹಂಗ ಮಾಡಿ ಅವರನ್ನ ಜನರ ಮನಸ್ಸಿನಿಂದಾ ದೂರ ಸರಿಸಿ ಬಿಡೋ ಸಂಚು ಇದು. ಯಾರಿಗೆ ತಮ್ಮ ಬಲದ ಬಗ್ಗೆ, ಜಾಣತನದ ಬಗ್ಗೆ ಸಂಶಯ ಇರತದೋ ಅವರು ಇತರರ ಮೌಲ್ಯಗಳ ಬಗ್ಗೆ, ಸಂಶಯ ವ್ಯಕ್ತಪಡಿಸತಾರ. ದೊಡ್ಡ ದೊಡ್ಡ ಸ್ಥಾನದಾಗ ಇರೋವರು ಇಂಥಾ ಮಾತಾಡಲಿಕ್ಕೆ ಹತ್ತಿದಾಗ ಸಣ್ಣ ವಯಸ್ಸಿನ ಹುಡುಗರು, ಕುರುಡ ಬೆಂಬಲಿಗರು ಹೌದು ಹೌದು ಅಂತ ಚಪ್ಪಾಳೆ ತಟ್ಟತಾರ. ಅವಕಾಶ ಸಿಕ್ಕರ ಈ ವಿಚಾರಗಳನ್ನ ಹಿಂಸೆಯಿಂದ ಎದುರಿಸಲಿಕ್ಕೂ ತಯಾರಾಗತಾರ. ಅದಕ್ಕ ಮಹಾತ್ಯಾಗ ಅನ್ನೋ ಹೆಸರು ಕೊಡತಾರ.

ಎಲ್ಲ ಕಡೆಯಿಂದ ಉದಾರ ವಿಚಾರ ಬರೋದನ್ನ ನಿಲ್ಲಿಸಬೇಕು, ಬರೇ ನಮ್ಮ ವಿಚಾರ ತುಂಬಿ ತುಳುಕಬೇಕು ಅಂಥೇಳಿ ಅಡ್ನಾಡಿ ಪ್ರಯತ್ನ ಮಾಡತಾರ. ಅದಕ್ಕ ಎಲ್ಲಾ ವಿಶ್ವವಿದ್ಯಾಲಯದಾಗೂ ‘ನಮ್ಮ ವಿಚಾರದ ಜನಾ ಇರಬೇಕು’ ಅನ್ನೋದರ ಮ್ಯಾಲೆ ನೇಮಕಾತಿ ಆಗ್ಯಾವು. ಆ ಮನುಷ್ಯ ಆ ಕೆಲಸಕ್ಕ ಯೋಗ್ಯ ಇದ್ದಾನೋ ಇಲ್ಲವೋ ಅನ್ನೋದರ ಬಗ್ಗೆ ಯಾರೂ ವಿಚಾರ ಮಾಡಲಿಕ್ಕೆ ಹತ್ತಿಲ್ಲ.

ಎಲ್ಲ ಪ್ರಗತಿಪರರನ್ನ, ಮುಂದಾಲೋಚನೆ ಉಳ್ಳವರನ್ನ, ಸಮಾನತಾವಾದಿಗಳನ್ನ, ವೈಜ್ಞಾನಿಕ ಮನೋಭಾವ ಇದ್ದವರನ್ನ, ಕಮ್ಯುನಿಸ್ಟ ಅಂತನೋ, ದೇಶದ್ರೋಹಿ ಅಂತನೋ, ವೈರಿದೇಶದ ಏಜೆಂಟ ಅಂತನೋ ಪಟ್ಟ ಕಟ್ಟಿ ಬಿಡುವುದು ಸಹಜ ಆಗೇತಿ. ಇದು ಭಯಂಕರ ಅಪಾಯಕಾರಿ. ಇದನ್ನ ತಲಿ ಸಮಾ ಇರೋರೆಲ್ಲಾ ವಿರೋಧಿಸಬೇಕು. ಮೂರ್ಖರ ರಾಜ್ಯದಾಗ ಬುದ್ಧಿವಂತರಾಗಿರೋದು ತಪ್ಪು ಅಂತಂತಾರ ಖರೆ. ಆದರೆ ಸುತ್ತಲಿನ ಮೂರ್ಖರ ಹುಚ್ಚುತನ ನೋಡಿಕೊಂಡು ಸುಮ್ಮನಿದ್ದರ ಅವರಿಗೂ ಇವರಿಗೂ ಏನೂ ವ್ಯತ್ಯಾಸ ಉಳಿಯಂಗಿಲ್ಲ. ಇಷ್ಟೇಲ್ಲಾ ರಾಜಾರೋಷವಾಗಿ ನಡೀಲಿಕ್ಕೆ ಹತ್ತಿದಾಗ ಇವರೆಲ್ಲಾ ಹೆಂಗ ಸುಮ್ಮನಿದ್ದರು, ಅಂತ ನಾಳೆ ಹುಟ್ಟುವವರು ತಮ್ಮ ಹಿರಿಯರನ್ನ ಆಡಿಕೊಳ್ಳೋಹಂಗಾಗತದ.

ಸುಳ್ಳು ಅನ್ನೋದು ಸೆರಗಿನ್ಯಾಗಿನ ಕೆಂಡ. ಅದನ್ನ ಕಟ್ಟಿಕೊಂಡು ಯತ್ನಾಳಶಾಹಿ ಅಪಾಯಕಾರಿ ಆಟ ಆಡಲಿಕ್ಕೆ ಹತ್ತೇದ. ಬ್ಯಾರೆಯವರ ಮನಿಗೆ ಬೆಂಕಿ ಹಚ್ಚಲಿಕ್ಕೆ ನಾವು ಅದನ್ನು ಉಪಯೋಗಿಸಬಹುದು. ಆದರ ಅದು ಕಡೀಕೆ ಎಲ್ಲಾರಿಗೂ ಹತ್ತಿಕೊಳ್ಳೋದ. ಇದನ್ನ ತಿಳಕೊಳ್ಳಲಾರದವರು ಹಾಡಾಡಿ ಕುಣೀಲಿಕ್ಕೆ ಹತ್ಯಾರ. ಹಾಡು ಮುಗಿಯೋದರಾಗ ಸೆರಗು ಸುಟ್ಟು ಹೋಗಿರತದ. ಕೆಂಡ ಮೈಗೆಲ್ಲಾ ಮೆತ್ತಿಕೊಂಡಿರತದ. ಅಷ್ಟರಾಗ ಸತ್ಯ ಅನ್ನೋ ತಣ್ಣೀರಿನ ಝರಿ ಯೊಳಗ ಜಿಗೀಬೇಕು. ಎಲ್ಲಾ ಸಮಾ ಆಗೋತನಕಾ ತೇಲಿಕೋತ ಹೋಗಬೇಕು.

ನಮ್ಮ ಇಂದಿನ ಸಂಕಟವನ್ನ, ಅದಕ್ಕ ಉತ್ತರವಾಗಿ ಆಶಾವಾದವನ್ನ ತೋರಿಸೋ ಅಮೀರ ಕಜಲಬಾಷ ಅವರ ಒಂದು ಗಜಲ್ಲಿನ ಸಾಲು ಹಿಂಗವ

ಪೂರ್ತೆ ಹಾಳ ಬಿದ್ದದ ಈ ಊರು
ಇಂಥಾದರಾಗ ಕನ್ನಡಿ ಮಾರಾಕ ಬಂದೇವಲ್ಲಾ,
ನಾವೆಷ್ಟು ಹುಚ್ಚರಿರಬೇಕು ನೋಡು
ಅವರು ನಮ್ಮನ್ನ ಬಿಟ್ಟು ಅಡ್ಯಾಡಿದರೇನಾತು,
ನಾವು-ನಾವ ಭೆಟ್ಟಿ ಆಗಕೋತ ಇರಲಿಕ್ಕೆ,
ಮಾತಾಡಿಕೋತ ಹೋಗಲಿಕ್ಕೆ
ನೆವಾ ಹುಡಕಲಿಕ್ಕೆ ಬಂದೇವೆಲ್ಲಾ
ನಾವೆಷ್ಟು ಹುಚ್ಚರಿರಬೇಕು ನೋಡು
ಆದರ ಕತ್ತಲದಾಗ ಎಷ್ಟು ದಿನಾಂತ ಇರೋದು?
ಒಂದ ಸಣ್ಣ ದೀಪ ಹಚ್ಚಬೇಕೂಂತ ಹೊಂಟೆವೆಲ್ಲಾ
ನಾವು ಎಷ್ಟು ಹುಚ್ಚರಿರಬೇಕು ನೋಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...